Homeಅಂತರಾಷ್ಟ್ರೀಯಇರಾನ್‌ ಹಂಗಾಮಿ ಸರ್ವೋಚ್ಚ ನಾಯಕರಾಗಿ ಅಯಾತೊಲ್ಲ ಅಲಿರೆಝಾ ಅರಾಫಿ ನೇಮಕ

ಇರಾನ್‌ ಹಂಗಾಮಿ ಸರ್ವೋಚ್ಚ ನಾಯಕರಾಗಿ ಅಯಾತೊಲ್ಲ ಅಲಿರೆಝಾ ಅರಾಫಿ ನೇಮಕ

- Advertisement -
- Advertisement -

ಅಮೆರಿಕ-ಇಸ್ರೇಲ್ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾದ ಹಿನ್ನೆಲೆ, ಹಿರಿಯ ಧರ್ಮಗುರು ಅಯತೊಲ್ಲಾ ಅಲಿರೆಝಾ ಅರಾಫಿ ಅವರು ಇರಾನ್‌ನ ಹಂಗಾಮಿ ಸರ್ವೋಚ್ಚ ನಾಯಕರಾಗಿ ಆಯ್ಕೆ ಮಾಡಲಾಗಿದೆ ಎಂದು ಸರ್ಕಾರಿ-ಸಂಯೋಜಿತ ISNA ಸುದ್ದಿ ಸಂಸ್ಥೆ ವರದಿ ಮಾಡಿದೆ.

ಖಮೇನಿಯವರ ಹತ್ಯೆಯ ನಂತರ ಇರಾನ್ ತನ್ನ ಸಂವಿಧಾನದ 111ನೇ ವಿಧಿಯನ್ನು ಸಕ್ರಿಯಗೊಳಿಸಿತ್ತು, ಇದು ತುರ್ತು ನಾಯಕತ್ವ ಪ್ರಕ್ರಿಯೆಯನ್ನು ಪ್ರಾರಂಭಿಸಿತ್ತು. ಈ ವಿಧಿಯ ಅಡಿ ಶಾಶ್ವತ ಉತ್ತರಾಧಿಕಾರಿಯನ್ನು ಆಯ್ಕೆ ಮಾಡುವವರೆಗೆ ಮೂವರು ಸದಸ್ಯರ ಮಂಡಳಿಯು ಸುಪ್ರೀಂ ನಾಯಕನ ಅಧಿಕಾರವನ್ನು ವಹಿಸಿಕೊಳ್ಳುತ್ತದೆ.

ಸಂವಿಧಾನದ ನಿಯಮಾವಳಿಗಳ ಅನ್ವಯ, ಗಾರ್ಡಿಯನ್ ಕೌನ್ಸಿಲ್‌ನಿಂದ ಆಯ್ಕೆಯಾದ ನ್ಯಾಯಶಾಸ್ತ್ರಜ್ಞ ಸದಸ್ಯರಾಗಿ ಅಯತೊಲ್ಲಾ ಅಲಿರೆಝಾ ಅರಾಫಿ ಅವರು ಈ ಮಧ್ಯಂತರ ನಾಯಕತ್ವ ಮಂಡಳಿಗೆ ನೇಮಕಗೊಂಡಿದ್ದಾರೆ. ಅವರ ಈ ನೇಮಕಾತಿಯೊಂದಿಗೆ, ಅಧಿಕಾರ ಹಸ್ತಾಂತರದ ಸಮಯದಲ್ಲಿ ಸರ್ವೋಚ್ಚ ನಾಯಕರ ಅಧಿಕಾರವನ್ನು ಚಲಾಯಿಸುವ ಜವಾಬ್ದಾರಿಯನ್ನು ಹೊಂದಿರುವ ಮೂವರು ಸದಸ್ಯರ ಈ ಸಮಿತಿಯು ಈಗ ಪೂರ್ಣಗೊಂಡಂತಾಗಿದೆ.

ಹತ್ಯೆಯಾದ ಖಮೇನಿ ಜಾಗಕ್ಕೆ ಸರ್ವೋಚ್ಚ ನಾಯಕರಾಗಿ ನೇಮಕಗೊಂಡ ಅರಾಫಿ, ಅಧ್ಯಕ್ಷ ಮಸೂದ್ ಪೆಜೆಶ್ಕಿಯನ್ ಮತ್ತು ಮುಖ್ಯ ನ್ಯಾಯಮೂರ್ತಿ ಘೋಲಂ-ಹೊಸೇನ್ ಮೊಹ್ಸೇನಿ-ಎಜೆಈ ಅವರೊಂದಿಗೆ ಜಂಟಿಯಾಗಿ ದೇಶವನ್ನು ಮುನ್ನಡೆಸಲಿದ್ದಾರೆ.

