Homeಕರ್ನಾಟಕಮಾದಕ ದ್ರವ್ಯ ಬಳಕೆ-ಮಾರಾಟದ ಶಿಕ್ಷೆಯ ಕುರಿತು ಶಾಲಾ-ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮ: ಪರಮೇಶ್ವರ್

ಮಾದಕ ದ್ರವ್ಯ ಬಳಕೆ-ಮಾರಾಟದ ಶಿಕ್ಷೆಯ ಕುರಿತು ಶಾಲಾ-ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮ: ಪರಮೇಶ್ವರ್

- Advertisement -
- Advertisement -

ಮಾದಕ ದ್ರವ್ಯ ಬಳಕೆಯ ದುಷ್ಪರಿಣಾಮ, ಮಾರಾಟದ ಶಿಕ್ಷೆಯ ಕುರಿತು ಶಾಲಾ-ಕಾಲೇಜುಗಳಲ್ಲಿ, ಪೊಲೀಸ್ ಠಾಣೆಗಳಲ್ಲಿ ನಿಯಮಿತವಾಗಿ ಜಾಗೃತಿ ಕಾರ್ಯಕ್ರಮಗಳನ್ನು ಮಾಡಲಾಗಿರುತ್ತದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದರು.

ಗುರುವಾರ ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್ ಸದಸ್ಯ ಅಬ್ದುಲ್ ಜಬ್ಬಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಾ. ಪರಮೇಶ್ವರ್, ಬಾಡಿಗೆ ಮನೆಗಳಲ್ಲಿ ವಾಸಿಸುವ ವಿದೇಶಿ ಪ್ರಜೆಗಳಾಗಿರುವ ಪುನರಾವರ್ತಿತ ಅಪರಾಧಿಗಳು ಪೊಲೀಸರ ಗಮನಕ್ಕೆ ಬರುತ್ತಿದ್ದಾರೆ ಎಂದು ಹೇಳಿದರು.

“ಡ್ರಗ್ಸ್ ತಡೆಗೆ ಮತ್ತು ಅಂತಹ ದಂಧೆಗಳಿಗೆ ಸಂಪೂರ್ಣವಾಗಿ ಕಡಿವಾಣ ಹಾಕಲು ರಾಜ್ಯ ಸರ್ಕಾರವು ಕಠಿಣ ನಿರ್ಧಾರ ತೆಗೆದುಕೊಂಡಿದೆ. ಡ್ರಗ್ಸ್ ದಂಧೆ ಸಂಪೂರ್ಣ ನಿಯಂತ್ರಣಕ್ಕೆ ಬರುವವರೆಗೆ ದಂಧೆಕೋರರ ವಿರುದ್ಧ ಸಮರ ನಡೆಯಲಿದೆ. ಮಾದಕ ವಸ್ತುಗಳ ಉತ್ಪಾದನೆ, ಮಾರಾಟ ಮತ್ತು ಅವುಗಳ ಬಳಕೆ ಜಾಗತಿಕವಾಗಿ ದಿನೇ ದಿನೇ ಹೆಚ್ಚುತ್ತಿದೆ. ಮಾದಕ ವಸ್ತುಗಳ ಮಾರಾಟವು ಮಾರಾಟಗಾರರಿಗೆ ಅತೀ ಹೆಚ್ಚಿನ ಲಾಭಾಂಶ ತರುವ ಉದ್ಯಮವಾಗಿ ಪರಿವರ್ತನೆಯಾಗಿದೆ. ಅತೀ ಹೆಚ್ಚಿನ ಲಾಭಕ್ಕಾಗಿ ಅಂತರ್ ರಾಜ್ಯ/ ಅಂತರ್ ರಾಷ್ಟ್ರೀಯ ಜಾಲಗಳು ಕಾರ್ಯನಿರ್ವಹಿಸುತ್ತಿವೆ” ಎಂದು ಸದನಕ್ಕೆ ಮಾಹಿತಿ ನೀಡಿದರು.

