Homeಮುಖಪುಟಅಯೋಧ್ಯೆ: ಬಾಬರಿಗಿಂತ 4 ಪಟ್ಟು ದೊಡ್ಡ ಮಸೀದಿ - ಮಸೀದಿಗಿಂತ 6 ಪಟ್ಟು ದೊಡ್ಡ ಆಸ್ಪತ್ರೆ!

ಅಯೋಧ್ಯೆ: ಬಾಬರಿಗಿಂತ 4 ಪಟ್ಟು ದೊಡ್ಡ ಮಸೀದಿ – ಮಸೀದಿಗಿಂತ 6 ಪಟ್ಟು ದೊಡ್ಡ ಆಸ್ಪತ್ರೆ!

"ನೀಲನಕ್ಷೆಯ ಪ್ರಕಾರ ಧನ್ನಿಪುರ ಗ್ರಾಮದಲ್ಲಿ ನಿರ್ಮಾಣವಾಗಲಿರುವ ಬಹುಮಹಡಿ ಸಂಕೀರ್ಣದಲ್ಲಿ ಮಸೀದಿ ಸೇರಿದಂತೆ, ಒಂದು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಸಮುದಾಯ ಅಡಿಗೆ ಮನೆ ಮತ್ತು ವಸ್ತು ಸಂಗ್ರಹಾಲಯ ಮತ್ತು ಇತರೆ ಸೌಲಭ್ಯಗಳು ಇರಲಿದೆ"

- Advertisement -
- Advertisement -

ಅಯೋಧ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ತೀರ್ಪಿನ ಪ್ರಕಾರ ಇಲ್ಲಿ ಮಸೀದಿ ನಿರ್ಮಾಣಕ್ಕೆಂದು ನೀಡಿರುವ 5 ಎಕರೆ ಭೂಮಿಯಲ್ಲಿ ಬಾಬರಿ ಮಸೀದಿಗಿಂತ 4 ಪಟ್ಟು ದೊಡ್ಡ ಮಸೀದಿಯನ್ನು ನಿರ್ಮಿಸಲಾಗುತ್ತಿದೆ. ಜೊತೆಗೆ ಈ ಮಸೀದಿಗಿಂತ 6 ಪಟ್ಟು ದೊಡ್ಡ ಆಸ್ಪತ್ರೆಯೂ ನಿರ್ಮಾಣವಾಗಲಿದೆ.

“ಇಲ್ಲಿ ನಿರ್ಮಾಣವಾಗುವ ಮಸೀದಿಯ ವಿಶೇಷವೆಂದರೆ ಭಾರತದ ಇಸ್ಲಾಮಿಕ್ ಕಟ್ಟಡಗಳಲ್ಲಿ ಸಾಮಾನ್ಯವಾಗಿ ಕಂಡುಬರುವ ಗುಮ್ಮಟಗಳು, ಕಮಾನುಗಳು ಅಥವಾ ಸ್ತಂಭಗಳು ಇರುವುದಿಲ್ಲ” ಎಂದು ಇಂಡೋ- ಇಸ್ಲಾಮಿಕ್ ಕಲ್ಚರಲ್ ಫೌಂಡೇಷನ್‍ನ ಸದಸ್ಯರ ಜತೆಗೆ ಮಸೀದಿಯ ನೀಲನಕ್ಷೆಯನ್ನು ಶನಿವಾರ ಬಿಡುಗಡೆ ಮಾಡಿದ ವಾಸ್ತುಶಿಲ್ಪಿ ಎಸ್.ಎಂ.ಅಖ್ತರ್ ಹೇಳಿದ್ದಾರೆ.

ಇದನ್ನೂ ಓದಿ: Big Breaking: ನೇಪಾಳ ಸಂಸತ್ತು ವಿಸರ್ಜನೆಗೆ ಪ್ರಧಾನಿ ಕೆ ಪಿ ಶರ್ಮಾ ಒಲಿ ನಿರ್ಧಾರ!

ಧನ್ನಿಪುರ ಗ್ರಾಮದಲ್ಲಿ ನಿರ್ಮಾಣವಾಗಲಿರುವ ಬಹುಮಹಡಿ ಸಂಕೀರ್ಣದಲ್ಲಿ ಮಸೀದಿ ಸೇರಿದಂತೆ ಒಂದು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಸಮುದಾಯ ಅಡಿಗೆ ಮನೆ ಮತ್ತು ವಸ್ತು ಸಂಗ್ರಹಾಲಯ ಇರುತ್ತದೆ.