1959ರಲ್ಲಿ ಜನಿಸಿದ 67 ವರ್ಷದ ಅಯತೊಲ್ಲಾ ಅಲಿರೆಝಾ ಅರಾಫಿ ಅವರು, ಇರಾನ್‌ನ ಧಾರ್ಮಿಕ ಶ್ರೇಣೀಕೃತ ವ್ಯವಸ್ಥೆಯಲ್ಲಿ ಅತ್ಯಂತ ಹಿರಿಯ ವ್ಯಕ್ತಿಯಾಗಿದ್ದಾರೆ. ಈ ಮಧ್ಯಂತರ ನಾಯಕತ್ವದ ಪಾತ್ರವನ್ನು ವಹಿಸಿಕೊಳ್ಳುವ ಮೊದಲು, ಅವರು ಏಕಕಾಲದಲ್ಲಿ ಹಲವಾರು ಪ್ರಮುಖ ಹುದ್ದೆಗಳನ್ನು ಹೊಂದಿದ್ದರು. ಅವರು ಇರಾನ್‌ನ ಇಸ್ಲಾಮಿಕ್ ಸೆಮಿನರಿಗಳ (ಧಾರ್ಮಿಕ ಶಿಕ್ಷಣ ಸಂಸ್ಥೆಗಳು) ರಾಷ್ಟ್ರೀಯ ಜಾಲದ ಮುಖ್ಯಸ್ಥರಾಗಿದ್ದಾರೆ, ಗಾರ್ಡಿಯನ್ ಕೌನ್ಸಿಲ್‌ನ ಧಾರ್ಮಿಕ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಮತ್ತು ಅಸೆಂಬ್ಲಿ ಆಫ್ ಎಕ್ಸ್‌ಪರ್ಟ್ಸ್‌ನ (ತಜ್ಞರ ಮಂಡಳಿ) ಸದಸ್ಯರೂ ಆಗಿದ್ದಾರೆ.

ಶನಿವಾರ ನಡೆದ ದಾಳಿಯಲ್ಲಿ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಮುಖ್ಯಸ್ಥರಾದ ಜನರಲ್ ಮೊಹಮ್ಮದ್ ಪಾಕ್‌ಪೋರ್ ಅವರು ಹತರಾದ ಹಿನ್ನೆಲೆ, ಆ ಸಂಸ್ಥೆಯ ನಾಯಕತ್ವದಲ್ಲಿ ಬದಲಾವಣೆಯನ್ನು ಘೋಷಿಸಲಾಗಿದೆ. ಇರಾನ್ ಸರ್ಕಾರಿ ಸ್ವಾಮ್ಯದ ಮಾಧ್ಯಮಗಳ ಪ್ರಕಾರ, ಅಹ್ಮದ್ ವಾಹಿದಿ ಅವರನ್ನು ಐಆರ್‌ಜಿಸಿಯ ಹೊಸ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ.

ಐಆರ್‌ಜಿಸಿ ಇರಾನ್‌ನ ಅತ್ಯಂತ ಶಕ್ತಿಶಾಲಿ ಸಂಸ್ಥೆಗಳಲ್ಲಿ ಒಂದಾಗಿದೆ. ಇದು ದೇಶದ ಮಿಲಿಟರಿ, ರಾಜಕೀಯ ಮತ್ತು ಆರ್ಥಿಕ ಕ್ಷೇತ್ರಗಳಲ್ಲಿ ಹೆಚ್ಚಿನ ಪ್ರಭಾವವನ್ನು ಹೊಂದಿದೆ. ವಿಶೇಷವೆಂದರೆ, ಇದು ದೇಶದ ಸಾಮಾನ್ಯ ಸಶಸ್ತ್ರ ಪಡೆಗಳಿಂದ ಪ್ರತ್ಯೇಕವಾಗಿ ಕಾರ್ಯನಿರ್ವಹಿಸುತ್ತದೆ.

1989ರಿಂದ ಇರಾನ್ ಅನ್ನು ಆಳುತ್ತಿದ್ದ 86 ವರ್ಷದ ಅಯತೊಲ್ಲಾ ಅಲಿ ಖಮೇನಿ ಅವರು ಶನಿವಾರ ನಡೆದ ಅಮೆರಿಕ-ಇಸ್ರೇಲ್‌ನ ಬೃಹತ್ ಮಿಲಿಟರಿ ದಾಳಿಯಲ್ಲಿ ಹತರಾಗಿದ್ದಾರೆ. ಈ ಕಾರ್ಯಾಚರಣೆಯು ಮಿಲಿಟರಿ ನೆಲೆಗಳು, ಸರ್ಕಾರಿ ಕೇಂದ್ರಗಳು ಮತ್ತು ರಕ್ಷಣಾ ಸಚಿವ ಅಮೀರ್ ನಾಸರ್ಜಾದೆ ಹಾಗೂ ಕಮಾಂಡರ್-ಇನ್-ಚೀಫ್ ಮೊಹಮ್ಮದ್ ಪಾಕ್‌ಪೋರ್ ಅವರಿಗೆ ಸಂಬಂಧಿಸಿದ ಸ್ಥಳಗಳು ಸೇರಿದಂತೆ ಹಿರಿಯ ನಾಯಕತ್ವದ ತಾಣಗಳನ್ನು ಗುರಿಯಾಗಿಸಿಕೊಂಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾಜಿ ರಾಷ್ಟ್ರಪತಿ ಜಗದೀಪ್ ಧನ್ಕರ್ ರಾಜೀನಾಮೆ ಹಿಂದೆ ಇಡಿ ಒತ್ತಡ : ತನ್ನ ಹೊಸ ಪುಸ್ತಕದಲ್ಲಿ ಸಂಜಯ್ ರಾವುತ್ ಆರೋಪ

ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವುತ್ ಅವರು ಜೈಲಿನಲ್ಲಿದ್ದ ಅವಧಿಯಲ್ಲಿ ಬರೆದ 'ಅನ್‌ಲೈಕ್ಲಿ ಪ್ಯಾರಡೈಸ್' (Unlikely Paradise) ಪುಸ್ತಕದಲ್ಲಿ ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಮೋದಿ ಸರ್ಕಾರದ ವಿರುದ್ಧ ಕೈಗೊಂಡ ಸ್ವತಂತ್ರ...

ಯುಎನ್‌ಐ ಮಾಧ್ಯಮ ಕಚೇರಿಗೆ ಬೀಗ : ಪೊಲೀಸರ ವರ್ತನೆಗೆ ಪತ್ರಿಕಾ ಸಂಘಗಳು, ವಿಪಕ್ಷ ನಾಯಕರಿಂದ ತೀವ್ರ ಖಂಡನೆ

ಶುಕ್ರವಾರ (ಮಾ.20) ರಾತ್ರಿ ದೆಹಲಿ ಪೊಲೀಸರು ಯುನೈಟೆಡ್ ನ್ಯೂಸ್ ಆಫ್ ಇಂಡಿಯಾ (ಯುಎನ್‌ಐ) ಸುದ್ದಿ ಸಂಸ್ಥೆಯ ಕಚೇರಿಗೆ ಬೀಗ ಜಡಿದ ರೀತಿಗೆ ಪತ್ರಕರ್ತರ ಸಂಘಗಳು ಮತ್ತು ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ದೆಹಲಿಯ...

ಉಪಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್: ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬಕ್ಕೆ ಟಿಕೆಟ್

ಏಪ್ರಿಲ್ 9ರಂದು ನಡೆಯಲಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ದಾವಣಗೆರೆ ದಕ್ಷಿಣದಲ್ಲಿ ಮುಸ್ಲಿಮರ ತೀವ್ರ ವಿರೋಧದ ನಡುವೆಯೂ ಕೃಷಿ ಸಚಿವ ಎಸ್‌.ಎಸ್‌ ಮಲ್ಲಿಕಾರ್ಜುನ್ ಅವರ...

ಕೇರಳ ವಿಧಾನಸಭೆ ಚುನಾವಣೆ : ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಕೇಸ್!

ಏಪ್ರಿಲ್ 9ರಂದು ನಡೆಯಲಿರುವ ಕೇರಳ ವಿಧಾನಸಭೆ ಚುನಾವಣೆಗೆ ಕಾಸರಗೋಡಿನ ಮಂಜೇಶ್ವರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೆ. ಸುರೇಂದ್ರನ್ ಮೇಲೆ ಬರೋಬ್ಬರಿ 242 ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ. ಈ ಮಾಹಿತಿ ಶನಿವಾರ...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಆರು ಮಂದಿ ಶಾಸಕರನ್ನು ಅಮಾನತುಗೊಳಿಸಿದ ಬಿಜೆಡಿ

ಮಾರ್ಚ್ 16ರಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಆರು ಮಂದಿ ಶಾಸಕರನ್ನು ಒಡಿಶಾದ ಬಿಜು ಜನತಾದಳ (ಬಿಜೆಡಿ) ಅಮಾನತುಗೊಳಿಸಿದೆ ಎಂದು ವರದಿಯಾಗಿದೆ. ಒಟ್ಟು 8 ಶಾಸಕರು ಪಕ್ಷದ ವಿಪ್ ಉಲ್ಲಂಘಿಸಿದ್ದಾರೆ....

ಆಸ್ಕರ್ ನಾಮನಿರ್ದೇಶಿತ ‘ದಿ ವಾಯ್ಸ್ ಆಫ್ ಹಿಂದ್ ರಜಬ್’ ಚಿತ್ರ ಪ್ರದರ್ಶನಕ್ಕೆ ಭಾರತದಲ್ಲಿ ನಿರ್ಬಂಧ!

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ಳನ್ನು ಇಸ್ರೇಲಿ ಸೈನಿಕರು ಸುಮಾರು 300 ಸುತ್ತು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಿರುವ ಕಥೆಯನ್ನು ಹೇಳುವ, 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರದ ಪ್ರದರ್ಶನಕ್ಕೆ...

ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ನ್ಯಾಯಾಲಯ

ಕೊಲ್ಲಂ: ಆಸ್ಪತ್ರೆಯಲ್ಲಿ ನಡೆದ ಡಾ. ವಂದನಾ ದಾಸ್ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಜಿ. ಸಂದೀಪ್ ಗೆ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವುದಾಗಿ...

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...