Homeಮುಖಪುಟಆಯಿಷಾ ಸುಲ್ತಾನಾ ಹೇಳಿಕೆ ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧವಾಗಿಲ್ಲ: ಕೇರಳ ಹೈಕೋರ್ಟ್

ಆಯಿಷಾ ಸುಲ್ತಾನಾ ಹೇಳಿಕೆ ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧವಾಗಿಲ್ಲ: ಕೇರಳ ಹೈಕೋರ್ಟ್

- Advertisement -
- Advertisement -

ಲಕ್ಷದ್ವೀಪ ಮೂಲದ ನಟಿ ಮತ್ತು ನಿರ್ಮಾಪಕಿ ಆಯಿಷಾ ಸುಲ್ತಾನಾ ಅವರ ವಿರುದ್ಧದ ರಾಷ್ಟ್ರದ್ರೋಹ ಪ್ರಕರಣದಲ್ಲಿ ಕೇರಳ ಹೈಕೋರ್ಟ್ ಆಯಿಷಾ ಅವರಿಗೆ ನಿನ್ನೆ ನಿರೀಕ್ಷಣಾ ಜಾಮೀನು ನೀಡಿದೆ. ಪ್ರಕರಣದ ವಿಚಾರಣೆ ವೇಳೆ “ಆಯಿಷಾ ಸುಲ್ತಾನ್ ಅವರ ಹೇಳಿಕೆಗಳು ಭಾರತದ ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧವಾಗಿಲ್ಲ ಹಾಗೂ ಸಮುದಾಯಗಳ ನಡುವೆ ಯಾವುದೇ ದ್ವೇಷವನ್ನು ಹುಟ್ಟುಹಾಕುವಂತದಲ್ಲ” ಎಂದು ಕೇರಳ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

50,000 ಮೊತ್ತದ ಬಾಂಡ್ ಹಾಗೂ ಇಬ್ಬರು ಶ್ಯೂರಿಟಿಗಳನ್ನು ಪಡೆದುಕೊಂಡು ಆಯಿಷಾ ಸುಲ್ತಾನಾ ಅವರಿಗೆ ನಿರೀಕ್ಷಣಾ ಜಾಮೀನು ನೀಡಿದ ನ್ಯಾಯಾಲಯವು ಲಕ್ಷದ್ವೀಪ ಆಡಳಿತದ ವಾದವನ್ನು ತಳ್ಳಿ ಹಾಕಿತು. ಕಳೆದ ವಾರ ಆಯಿಷಾ ಸಲ್ತಾನಾ ಅವರ ಬಂಧನಕ್ಕೆ ತಾತ್ಕಾಲಿಕ ತಡೆ ನೀಡಿದ್ದ ಕೇರಳ ಹೈಕೋರ್ಟ್ ನಿನ್ನೆ ಶುಕ್ರವಾರ CrPC ಸೆಕ್ಷನ್ 432 ರ ಅಡಿಯಲ್ಲಿ ಸುಲ್ತಾನಾ ಅವರಿಗೆ ನಿರೀಕ್ಷಿಣಾ ಜಾಮೀನು ನೀಡಿದೆ.

ಕೇರಳ ಹೈಕೋರ್ಟ್‌ನಲ್ಲಿ ಲಕ್ಷದ್ವೀಪ ಆಡಳಿತವು ಗುರುವಾರ ಮತ್ತೊಂದು ಅರ್ಜಿಯನ್ನು ಸಲ್ಲಿಸಿ ಆಯಿಷಾ ಸುಲ್ತಾನಾ ಅವರು ಕೋವಿಡ್ ನಿಯಮಾವಳಿಗಳನ್ನು ಉಲ್ಲಂಘಿಸಿದ್ದಾರೆ ಎಂಬ ಆರೊಪ ಮಾಡಿತ್ತು.

ಕಮರತ್ತಿ ಪೊಲೀಸರು ಬಿಜೆಪಿ ಲಕ್ಷದ್ವೀಪ ಮುಖ್ಯಸ್ಥ ಸಿ. ಅಬ್ದುಲ್ ಖಾದಿರ್ ಹಾಜಿ ಅವರ ದೂರಿನ ಆಧಾರದ ಮೇಲೆ IPC ಸೆಕ್ಷನ್ 124A ( ದೇಶದ್ರೋಹ) ಮತ್ತು ಸೆಕ್ಷನ್ 153B (ಸಮುದಾಯಗಳ ನಡುವೆ ದ್ವೇಷ ಭಿತ್ತುವ ಕೃತ್ಯ) ಅಡಿಯಲ್ಲಿ FIR  ದಾಖಲಿಸಿಕೊಂಡಿತ್ತು.

