Homeಮುಖಪುಟಆಯಿಷಾ ಸುಲ್ತಾನಾ ಹೇಳಿಕೆ ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧವಾಗಿಲ್ಲ: ಕೇರಳ ಹೈಕೋರ್ಟ್

ಆಯಿಷಾ ಸುಲ್ತಾನಾ ಹೇಳಿಕೆ ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧವಾಗಿಲ್ಲ: ಕೇರಳ ಹೈಕೋರ್ಟ್

- Advertisement -
- Advertisement -

ಲಕ್ಷದ್ವೀಪ ಮೂಲದ ನಟಿ ಮತ್ತು ನಿರ್ಮಾಪಕಿ ಆಯಿಷಾ ಸುಲ್ತಾನಾ ಅವರ ವಿರುದ್ಧದ ರಾಷ್ಟ್ರದ್ರೋಹ ಪ್ರಕರಣದಲ್ಲಿ ಕೇರಳ ಹೈಕೋರ್ಟ್ ಆಯಿಷಾ ಅವರಿಗೆ ನಿನ್ನೆ ನಿರೀಕ್ಷಣಾ ಜಾಮೀನು ನೀಡಿದೆ. ಪ್ರಕರಣದ ವಿಚಾರಣೆ ವೇಳೆ “ಆಯಿಷಾ ಸುಲ್ತಾನ್ ಅವರ ಹೇಳಿಕೆಗಳು ಭಾರತದ ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧವಾಗಿಲ್ಲ ಹಾಗೂ ಸಮುದಾಯಗಳ ನಡುವೆ ಯಾವುದೇ ದ್ವೇಷವನ್ನು ಹುಟ್ಟುಹಾಕುವಂತದಲ್ಲ” ಎಂದು ಕೇರಳ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

50,000 ಮೊತ್ತದ ಬಾಂಡ್ ಹಾಗೂ ಇಬ್ಬರು ಶ್ಯೂರಿಟಿಗಳನ್ನು ಪಡೆದುಕೊಂಡು ಆಯಿಷಾ ಸುಲ್ತಾನಾ ಅವರಿಗೆ ನಿರೀಕ್ಷಣಾ ಜಾಮೀನು ನೀಡಿದ ನ್ಯಾಯಾಲಯವು ಲಕ್ಷದ್ವೀಪ ಆಡಳಿತದ ವಾದವನ್ನು ತಳ್ಳಿ ಹಾಕಿತು. ಕಳೆದ ವಾರ ಆಯಿಷಾ ಸಲ್ತಾನಾ ಅವರ ಬಂಧನಕ್ಕೆ ತಾತ್ಕಾಲಿಕ ತಡೆ ನೀಡಿದ್ದ ಕೇರಳ ಹೈಕೋರ್ಟ್ ನಿನ್ನೆ ಶುಕ್ರವಾರ CrPC ಸೆಕ್ಷನ್ 432 ರ ಅಡಿಯಲ್ಲಿ ಸುಲ್ತಾನಾ ಅವರಿಗೆ ನಿರೀಕ್ಷಿಣಾ ಜಾಮೀನು ನೀಡಿದೆ.

ಕೇರಳ ಹೈಕೋರ್ಟ್‌ನಲ್ಲಿ ಲಕ್ಷದ್ವೀಪ ಆಡಳಿತವು ಗುರುವಾರ ಮತ್ತೊಂದು ಅರ್ಜಿಯನ್ನು ಸಲ್ಲಿಸಿ ಆಯಿಷಾ ಸುಲ್ತಾನಾ ಅವರು ಕೋವಿಡ್ ನಿಯಮಾವಳಿಗಳನ್ನು ಉಲ್ಲಂಘಿಸಿದ್ದಾರೆ ಎಂಬ ಆರೊಪ ಮಾಡಿತ್ತು.

ಕಮರತ್ತಿ ಪೊಲೀಸರು ಬಿಜೆಪಿ ಲಕ್ಷದ್ವೀಪ ಮುಖ್ಯಸ್ಥ ಸಿ. ಅಬ್ದುಲ್ ಖಾದಿರ್ ಹಾಜಿ ಅವರ ದೂರಿನ ಆಧಾರದ ಮೇಲೆ IPC ಸೆಕ್ಷನ್ 124A ( ದೇಶದ್ರೋಹ) ಮತ್ತು ಸೆಕ್ಷನ್ 153B (ಸಮುದಾಯಗಳ ನಡುವೆ ದ್ವೇಷ ಭಿತ್ತುವ ಕೃತ್ಯ) ಅಡಿಯಲ್ಲಿ FIR  ದಾಖಲಿಸಿಕೊಂಡಿತ್ತು.