“ಈ ಜಾಲಗಳು ಜಗತ್ತಿನಾದ್ಯಾಂತ ಬಹುತೇಕ ಎಲ್ಲಾ ರಾಷ್ಟ್ರಗಳಲ್ಲಿ ಸಕ್ರೀಯವಾಗಿರುವುದರಿಂದ ಈ ಡಗ್ಸ್ ಸಮಸ್ಯೆಯು ಸಾರ್ವತ್ರಿಕವಾಗಿದೆ. ರಾಜ್ಯದಲ್ಲಿ ಮಾದಕ ವಸ್ತುಗಳ ಸೇವನೆ, ಮಾರಾಟ ತಡೆಗಟ್ಟಲು ರಾಜ್ಯ ಸರ್ಕಾರವು ನಾನಾ ಕ್ರಮ ತೆಗೆದುಕೊಂಡಿದೆ. ರಾಜ್ಯದಲ್ಲಿ ಮಾದಕ ದ್ರವ್ಯಗಳ ಹಾವಳಿಯನ್ನು ಎದುರಿಸಲು ಹಾಗೂ ತಡೆಗಟ್ಟಲು ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರ ನೇತೃತ್ವದಲ್ಲಿ ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ (ಎ.ಎನ್.ಟಿ.ಎಫ್) ಪಡೆಯನ್ನು ಸ್ಥಾಪಿಸಲಾಗಿದೆ” ಎಂದು ಹೇಳಿದರು.

“ರಾಜ್ಯದ ಮಾದಕ ವಸ್ತುಗಳ ಬಳಕೆ ಹೆಚ್ಚುತ್ತಿರುವ ಕುರಿತು ಡ್ರಗ್ಸ್ ಹಾವಳಿಯನ್ನು ಪೂರ್ಣವಾಗಿ ತಡೆಗಟ್ಟಲು ಗಾಂಜಾ ಬೆಳೆಯನ್ನು ಬೆಳೆಯುವುದು, ಮಾರಾಟ ಮಾಡುವುದು ಕಾನೂನಾತ್ಮಕ ಅಪರಾಧವಾಗಿರುತ್ತದೆ ಎಂಬ ಅಂಶಗಳ, ಗಾಂಜಾ ಸೇವನೆಯಿಂದ ಆಗುವ ದುಷ್ಪರಿಣಾಮಗಳು ಮತ್ತು ಅದರಿಂದಾಗುವ ಶಿಕ್ಷೆಯ ಕುರಿತು ಶಾಲಾ-ಕಾಲೇಜುಗಳಲ್ಲಿ, ಪೊಲೀಸ್ ಠಾಣೆಗಳಲ್ಲಿ ನಿಯಮಿತವಾಗಿ ಜಾಗೃತಿ ಕಾರ್ಯಕ್ರಮಗಳನ್ನು ಮಾಡಲಾಗಿರುತ್ತದೆ” ಎಂದರು.

“ಮಾದಕ ದ್ರವ್ಯಗಳ ಅಕ್ರಮ ಸಾಗಾಣಿಕೆ ಮತ್ತು ಜಾಲ ಕುರಿತು ಸ್ಥಳೀಯ ಬಾತ್ಮೀದಾರರು, ಅಪರಾಧ ವಿಭಾಗದ ಸಿಬ್ಬಂದಿಗಳು ಹಾಗೂ ಬೀಟ್ ಸಿಬ್ಬಂದಿಗಳಿಂದ ಮಾಹಿತಿ ಕಲೆ ಹಾಕಲಾಗುತ್ತಿದೆ. ಪೊಲೀಸ್ ಠಾಣೆಯಲ್ಲಿ ಮಾದಕ ದ್ರವ್ಯಗಳ ಅಕ್ರಮ ಸಾಗಾಣಿಕೆ ಬಗ್ಗೆ ವಿಶೇಷವಾಗಿ ಮಾಹಿತಿಯನ್ನು ಸಂಗ್ರಹಿಸಿ ಕ್ರಮ ಕೈಗೊಳ್ಳಲಾಗುತ್ತಿದೆ” ಎಂದು ಹೇಳಿದರು.

