Homeಮುಖಪುಟಆಯಿಷಾ ಸುಲ್ತಾನಾ ಹೇಳಿಕೆ ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧವಾಗಿಲ್ಲ: ಕೇರಳ ಹೈಕೋರ್ಟ್

ಆಯಿಷಾ ಸುಲ್ತಾನಾ ಹೇಳಿಕೆ ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧವಾಗಿಲ್ಲ: ಕೇರಳ ಹೈಕೋರ್ಟ್

- Advertisement -
- Advertisement -

ಲಕ್ಷದ್ವೀಪ ಮೂಲದ ನಟಿ ಮತ್ತು ನಿರ್ಮಾಪಕಿ ಆಯಿಷಾ ಸುಲ್ತಾನಾ ಅವರ ವಿರುದ್ಧದ ರಾಷ್ಟ್ರದ್ರೋಹ ಪ್ರಕರಣದಲ್ಲಿ ಕೇರಳ ಹೈಕೋರ್ಟ್ ಆಯಿಷಾ ಅವರಿಗೆ ನಿನ್ನೆ ನಿರೀಕ್ಷಣಾ ಜಾಮೀನು ನೀಡಿದೆ. ಪ್ರಕರಣದ ವಿಚಾರಣೆ ವೇಳೆ “ಆಯಿಷಾ ಸುಲ್ತಾನ್ ಅವರ ಹೇಳಿಕೆಗಳು ಭಾರತದ ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧವಾಗಿಲ್ಲ ಹಾಗೂ ಸಮುದಾಯಗಳ ನಡುವೆ ಯಾವುದೇ ದ್ವೇಷವನ್ನು ಹುಟ್ಟುಹಾಕುವಂತದಲ್ಲ” ಎಂದು ಕೇರಳ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

50,000 ಮೊತ್ತದ ಬಾಂಡ್ ಹಾಗೂ ಇಬ್ಬರು ಶ್ಯೂರಿಟಿಗಳನ್ನು ಪಡೆದುಕೊಂಡು ಆಯಿಷಾ ಸುಲ್ತಾನಾ ಅವರಿಗೆ ನಿರೀಕ್ಷಣಾ ಜಾಮೀನು ನೀಡಿದ ನ್ಯಾಯಾಲಯವು ಲಕ್ಷದ್ವೀಪ ಆಡಳಿತದ ವಾದವನ್ನು ತಳ್ಳಿ ಹಾಕಿತು. ಕಳೆದ ವಾರ ಆಯಿಷಾ ಸಲ್ತಾನಾ ಅವರ ಬಂಧನಕ್ಕೆ ತಾತ್ಕಾಲಿಕ ತಡೆ ನೀಡಿದ್ದ ಕೇರಳ ಹೈಕೋರ್ಟ್ ನಿನ್ನೆ ಶುಕ್ರವಾರ CrPC ಸೆಕ್ಷನ್ 432 ರ ಅಡಿಯಲ್ಲಿ ಸುಲ್ತಾನಾ ಅವರಿಗೆ ನಿರೀಕ್ಷಿಣಾ ಜಾಮೀನು ನೀಡಿದೆ.

ಕೇರಳ ಹೈಕೋರ್ಟ್‌ನಲ್ಲಿ ಲಕ್ಷದ್ವೀಪ ಆಡಳಿತವು ಗುರುವಾರ ಮತ್ತೊಂದು ಅರ್ಜಿಯನ್ನು ಸಲ್ಲಿಸಿ ಆಯಿಷಾ ಸುಲ್ತಾನಾ ಅವರು ಕೋವಿಡ್ ನಿಯಮಾವಳಿಗಳನ್ನು ಉಲ್ಲಂಘಿಸಿದ್ದಾರೆ ಎಂಬ ಆರೊಪ ಮಾಡಿತ್ತು.

ಕಮರತ್ತಿ ಪೊಲೀಸರು ಬಿಜೆಪಿ ಲಕ್ಷದ್ವೀಪ ಮುಖ್ಯಸ್ಥ ಸಿ. ಅಬ್ದುಲ್ ಖಾದಿರ್ ಹಾಜಿ ಅವರ ದೂರಿನ ಆಧಾರದ ಮೇಲೆ IPC ಸೆಕ್ಷನ್ 124A ( ದೇಶದ್ರೋಹ) ಮತ್ತು ಸೆಕ್ಷನ್ 153B (ಸಮುದಾಯಗಳ ನಡುವೆ ದ್ವೇಷ ಭಿತ್ತುವ ಕೃತ್ಯ) ಅಡಿಯಲ್ಲಿ FIR  ದಾಖಲಿಸಿಕೊಂಡಿತ್ತು.

