Homeಸಿನಿಮಾಕ್ರೀಡೆ5 ಸಿಕ್ಸರ್ ಸಿಡಿಸಿ ಧೋನಿ ದಾಖಲೆ ಮುರಿದ ಅಕ್ಸರ್ ಪಟೇಲ್: ಕೊನೆಯ ಓವರ್‌ನಲ್ಲಿ ಭಾರತಕ್ಕೆ ರೋಚಕ...

5 ಸಿಕ್ಸರ್ ಸಿಡಿಸಿ ಧೋನಿ ದಾಖಲೆ ಮುರಿದ ಅಕ್ಸರ್ ಪಟೇಲ್: ಕೊನೆಯ ಓವರ್‌ನಲ್ಲಿ ಭಾರತಕ್ಕೆ ರೋಚಕ ಜಯ

- Advertisement -
- Advertisement -

ಅತಿಥೇಯ ವೆಸ್ಟ್ ಇಂಡೀಸ್ ತಂಡದ ಎದುರು ಎರಡನೇ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಭಾರತ ತಂಡ ಕೊನೆಯ ಓವರ್‌ನಲ್ಲಿ ರೋಚಕ ಗೆಲುವು ದಾಖಲಿಸಿದೆ. ಬೌಲರ್ ಅಕ್ಸರ್ ಪಟೇಲ್ ಗೆಲುವಿಗೆ ಆರು ರನ್ ಬೇಕಿದ್ದಾಗ ಸಿಕ್ಸರ್ ಸಿಡಿಸುವ ಮೂಲಕ ಭಾರತಕ್ಕೆ ಗೆಲುವು ತಂದುಕೊಟ್ಟರು. ಆ ಮೂಲಕ ಭಾರತ 3 ಪಂದ್ಯಗಳ ಸರಣಿಯನ್ನು ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ವಶಪಡಿಸಿಕೊಂಡಿದೆ. ಆ ಮೂಲಕ ವೆಸ್ಟ್‌ ಇಂಡೀಸ್ ವಿರುದ್ಧ ಸತತ 12ನೇ ಸರಣಿ ಗೆದ್ದ ವಿಶ್ವ ದಾಖಲೆ ನಿರ್ಮಿಸಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ವೆಸ್ಟ್ ಇಂಡೀಸ್ ಗಮನಾರ್ಹ ಪ್ರದರ್ಶನ ನೀಡಿತು. ಶಾಹ್ ಹೋಪ್ ತಮ್ಮ ನೂರನೇ ಪಂದ್ಯದಲ್ಲಿ ಶತಕ ಗಳಿಸುವ ಮೂಲಕ ಸಾಧನೆಗೈದರೆ ತಂಡದ ನಾಯಕ ನಿಕೋಲಸ್ ಪೂರನ್ 74 ರನ್ ಗಳಿಸುವ ಮೂಲಕ ತಂಡ 311 ರನ್ ಪೇರಿಸಲು ಸಹಾಯ ಮಾಡಿದರು. ಆದರೆ ವೆಸ್ಟ್ ಇಂಡೀಸ್ ತಂಡದ ಗೆಲುವಿನ ಕನಸನ್ನು ಭಾರತದ ಬೌಲರ್ ಅಕ್ಸರ್ ಪಟೇಲ್ ಸ್ಪೋಟಕ ಬ್ಯಾಟಿಂಗ್ ಮೂಲಕ ನುಚ್ಚೂ ನೂರು ಮಾಡಿದರು. ಪರಿಣಾಮ ಭಾರತವು ಇನ್ನು ಎರಡು ಎಸೆತಗಳು ಬಾಕಿ ಇರುವಂತೆ 312ರನ ಗಳಿಸಿ ಎರಡು ವಿಕೆಟ್‌ಗಳ ಮಹತ್ವದ ಜಯ ಸಾಧಿಸಿತು.

ಈ ಮೂಲಕ ಅಕ್ಸರ್ ಪಟೇಲ್ ವೆಸ್ಟ್ ಇಂಡೀಸ್ ತಂಡದ ವಿರುದ್ಧ ವೇಗದ ಅರ್ಧಶತಕ ದಾಖಲಿಸಿದ ಎರಡನೇ ಆಟಗಾರ ಎನಿಸಿಕೊಂಡರು. ಅಲ್ಲದೆ ಚೇಸಿಂಗ್‌ನಲ್ಲಿ ಭಾರತ ಗೆಲುವು ಕಂಡ ಪಂದ್ಯಗಳಲ್ಲಿ 7 ಅಥವಾ ಅದಕ್ಕಿಂತ ನಂತರದ ಕ್ರಮಾಂಕದಲ್ಲಿ ಬಂದು ಅತಿ ಹೆಚ್ಚು ಸಿಕ್ಸರ್ ಗಳಿಸಿದ್ದ ಮಹೇಂದ್ರ ಸಿಂಗ್ ಧೋನಿಯವರ 17 ವರ್ಷದ ದಾಖಲೆಯನ್ನು ಅಳಿಸಿಹಾಕಿದರು. ಕೇವಲ 35 ಎಸೆತಗಳಲ್ಲಿ 64 ರನ್ ಗಳಿಸಿದ ಅಕ್ಸರ್ ಪಟೇಲ್ 5 ಸಿಕ್ಸರ್ ಸಿಡಿಸಿ ಈ ಸಾಧನೆಗೈದರು.

