Homeಸಿನಿಮಾಕ್ರೀಡೆ5 ಸಿಕ್ಸರ್ ಸಿಡಿಸಿ ಧೋನಿ ದಾಖಲೆ ಮುರಿದ ಅಕ್ಸರ್ ಪಟೇಲ್: ಕೊನೆಯ ಓವರ್‌ನಲ್ಲಿ ಭಾರತಕ್ಕೆ ರೋಚಕ...

5 ಸಿಕ್ಸರ್ ಸಿಡಿಸಿ ಧೋನಿ ದಾಖಲೆ ಮುರಿದ ಅಕ್ಸರ್ ಪಟೇಲ್: ಕೊನೆಯ ಓವರ್‌ನಲ್ಲಿ ಭಾರತಕ್ಕೆ ರೋಚಕ ಜಯ

- Advertisement -
- Advertisement -

ಅತಿಥೇಯ ವೆಸ್ಟ್ ಇಂಡೀಸ್ ತಂಡದ ಎದುರು ಎರಡನೇ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಭಾರತ ತಂಡ ಕೊನೆಯ ಓವರ್‌ನಲ್ಲಿ ರೋಚಕ ಗೆಲುವು ದಾಖಲಿಸಿದೆ. ಬೌಲರ್ ಅಕ್ಸರ್ ಪಟೇಲ್ ಗೆಲುವಿಗೆ ಆರು ರನ್ ಬೇಕಿದ್ದಾಗ ಸಿಕ್ಸರ್ ಸಿಡಿಸುವ ಮೂಲಕ ಭಾರತಕ್ಕೆ ಗೆಲುವು ತಂದುಕೊಟ್ಟರು. ಆ ಮೂಲಕ ಭಾರತ 3 ಪಂದ್ಯಗಳ ಸರಣಿಯನ್ನು ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ವಶಪಡಿಸಿಕೊಂಡಿದೆ. ಆ ಮೂಲಕ ವೆಸ್ಟ್‌ ಇಂಡೀಸ್ ವಿರುದ್ಧ ಸತತ 12ನೇ ಸರಣಿ ಗೆದ್ದ ವಿಶ್ವ ದಾಖಲೆ ನಿರ್ಮಿಸಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ವೆಸ್ಟ್ ಇಂಡೀಸ್ ಗಮನಾರ್ಹ ಪ್ರದರ್ಶನ ನೀಡಿತು. ಶಾಹ್ ಹೋಪ್ ತಮ್ಮ ನೂರನೇ ಪಂದ್ಯದಲ್ಲಿ ಶತಕ ಗಳಿಸುವ ಮೂಲಕ ಸಾಧನೆಗೈದರೆ ತಂಡದ ನಾಯಕ ನಿಕೋಲಸ್ ಪೂರನ್ 74 ರನ್ ಗಳಿಸುವ ಮೂಲಕ ತಂಡ 311 ರನ್ ಪೇರಿಸಲು ಸಹಾಯ ಮಾಡಿದರು. ಆದರೆ ವೆಸ್ಟ್ ಇಂಡೀಸ್ ತಂಡದ ಗೆಲುವಿನ ಕನಸನ್ನು ಭಾರತದ ಬೌಲರ್ ಅಕ್ಸರ್ ಪಟೇಲ್ ಸ್ಪೋಟಕ ಬ್ಯಾಟಿಂಗ್ ಮೂಲಕ ನುಚ್ಚೂ ನೂರು ಮಾಡಿದರು. ಪರಿಣಾಮ ಭಾರತವು ಇನ್ನು ಎರಡು ಎಸೆತಗಳು ಬಾಕಿ ಇರುವಂತೆ 312ರನ ಗಳಿಸಿ ಎರಡು ವಿಕೆಟ್‌ಗಳ ಮಹತ್ವದ ಜಯ ಸಾಧಿಸಿತು.

ಈ ಮೂಲಕ ಅಕ್ಸರ್ ಪಟೇಲ್ ವೆಸ್ಟ್ ಇಂಡೀಸ್ ತಂಡದ ವಿರುದ್ಧ ವೇಗದ ಅರ್ಧಶತಕ ದಾಖಲಿಸಿದ ಎರಡನೇ ಆಟಗಾರ ಎನಿಸಿಕೊಂಡರು. ಅಲ್ಲದೆ ಚೇಸಿಂಗ್‌ನಲ್ಲಿ ಭಾರತ ಗೆಲುವು ಕಂಡ ಪಂದ್ಯಗಳಲ್ಲಿ 7 ಅಥವಾ ಅದಕ್ಕಿಂತ ನಂತರದ ಕ್ರಮಾಂಕದಲ್ಲಿ ಬಂದು ಅತಿ ಹೆಚ್ಚು ಸಿಕ್ಸರ್ ಗಳಿಸಿದ್ದ ಮಹೇಂದ್ರ ಸಿಂಗ್ ಧೋನಿಯವರ 17 ವರ್ಷದ ದಾಖಲೆಯನ್ನು ಅಳಿಸಿಹಾಕಿದರು. ಕೇವಲ 35 ಎಸೆತಗಳಲ್ಲಿ 64 ರನ್ ಗಳಿಸಿದ ಅಕ್ಸರ್ ಪಟೇಲ್ 5 ಸಿಕ್ಸರ್ ಸಿಡಿಸಿ ಈ ಸಾಧನೆಗೈದರು.