ಲಕ್ಷದ್ವೀಪದಲ್ಲಿ ಕೋವಿಡ್ ನಿರ್ಬಂಧಗಳನ್ನು ಸಡಿಲಿಸಿದ್ದರಿಂದ ಕೊರೋನಾ ಎರಡನೇ ಅಲೆಯೂ ತೀವ್ರವಾಗಿ ಹರಡಲು ಕಾರಣವಾಯಿತು. ನಿರ್ಬಂಧಗಳನ್ನು ಸಡಿಲಿಸಿದ ಲಕ್ಷದ್ವೀಪ ಆಡಳಿತಾಧಿಕಾರಿಯ ನಿರ್ಧಾರವನ್ನು ಬಯೋ ವೆಪನ್ ಆಗಿ ಪರಿಣಮಿಸಿತು ಎಂದಷ್ಟೇ ಹೇಳಿದ್ದಾರೆ. ರಾಷ್ಟ್ರೀಯ ಹಿತಾಸಕ್ತಿಗೆ ಧಕ್ಕೆ ಮಾಡುವ ಯಾವ ಉದ್ದೇಶವೂ ಇದರಲ್ಲಿ ಇಲ್ಲ ಎಂದು ಆಯಿಷಾ ಸುಲ್ತಾನ್ ಪರ ವಕೀಲರು ಹೈಕೋರ್ಟ್‌ನಲ್ಲಿ ವಾದಿಸಿದ್ದರು.

ಶುಕ್ರವಾರ ಆಯಿಷಾ ಸುಲ್ತಾನಾ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್ ಪ್ರಕರಣದಲ್ಲಿ ರಾಷ್ಟ್ರದ ಹಿತಾಸಕ್ತಿಗೆ ಧಕ್ಕೆಯಾಗುವಂತಹ ಹೇಳಿಕೆಯನ್ನು ಅರ್ಜಿದಾರರು ನೀಡಿಲ್ಲ. ಸರ್ಕಾರದ ಯೋಜನೆಗಳನ್ನು ಟೀಕಿಸುವುದನ್ನು ದೇಶದ್ರೋಹ ಅಥವಾ ಧರ್ಮ ದ್ವೇಷ ಸೃಷ್ಟಿಸುವ ಕೃತ್ಯವೆಂದು ಪರಿಗಣಿಸಲು ಸಾಧ್ಯವಿಲ್ಲ . ಮೇಲ್ನೋಟಕ್ಕೆ ಅರ್ಜಿದಾರರನ್ನು ಬಂಧಿಸುವ ಅಗತ್ಯವಿಲ್ಲವೆಂಬುದು ಕಂಡು ಬರುತ್ತದೆ ಎನ್ನುವ ಮೂಲಕ ಲಕ್ಷದ್ವೀಪ ಆಡಳಿತದ ವಾದವನ್ನು ತಳ್ಳಿ ಹಾಕಿತು.

ಲಕ್ಷದ್ವೀಪ ಬಿಜೆಪಿಯ 15 ಮುಖಂಡರು ಆಯಿಷಾ ಸುಲ್ತಾನಾ ವಿರುದ್ಧ ಪ್ರಕರಣವನ್ನು ದಾಖಲಿಸಿರವುದನ್ನು ಖಂಡಿಸಿ ಪಕ್ಷಕ್ಕೆ ರಾಜೀನಾಮೆಯನ್ನು ನೀಡಿ ಪ್ರತಿಭಟಿಸಿದ್ದಾರೆ. ಹೊಸ ಆಡಳಿತಾಧಿಕಾರಿ ಪ್ರಪುಲ್ ಖೋಡಾ ಪಟೇಲ್ ಅವರ ಯೋಜನೆಗಳಿಂದ ಲಕ್ಷದ್ವೀಪದ ಜನ ಜೀವನ ಮತ್ತು ಸಂಸ್ಕೃತಿ ಹಾಳಾಗುತ್ತಿರುವುದು ಬಿಜೆಪಿಗೂ ಗೊತ್ತಿದೆ ಎಂದು ಪ್ರತಿಭಟನಾನಿರತ ಬಿಜೆಪಿ ಮುಖಂಡರು ಹೇಳಿದ್ದಾರೆ.


ಇದನ್ನೂ ಓದಿ: ಲಕ್ಷದ್ವೀಪ: ಆಡಳಿತಾಧಿಕಾರಿಯ 2 ವಿವಾದಾತ್ಮಕ ಆದೇಶಗಳಿಗೆ ಕೇರಳ ಹೈಕೋರ್ಟ್ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...