Homeಸಿನಿಮಾಕ್ರೀಡೆ5 ಸಿಕ್ಸರ್ ಸಿಡಿಸಿ ಧೋನಿ ದಾಖಲೆ ಮುರಿದ ಅಕ್ಸರ್ ಪಟೇಲ್: ಕೊನೆಯ ಓವರ್‌ನಲ್ಲಿ ಭಾರತಕ್ಕೆ ರೋಚಕ...

5 ಸಿಕ್ಸರ್ ಸಿಡಿಸಿ ಧೋನಿ ದಾಖಲೆ ಮುರಿದ ಅಕ್ಸರ್ ಪಟೇಲ್: ಕೊನೆಯ ಓವರ್‌ನಲ್ಲಿ ಭಾರತಕ್ಕೆ ರೋಚಕ ಜಯ

- Advertisement -
- Advertisement -

ಅತಿಥೇಯ ವೆಸ್ಟ್ ಇಂಡೀಸ್ ತಂಡದ ಎದುರು ಎರಡನೇ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಭಾರತ ತಂಡ ಕೊನೆಯ ಓವರ್‌ನಲ್ಲಿ ರೋಚಕ ಗೆಲುವು ದಾಖಲಿಸಿದೆ. ಬೌಲರ್ ಅಕ್ಸರ್ ಪಟೇಲ್ ಗೆಲುವಿಗೆ ಆರು ರನ್ ಬೇಕಿದ್ದಾಗ ಸಿಕ್ಸರ್ ಸಿಡಿಸುವ ಮೂಲಕ ಭಾರತಕ್ಕೆ ಗೆಲುವು ತಂದುಕೊಟ್ಟರು. ಆ ಮೂಲಕ ಭಾರತ 3 ಪಂದ್ಯಗಳ ಸರಣಿಯನ್ನು ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ವಶಪಡಿಸಿಕೊಂಡಿದೆ. ಆ ಮೂಲಕ ವೆಸ್ಟ್‌ ಇಂಡೀಸ್ ವಿರುದ್ಧ ಸತತ 12ನೇ ಸರಣಿ ಗೆದ್ದ ವಿಶ್ವ ದಾಖಲೆ ನಿರ್ಮಿಸಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ವೆಸ್ಟ್ ಇಂಡೀಸ್ ಗಮನಾರ್ಹ ಪ್ರದರ್ಶನ ನೀಡಿತು. ಶಾಹ್ ಹೋಪ್ ತಮ್ಮ ನೂರನೇ ಪಂದ್ಯದಲ್ಲಿ ಶತಕ ಗಳಿಸುವ ಮೂಲಕ ಸಾಧನೆಗೈದರೆ ತಂಡದ ನಾಯಕ ನಿಕೋಲಸ್ ಪೂರನ್ 74 ರನ್ ಗಳಿಸುವ ಮೂಲಕ ತಂಡ 311 ರನ್ ಪೇರಿಸಲು ಸಹಾಯ ಮಾಡಿದರು. ಆದರೆ ವೆಸ್ಟ್ ಇಂಡೀಸ್ ತಂಡದ ಗೆಲುವಿನ ಕನಸನ್ನು ಭಾರತದ ಬೌಲರ್ ಅಕ್ಸರ್ ಪಟೇಲ್ ಸ್ಪೋಟಕ ಬ್ಯಾಟಿಂಗ್ ಮೂಲಕ ನುಚ್ಚೂ ನೂರು ಮಾಡಿದರು. ಪರಿಣಾಮ ಭಾರತವು ಇನ್ನು ಎರಡು ಎಸೆತಗಳು ಬಾಕಿ ಇರುವಂತೆ 312ರನ ಗಳಿಸಿ ಎರಡು ವಿಕೆಟ್‌ಗಳ ಮಹತ್ವದ ಜಯ ಸಾಧಿಸಿತು.

ಈ ಮೂಲಕ ಅಕ್ಸರ್ ಪಟೇಲ್ ವೆಸ್ಟ್ ಇಂಡೀಸ್ ತಂಡದ ವಿರುದ್ಧ ವೇಗದ ಅರ್ಧಶತಕ ದಾಖಲಿಸಿದ ಎರಡನೇ ಆಟಗಾರ ಎನಿಸಿಕೊಂಡರು. ಅಲ್ಲದೆ ಚೇಸಿಂಗ್‌ನಲ್ಲಿ ಭಾರತ ಗೆಲುವು ಕಂಡ ಪಂದ್ಯಗಳಲ್ಲಿ 7 ಅಥವಾ ಅದಕ್ಕಿಂತ ನಂತರದ ಕ್ರಮಾಂಕದಲ್ಲಿ ಬಂದು ಅತಿ ಹೆಚ್ಚು ಸಿಕ್ಸರ್ ಗಳಿಸಿದ್ದ ಮಹೇಂದ್ರ ಸಿಂಗ್ ಧೋನಿಯವರ 17 ವರ್ಷದ ದಾಖಲೆಯನ್ನು ಅಳಿಸಿಹಾಕಿದರು. ಕೇವಲ 35 ಎಸೆತಗಳಲ್ಲಿ 64 ರನ್ ಗಳಿಸಿದ ಅಕ್ಸರ್ ಪಟೇಲ್ 5 ಸಿಕ್ಸರ್ ಸಿಡಿಸಿ ಈ ಸಾಧನೆಗೈದರು.