2005ರಲ್ಲಿ ಧೋನಿ ಜಿಂಬಾಬ್ವೆ ಎದುರಿನ ಚೇಸಿಂಗ್‌ನಲ್ಲಿ 7ನೇ ಕ್ರಮಾಂಕ ಆಟಗಾರನಾಗಿ ಕಣಕ್ಕಿಳಿದು 3 ಸಿಕ್ಸರ್ ಸಿಡಿಸಿ ತಂಡ ಗೆಲ್ಲಿಸುವಲ್ಲಿ ದಾಖಲೆ ಮಾಡಿದ್ದರು. ಆನಂತರ ಯುಸುಫ್ ಪಠಾಣ್ ಸಹ 2011ರಲ್ಲಿ ಎರಡು ಬಾರಿ ದಕ್ಷಿಣ ಆಫ್ರಿಕಾ ಮತ್ತು ಐರ್ಲೆಂಡ್ ಎದುರು ತಲಾ ಮೂರು ಸಿಕ್ಸರ್ ಸಿಡಿಸಿ ಧೋನಿ ದಾಖಲೆ ಸರಿಗಟ್ಟಿದ್ದರು. ಆದರೆ ನಿನ್ನೆಯ ಪಂದ್ಯದಲ್ಲಿ ಅಕ್ಸರ್ ಪಟೇಲ್ ಒಟ್ಟು 5 ಸಿಕ್ಸರ್ ಸಿಡಿಸುವ ಮೂಲಕ ಆ ದಾಖಲೆ ಮುರಿದಿದ್ದಾರೆ. ಅವರ ಈ ಇನ್ನಿಂಗ್ಸ್‌ನಲ್ಲಿ ಮೂರು ಬೌಂಡರಿಗಳು ಸಹ ದಾಖಲಾಗಿವೆ.

312 ರನ್ ಬೆನ್ನಟ್ಟಿದ್ದ ಭಾರತ 18 ಓವರ್‌ನಲ್ಲಿ ಸಂದರ್ಭದಲ್ಲಿ ಮೂರು ವಿಕೆಟ್ ಕಳೆದುಕೊಂಡು ಕೇವಲ 79 ರನ್ ಗಳಿಸಿ ಸಂಕಷ್ಟದಲ್ಲಿತ್ತು. ಆನಂತರ ಶ್ರೇಯಸ್ ಅಯ್ಯರ್ (63) ಮತ್ತು ಸಂಜು ಸ್ಯಾಮ್ಸನ್ (54) ಇಬ್ಬರೂ ಅರ್ಧಶತಕ ಸಿಡಿಸಿ ತಂಡಕ್ಕೆ ಆಸೆಯಾದರು. 205 ರನ್ ಗಳಿಸಿದ್ದಾಗ ಸ್ಯಾಮ್ಸನ್ ರನ್ ಔಟ್ ಆದರು. ಆಗ ಭಾರತ 68 ಎಸೆತಗಳಲ್ಲಿ 107 ರನ್ ಗಳಿಸಬೇಕಾದ ಒತ್ತಡದಲ್ಲಿತ್ತು. ಆಗ ಕ್ರೀಸ್‌ಗಿಳಿಸಿದ ಅಕ್ಸರ್ ಪಟೇಲ್ ದಿಟ್ಟ ಆಟ ಪ್ರದರ್ಶಿಸಿದರು. ಇನ್ನೊಂದೆಡೆ ದೀಪಕ್ ಹೂಡ, ಶಾರ್ದುಲ್ ಠಾಕೂರ್, ಆವೇಶ್ ಖಾನ್ ಒಬ್ಬರ ನಂತರ ಒಬ್ಬರು ಔಟ್ ಆಗತ್ತಿದ್ದರೂ ಧೃತಿಗೆಡದೆ ಆಟವಾಡಿದರು. ಕೊನೆಯ ಓವರ್‌ನಲ್ಲಿ 6 ಎಸೆತಗಳಿಗೆ 8 ರನ್ ಗಳಿಸಬೇಕಿತ್ತು. ಅಕ್ಸರ್ ನಾಲ್ಕನೇ ಎಸೆತದಲ್ಲಿ ಸಿಕ್ಸರ್ ಸಿಡಿಸಿ ತಂಡಕ್ಕೆ ಜಯ ತಂದುಕೊಟ್ಟರು.

ಇದನ್ನೂ ಓದಿ: ನಿರ್ಗಮಿತ ರಾಷ್ಟ್ರಪತಿಗೆ ಪ್ರಧಾನಿ ಮೋದಿ ಅಗೌರವ ತೋರಿದರೆ? ವೈರಲ್‌ ವಿಡಿಯೊದ ವಾಸ್ತವವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...