Homeಸಿನಿಮಾಕ್ರೀಡೆ5 ಸಿಕ್ಸರ್ ಸಿಡಿಸಿ ಧೋನಿ ದಾಖಲೆ ಮುರಿದ ಅಕ್ಸರ್ ಪಟೇಲ್: ಕೊನೆಯ ಓವರ್‌ನಲ್ಲಿ ಭಾರತಕ್ಕೆ ರೋಚಕ...

5 ಸಿಕ್ಸರ್ ಸಿಡಿಸಿ ಧೋನಿ ದಾಖಲೆ ಮುರಿದ ಅಕ್ಸರ್ ಪಟೇಲ್: ಕೊನೆಯ ಓವರ್‌ನಲ್ಲಿ ಭಾರತಕ್ಕೆ ರೋಚಕ ಜಯ

- Advertisement -
- Advertisement -

ಅತಿಥೇಯ ವೆಸ್ಟ್ ಇಂಡೀಸ್ ತಂಡದ ಎದುರು ಎರಡನೇ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಭಾರತ ತಂಡ ಕೊನೆಯ ಓವರ್‌ನಲ್ಲಿ ರೋಚಕ ಗೆಲುವು ದಾಖಲಿಸಿದೆ. ಬೌಲರ್ ಅಕ್ಸರ್ ಪಟೇಲ್ ಗೆಲುವಿಗೆ ಆರು ರನ್ ಬೇಕಿದ್ದಾಗ ಸಿಕ್ಸರ್ ಸಿಡಿಸುವ ಮೂಲಕ ಭಾರತಕ್ಕೆ ಗೆಲುವು ತಂದುಕೊಟ್ಟರು. ಆ ಮೂಲಕ ಭಾರತ 3 ಪಂದ್ಯಗಳ ಸರಣಿಯನ್ನು ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ವಶಪಡಿಸಿಕೊಂಡಿದೆ. ಆ ಮೂಲಕ ವೆಸ್ಟ್‌ ಇಂಡೀಸ್ ವಿರುದ್ಧ ಸತತ 12ನೇ ಸರಣಿ ಗೆದ್ದ ವಿಶ್ವ ದಾಖಲೆ ನಿರ್ಮಿಸಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ವೆಸ್ಟ್ ಇಂಡೀಸ್ ಗಮನಾರ್ಹ ಪ್ರದರ್ಶನ ನೀಡಿತು. ಶಾಹ್ ಹೋಪ್ ತಮ್ಮ ನೂರನೇ ಪಂದ್ಯದಲ್ಲಿ ಶತಕ ಗಳಿಸುವ ಮೂಲಕ ಸಾಧನೆಗೈದರೆ ತಂಡದ ನಾಯಕ ನಿಕೋಲಸ್ ಪೂರನ್ 74 ರನ್ ಗಳಿಸುವ ಮೂಲಕ ತಂಡ 311 ರನ್ ಪೇರಿಸಲು ಸಹಾಯ ಮಾಡಿದರು. ಆದರೆ ವೆಸ್ಟ್ ಇಂಡೀಸ್ ತಂಡದ ಗೆಲುವಿನ ಕನಸನ್ನು ಭಾರತದ ಬೌಲರ್ ಅಕ್ಸರ್ ಪಟೇಲ್ ಸ್ಪೋಟಕ ಬ್ಯಾಟಿಂಗ್ ಮೂಲಕ ನುಚ್ಚೂ ನೂರು ಮಾಡಿದರು. ಪರಿಣಾಮ ಭಾರತವು ಇನ್ನು ಎರಡು ಎಸೆತಗಳು ಬಾಕಿ ಇರುವಂತೆ 312ರನ ಗಳಿಸಿ ಎರಡು ವಿಕೆಟ್‌ಗಳ ಮಹತ್ವದ ಜಯ ಸಾಧಿಸಿತು.

ಈ ಮೂಲಕ ಅಕ್ಸರ್ ಪಟೇಲ್ ವೆಸ್ಟ್ ಇಂಡೀಸ್ ತಂಡದ ವಿರುದ್ಧ ವೇಗದ ಅರ್ಧಶತಕ ದಾಖಲಿಸಿದ ಎರಡನೇ ಆಟಗಾರ ಎನಿಸಿಕೊಂಡರು. ಅಲ್ಲದೆ ಚೇಸಿಂಗ್‌ನಲ್ಲಿ ಭಾರತ ಗೆಲುವು ಕಂಡ ಪಂದ್ಯಗಳಲ್ಲಿ 7 ಅಥವಾ ಅದಕ್ಕಿಂತ ನಂತರದ ಕ್ರಮಾಂಕದಲ್ಲಿ ಬಂದು ಅತಿ ಹೆಚ್ಚು ಸಿಕ್ಸರ್ ಗಳಿಸಿದ್ದ ಮಹೇಂದ್ರ ಸಿಂಗ್ ಧೋನಿಯವರ 17 ವರ್ಷದ ದಾಖಲೆಯನ್ನು ಅಳಿಸಿಹಾಕಿದರು. ಕೇವಲ 35 ಎಸೆತಗಳಲ್ಲಿ 64 ರನ್ ಗಳಿಸಿದ ಅಕ್ಸರ್ ಪಟೇಲ್ 5 ಸಿಕ್ಸರ್ ಸಿಡಿಸಿ ಈ ಸಾಧನೆಗೈದರು.

