Homeಮುಖಪುಟಪ್ರಶಸ್ತಿ ವಿಜೇತ ಆಸ್ಟ್ರೇಲಿಯಾದ ಸಾಕ್ಷ್ಯಚಿತ್ರ ನಿರ್ಮಾಪಕ ಡೇವಿಡ್ ಬ್ರಾಡ್ಬರಿ ಬಂಧನ; ಗಡೀಪಾರು!

ಪ್ರಶಸ್ತಿ ವಿಜೇತ ಆಸ್ಟ್ರೇಲಿಯಾದ ಸಾಕ್ಷ್ಯಚಿತ್ರ ನಿರ್ಮಾಪಕ ಡೇವಿಡ್ ಬ್ರಾಡ್ಬರಿ ಬಂಧನ; ಗಡೀಪಾರು!

- Advertisement -
- Advertisement -

2012 ರಲ್ಲಿ ಕೂಡಂಕುಳಂ ಪರಮಾಣು ಸ್ಥಾವರದ ವಿರುದ್ಧದ ಪ್ರತಿಭಟನೆಗಳ ಕುರಿತು ಚಲನಚಿತ್ರವನ್ನು ನಿರ್ಮಿಸಿದ ಆಸ್ಟ್ರೇಲಿಯಾದ ಸಾಕ್ಷ್ಯಚಿತ್ರ ನಿರ್ಮಾಪಕ ಡೇವಿಡ್ ಬ್ರಾಡ್ಬರಿ ಅವರನ್ನು ವಿಮಾನ ನಿಲ್ದಾಣದಲ್ಲಿ ತಡೆದು ಭಾರತ ಪ್ರವೇಶಿಸದಂತೆ ಬಂಧಿಲಾಗಿದ್ದು, ನಂತರ ಅವರನ್ನು ಗಡಿಪಾರು ಮಾಡಲಾಗಿದೆ ಎಂದು ವರದಿಯಾಗಿದೆ. ಘಟನೆ ಸೆಪ್ಟೆಂಬರ್ 10 ರಂದು ನಡೆದಿದ್ದು, ಚೆನ್ನೈ ವಿಮಾನ ನಿಲ್ದಾಣದಲ್ಲಿ ಅವರನ್ನು ಬಂಧಿಸಲಾಯಿತು ಎಂದು ದಿ ವೈರ್ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

73 ವರ್ಷದ ಪ್ರಶಸ್ತಿ ವಿಜೇತ ಚಲನಚಿತ್ರ ನಿರ್ಮಾಪಕ ಡೇವಿಡ್ ಬ್ರಾಡ್ಬರಿ ತಮ್ಮ ಮಕ್ಕಳಾದ ನಕೀಟಾ ಬ್ರಾಡ್‌ಬರಿ (21) ಮತ್ತು ಒಮರ್ ಬ್ರಾಡ್‌ಬರಿ (14) ಅವರೊಂದಿಗೆ ಎರಡು ವಾರಗಳ ಭಾರತ ಪ್ರವಾಸಕ್ಕೆ ಎಂದು ಆಗಮಿಸಿದ್ದರು. ಈ ಅವರ ಮಕ್ಕಳಿಗೆ ಭಾರತ ಪ್ರವೇಶಕ್ಕೆ ಅನುಮತಿ ನೀಡಲಾಗಿದ್ದು, ಬ್ರಾಡ್ಬರಿ ಅವರನ್ನು 24 ಗಂಟೆಗಳ ಕಾಲ ಬಂಧಿಸಿ ಗಡಿಪಾರು ಮಾಡಲಾಗಿದೆ ಎಂದು ವರದಿ ಉಲ್ಲೇಖಿಸಿದೆ.