2005ರಲ್ಲಿ ಧೋನಿ ಜಿಂಬಾಬ್ವೆ ಎದುರಿನ ಚೇಸಿಂಗ್‌ನಲ್ಲಿ 7ನೇ ಕ್ರಮಾಂಕ ಆಟಗಾರನಾಗಿ ಕಣಕ್ಕಿಳಿದು 3 ಸಿಕ್ಸರ್ ಸಿಡಿಸಿ ತಂಡ ಗೆಲ್ಲಿಸುವಲ್ಲಿ ದಾಖಲೆ ಮಾಡಿದ್ದರು. ಆನಂತರ ಯುಸುಫ್ ಪಠಾಣ್ ಸಹ 2011ರಲ್ಲಿ ಎರಡು ಬಾರಿ ದಕ್ಷಿಣ ಆಫ್ರಿಕಾ ಮತ್ತು ಐರ್ಲೆಂಡ್ ಎದುರು ತಲಾ ಮೂರು ಸಿಕ್ಸರ್ ಸಿಡಿಸಿ ಧೋನಿ ದಾಖಲೆ ಸರಿಗಟ್ಟಿದ್ದರು. ಆದರೆ ನಿನ್ನೆಯ ಪಂದ್ಯದಲ್ಲಿ ಅಕ್ಸರ್ ಪಟೇಲ್ ಒಟ್ಟು 5 ಸಿಕ್ಸರ್ ಸಿಡಿಸುವ ಮೂಲಕ ಆ ದಾಖಲೆ ಮುರಿದಿದ್ದಾರೆ. ಅವರ ಈ ಇನ್ನಿಂಗ್ಸ್‌ನಲ್ಲಿ ಮೂರು ಬೌಂಡರಿಗಳು ಸಹ ದಾಖಲಾಗಿವೆ.

312 ರನ್ ಬೆನ್ನಟ್ಟಿದ್ದ ಭಾರತ 18 ಓವರ್‌ನಲ್ಲಿ ಸಂದರ್ಭದಲ್ಲಿ ಮೂರು ವಿಕೆಟ್ ಕಳೆದುಕೊಂಡು ಕೇವಲ 79 ರನ್ ಗಳಿಸಿ ಸಂಕಷ್ಟದಲ್ಲಿತ್ತು. ಆನಂತರ ಶ್ರೇಯಸ್ ಅಯ್ಯರ್ (63) ಮತ್ತು ಸಂಜು ಸ್ಯಾಮ್ಸನ್ (54) ಇಬ್ಬರೂ ಅರ್ಧಶತಕ ಸಿಡಿಸಿ ತಂಡಕ್ಕೆ ಆಸೆಯಾದರು. 205 ರನ್ ಗಳಿಸಿದ್ದಾಗ ಸ್ಯಾಮ್ಸನ್ ರನ್ ಔಟ್ ಆದರು. ಆಗ ಭಾರತ 68 ಎಸೆತಗಳಲ್ಲಿ 107 ರನ್ ಗಳಿಸಬೇಕಾದ ಒತ್ತಡದಲ್ಲಿತ್ತು. ಆಗ ಕ್ರೀಸ್‌ಗಿಳಿಸಿದ ಅಕ್ಸರ್ ಪಟೇಲ್ ದಿಟ್ಟ ಆಟ ಪ್ರದರ್ಶಿಸಿದರು. ಇನ್ನೊಂದೆಡೆ ದೀಪಕ್ ಹೂಡ, ಶಾರ್ದುಲ್ ಠಾಕೂರ್, ಆವೇಶ್ ಖಾನ್ ಒಬ್ಬರ ನಂತರ ಒಬ್ಬರು ಔಟ್ ಆಗತ್ತಿದ್ದರೂ ಧೃತಿಗೆಡದೆ ಆಟವಾಡಿದರು. ಕೊನೆಯ ಓವರ್‌ನಲ್ಲಿ 6 ಎಸೆತಗಳಿಗೆ 8 ರನ್ ಗಳಿಸಬೇಕಿತ್ತು. ಅಕ್ಸರ್ ನಾಲ್ಕನೇ ಎಸೆತದಲ್ಲಿ ಸಿಕ್ಸರ್ ಸಿಡಿಸಿ ತಂಡಕ್ಕೆ ಜಯ ತಂದುಕೊಟ್ಟರು.

ಇದನ್ನೂ ಓದಿ: ನಿರ್ಗಮಿತ ರಾಷ್ಟ್ರಪತಿಗೆ ಪ್ರಧಾನಿ ಮೋದಿ ಅಗೌರವ ತೋರಿದರೆ? ವೈರಲ್‌ ವಿಡಿಯೊದ ವಾಸ್ತವವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...