2005ರಲ್ಲಿ ಧೋನಿ ಜಿಂಬಾಬ್ವೆ ಎದುರಿನ ಚೇಸಿಂಗ್‌ನಲ್ಲಿ 7ನೇ ಕ್ರಮಾಂಕ ಆಟಗಾರನಾಗಿ ಕಣಕ್ಕಿಳಿದು 3 ಸಿಕ್ಸರ್ ಸಿಡಿಸಿ ತಂಡ ಗೆಲ್ಲಿಸುವಲ್ಲಿ ದಾಖಲೆ ಮಾಡಿದ್ದರು. ಆನಂತರ ಯುಸುಫ್ ಪಠಾಣ್ ಸಹ 2011ರಲ್ಲಿ ಎರಡು ಬಾರಿ ದಕ್ಷಿಣ ಆಫ್ರಿಕಾ ಮತ್ತು ಐರ್ಲೆಂಡ್ ಎದುರು ತಲಾ ಮೂರು ಸಿಕ್ಸರ್ ಸಿಡಿಸಿ ಧೋನಿ ದಾಖಲೆ ಸರಿಗಟ್ಟಿದ್ದರು. ಆದರೆ ನಿನ್ನೆಯ ಪಂದ್ಯದಲ್ಲಿ ಅಕ್ಸರ್ ಪಟೇಲ್ ಒಟ್ಟು 5 ಸಿಕ್ಸರ್ ಸಿಡಿಸುವ ಮೂಲಕ ಆ ದಾಖಲೆ ಮುರಿದಿದ್ದಾರೆ. ಅವರ ಈ ಇನ್ನಿಂಗ್ಸ್‌ನಲ್ಲಿ ಮೂರು ಬೌಂಡರಿಗಳು ಸಹ ದಾಖಲಾಗಿವೆ.

312 ರನ್ ಬೆನ್ನಟ್ಟಿದ್ದ ಭಾರತ 18 ಓವರ್‌ನಲ್ಲಿ ಸಂದರ್ಭದಲ್ಲಿ ಮೂರು ವಿಕೆಟ್ ಕಳೆದುಕೊಂಡು ಕೇವಲ 79 ರನ್ ಗಳಿಸಿ ಸಂಕಷ್ಟದಲ್ಲಿತ್ತು. ಆನಂತರ ಶ್ರೇಯಸ್ ಅಯ್ಯರ್ (63) ಮತ್ತು ಸಂಜು ಸ್ಯಾಮ್ಸನ್ (54) ಇಬ್ಬರೂ ಅರ್ಧಶತಕ ಸಿಡಿಸಿ ತಂಡಕ್ಕೆ ಆಸೆಯಾದರು. 205 ರನ್ ಗಳಿಸಿದ್ದಾಗ ಸ್ಯಾಮ್ಸನ್ ರನ್ ಔಟ್ ಆದರು. ಆಗ ಭಾರತ 68 ಎಸೆತಗಳಲ್ಲಿ 107 ರನ್ ಗಳಿಸಬೇಕಾದ ಒತ್ತಡದಲ್ಲಿತ್ತು. ಆಗ ಕ್ರೀಸ್‌ಗಿಳಿಸಿದ ಅಕ್ಸರ್ ಪಟೇಲ್ ದಿಟ್ಟ ಆಟ ಪ್ರದರ್ಶಿಸಿದರು. ಇನ್ನೊಂದೆಡೆ ದೀಪಕ್ ಹೂಡ, ಶಾರ್ದುಲ್ ಠಾಕೂರ್, ಆವೇಶ್ ಖಾನ್ ಒಬ್ಬರ ನಂತರ ಒಬ್ಬರು ಔಟ್ ಆಗತ್ತಿದ್ದರೂ ಧೃತಿಗೆಡದೆ ಆಟವಾಡಿದರು. ಕೊನೆಯ ಓವರ್‌ನಲ್ಲಿ 6 ಎಸೆತಗಳಿಗೆ 8 ರನ್ ಗಳಿಸಬೇಕಿತ್ತು. ಅಕ್ಸರ್ ನಾಲ್ಕನೇ ಎಸೆತದಲ್ಲಿ ಸಿಕ್ಸರ್ ಸಿಡಿಸಿ ತಂಡಕ್ಕೆ ಜಯ ತಂದುಕೊಟ್ಟರು.

ಇದನ್ನೂ ಓದಿ: ನಿರ್ಗಮಿತ ರಾಷ್ಟ್ರಪತಿಗೆ ಪ್ರಧಾನಿ ಮೋದಿ ಅಗೌರವ ತೋರಿದರೆ? ವೈರಲ್‌ ವಿಡಿಯೊದ ವಾಸ್ತವವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...