Homeಮುಖಪುಟಪ್ರಶಸ್ತಿ ವಿಜೇತ ಆಸ್ಟ್ರೇಲಿಯಾದ ಸಾಕ್ಷ್ಯಚಿತ್ರ ನಿರ್ಮಾಪಕ ಡೇವಿಡ್ ಬ್ರಾಡ್ಬರಿ ಬಂಧನ; ಗಡೀಪಾರು!

ಪ್ರಶಸ್ತಿ ವಿಜೇತ ಆಸ್ಟ್ರೇಲಿಯಾದ ಸಾಕ್ಷ್ಯಚಿತ್ರ ನಿರ್ಮಾಪಕ ಡೇವಿಡ್ ಬ್ರಾಡ್ಬರಿ ಬಂಧನ; ಗಡೀಪಾರು!

- Advertisement -
- Advertisement -

2012 ರಲ್ಲಿ ಕೂಡಂಕುಳಂ ಪರಮಾಣು ಸ್ಥಾವರದ ವಿರುದ್ಧದ ಪ್ರತಿಭಟನೆಗಳ ಕುರಿತು ಚಲನಚಿತ್ರವನ್ನು ನಿರ್ಮಿಸಿದ ಆಸ್ಟ್ರೇಲಿಯಾದ ಸಾಕ್ಷ್ಯಚಿತ್ರ ನಿರ್ಮಾಪಕ ಡೇವಿಡ್ ಬ್ರಾಡ್ಬರಿ ಅವರನ್ನು ವಿಮಾನ ನಿಲ್ದಾಣದಲ್ಲಿ ತಡೆದು ಭಾರತ ಪ್ರವೇಶಿಸದಂತೆ ಬಂಧಿಲಾಗಿದ್ದು, ನಂತರ ಅವರನ್ನು ಗಡಿಪಾರು ಮಾಡಲಾಗಿದೆ ಎಂದು ವರದಿಯಾಗಿದೆ. ಘಟನೆ ಸೆಪ್ಟೆಂಬರ್ 10 ರಂದು ನಡೆದಿದ್ದು, ಚೆನ್ನೈ ವಿಮಾನ ನಿಲ್ದಾಣದಲ್ಲಿ ಅವರನ್ನು ಬಂಧಿಸಲಾಯಿತು ಎಂದು ದಿ ವೈರ್ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

73 ವರ್ಷದ ಪ್ರಶಸ್ತಿ ವಿಜೇತ ಚಲನಚಿತ್ರ ನಿರ್ಮಾಪಕ ಡೇವಿಡ್ ಬ್ರಾಡ್ಬರಿ ತಮ್ಮ ಮಕ್ಕಳಾದ ನಕೀಟಾ ಬ್ರಾಡ್‌ಬರಿ (21) ಮತ್ತು ಒಮರ್ ಬ್ರಾಡ್‌ಬರಿ (14) ಅವರೊಂದಿಗೆ ಎರಡು ವಾರಗಳ ಭಾರತ ಪ್ರವಾಸಕ್ಕೆ ಎಂದು ಆಗಮಿಸಿದ್ದರು. ಈ ಅವರ ಮಕ್ಕಳಿಗೆ ಭಾರತ ಪ್ರವೇಶಕ್ಕೆ ಅನುಮತಿ ನೀಡಲಾಗಿದ್ದು, ಬ್ರಾಡ್ಬರಿ ಅವರನ್ನು 24 ಗಂಟೆಗಳ ಕಾಲ ಬಂಧಿಸಿ ಗಡಿಪಾರು ಮಾಡಲಾಗಿದೆ ಎಂದು ವರದಿ ಉಲ್ಲೇಖಿಸಿದೆ.