2005ರಲ್ಲಿ ಧೋನಿ ಜಿಂಬಾಬ್ವೆ ಎದುರಿನ ಚೇಸಿಂಗ್‌ನಲ್ಲಿ 7ನೇ ಕ್ರಮಾಂಕ ಆಟಗಾರನಾಗಿ ಕಣಕ್ಕಿಳಿದು 3 ಸಿಕ್ಸರ್ ಸಿಡಿಸಿ ತಂಡ ಗೆಲ್ಲಿಸುವಲ್ಲಿ ದಾಖಲೆ ಮಾಡಿದ್ದರು. ಆನಂತರ ಯುಸುಫ್ ಪಠಾಣ್ ಸಹ 2011ರಲ್ಲಿ ಎರಡು ಬಾರಿ ದಕ್ಷಿಣ ಆಫ್ರಿಕಾ ಮತ್ತು ಐರ್ಲೆಂಡ್ ಎದುರು ತಲಾ ಮೂರು ಸಿಕ್ಸರ್ ಸಿಡಿಸಿ ಧೋನಿ ದಾಖಲೆ ಸರಿಗಟ್ಟಿದ್ದರು. ಆದರೆ ನಿನ್ನೆಯ ಪಂದ್ಯದಲ್ಲಿ ಅಕ್ಸರ್ ಪಟೇಲ್ ಒಟ್ಟು 5 ಸಿಕ್ಸರ್ ಸಿಡಿಸುವ ಮೂಲಕ ಆ ದಾಖಲೆ ಮುರಿದಿದ್ದಾರೆ. ಅವರ ಈ ಇನ್ನಿಂಗ್ಸ್‌ನಲ್ಲಿ ಮೂರು ಬೌಂಡರಿಗಳು ಸಹ ದಾಖಲಾಗಿವೆ.

312 ರನ್ ಬೆನ್ನಟ್ಟಿದ್ದ ಭಾರತ 18 ಓವರ್‌ನಲ್ಲಿ ಸಂದರ್ಭದಲ್ಲಿ ಮೂರು ವಿಕೆಟ್ ಕಳೆದುಕೊಂಡು ಕೇವಲ 79 ರನ್ ಗಳಿಸಿ ಸಂಕಷ್ಟದಲ್ಲಿತ್ತು. ಆನಂತರ ಶ್ರೇಯಸ್ ಅಯ್ಯರ್ (63) ಮತ್ತು ಸಂಜು ಸ್ಯಾಮ್ಸನ್ (54) ಇಬ್ಬರೂ ಅರ್ಧಶತಕ ಸಿಡಿಸಿ ತಂಡಕ್ಕೆ ಆಸೆಯಾದರು. 205 ರನ್ ಗಳಿಸಿದ್ದಾಗ ಸ್ಯಾಮ್ಸನ್ ರನ್ ಔಟ್ ಆದರು. ಆಗ ಭಾರತ 68 ಎಸೆತಗಳಲ್ಲಿ 107 ರನ್ ಗಳಿಸಬೇಕಾದ ಒತ್ತಡದಲ್ಲಿತ್ತು. ಆಗ ಕ್ರೀಸ್‌ಗಿಳಿಸಿದ ಅಕ್ಸರ್ ಪಟೇಲ್ ದಿಟ್ಟ ಆಟ ಪ್ರದರ್ಶಿಸಿದರು. ಇನ್ನೊಂದೆಡೆ ದೀಪಕ್ ಹೂಡ, ಶಾರ್ದುಲ್ ಠಾಕೂರ್, ಆವೇಶ್ ಖಾನ್ ಒಬ್ಬರ ನಂತರ ಒಬ್ಬರು ಔಟ್ ಆಗತ್ತಿದ್ದರೂ ಧೃತಿಗೆಡದೆ ಆಟವಾಡಿದರು. ಕೊನೆಯ ಓವರ್‌ನಲ್ಲಿ 6 ಎಸೆತಗಳಿಗೆ 8 ರನ್ ಗಳಿಸಬೇಕಿತ್ತು. ಅಕ್ಸರ್ ನಾಲ್ಕನೇ ಎಸೆತದಲ್ಲಿ ಸಿಕ್ಸರ್ ಸಿಡಿಸಿ ತಂಡಕ್ಕೆ ಜಯ ತಂದುಕೊಟ್ಟರು.

ಇದನ್ನೂ ಓದಿ: ನಿರ್ಗಮಿತ ರಾಷ್ಟ್ರಪತಿಗೆ ಪ್ರಧಾನಿ ಮೋದಿ ಅಗೌರವ ತೋರಿದರೆ? ವೈರಲ್‌ ವಿಡಿಯೊದ ವಾಸ್ತವವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...