ಚಲನಚಿತ್ರ ನಿರ್ಮಾಪಕಿ ಮತ್ತು ಹೋರಾಟಗಾರ್ತಿಯು ಆಗಿರುವ ಅವರ ಪತ್ನಿ ಟ್ರೀನಾ ಐದು ತಿಂಗಳ ಹಿಂದೆ ಕ್ಯಾನ್ಸರ್‌ಗೆ ಬಲಿಯಾಗಿದ್ದಾರೆ. ಬ್ರಾಡ್‌ಬರಿ ಅವರು ಭಾರತಕ್ಕೆ ಬಂದಿಳಿದ ಕೂಡಲೇ ಅವರನ್ನು ಬಂಧಿಸಿ 24 ಗಂಟೆಗಳ ಕಾಲ ಶೌಚಾಲಯಕ್ಕೆ ತೆರಳಲು ಕೂಡಾ ಅನುಮತಿ ನೀಡದೆ ಅಶುಚಿಯಾದ ಮತ್ತು “ಅಸಹ್ಯಕರ” ಸ್ಥಳದಲ್ಲಿ ಇರಿಸಲಾಯಿತು ಎಂದು ಆರೋಪಿಸಿದ್ದಾರೆ.

ಇದನ್ನೂಓದಿ: ಆಹಾರ ಮಳಿಗೆಗಳಲ್ಲಿ ಮಾಲೀಕರ ಹೆಸರು ಪ್ರದರ್ಶಿಸಲು ಆದೇಶ : ಬಿಜೆಪಿಯನ್ನು ಅನುಸರಿಸಿದ ಕಾಂಗ್ರೆಸ್ ಸರ್ಕಾರ

ಅಷ್ಟೆ ಅಲ್ಲದೆ, ಅವರಿಗೆ ಆಸ್ಟ್ರೇಲಿಯನ್ ರಾಯಭಾರ ಕಚೇರಿಯೊಂದಿಗೆ ಸಂಪರ್ಕಿಸಲು ಅನುಮತಿ ನಿರಾಕರಿಸಲಾಗಿದೆ ಎಂದು ಆರೋಪಿಸಲಾಗಿದೆ. ಅವರ ಆರೋಗ್ಯ ಸ್ಥಿತಿಯ ಬಗ್ಗೆ ಅಧಿಕಾರಿಗಳಿಗೆ ತಿಳಿಸಿದ್ದರೂ, ಬ್ರಾಡ್‌ಬರಿ ಅವರಿಗೆ ಔಷಧಿಗಳನ್ನು ಕೂಡಾ ನಿರಾಕರಿಸಲಾಗಿದೆ ಎಂದು ವರದಿ ಉಲ್ಲೇಖಿಸಿದೆ. ಅವರ ಮಕ್ಕಳು ಉಳಿಸಿಕೊಂಡು, ಅವರನ್ನು ಭಾರತದಿಂದ ಗಡೀಪಾರು ಮಾಡಲಾಯಿತು ಎಂದು ಅದು ಹೇಳಿದೆ.

ಅವರ ಪ್ರಸ್ತುತ ಭೇಟಿಯ ಉದ್ದೇಶ, ಅವರ 2012 ರ ಭಾರತ ಭೇಟಿಯ ಕಾರಣ ಮತ್ತು ದೇಶದಲ್ಲಿ ಅವರ ಸಂಪರ್ಕಗಳನ್ನು ವಿವರಿಸಲು ಕೇಳಲಾಯಿತು ಎಂದು ಬ್ರಾಡ್ಬರಿ ಅವರು ಹೇಳಿದ್ದಾರೆ. ತನ್ನ ಫೋನ್ ಅನ್ನು ಅನ್ಲಾಕ್ ಮಾಡಲು ಮತ್ತು ಭಾರತದಲ್ಲಿನ ತನ್ನ ಸಹಚರರ ಸಂಪರ್ಕ ಸಂಖ್ಯೆಗಳನ್ನು ಹಂಚಿಕೊಳ್ಳಲು ಅಧಿಕಾರಿಗಳು ಒತ್ತಾಯಿಸಿದರಾದರೂ, ತಾನು ಅದನ್ನು “ನಿರಾಕರಿಸಿದೆ” ಅವರು ಹೇಳಿದ್ದಾರೆ.