ಚಲನಚಿತ್ರ ನಿರ್ಮಾಪಕಿ ಮತ್ತು ಹೋರಾಟಗಾರ್ತಿಯು ಆಗಿರುವ ಅವರ ಪತ್ನಿ ಟ್ರೀನಾ ಐದು ತಿಂಗಳ ಹಿಂದೆ ಕ್ಯಾನ್ಸರ್‌ಗೆ ಬಲಿಯಾಗಿದ್ದಾರೆ. ಬ್ರಾಡ್‌ಬರಿ ಅವರು ಭಾರತಕ್ಕೆ ಬಂದಿಳಿದ ಕೂಡಲೇ ಅವರನ್ನು ಬಂಧಿಸಿ 24 ಗಂಟೆಗಳ ಕಾಲ ಶೌಚಾಲಯಕ್ಕೆ ತೆರಳಲು ಕೂಡಾ ಅನುಮತಿ ನೀಡದೆ ಅಶುಚಿಯಾದ ಮತ್ತು “ಅಸಹ್ಯಕರ” ಸ್ಥಳದಲ್ಲಿ ಇರಿಸಲಾಯಿತು ಎಂದು ಆರೋಪಿಸಿದ್ದಾರೆ.

ಇದನ್ನೂಓದಿ: ಆಹಾರ ಮಳಿಗೆಗಳಲ್ಲಿ ಮಾಲೀಕರ ಹೆಸರು ಪ್ರದರ್ಶಿಸಲು ಆದೇಶ : ಬಿಜೆಪಿಯನ್ನು ಅನುಸರಿಸಿದ ಕಾಂಗ್ರೆಸ್ ಸರ್ಕಾರ

ಅಷ್ಟೆ ಅಲ್ಲದೆ, ಅವರಿಗೆ ಆಸ್ಟ್ರೇಲಿಯನ್ ರಾಯಭಾರ ಕಚೇರಿಯೊಂದಿಗೆ ಸಂಪರ್ಕಿಸಲು ಅನುಮತಿ ನಿರಾಕರಿಸಲಾಗಿದೆ ಎಂದು ಆರೋಪಿಸಲಾಗಿದೆ. ಅವರ ಆರೋಗ್ಯ ಸ್ಥಿತಿಯ ಬಗ್ಗೆ ಅಧಿಕಾರಿಗಳಿಗೆ ತಿಳಿಸಿದ್ದರೂ, ಬ್ರಾಡ್‌ಬರಿ ಅವರಿಗೆ ಔಷಧಿಗಳನ್ನು ಕೂಡಾ ನಿರಾಕರಿಸಲಾಗಿದೆ ಎಂದು ವರದಿ ಉಲ್ಲೇಖಿಸಿದೆ. ಅವರ ಮಕ್ಕಳು ಉಳಿಸಿಕೊಂಡು, ಅವರನ್ನು ಭಾರತದಿಂದ ಗಡೀಪಾರು ಮಾಡಲಾಯಿತು ಎಂದು ಅದು ಹೇಳಿದೆ.

ಅವರ ಪ್ರಸ್ತುತ ಭೇಟಿಯ ಉದ್ದೇಶ, ಅವರ 2012 ರ ಭಾರತ ಭೇಟಿಯ ಕಾರಣ ಮತ್ತು ದೇಶದಲ್ಲಿ ಅವರ ಸಂಪರ್ಕಗಳನ್ನು ವಿವರಿಸಲು ಕೇಳಲಾಯಿತು ಎಂದು ಬ್ರಾಡ್ಬರಿ ಅವರು ಹೇಳಿದ್ದಾರೆ. ತನ್ನ ಫೋನ್ ಅನ್ನು ಅನ್ಲಾಕ್ ಮಾಡಲು ಮತ್ತು ಭಾರತದಲ್ಲಿನ ತನ್ನ ಸಹಚರರ ಸಂಪರ್ಕ ಸಂಖ್ಯೆಗಳನ್ನು ಹಂಚಿಕೊಳ್ಳಲು ಅಧಿಕಾರಿಗಳು ಒತ್ತಾಯಿಸಿದರಾದರೂ, ತಾನು ಅದನ್ನು “ನಿರಾಕರಿಸಿದೆ” ಅವರು ಹೇಳಿದ್ದಾರೆ.