ಲಕ್ಷದ್ವೀಪದಲ್ಲಿ ಕೋವಿಡ್ ನಿರ್ಬಂಧಗಳನ್ನು ಸಡಿಲಿಸಿದ್ದರಿಂದ ಕೊರೋನಾ ಎರಡನೇ ಅಲೆಯೂ ತೀವ್ರವಾಗಿ ಹರಡಲು ಕಾರಣವಾಯಿತು. ನಿರ್ಬಂಧಗಳನ್ನು ಸಡಿಲಿಸಿದ ಲಕ್ಷದ್ವೀಪ ಆಡಳಿತಾಧಿಕಾರಿಯ ನಿರ್ಧಾರವನ್ನು ಬಯೋ ವೆಪನ್ ಆಗಿ ಪರಿಣಮಿಸಿತು ಎಂದಷ್ಟೇ ಹೇಳಿದ್ದಾರೆ. ರಾಷ್ಟ್ರೀಯ ಹಿತಾಸಕ್ತಿಗೆ ಧಕ್ಕೆ ಮಾಡುವ ಯಾವ ಉದ್ದೇಶವೂ ಇದರಲ್ಲಿ ಇಲ್ಲ ಎಂದು ಆಯಿಷಾ ಸುಲ್ತಾನ್ ಪರ ವಕೀಲರು ಹೈಕೋರ್ಟ್‌ನಲ್ಲಿ ವಾದಿಸಿದ್ದರು.

ಶುಕ್ರವಾರ ಆಯಿಷಾ ಸುಲ್ತಾನಾ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್ ಪ್ರಕರಣದಲ್ಲಿ ರಾಷ್ಟ್ರದ ಹಿತಾಸಕ್ತಿಗೆ ಧಕ್ಕೆಯಾಗುವಂತಹ ಹೇಳಿಕೆಯನ್ನು ಅರ್ಜಿದಾರರು ನೀಡಿಲ್ಲ. ಸರ್ಕಾರದ ಯೋಜನೆಗಳನ್ನು ಟೀಕಿಸುವುದನ್ನು ದೇಶದ್ರೋಹ ಅಥವಾ ಧರ್ಮ ದ್ವೇಷ ಸೃಷ್ಟಿಸುವ ಕೃತ್ಯವೆಂದು ಪರಿಗಣಿಸಲು ಸಾಧ್ಯವಿಲ್ಲ . ಮೇಲ್ನೋಟಕ್ಕೆ ಅರ್ಜಿದಾರರನ್ನು ಬಂಧಿಸುವ ಅಗತ್ಯವಿಲ್ಲವೆಂಬುದು ಕಂಡು ಬರುತ್ತದೆ ಎನ್ನುವ ಮೂಲಕ ಲಕ್ಷದ್ವೀಪ ಆಡಳಿತದ ವಾದವನ್ನು ತಳ್ಳಿ ಹಾಕಿತು.

ಲಕ್ಷದ್ವೀಪ ಬಿಜೆಪಿಯ 15 ಮುಖಂಡರು ಆಯಿಷಾ ಸುಲ್ತಾನಾ ವಿರುದ್ಧ ಪ್ರಕರಣವನ್ನು ದಾಖಲಿಸಿರವುದನ್ನು ಖಂಡಿಸಿ ಪಕ್ಷಕ್ಕೆ ರಾಜೀನಾಮೆಯನ್ನು ನೀಡಿ ಪ್ರತಿಭಟಿಸಿದ್ದಾರೆ. ಹೊಸ ಆಡಳಿತಾಧಿಕಾರಿ ಪ್ರಪುಲ್ ಖೋಡಾ ಪಟೇಲ್ ಅವರ ಯೋಜನೆಗಳಿಂದ ಲಕ್ಷದ್ವೀಪದ ಜನ ಜೀವನ ಮತ್ತು ಸಂಸ್ಕೃತಿ ಹಾಳಾಗುತ್ತಿರುವುದು ಬಿಜೆಪಿಗೂ ಗೊತ್ತಿದೆ ಎಂದು ಪ್ರತಿಭಟನಾನಿರತ ಬಿಜೆಪಿ ಮುಖಂಡರು ಹೇಳಿದ್ದಾರೆ.


ಇದನ್ನೂ ಓದಿ: ಲಕ್ಷದ್ವೀಪ: ಆಡಳಿತಾಧಿಕಾರಿಯ 2 ವಿವಾದಾತ್ಮಕ ಆದೇಶಗಳಿಗೆ ಕೇರಳ ಹೈಕೋರ್ಟ್ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...