ಲಕ್ಷದ್ವೀಪದಲ್ಲಿ ಕೋವಿಡ್ ನಿರ್ಬಂಧಗಳನ್ನು ಸಡಿಲಿಸಿದ್ದರಿಂದ ಕೊರೋನಾ ಎರಡನೇ ಅಲೆಯೂ ತೀವ್ರವಾಗಿ ಹರಡಲು ಕಾರಣವಾಯಿತು. ನಿರ್ಬಂಧಗಳನ್ನು ಸಡಿಲಿಸಿದ ಲಕ್ಷದ್ವೀಪ ಆಡಳಿತಾಧಿಕಾರಿಯ ನಿರ್ಧಾರವನ್ನು ಬಯೋ ವೆಪನ್ ಆಗಿ ಪರಿಣಮಿಸಿತು ಎಂದಷ್ಟೇ ಹೇಳಿದ್ದಾರೆ. ರಾಷ್ಟ್ರೀಯ ಹಿತಾಸಕ್ತಿಗೆ ಧಕ್ಕೆ ಮಾಡುವ ಯಾವ ಉದ್ದೇಶವೂ ಇದರಲ್ಲಿ ಇಲ್ಲ ಎಂದು ಆಯಿಷಾ ಸುಲ್ತಾನ್ ಪರ ವಕೀಲರು ಹೈಕೋರ್ಟ್‌ನಲ್ಲಿ ವಾದಿಸಿದ್ದರು.

ಶುಕ್ರವಾರ ಆಯಿಷಾ ಸುಲ್ತಾನಾ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್ ಪ್ರಕರಣದಲ್ಲಿ ರಾಷ್ಟ್ರದ ಹಿತಾಸಕ್ತಿಗೆ ಧಕ್ಕೆಯಾಗುವಂತಹ ಹೇಳಿಕೆಯನ್ನು ಅರ್ಜಿದಾರರು ನೀಡಿಲ್ಲ. ಸರ್ಕಾರದ ಯೋಜನೆಗಳನ್ನು ಟೀಕಿಸುವುದನ್ನು ದೇಶದ್ರೋಹ ಅಥವಾ ಧರ್ಮ ದ್ವೇಷ ಸೃಷ್ಟಿಸುವ ಕೃತ್ಯವೆಂದು ಪರಿಗಣಿಸಲು ಸಾಧ್ಯವಿಲ್ಲ . ಮೇಲ್ನೋಟಕ್ಕೆ ಅರ್ಜಿದಾರರನ್ನು ಬಂಧಿಸುವ ಅಗತ್ಯವಿಲ್ಲವೆಂಬುದು ಕಂಡು ಬರುತ್ತದೆ ಎನ್ನುವ ಮೂಲಕ ಲಕ್ಷದ್ವೀಪ ಆಡಳಿತದ ವಾದವನ್ನು ತಳ್ಳಿ ಹಾಕಿತು.

ಲಕ್ಷದ್ವೀಪ ಬಿಜೆಪಿಯ 15 ಮುಖಂಡರು ಆಯಿಷಾ ಸುಲ್ತಾನಾ ವಿರುದ್ಧ ಪ್ರಕರಣವನ್ನು ದಾಖಲಿಸಿರವುದನ್ನು ಖಂಡಿಸಿ ಪಕ್ಷಕ್ಕೆ ರಾಜೀನಾಮೆಯನ್ನು ನೀಡಿ ಪ್ರತಿಭಟಿಸಿದ್ದಾರೆ. ಹೊಸ ಆಡಳಿತಾಧಿಕಾರಿ ಪ್ರಪುಲ್ ಖೋಡಾ ಪಟೇಲ್ ಅವರ ಯೋಜನೆಗಳಿಂದ ಲಕ್ಷದ್ವೀಪದ ಜನ ಜೀವನ ಮತ್ತು ಸಂಸ್ಕೃತಿ ಹಾಳಾಗುತ್ತಿರುವುದು ಬಿಜೆಪಿಗೂ ಗೊತ್ತಿದೆ ಎಂದು ಪ್ರತಿಭಟನಾನಿರತ ಬಿಜೆಪಿ ಮುಖಂಡರು ಹೇಳಿದ್ದಾರೆ.


ಇದನ್ನೂ ಓದಿ: ಲಕ್ಷದ್ವೀಪ: ಆಡಳಿತಾಧಿಕಾರಿಯ 2 ವಿವಾದಾತ್ಮಕ ಆದೇಶಗಳಿಗೆ ಕೇರಳ ಹೈಕೋರ್ಟ್ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...