“ಪ್ರತಿ ತಿಂಗಳು ಶಾಲಾ-ಕಾಲೇಜುಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡಿ ಮಾದಕ ವಸ್ತುಗಳ ಸೇವನೆಯಿಂದ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಗುತ್ತಿದೆ. ಸಂಶಯಾಸ್ಪದ ಹೈ ಸೆಕ್ಯುರಿಟಿ ಸ್ಥಳಗಳಲ್ಲಿ ಬಿಗಿ ನಿಗಾವಣೆ ಇಡಲಾಗಿದೆ. ಪಾರ್ಸಲ್ ಸರ್ವೀಸ್, ಕೋರಿಯರ್ ಸೆಂಟರ್, ರೆಸಾರ್ಟ್/ಫಾರ್ಮ್ ಹೌಸ್‌ಗಳಿಗೆ ದಿಢೀರ್ ಭೇಟಿ ಕೈಗೊಂಡು ನಗರ ಹೊರವಲಯಗಳಲ್ಲಿ ಡ್ರಗ್ಸ್ ಪಾರ್ಟಿಗಳನ್ನು ತಡೆಗಟ್ಟುವ ಬಗ್ಗೆ ವಿಶೇಷ ಪೆಟ್ರೋಲಿಂಗ್ ನಡೆಸಲಾಗಿರುತ್ತದೆ” ಎಂದು ವಿವರಿಸಿದರು.

“ಪ್ರತಿ ಮಾಹೆಯಲ್ಲಿ ಜಿಲ್ಲಾ ಮಟ್ಟದ ಎನ್‌ಸಿಒಆರ್‌ಡಿ ಸಭೆಗಳನ್ನು ನಡೆಸಲು ಎಲ್ಲಾ ಘಟಕಾಧಿಕಾರಿಗಳಿಗೆ ತಿಳಿಸಲಾಗಿರುತ್ತದೆ. ಪ್ರತಿ ವರ್ಷ ಜೂನ್ 26ರಂದು ಮಾದಕ ವಸ್ತುಗಳ ನಿಗ್ರಹ ದಿನವನ್ನು ಆಚರಣೆ ಮಾಡಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ. ಮಾದಕ ವಸ್ತು ಮಾರಾಟ ಉತ್ಪಾದನೆ ಬಗ್ಗೆ ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಎನ್.ಡಿ.ಪಿ.ಎಸ್. ಕಾಯ್ದೆಯಡಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ವಿ.ಸಿ. ಮೂಲಕವು ಸಹ ಎಲ್ಲ ಘಟಕಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿರುತ್ತದೆ” ಎಂದು ಅವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋವಾ ನೈಟ್ ಕ್ಲಬ್ ಮಾಲೀಕರ ಮಧ್ಯಂತರ ಜಾಮೀನು ನಿರಾಕರಿಸಿದ ದೆಹಲಿ ನ್ಯಾಯಾಲಯ: ಥೈಲ್ಯಾಂಡ್‌ನಿಂದಲೂ ಗಡಿಪಾರು ಪ್ರಕ್ರಿಯೆ ಆರಂಭ 

ನವದೆಹಲಿ: ಕಳೆದ ವಾರ ಕನಿಷ್ಠ 25 ಜನರ ಸಾವಿಗೆ ಕಾರಣವಾಗಿದ್ದ, ಗೋವಾದ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಮತ್ತು ಗೌರವ್ ಲುಥ್ರಾಸ್ ಅವರ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು...

ದುಡ್ಡು ಕೊಟ್ಟವರಿಗೆ ರಾಜಾತಿಥ್ಯ, ಪೌರತ್ವಕ್ಕೆ ರಹದಾರಿ : ಏನಿದು ‘ಟ್ರಂಪ್ ಗೋಲ್ಡ್ ಕಾರ್ಡ್’

ಟ್ರಂಪ್ ಆಡಳಿತವು ಬುಧವಾರ (ಡಿಸೆಂಬರ್ 10) ಔಪಚಾರಿಕವಾಗಿ 'ಟ್ರಂಪ್ ಗೋಲ್ಡ್ ಕಾರ್ಡ್'ಗಾಗಿ ಅರ್ಜಿಗಳನ್ನು ಸ್ವೀಕರಿಸಲು ಪ್ರಾರಂಭಿಸಿದೆ. ಇದನ್ನು ಅಮೆರಿಕ ಸರ್ಕಾರ ಕನಿಷ್ಠ 1 ಮಿಲಿಯನ್ ಡಾಲರ್ ಪಾವತಿಸುವ ಜನರಿಗೆ ನೀಡಲು ಯೋಜಿಸಿದೆ. 'ಟ್ರಂಪ್ ಗೋಲ್ಡ್...

ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಜೈಲು ಶಿಕ್ಷೆ ಅಮಾನತು ಮನವಿ ನಿರಾಕರಿಸಿದ ಸುಪ್ರೀಂ ಕೋರ್ಟ್

1996 ರ ಮಾದಕ ದ್ರವ್ಯ ವಶ ಪ್ರಕರಣದಲ್ಲಿ ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಅವರ 20 ವರ್ಷಗಳ ಜೈಲು ಶಿಕ್ಷೆಯನ್ನು ಅಮಾನತುಗೊಳಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದರಿಂದ ಗುರುವಾರ ಅವರ ಬಿಡುಗಡೆಗಾಗಿನ ಪ್ರಯತ್ನ...

ಅರುಣಾಚಲ ಪ್ರದೇಶ: ಟ್ರಕ್ ಕಂದಕಕ್ಕೆ ಉರುಳಿ ಅಸ್ಸಾಂ ಮೂಲದ 21 ಕಾರ್ಮಿಕರು ಸಾವನ್ನಪ್ಪಿರುವ ಶಂಕೆ, 18 ಮೃತದೇಹಗಳು ಪತ್ತೆ

ಅರುಣಾಚಲ ಪ್ರದೇಶದ ಅಂಜಾವ್ ಜಿಲ್ಲೆಯಲ್ಲಿ ಅಸ್ಸಾಂನಿಂದ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟ್ರಕ್ ಆಳವಾದ ಕಂದಕಕ್ಕೆ ಉರುಳಿದ್ದು, 21 ಜನರು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಇಲ್ಲಿಯವರೆಗೆ 18 ಶವಗಳನ್ನು ಹೊರತೆಗೆಯಲಾಗಿದೆ ಎಂಬ ಮಾಹಿತಿ ಸಿಕ್ಕಿದೆ.  ಡಿಸೆಂಬರ್ 8ನೇ...

ಜಾರ್ಖಂಡ್‌ನ 27 ಮಕ್ಕಳು ನೇಪಾಳಕ್ಕೆ ಕಳ್ಳಸಾಗಣೆ; ತನಿಖೆ ಆರಂಭಿಸಿದ ಪೊಲೀಸರು

ಉತ್ತಮ ಶಿಕ್ಷಣ ಒದಗಿಸುವ ನೆಪದಲ್ಲಿ 27 ಮಕ್ಕಳನ್ನು ನೇಪಾಳಕ್ಕೆ ಕಳ್ಳಸಾಗಣೆ ಮಾಡಲಾಗಿದೆ ಎಂಬ ಆರೋಪದ ಮೇಲೆ ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ಪೊಲೀಸರು ಗುರುವಾರ ತನಿಖೆ ಆರಂಭಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಕ್ಕಳನ್ನು...

ಉಮರ್ ಖಾಲಿದ್‌ಗೆ 14 ದಿನಗಳ ಮಧ್ಯಂತರ ಜಾಮೀನು; ಸಹೋದರಿಯ ಮದುವೆಯಲ್ಲಿ ಪಾಲ್ಗೊಳ್ಳಲು ಅವಕಾಶ

ಸಾಮಾಜಿಕ ಕಾರ್ಯಕರ್ತ ಉಮರ್ ಖಾಲಿದ್ ಅವರಿಗೆ ಡಿಸೆಂಬರ್ 27 ರಂದು ನಿಗದಿಯಾಗಿದ್ದ ತಮ್ಮ ಸಹೋದರಿಯ ಮದುವೆಯಲ್ಲಿ ಪಾಲ್ಗೊಳ್ಳಲು ಡಿಸೆಂಬರ್ 16 ರಿಂದ 29 ರವರೆಗೆ 14 ದಿನಗಳ ಕಾಲ ಮಧ್ಯಂತರ ಜಾಮೀನು ನೀಡಲಾಯಿತು....

