Homeಮುಖಪುಟಅಯೋಧ್ಯೆ: ಬಾಬರಿಗಿಂತ 4 ಪಟ್ಟು ದೊಡ್ಡ ಮಸೀದಿ - ಮಸೀದಿಗಿಂತ 6 ಪಟ್ಟು ದೊಡ್ಡ ಆಸ್ಪತ್ರೆ!

ಅಯೋಧ್ಯೆ: ಬಾಬರಿಗಿಂತ 4 ಪಟ್ಟು ದೊಡ್ಡ ಮಸೀದಿ – ಮಸೀದಿಗಿಂತ 6 ಪಟ್ಟು ದೊಡ್ಡ ಆಸ್ಪತ್ರೆ!

"ನೀಲನಕ್ಷೆಯ ಪ್ರಕಾರ ಧನ್ನಿಪುರ ಗ್ರಾಮದಲ್ಲಿ ನಿರ್ಮಾಣವಾಗಲಿರುವ ಬಹುಮಹಡಿ ಸಂಕೀರ್ಣದಲ್ಲಿ ಮಸೀದಿ ಸೇರಿದಂತೆ, ಒಂದು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಸಮುದಾಯ ಅಡಿಗೆ ಮನೆ ಮತ್ತು ವಸ್ತು ಸಂಗ್ರಹಾಲಯ ಮತ್ತು ಇತರೆ ಸೌಲಭ್ಯಗಳು ಇರಲಿದೆ"

- Advertisement -
- Advertisement -

ಅಯೋಧ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ತೀರ್ಪಿನ ಪ್ರಕಾರ ಇಲ್ಲಿ ಮಸೀದಿ ನಿರ್ಮಾಣಕ್ಕೆಂದು ನೀಡಿರುವ 5 ಎಕರೆ ಭೂಮಿಯಲ್ಲಿ ಬಾಬರಿ ಮಸೀದಿಗಿಂತ 4 ಪಟ್ಟು ದೊಡ್ಡ ಮಸೀದಿಯನ್ನು ನಿರ್ಮಿಸಲಾಗುತ್ತಿದೆ. ಜೊತೆಗೆ ಈ ಮಸೀದಿಗಿಂತ 6 ಪಟ್ಟು ದೊಡ್ಡ ಆಸ್ಪತ್ರೆಯೂ ನಿರ್ಮಾಣವಾಗಲಿದೆ.

“ಇಲ್ಲಿ ನಿರ್ಮಾಣವಾಗುವ ಮಸೀದಿಯ ವಿಶೇಷವೆಂದರೆ ಭಾರತದ ಇಸ್ಲಾಮಿಕ್ ಕಟ್ಟಡಗಳಲ್ಲಿ ಸಾಮಾನ್ಯವಾಗಿ ಕಂಡುಬರುವ ಗುಮ್ಮಟಗಳು, ಕಮಾನುಗಳು ಅಥವಾ ಸ್ತಂಭಗಳು ಇರುವುದಿಲ್ಲ” ಎಂದು ಇಂಡೋ- ಇಸ್ಲಾಮಿಕ್ ಕಲ್ಚರಲ್ ಫೌಂಡೇಷನ್‍ನ ಸದಸ್ಯರ ಜತೆಗೆ ಮಸೀದಿಯ ನೀಲನಕ್ಷೆಯನ್ನು ಶನಿವಾರ ಬಿಡುಗಡೆ ಮಾಡಿದ ವಾಸ್ತುಶಿಲ್ಪಿ ಎಸ್.ಎಂ.ಅಖ್ತರ್ ಹೇಳಿದ್ದಾರೆ.

ಇದನ್ನೂ ಓದಿ: Big Breaking: ನೇಪಾಳ ಸಂಸತ್ತು ವಿಸರ್ಜನೆಗೆ ಪ್ರಧಾನಿ ಕೆ ಪಿ ಶರ್ಮಾ ಒಲಿ ನಿರ್ಧಾರ!