ಇದನ್ನೂ ಓದಿ: 1 ಮಿಲಿಯನ್ ವಂಚನೆ: ನೀರವ್ ಮೋದಿ ಸಹೋದರನ ಮೇಲೆ ಅಮೆರಿಕಾದಲ್ಲಿ ಪ್ರಕರಣ ದಾಖಲು!

“2000 ಮಂದಿಗೆ ನಮಾಜ್ ಸಲ್ಲಿಸಲು ಅವಕಾಶವಾಗುವ ವಿಶಾಲ ಮಸೀದಿಯು ಬಾಬರಿ ಮಸೀದಿಗಿಂತ ನಾಲ್ಕು ಪಟ್ಟು ದೊಡ್ಡದಿರುತ್ತದೆ. 300 ಹಾಸಿಗೆಗಳ ಆಸ್ಪತ್ರೆ ಸಂಕೀರ್ಣ, ವಿಸ್ತೀರ್ಣದಲ್ಲಿ ಮಸೀದಿಯ ಆರು ಪಟ್ಟು ದೊಡ್ಡದಾಗಿರುತ್ತದೆ. ಜಾಗತಿಕ ಹವಾಮಾನ ಬದಲಾವಣೆಯನ್ನು ಗಮನದಲ್ಲಿಟ್ಟುಕೊಂಡು ಶೂನ್ಯ ಇಂಗಾಲ ಪರಿಕಲ್ಪನೆ ಹೊಂದಲಾಗಿದೆ” ಎಂದು ಐಐಸಿಎಫ್ ಕಾರ್ಯದರ್ಶಿ ಅಖ್ತರ್ ಹುಸೇನ್ ಹೇಳಿದ್ದಾರೆ.

ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಪಕ್ಷಾಂತರದ ಬಿರುಗಾಳಿ: ಬಿಜೆಪಿ ಸೇರಿದ 9 ಶಾಸಕರು!

“ಅಮೆಜಾನ್‍ನ ಅರಣ್ಯ ಸೇರಿದಂತೆ ವಿಶ್ವದ ವಿವಿಧ ಅರಣ್ಯಗಳಿಂದ ತಂದ ಗಿಡಮರಗಳನ್ನು ವಿಶೇಷವಾಗಿ ಬೆಳೆಸಲಾಗುತ್ತದೆ. ಇದು ಹಸಿರು ಸಂದೇಶದ ಜತೆಗೆ ಶಾಂತಿ, ಸಾಮರಸ್ಯ ಮತ್ತು ಕೋಮು ಸೌಹಾರ್ದತೆಯ ಸಂದೇಶವನ್ನು ಸಾರುತ್ತದೆ” ಎಂದು ಅವರು ಹೇಳಿದರು.

3,500 ಚದರ ಮೀಟರ್ ಭೂಮಿಯಲ್ಲಿ ಮಸೀದಿಯನ್ನು ನಿರ್ಮಿಸಲಾಗುತ್ತಿದ್ದು, ಆಸ್ಪತ್ರೆ ಮತ್ತು ಇತರ ಸೌಲಭ್ಯಗಳು 24,150 ಚದರ ಮೀಟರ್ ವಿಸ್ತೀರ್ಣದಲ್ಲಿರುತ್ತವೆ. ಫೈಜಾಬಾದ್ ಪಂಚಾಯತ್ ಜಿಲ್ಲಾ ಮಂಡಳಿಯು ನೀಲನಕ್ಷೆ ಅಂಗೀಕರಿಸಿದ ಕೂಡಲೇ ಯೋಜನೆಯ ಕಾಮಗಾರಿ ಪ್ರಾರಂಭವಾಗುತ್ತದೆ. ಎರಡು ವರ್ಷಗಳಲ್ಲಿ ರಚನೆ ಸಿದ್ಧವಾಗುವ ನಿರೀಕ್ಷೆಯಿದೆ.


ಇದನ್ನೂ ಓದಿ: ರಾಜ್ಯ ಬಿಜೆಪಿ ಸರ್ಕಾರ ಖಾಸಗಿ ಶಾಲೆಗಳ ಜೊತೆ ‍‍ಷಾಮೀಲಾಗಿದೆ: ಸಿದ್ದರಾಮಯ್ಯ ಸರಣಿ ಟ್ವೀಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...