Homeಮುಖಪುಟಆಯಿಷಾ ಸುಲ್ತಾನಾ ಹೇಳಿಕೆ ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧವಾಗಿಲ್ಲ: ಕೇರಳ ಹೈಕೋರ್ಟ್

ಆಯಿಷಾ ಸುಲ್ತಾನಾ ಹೇಳಿಕೆ ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧವಾಗಿಲ್ಲ: ಕೇರಳ ಹೈಕೋರ್ಟ್

- Advertisement -
- Advertisement -

ಲಕ್ಷದ್ವೀಪ ಮೂಲದ ನಟಿ ಮತ್ತು ನಿರ್ಮಾಪಕಿ ಆಯಿಷಾ ಸುಲ್ತಾನಾ ಅವರ ವಿರುದ್ಧದ ರಾಷ್ಟ್ರದ್ರೋಹ ಪ್ರಕರಣದಲ್ಲಿ ಕೇರಳ ಹೈಕೋರ್ಟ್ ಆಯಿಷಾ ಅವರಿಗೆ ನಿನ್ನೆ ನಿರೀಕ್ಷಣಾ ಜಾಮೀನು ನೀಡಿದೆ. ಪ್ರಕರಣದ ವಿಚಾರಣೆ ವೇಳೆ “ಆಯಿಷಾ ಸುಲ್ತಾನ್ ಅವರ ಹೇಳಿಕೆಗಳು ಭಾರತದ ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧವಾಗಿಲ್ಲ ಹಾಗೂ ಸಮುದಾಯಗಳ ನಡುವೆ ಯಾವುದೇ ದ್ವೇಷವನ್ನು ಹುಟ್ಟುಹಾಕುವಂತದಲ್ಲ” ಎಂದು ಕೇರಳ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

50,000 ಮೊತ್ತದ ಬಾಂಡ್ ಹಾಗೂ ಇಬ್ಬರು ಶ್ಯೂರಿಟಿಗಳನ್ನು ಪಡೆದುಕೊಂಡು ಆಯಿಷಾ ಸುಲ್ತಾನಾ ಅವರಿಗೆ ನಿರೀಕ್ಷಣಾ ಜಾಮೀನು ನೀಡಿದ ನ್ಯಾಯಾಲಯವು ಲಕ್ಷದ್ವೀಪ ಆಡಳಿತದ ವಾದವನ್ನು ತಳ್ಳಿ ಹಾಕಿತು. ಕಳೆದ ವಾರ ಆಯಿಷಾ ಸಲ್ತಾನಾ ಅವರ ಬಂಧನಕ್ಕೆ ತಾತ್ಕಾಲಿಕ ತಡೆ ನೀಡಿದ್ದ ಕೇರಳ ಹೈಕೋರ್ಟ್ ನಿನ್ನೆ ಶುಕ್ರವಾರ CrPC ಸೆಕ್ಷನ್ 432 ರ ಅಡಿಯಲ್ಲಿ ಸುಲ್ತಾನಾ ಅವರಿಗೆ ನಿರೀಕ್ಷಿಣಾ ಜಾಮೀನು ನೀಡಿದೆ.

ಕೇರಳ ಹೈಕೋರ್ಟ್‌ನಲ್ಲಿ ಲಕ್ಷದ್ವೀಪ ಆಡಳಿತವು ಗುರುವಾರ ಮತ್ತೊಂದು ಅರ್ಜಿಯನ್ನು ಸಲ್ಲಿಸಿ ಆಯಿಷಾ ಸುಲ್ತಾನಾ ಅವರು ಕೋವಿಡ್ ನಿಯಮಾವಳಿಗಳನ್ನು ಉಲ್ಲಂಘಿಸಿದ್ದಾರೆ ಎಂಬ ಆರೊಪ ಮಾಡಿತ್ತು.

ಕಮರತ್ತಿ ಪೊಲೀಸರು ಬಿಜೆಪಿ ಲಕ್ಷದ್ವೀಪ ಮುಖ್ಯಸ್ಥ ಸಿ. ಅಬ್ದುಲ್ ಖಾದಿರ್ ಹಾಜಿ ಅವರ ದೂರಿನ ಆಧಾರದ ಮೇಲೆ IPC ಸೆಕ್ಷನ್ 124A ( ದೇಶದ್ರೋಹ) ಮತ್ತು ಸೆಕ್ಷನ್ 153B (ಸಮುದಾಯಗಳ ನಡುವೆ ದ್ವೇಷ ಭಿತ್ತುವ ಕೃತ್ಯ) ಅಡಿಯಲ್ಲಿ FIR  ದಾಖಲಿಸಿಕೊಂಡಿತ್ತು.

