Homeಕರ್ನಾಟಕಮಾದಕ ದ್ರವ್ಯ ಬಳಕೆ-ಮಾರಾಟದ ಶಿಕ್ಷೆಯ ಕುರಿತು ಶಾಲಾ-ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮ: ಪರಮೇಶ್ವರ್

ಮಾದಕ ದ್ರವ್ಯ ಬಳಕೆ-ಮಾರಾಟದ ಶಿಕ್ಷೆಯ ಕುರಿತು ಶಾಲಾ-ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮ: ಪರಮೇಶ್ವರ್

- Advertisement -
- Advertisement -

ಮಾದಕ ದ್ರವ್ಯ ಬಳಕೆಯ ದುಷ್ಪರಿಣಾಮ, ಮಾರಾಟದ ಶಿಕ್ಷೆಯ ಕುರಿತು ಶಾಲಾ-ಕಾಲೇಜುಗಳಲ್ಲಿ, ಪೊಲೀಸ್ ಠಾಣೆಗಳಲ್ಲಿ ನಿಯಮಿತವಾಗಿ ಜಾಗೃತಿ ಕಾರ್ಯಕ್ರಮಗಳನ್ನು ಮಾಡಲಾಗಿರುತ್ತದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದರು.

ಗುರುವಾರ ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್ ಸದಸ್ಯ ಅಬ್ದುಲ್ ಜಬ್ಬಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಾ. ಪರಮೇಶ್ವರ್, ಬಾಡಿಗೆ ಮನೆಗಳಲ್ಲಿ ವಾಸಿಸುವ ವಿದೇಶಿ ಪ್ರಜೆಗಳಾಗಿರುವ ಪುನರಾವರ್ತಿತ ಅಪರಾಧಿಗಳು ಪೊಲೀಸರ ಗಮನಕ್ಕೆ ಬರುತ್ತಿದ್ದಾರೆ ಎಂದು ಹೇಳಿದರು.

“ಡ್ರಗ್ಸ್ ತಡೆಗೆ ಮತ್ತು ಅಂತಹ ದಂಧೆಗಳಿಗೆ ಸಂಪೂರ್ಣವಾಗಿ ಕಡಿವಾಣ ಹಾಕಲು ರಾಜ್ಯ ಸರ್ಕಾರವು ಕಠಿಣ ನಿರ್ಧಾರ ತೆಗೆದುಕೊಂಡಿದೆ. ಡ್ರಗ್ಸ್ ದಂಧೆ ಸಂಪೂರ್ಣ ನಿಯಂತ್ರಣಕ್ಕೆ ಬರುವವರೆಗೆ ದಂಧೆಕೋರರ ವಿರುದ್ಧ ಸಮರ ನಡೆಯಲಿದೆ. ಮಾದಕ ವಸ್ತುಗಳ ಉತ್ಪಾದನೆ, ಮಾರಾಟ ಮತ್ತು ಅವುಗಳ ಬಳಕೆ ಜಾಗತಿಕವಾಗಿ ದಿನೇ ದಿನೇ ಹೆಚ್ಚುತ್ತಿದೆ. ಮಾದಕ ವಸ್ತುಗಳ ಮಾರಾಟವು ಮಾರಾಟಗಾರರಿಗೆ ಅತೀ ಹೆಚ್ಚಿನ ಲಾಭಾಂಶ ತರುವ ಉದ್ಯಮವಾಗಿ ಪರಿವರ್ತನೆಯಾಗಿದೆ. ಅತೀ ಹೆಚ್ಚಿನ ಲಾಭಕ್ಕಾಗಿ ಅಂತರ್ ರಾಜ್ಯ/ ಅಂತರ್ ರಾಷ್ಟ್ರೀಯ ಜಾಲಗಳು ಕಾರ್ಯನಿರ್ವಹಿಸುತ್ತಿವೆ” ಎಂದು ಸದನಕ್ಕೆ ಮಾಹಿತಿ ನೀಡಿದರು.

“ಈ ಜಾಲಗಳು ಜಗತ್ತಿನಾದ್ಯಾಂತ ಬಹುತೇಕ ಎಲ್ಲಾ ರಾಷ್ಟ್ರಗಳಲ್ಲಿ ಸಕ್ರೀಯವಾಗಿರುವುದರಿಂದ ಈ ಡಗ್ಸ್ ಸಮಸ್ಯೆಯು ಸಾರ್ವತ್ರಿಕವಾಗಿದೆ. ರಾಜ್ಯದಲ್ಲಿ ಮಾದಕ ವಸ್ತುಗಳ ಸೇವನೆ, ಮಾರಾಟ ತಡೆಗಟ್ಟಲು ರಾಜ್ಯ ಸರ್ಕಾರವು ನಾನಾ ಕ್ರಮ ತೆಗೆದುಕೊಂಡಿದೆ. ರಾಜ್ಯದಲ್ಲಿ ಮಾದಕ ದ್ರವ್ಯಗಳ ಹಾವಳಿಯನ್ನು ಎದುರಿಸಲು ಹಾಗೂ ತಡೆಗಟ್ಟಲು ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರ ನೇತೃತ್ವದಲ್ಲಿ ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ (ಎ.ಎನ್.ಟಿ.ಎಫ್) ಪಡೆಯನ್ನು ಸ್ಥಾಪಿಸಲಾಗಿದೆ” ಎಂದು ಹೇಳಿದರು.