ಈ ಹಿಂದೆ ಬ್ರಾಡ್ಬರಿ ಅವರು ತನ್ನ ಪತ್ನಿ ಮತ್ತು ಮೂರು ವರ್ಷದ ಮಗನೊಂದಿಗೆ ಅಕ್ಟೋಬರ್ 2012 ರಲ್ಲಿ ಭಾರತಕ್ಕೆ ಭೇಟಿ ನೀಡಿದ್ದರು. ಅವರು ಪ್ರವಾಸಿ ವೀಸಾದಲ್ಲಿ ಮುಂಬೈ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ತೀರ್ಪುಗಾರರ ಸದಸ್ಯರಾಗಿ ಆಗಮಿಸಿದ್ದರು. ಈ ಚಿತ್ರೋತ್ಸವದ ನಂತರ, ಬ್ರಾಡ್ಬರಿ ತನ್ನ ಕುಟುಂಬದೊಂದಿಗೆ ತಮಿಳುನಾಡಿನ ತಿರುನೆಲ್ವೇಲಿ ಜಿಲ್ಲೆಯ ಇಡಿಂತಕರೈ ಎಂಬ ಕರಾವಳಿ ಗ್ರಾಮಕ್ಕೆ ಭೇಟಿ ನೀಡಿದ್ದರು. ಆ ವೇಳೆ ಈ ಗ್ರಾಮವು ಕೂಡಂಕುಳಂ ಪರಮಾಣು ವಿದ್ಯುತ್ ಸ್ಥಾವರದ ವಿರುದ್ಧದ ಪ್ರತಿಭಟನೆಯ ಕೇಂದ್ರಬಿಂದುವಾಗಿತ್ತು.

ಜಪಾನ್‌ನಲ್ಲಿ 2011 ರ ಫುಕುಶಿಮಾ ಪರಮಾಣು ದುರಂತದ ನಂತರ ಅಣು ಸ್ಥಾವರದಲ್ಲಿ ಸಂಭವಿಸುವ ಯಾವುದೇ ಅಪಘಾತದ ವ್ಯಾಪ್ತಿ ಮತ್ತು ದೀರ್ಘಾವಧಿಯ ಪರಿಣಾಮಗಳ ಬಗ್ಗೆ ಸ್ಥಳೀಯರು ಆತಂಕ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದರು. ಈ ಪ್ರತಿಭಟನೆ ತಿರುನಲ್ವೇಲಿ ಜಿಲ್ಲೆಯಾದ್ಯಂತ ಹರಡಿದ್ದವು.

ಇದನ್ನೂಓದಿ: ಮಾನನಷ್ಟ ಮೊಕದ್ದಮೆ ಪ್ರಕರಣ; ಶಿಕ್ಷೆ ಪ್ರಕಟವಾದ ಕೆಲವೇ ಗಂಟೆಗಳಲ್ಲಿ ಜಾಮೀನು ಪಡೆದ ಸಂಜಯ್ ರಾವತ್

ಅಲ್ಲದೆ ಬ್ರಾಡ್ಬರಿ ಅವರ ಭೇಟಿಗೆ ಒಂದು ತಿಂಗಳ ಮೊದಲು, ಇಡಿಂತಕರೈನ ಸ್ಥಾವರದಲ್ಲಿ ಯುರೇನಿಯಂ ಇಂಧನ ತುಂಬಿರುವುದನ್ನು ವಿರೋಧಿಸಿ ಗ್ರಾಮಸ್ಥರು ಪ್ರತಿಭಟಿಸಿದ್ದರಿಂದ ಪೊಲೀಸರು ಪ್ರತಿಭಟನಾಕಾರರನ್ನು ಗುಂಡಿಕ್ಕಿ ಕೊಂದಿದ್ದರು. ಈ ವೇಳೆ ಸುಮಾರು 66 ಜನರನ್ನು, ಅದರಲ್ಲೂ ಹೆಚ್ಚಾಗಿ ಮಹಿಳೆಯರನ್ನು ಬಂಧಿಸಲಾಗಿತ್ತು. ಹಲವರ ವಿರುದ್ಧ ದೇಶದ್ರೋಹದ ಆರೋಪ ಕೂಡಾ ಮಾಡಲಾಗಿತ್ತು.