ಈ ಹಿಂದೆ ಬ್ರಾಡ್ಬರಿ ಅವರು ತನ್ನ ಪತ್ನಿ ಮತ್ತು ಮೂರು ವರ್ಷದ ಮಗನೊಂದಿಗೆ ಅಕ್ಟೋಬರ್ 2012 ರಲ್ಲಿ ಭಾರತಕ್ಕೆ ಭೇಟಿ ನೀಡಿದ್ದರು. ಅವರು ಪ್ರವಾಸಿ ವೀಸಾದಲ್ಲಿ ಮುಂಬೈ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ತೀರ್ಪುಗಾರರ ಸದಸ್ಯರಾಗಿ ಆಗಮಿಸಿದ್ದರು. ಈ ಚಿತ್ರೋತ್ಸವದ ನಂತರ, ಬ್ರಾಡ್ಬರಿ ತನ್ನ ಕುಟುಂಬದೊಂದಿಗೆ ತಮಿಳುನಾಡಿನ ತಿರುನೆಲ್ವೇಲಿ ಜಿಲ್ಲೆಯ ಇಡಿಂತಕರೈ ಎಂಬ ಕರಾವಳಿ ಗ್ರಾಮಕ್ಕೆ ಭೇಟಿ ನೀಡಿದ್ದರು. ಆ ವೇಳೆ ಈ ಗ್ರಾಮವು ಕೂಡಂಕುಳಂ ಪರಮಾಣು ವಿದ್ಯುತ್ ಸ್ಥಾವರದ ವಿರುದ್ಧದ ಪ್ರತಿಭಟನೆಯ ಕೇಂದ್ರಬಿಂದುವಾಗಿತ್ತು.

ಜಪಾನ್‌ನಲ್ಲಿ 2011 ರ ಫುಕುಶಿಮಾ ಪರಮಾಣು ದುರಂತದ ನಂತರ ಅಣು ಸ್ಥಾವರದಲ್ಲಿ ಸಂಭವಿಸುವ ಯಾವುದೇ ಅಪಘಾತದ ವ್ಯಾಪ್ತಿ ಮತ್ತು ದೀರ್ಘಾವಧಿಯ ಪರಿಣಾಮಗಳ ಬಗ್ಗೆ ಸ್ಥಳೀಯರು ಆತಂಕ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದರು. ಈ ಪ್ರತಿಭಟನೆ ತಿರುನಲ್ವೇಲಿ ಜಿಲ್ಲೆಯಾದ್ಯಂತ ಹರಡಿದ್ದವು.

ಇದನ್ನೂಓದಿ: ಮಾನನಷ್ಟ ಮೊಕದ್ದಮೆ ಪ್ರಕರಣ; ಶಿಕ್ಷೆ ಪ್ರಕಟವಾದ ಕೆಲವೇ ಗಂಟೆಗಳಲ್ಲಿ ಜಾಮೀನು ಪಡೆದ ಸಂಜಯ್ ರಾವತ್

ಅಲ್ಲದೆ ಬ್ರಾಡ್ಬರಿ ಅವರ ಭೇಟಿಗೆ ಒಂದು ತಿಂಗಳ ಮೊದಲು, ಇಡಿಂತಕರೈನ ಸ್ಥಾವರದಲ್ಲಿ ಯುರೇನಿಯಂ ಇಂಧನ ತುಂಬಿರುವುದನ್ನು ವಿರೋಧಿಸಿ ಗ್ರಾಮಸ್ಥರು ಪ್ರತಿಭಟಿಸಿದ್ದರಿಂದ ಪೊಲೀಸರು ಪ್ರತಿಭಟನಾಕಾರರನ್ನು ಗುಂಡಿಕ್ಕಿ ಕೊಂದಿದ್ದರು. ಈ ವೇಳೆ ಸುಮಾರು 66 ಜನರನ್ನು, ಅದರಲ್ಲೂ ಹೆಚ್ಚಾಗಿ ಮಹಿಳೆಯರನ್ನು ಬಂಧಿಸಲಾಗಿತ್ತು. ಹಲವರ ವಿರುದ್ಧ ದೇಶದ್ರೋಹದ ಆರೋಪ ಕೂಡಾ ಮಾಡಲಾಗಿತ್ತು.

