Homeಸಿನಿಮಾಕ್ರೀಡೆ5 ಸಿಕ್ಸರ್ ಸಿಡಿಸಿ ಧೋನಿ ದಾಖಲೆ ಮುರಿದ ಅಕ್ಸರ್ ಪಟೇಲ್: ಕೊನೆಯ ಓವರ್‌ನಲ್ಲಿ ಭಾರತಕ್ಕೆ ರೋಚಕ...

5 ಸಿಕ್ಸರ್ ಸಿಡಿಸಿ ಧೋನಿ ದಾಖಲೆ ಮುರಿದ ಅಕ್ಸರ್ ಪಟೇಲ್: ಕೊನೆಯ ಓವರ್‌ನಲ್ಲಿ ಭಾರತಕ್ಕೆ ರೋಚಕ ಜಯ

- Advertisement -
- Advertisement -

ಅತಿಥೇಯ ವೆಸ್ಟ್ ಇಂಡೀಸ್ ತಂಡದ ಎದುರು ಎರಡನೇ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಭಾರತ ತಂಡ ಕೊನೆಯ ಓವರ್‌ನಲ್ಲಿ ರೋಚಕ ಗೆಲುವು ದಾಖಲಿಸಿದೆ. ಬೌಲರ್ ಅಕ್ಸರ್ ಪಟೇಲ್ ಗೆಲುವಿಗೆ ಆರು ರನ್ ಬೇಕಿದ್ದಾಗ ಸಿಕ್ಸರ್ ಸಿಡಿಸುವ ಮೂಲಕ ಭಾರತಕ್ಕೆ ಗೆಲುವು ತಂದುಕೊಟ್ಟರು. ಆ ಮೂಲಕ ಭಾರತ 3 ಪಂದ್ಯಗಳ ಸರಣಿಯನ್ನು ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ವಶಪಡಿಸಿಕೊಂಡಿದೆ. ಆ ಮೂಲಕ ವೆಸ್ಟ್‌ ಇಂಡೀಸ್ ವಿರುದ್ಧ ಸತತ 12ನೇ ಸರಣಿ ಗೆದ್ದ ವಿಶ್ವ ದಾಖಲೆ ನಿರ್ಮಿಸಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ವೆಸ್ಟ್ ಇಂಡೀಸ್ ಗಮನಾರ್ಹ ಪ್ರದರ್ಶನ ನೀಡಿತು. ಶಾಹ್ ಹೋಪ್ ತಮ್ಮ ನೂರನೇ ಪಂದ್ಯದಲ್ಲಿ ಶತಕ ಗಳಿಸುವ ಮೂಲಕ ಸಾಧನೆಗೈದರೆ ತಂಡದ ನಾಯಕ ನಿಕೋಲಸ್ ಪೂರನ್ 74 ರನ್ ಗಳಿಸುವ ಮೂಲಕ ತಂಡ 311 ರನ್ ಪೇರಿಸಲು ಸಹಾಯ ಮಾಡಿದರು. ಆದರೆ ವೆಸ್ಟ್ ಇಂಡೀಸ್ ತಂಡದ ಗೆಲುವಿನ ಕನಸನ್ನು ಭಾರತದ ಬೌಲರ್ ಅಕ್ಸರ್ ಪಟೇಲ್ ಸ್ಪೋಟಕ ಬ್ಯಾಟಿಂಗ್ ಮೂಲಕ ನುಚ್ಚೂ ನೂರು ಮಾಡಿದರು. ಪರಿಣಾಮ ಭಾರತವು ಇನ್ನು ಎರಡು ಎಸೆತಗಳು ಬಾಕಿ ಇರುವಂತೆ 312ರನ ಗಳಿಸಿ ಎರಡು ವಿಕೆಟ್‌ಗಳ ಮಹತ್ವದ ಜಯ ಸಾಧಿಸಿತು.

ಈ ಮೂಲಕ ಅಕ್ಸರ್ ಪಟೇಲ್ ವೆಸ್ಟ್ ಇಂಡೀಸ್ ತಂಡದ ವಿರುದ್ಧ ವೇಗದ ಅರ್ಧಶತಕ ದಾಖಲಿಸಿದ ಎರಡನೇ ಆಟಗಾರ ಎನಿಸಿಕೊಂಡರು. ಅಲ್ಲದೆ ಚೇಸಿಂಗ್‌ನಲ್ಲಿ ಭಾರತ ಗೆಲುವು ಕಂಡ ಪಂದ್ಯಗಳಲ್ಲಿ 7 ಅಥವಾ ಅದಕ್ಕಿಂತ ನಂತರದ ಕ್ರಮಾಂಕದಲ್ಲಿ ಬಂದು ಅತಿ ಹೆಚ್ಚು ಸಿಕ್ಸರ್ ಗಳಿಸಿದ್ದ ಮಹೇಂದ್ರ ಸಿಂಗ್ ಧೋನಿಯವರ 17 ವರ್ಷದ ದಾಖಲೆಯನ್ನು ಅಳಿಸಿಹಾಕಿದರು. ಕೇವಲ 35 ಎಸೆತಗಳಲ್ಲಿ 64 ರನ್ ಗಳಿಸಿದ ಅಕ್ಸರ್ ಪಟೇಲ್ 5 ಸಿಕ್ಸರ್ ಸಿಡಿಸಿ ಈ ಸಾಧನೆಗೈದರು.