ಇಂತಹ ಸಮಯದಲ್ಲಿ ಬ್ರಾಡ್ಬರಿ ಎರಡು ವಾರಗಳ ಕಾಲ ಗ್ರಾಮದಲ್ಲಿ ಉಳಿದುಕೊಂಡರು ಮತ್ತು ಪ್ರತಿಭಟನೆಗಳು ಮತ್ತು ಜೀವನೋಪಾಯಕ್ಕಾಗಿ ಮೀನುಗಾರಿಕೆಯನ್ನು ಪ್ರಧಾನವಾಗಿ ಅವಲಂಬಿಸಿರುವ ಗ್ರಾಮಸ್ಥರ ದೈನಂದಿನ ಜೀವನವನ್ನು ದಾಖಲಿಸಿದ್ದರು.

ಅದೇ ವೇಳೆ ಅವರನ್ನು ಕೂಡಂಕುಳಂ ಸ್ಥಳಕ್ಕೆ ಭೇಟಿ ನೀಡದಂತೆ ತಡೆಯಲಾಗಿತ್ತು ಮತ್ತು ಕಿರುಕುಳ ನೀಡಲಾಗಿತ್ತು ಎಂದು ಅವರು ಹೇಳಿದ್ದಾರೆ. ಇದರ ನಂತರ ಅವರು ‘ಡಾಕ್ಯುಮೆಂಟಿಂಗ್ ಡಿಸೆಂಟ್: ಡೇವಿಡ್ ಬ್ರಾಡ್‌ಬರಿಸ್ ಅಕೌಂಟ್ ಆಫ್ ಹರಾಸ್‌ಮೆಂಟ್ ಇನ್ ಕೂಡಂಕುಳಂ’ ಎಂಬ ಶೀರ್ಷಿಕೆಯ ಲೇಖನವನ್ನು ಬರೆದಿದ್ದರು. ಕೂಡಂಕುಳಂನಲ್ಲಿ ಪರಮಾಣು ವಿದ್ಯುತ್ ಸ್ಥಾವರ ನಿರ್ಮಿಸುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರ್ಧಾರವನ್ನು ಅವರು, “ತಮ್ಮ ಸ್ವಂತ ಜನರು ಮತ್ತು ಜಗತ್ತಿನ ಬಗ್ಗೆ ಬೇಜವಾಬ್ದಾರಿಯ ನಡೆ” ಎಂದು ಹೇಳಿದ್ದರು.ಆಸ್ಟ್ರೇಲಿಯಾದ ಸಾಕ್ಷ್ಯಚಿತ್ರ

ತಮ್ಮ ಬಂಧನ ಮತ್ತು ಗಡೀಪಾರು ಕೂಡಂಕುಳಂ ಪರಮಾಣು ಸ್ಥಾವರದ ತಮ್ಮ ಚಲನಚಿತ್ರದ ಕಾರಣಕ್ಕೆ ನಡೆದಿದೆ ಎಂದು ಬ್ರಾಡ್ಬರಿ ಅವರು ಆರೋಪಿಸಿದ್ದಾರೆ.

ವಿಡಿಯೊ ನೋಡಿ: ಕಲಬುರಗಿ- ಗೌರಿಯದ್ದು ವೈಚಾರಿಕ ಕೊಲೆ: ಗೌರಿ ನೆನಪು ಕಾರ್ಯಕ್ರಮದಲ್ಲಿ ರಹಮತ್ ತರೀಕೆರೆ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...