“ರಾಜ್ಯದ ಮಾದಕ ವಸ್ತುಗಳ ಬಳಕೆ ಹೆಚ್ಚುತ್ತಿರುವ ಕುರಿತು ಡ್ರಗ್ಸ್ ಹಾವಳಿಯನ್ನು ಪೂರ್ಣವಾಗಿ ತಡೆಗಟ್ಟಲು ಗಾಂಜಾ ಬೆಳೆಯನ್ನು ಬೆಳೆಯುವುದು, ಮಾರಾಟ ಮಾಡುವುದು ಕಾನೂನಾತ್ಮಕ ಅಪರಾಧವಾಗಿರುತ್ತದೆ ಎಂಬ ಅಂಶಗಳ, ಗಾಂಜಾ ಸೇವನೆಯಿಂದ ಆಗುವ ದುಷ್ಪರಿಣಾಮಗಳು ಮತ್ತು ಅದರಿಂದಾಗುವ ಶಿಕ್ಷೆಯ ಕುರಿತು ಶಾಲಾ-ಕಾಲೇಜುಗಳಲ್ಲಿ, ಪೊಲೀಸ್ ಠಾಣೆಗಳಲ್ಲಿ ನಿಯಮಿತವಾಗಿ ಜಾಗೃತಿ ಕಾರ್ಯಕ್ರಮಗಳನ್ನು ಮಾಡಲಾಗಿರುತ್ತದೆ” ಎಂದರು.

“ಮಾದಕ ದ್ರವ್ಯಗಳ ಅಕ್ರಮ ಸಾಗಾಣಿಕೆ ಮತ್ತು ಜಾಲ ಕುರಿತು ಸ್ಥಳೀಯ ಬಾತ್ಮೀದಾರರು, ಅಪರಾಧ ವಿಭಾಗದ ಸಿಬ್ಬಂದಿಗಳು ಹಾಗೂ ಬೀಟ್ ಸಿಬ್ಬಂದಿಗಳಿಂದ ಮಾಹಿತಿ ಕಲೆ ಹಾಕಲಾಗುತ್ತಿದೆ. ಪೊಲೀಸ್ ಠಾಣೆಯಲ್ಲಿ ಮಾದಕ ದ್ರವ್ಯಗಳ ಅಕ್ರಮ ಸಾಗಾಣಿಕೆ ಬಗ್ಗೆ ವಿಶೇಷವಾಗಿ ಮಾಹಿತಿಯನ್ನು ಸಂಗ್ರಹಿಸಿ ಕ್ರಮ ಕೈಗೊಳ್ಳಲಾಗುತ್ತಿದೆ” ಎಂದು ಹೇಳಿದರು.

“ಪ್ರತಿ ತಿಂಗಳು ಶಾಲಾ-ಕಾಲೇಜುಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡಿ ಮಾದಕ ವಸ್ತುಗಳ ಸೇವನೆಯಿಂದ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಗುತ್ತಿದೆ. ಸಂಶಯಾಸ್ಪದ ಹೈ ಸೆಕ್ಯುರಿಟಿ ಸ್ಥಳಗಳಲ್ಲಿ ಬಿಗಿ ನಿಗಾವಣೆ ಇಡಲಾಗಿದೆ. ಪಾರ್ಸಲ್ ಸರ್ವೀಸ್, ಕೋರಿಯರ್ ಸೆಂಟರ್, ರೆಸಾರ್ಟ್/ಫಾರ್ಮ್ ಹೌಸ್‌ಗಳಿಗೆ ದಿಢೀರ್ ಭೇಟಿ ಕೈಗೊಂಡು ನಗರ ಹೊರವಲಯಗಳಲ್ಲಿ ಡ್ರಗ್ಸ್ ಪಾರ್ಟಿಗಳನ್ನು ತಡೆಗಟ್ಟುವ ಬಗ್ಗೆ ವಿಶೇಷ ಪೆಟ್ರೋಲಿಂಗ್ ನಡೆಸಲಾಗಿರುತ್ತದೆ” ಎಂದು ವಿವರಿಸಿದರು.

“ಪ್ರತಿ ಮಾಹೆಯಲ್ಲಿ ಜಿಲ್ಲಾ ಮಟ್ಟದ ಎನ್‌ಸಿಒಆರ್‌ಡಿ ಸಭೆಗಳನ್ನು ನಡೆಸಲು ಎಲ್ಲಾ ಘಟಕಾಧಿಕಾರಿಗಳಿಗೆ ತಿಳಿಸಲಾಗಿರುತ್ತದೆ. ಪ್ರತಿ ವರ್ಷ ಜೂನ್ 26ರಂದು ಮಾದಕ ವಸ್ತುಗಳ ನಿಗ್ರಹ ದಿನವನ್ನು ಆಚರಣೆ ಮಾಡಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ. ಮಾದಕ ವಸ್ತು ಮಾರಾಟ ಉತ್ಪಾದನೆ ಬಗ್ಗೆ ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಎನ್.ಡಿ.ಪಿ.ಎಸ್. ಕಾಯ್ದೆಯಡಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ವಿ.ಸಿ. ಮೂಲಕವು ಸಹ ಎಲ್ಲ ಘಟಕಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿರುತ್ತದೆ” ಎಂದು ಅವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...