ಜಾತ್ಯತೀತತೆಯನ್ನು ಮಾತ್ರ ನಂಬುತ್ತೇನೆ; ಕೋಮುವಾದವನ್ನಲ್ಲ: ಮಮತಾ ಬ್ಯಾನರ್ಜಿ

ನಾನು ಕೋಮುವಾದದಲ್ಲಿ ನಂಬಿಕೆ ಇಡುವುದಿಲ್ಲ. ಜಾತ್ಯತೀತತೆಯನ್ನು ಮಾತ್ರ ನಂಬುತ್ತೇನೆ. ಚುನಾವಣೆ ಸಮೀಪಿಸಿದಾಗಲೆಲ್ಲಾ, ಬಿಜೆಪಿ ಹಣವನ್ನು ಬಳಸಿ ಇತರ ರಾಜ್ಯಗಳಿಂದ ಜನರನ್ನು ಕರೆತಂದು ಸಾರ್ವಜನಿಕರನ್ನು ವಿಭಜಿಸಲು ಪ್ರಯತ್ನಿಸುತ್ತದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ...

ಅತ್ಯಾಚಾರ ಪ್ರಕರಣದ ವಿಚಾರಣೆ ವರ್ಗಾವಣೆ ಕೋರಿ ಪ್ರಜ್ವಲ್ ರೇವಣ್ಣ ಮನವಿ : ತಿರಸ್ಕರಿಸಿದ ಸುಪ್ರೀಂ ಕೋರ್ಟ್‌

ಬೆಂಗಳೂರಿನ 81ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶರು ವಿಚಾರಣೆ ನಡೆಸುತ್ತಿರುವ ತಮ್ಮ ವಿರುದ್ಧದ ಎರಡು ಅತ್ಯಾಚಾರ ಪ್ರಕರಣಗಳನ್ನು ಬೇರೆ ಸೆಷನ್ಸ್‌ ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಕೋರಿ ಜೆಡಿಎಸ್‌ ಮಾಜಿ ಸಂಸದ ಪ್ರಜ್ವಲ್‌...

ಭಗವದ್ಗೀತೆ ಕಾರ್ಯಕ್ರಮದಲ್ಲಿ ಚಿಕನ್ ಪಫ್ಸ್ ಮಾರಿದ ಮುಸ್ಲಿಂ ವ್ಯಾಪಾರಿಗೆ ಥಳಿತ : ಮೂವರ ಬಂಧನ

ಲಕ್ಷ ಕಂಠ ಗೀತಾ ಪಾರಾಯಣ (ಸುಮಾರು 5 ಲಕ್ಷ ಜನರಿಂದ ಭಗವದ್ಗೀತೆ ಪಾರಾಯಣ) ಕಾರ್ಯಕ್ರಮದಲ್ಲಿ ಚಿಕನ್ ಪಫ್ಸ್ ಮಾರಿದ ಬಡ ಮುಸ್ಲಿಂ ವ್ಯಾಪಾರಿಗೆ ಥಳಿಸಿದ ಘಟನೆ ಭಾನುವಾರ (ಡಿಸೆಂಬರ್ 7) ಕೋಲ್ಕತ್ತಾದ ಬ್ರಿಗೇಡ್...

ಪರಿಶಿಷ್ಟ ಜಾತಿ ಪಟ್ಟಿಗೆ ಜಮ್ಮು-ಕಾಶ್ಮೀರದ ವಾಲ್ಮೀಕಿ ಸಮುದಾಯ: ಒಕ್ಕೂಟ ಸರ್ಕಾರ

ಜಮ್ಮು ಮತ್ತು ಕಾಶ್ಮೀರದ ವಾಲ್ಮೀಕಿ ಸಮುದಾಯವನ್ನು ಈಗ ಅಧಿಕೃತವಾಗಿ ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸಲಾಗಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಬುಧವಾರ ಸಂಸತ್ತಿಗೆ ತಿಳಿಸಿದೆ. ಇತ್ತೀಚಿನ ವರ್ಷಗಳಲ್ಲಿ ಪ್ರಕ್ರಿಯೆಗೊಳಿಸಲಾದ...