ಇಂತಹ ಸಮಯದಲ್ಲಿ ಬ್ರಾಡ್ಬರಿ ಎರಡು ವಾರಗಳ ಕಾಲ ಗ್ರಾಮದಲ್ಲಿ ಉಳಿದುಕೊಂಡರು ಮತ್ತು ಪ್ರತಿಭಟನೆಗಳು ಮತ್ತು ಜೀವನೋಪಾಯಕ್ಕಾಗಿ ಮೀನುಗಾರಿಕೆಯನ್ನು ಪ್ರಧಾನವಾಗಿ ಅವಲಂಬಿಸಿರುವ ಗ್ರಾಮಸ್ಥರ ದೈನಂದಿನ ಜೀವನವನ್ನು ದಾಖಲಿಸಿದ್ದರು.

ಅದೇ ವೇಳೆ ಅವರನ್ನು ಕೂಡಂಕುಳಂ ಸ್ಥಳಕ್ಕೆ ಭೇಟಿ ನೀಡದಂತೆ ತಡೆಯಲಾಗಿತ್ತು ಮತ್ತು ಕಿರುಕುಳ ನೀಡಲಾಗಿತ್ತು ಎಂದು ಅವರು ಹೇಳಿದ್ದಾರೆ. ಇದರ ನಂತರ ಅವರು ‘ಡಾಕ್ಯುಮೆಂಟಿಂಗ್ ಡಿಸೆಂಟ್: ಡೇವಿಡ್ ಬ್ರಾಡ್‌ಬರಿಸ್ ಅಕೌಂಟ್ ಆಫ್ ಹರಾಸ್‌ಮೆಂಟ್ ಇನ್ ಕೂಡಂಕುಳಂ’ ಎಂಬ ಶೀರ್ಷಿಕೆಯ ಲೇಖನವನ್ನು ಬರೆದಿದ್ದರು. ಕೂಡಂಕುಳಂನಲ್ಲಿ ಪರಮಾಣು ವಿದ್ಯುತ್ ಸ್ಥಾವರ ನಿರ್ಮಿಸುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರ್ಧಾರವನ್ನು ಅವರು, “ತಮ್ಮ ಸ್ವಂತ ಜನರು ಮತ್ತು ಜಗತ್ತಿನ ಬಗ್ಗೆ ಬೇಜವಾಬ್ದಾರಿಯ ನಡೆ” ಎಂದು ಹೇಳಿದ್ದರು.ಆಸ್ಟ್ರೇಲಿಯಾದ ಸಾಕ್ಷ್ಯಚಿತ್ರ

ತಮ್ಮ ಬಂಧನ ಮತ್ತು ಗಡೀಪಾರು ಕೂಡಂಕುಳಂ ಪರಮಾಣು ಸ್ಥಾವರದ ತಮ್ಮ ಚಲನಚಿತ್ರದ ಕಾರಣಕ್ಕೆ ನಡೆದಿದೆ ಎಂದು ಬ್ರಾಡ್ಬರಿ ಅವರು ಆರೋಪಿಸಿದ್ದಾರೆ.

ವಿಡಿಯೊ ನೋಡಿ: ಕಲಬುರಗಿ- ಗೌರಿಯದ್ದು ವೈಚಾರಿಕ ಕೊಲೆ: ಗೌರಿ ನೆನಪು ಕಾರ್ಯಕ್ರಮದಲ್ಲಿ ರಹಮತ್ ತರೀಕೆರೆ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...