2005ರಲ್ಲಿ ಧೋನಿ ಜಿಂಬಾಬ್ವೆ ಎದುರಿನ ಚೇಸಿಂಗ್‌ನಲ್ಲಿ 7ನೇ ಕ್ರಮಾಂಕ ಆಟಗಾರನಾಗಿ ಕಣಕ್ಕಿಳಿದು 3 ಸಿಕ್ಸರ್ ಸಿಡಿಸಿ ತಂಡ ಗೆಲ್ಲಿಸುವಲ್ಲಿ ದಾಖಲೆ ಮಾಡಿದ್ದರು. ಆನಂತರ ಯುಸುಫ್ ಪಠಾಣ್ ಸಹ 2011ರಲ್ಲಿ ಎರಡು ಬಾರಿ ದಕ್ಷಿಣ ಆಫ್ರಿಕಾ ಮತ್ತು ಐರ್ಲೆಂಡ್ ಎದುರು ತಲಾ ಮೂರು ಸಿಕ್ಸರ್ ಸಿಡಿಸಿ ಧೋನಿ ದಾಖಲೆ ಸರಿಗಟ್ಟಿದ್ದರು. ಆದರೆ ನಿನ್ನೆಯ ಪಂದ್ಯದಲ್ಲಿ ಅಕ್ಸರ್ ಪಟೇಲ್ ಒಟ್ಟು 5 ಸಿಕ್ಸರ್ ಸಿಡಿಸುವ ಮೂಲಕ ಆ ದಾಖಲೆ ಮುರಿದಿದ್ದಾರೆ. ಅವರ ಈ ಇನ್ನಿಂಗ್ಸ್‌ನಲ್ಲಿ ಮೂರು ಬೌಂಡರಿಗಳು ಸಹ ದಾಖಲಾಗಿವೆ.

312 ರನ್ ಬೆನ್ನಟ್ಟಿದ್ದ ಭಾರತ 18 ಓವರ್‌ನಲ್ಲಿ ಸಂದರ್ಭದಲ್ಲಿ ಮೂರು ವಿಕೆಟ್ ಕಳೆದುಕೊಂಡು ಕೇವಲ 79 ರನ್ ಗಳಿಸಿ ಸಂಕಷ್ಟದಲ್ಲಿತ್ತು. ಆನಂತರ ಶ್ರೇಯಸ್ ಅಯ್ಯರ್ (63) ಮತ್ತು ಸಂಜು ಸ್ಯಾಮ್ಸನ್ (54) ಇಬ್ಬರೂ ಅರ್ಧಶತಕ ಸಿಡಿಸಿ ತಂಡಕ್ಕೆ ಆಸೆಯಾದರು. 205 ರನ್ ಗಳಿಸಿದ್ದಾಗ ಸ್ಯಾಮ್ಸನ್ ರನ್ ಔಟ್ ಆದರು. ಆಗ ಭಾರತ 68 ಎಸೆತಗಳಲ್ಲಿ 107 ರನ್ ಗಳಿಸಬೇಕಾದ ಒತ್ತಡದಲ್ಲಿತ್ತು. ಆಗ ಕ್ರೀಸ್‌ಗಿಳಿಸಿದ ಅಕ್ಸರ್ ಪಟೇಲ್ ದಿಟ್ಟ ಆಟ ಪ್ರದರ್ಶಿಸಿದರು. ಇನ್ನೊಂದೆಡೆ ದೀಪಕ್ ಹೂಡ, ಶಾರ್ದುಲ್ ಠಾಕೂರ್, ಆವೇಶ್ ಖಾನ್ ಒಬ್ಬರ ನಂತರ ಒಬ್ಬರು ಔಟ್ ಆಗತ್ತಿದ್ದರೂ ಧೃತಿಗೆಡದೆ ಆಟವಾಡಿದರು. ಕೊನೆಯ ಓವರ್‌ನಲ್ಲಿ 6 ಎಸೆತಗಳಿಗೆ 8 ರನ್ ಗಳಿಸಬೇಕಿತ್ತು. ಅಕ್ಸರ್ ನಾಲ್ಕನೇ ಎಸೆತದಲ್ಲಿ ಸಿಕ್ಸರ್ ಸಿಡಿಸಿ ತಂಡಕ್ಕೆ ಜಯ ತಂದುಕೊಟ್ಟರು.

ಇದನ್ನೂ ಓದಿ: ನಿರ್ಗಮಿತ ರಾಷ್ಟ್ರಪತಿಗೆ ಪ್ರಧಾನಿ ಮೋದಿ ಅಗೌರವ ತೋರಿದರೆ? ವೈರಲ್‌ ವಿಡಿಯೊದ ವಾಸ್ತವವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...