ಲಕ್ಷದ್ವೀಪದಲ್ಲಿ ಕೋವಿಡ್ ನಿರ್ಬಂಧಗಳನ್ನು ಸಡಿಲಿಸಿದ್ದರಿಂದ ಕೊರೋನಾ ಎರಡನೇ ಅಲೆಯೂ ತೀವ್ರವಾಗಿ ಹರಡಲು ಕಾರಣವಾಯಿತು. ನಿರ್ಬಂಧಗಳನ್ನು ಸಡಿಲಿಸಿದ ಲಕ್ಷದ್ವೀಪ ಆಡಳಿತಾಧಿಕಾರಿಯ ನಿರ್ಧಾರವನ್ನು ಬಯೋ ವೆಪನ್ ಆಗಿ ಪರಿಣಮಿಸಿತು ಎಂದಷ್ಟೇ ಹೇಳಿದ್ದಾರೆ. ರಾಷ್ಟ್ರೀಯ ಹಿತಾಸಕ್ತಿಗೆ ಧಕ್ಕೆ ಮಾಡುವ ಯಾವ ಉದ್ದೇಶವೂ ಇದರಲ್ಲಿ ಇಲ್ಲ ಎಂದು ಆಯಿಷಾ ಸುಲ್ತಾನ್ ಪರ ವಕೀಲರು ಹೈಕೋರ್ಟ್‌ನಲ್ಲಿ ವಾದಿಸಿದ್ದರು.

ಶುಕ್ರವಾರ ಆಯಿಷಾ ಸುಲ್ತಾನಾ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್ ಪ್ರಕರಣದಲ್ಲಿ ರಾಷ್ಟ್ರದ ಹಿತಾಸಕ್ತಿಗೆ ಧಕ್ಕೆಯಾಗುವಂತಹ ಹೇಳಿಕೆಯನ್ನು ಅರ್ಜಿದಾರರು ನೀಡಿಲ್ಲ. ಸರ್ಕಾರದ ಯೋಜನೆಗಳನ್ನು ಟೀಕಿಸುವುದನ್ನು ದೇಶದ್ರೋಹ ಅಥವಾ ಧರ್ಮ ದ್ವೇಷ ಸೃಷ್ಟಿಸುವ ಕೃತ್ಯವೆಂದು ಪರಿಗಣಿಸಲು ಸಾಧ್ಯವಿಲ್ಲ . ಮೇಲ್ನೋಟಕ್ಕೆ ಅರ್ಜಿದಾರರನ್ನು ಬಂಧಿಸುವ ಅಗತ್ಯವಿಲ್ಲವೆಂಬುದು ಕಂಡು ಬರುತ್ತದೆ ಎನ್ನುವ ಮೂಲಕ ಲಕ್ಷದ್ವೀಪ ಆಡಳಿತದ ವಾದವನ್ನು ತಳ್ಳಿ ಹಾಕಿತು.

ಲಕ್ಷದ್ವೀಪ ಬಿಜೆಪಿಯ 15 ಮುಖಂಡರು ಆಯಿಷಾ ಸುಲ್ತಾನಾ ವಿರುದ್ಧ ಪ್ರಕರಣವನ್ನು ದಾಖಲಿಸಿರವುದನ್ನು ಖಂಡಿಸಿ ಪಕ್ಷಕ್ಕೆ ರಾಜೀನಾಮೆಯನ್ನು ನೀಡಿ ಪ್ರತಿಭಟಿಸಿದ್ದಾರೆ. ಹೊಸ ಆಡಳಿತಾಧಿಕಾರಿ ಪ್ರಪುಲ್ ಖೋಡಾ ಪಟೇಲ್ ಅವರ ಯೋಜನೆಗಳಿಂದ ಲಕ್ಷದ್ವೀಪದ ಜನ ಜೀವನ ಮತ್ತು ಸಂಸ್ಕೃತಿ ಹಾಳಾಗುತ್ತಿರುವುದು ಬಿಜೆಪಿಗೂ ಗೊತ್ತಿದೆ ಎಂದು ಪ್ರತಿಭಟನಾನಿರತ ಬಿಜೆಪಿ ಮುಖಂಡರು ಹೇಳಿದ್ದಾರೆ.


ಇದನ್ನೂ ಓದಿ: ಲಕ್ಷದ್ವೀಪ: ಆಡಳಿತಾಧಿಕಾರಿಯ 2 ವಿವಾದಾತ್ಮಕ ಆದೇಶಗಳಿಗೆ ಕೇರಳ ಹೈಕೋರ್ಟ್ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....