ಧನ್ನಿಪುರ ಗ್ರಾಮದಲ್ಲಿ ನಿರ್ಮಾಣವಾಗಲಿರುವ ಬಹುಮಹಡಿ ಸಂಕೀರ್ಣದಲ್ಲಿ ಮಸೀದಿ ಸೇರಿದಂತೆ ಒಂದು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಸಮುದಾಯ ಅಡಿಗೆ ಮನೆ ಮತ್ತು ವಸ್ತು ಸಂಗ್ರಹಾಲಯ ಇರುತ್ತದೆ.

ಇದನ್ನೂ ಓದಿ: 1 ಮಿಲಿಯನ್ ವಂಚನೆ: ನೀರವ್ ಮೋದಿ ಸಹೋದರನ ಮೇಲೆ ಅಮೆರಿಕಾದಲ್ಲಿ ಪ್ರಕರಣ ದಾಖಲು!

“2000 ಮಂದಿಗೆ ನಮಾಜ್ ಸಲ್ಲಿಸಲು ಅವಕಾಶವಾಗುವ ವಿಶಾಲ ಮಸೀದಿಯು ಬಾಬರಿ ಮಸೀದಿಗಿಂತ ನಾಲ್ಕು ಪಟ್ಟು ದೊಡ್ಡದಿರುತ್ತದೆ. 300 ಹಾಸಿಗೆಗಳ ಆಸ್ಪತ್ರೆ ಸಂಕೀರ್ಣ, ವಿಸ್ತೀರ್ಣದಲ್ಲಿ ಮಸೀದಿಯ ಆರು ಪಟ್ಟು ದೊಡ್ಡದಾಗಿರುತ್ತದೆ. ಜಾಗತಿಕ ಹವಾಮಾನ ಬದಲಾವಣೆಯನ್ನು ಗಮನದಲ್ಲಿಟ್ಟುಕೊಂಡು ಶೂನ್ಯ ಇಂಗಾಲ ಪರಿಕಲ್ಪನೆ ಹೊಂದಲಾಗಿದೆ” ಎಂದು ಐಐಸಿಎಫ್ ಕಾರ್ಯದರ್ಶಿ ಅಖ್ತರ್ ಹುಸೇನ್ ಹೇಳಿದ್ದಾರೆ.

ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಪಕ್ಷಾಂತರದ ಬಿರುಗಾಳಿ: ಬಿಜೆಪಿ ಸೇರಿದ 9 ಶಾಸಕರು!

“ಅಮೆಜಾನ್‍ನ ಅರಣ್ಯ ಸೇರಿದಂತೆ ವಿಶ್ವದ ವಿವಿಧ ಅರಣ್ಯಗಳಿಂದ ತಂದ ಗಿಡಮರಗಳನ್ನು ವಿಶೇಷವಾಗಿ ಬೆಳೆಸಲಾಗುತ್ತದೆ. ಇದು ಹಸಿರು ಸಂದೇಶದ ಜತೆಗೆ ಶಾಂತಿ, ಸಾಮರಸ್ಯ ಮತ್ತು ಕೋಮು ಸೌಹಾರ್ದತೆಯ ಸಂದೇಶವನ್ನು ಸಾರುತ್ತದೆ” ಎಂದು ಅವರು ಹೇಳಿದರು.

3,500 ಚದರ ಮೀಟರ್ ಭೂಮಿಯಲ್ಲಿ ಮಸೀದಿಯನ್ನು ನಿರ್ಮಿಸಲಾಗುತ್ತಿದ್ದು, ಆಸ್ಪತ್ರೆ ಮತ್ತು ಇತರ ಸೌಲಭ್ಯಗಳು 24,150 ಚದರ ಮೀಟರ್ ವಿಸ್ತೀರ್ಣದಲ್ಲಿರುತ್ತವೆ. ಫೈಜಾಬಾದ್ ಪಂಚಾಯತ್ ಜಿಲ್ಲಾ ಮಂಡಳಿಯು ನೀಲನಕ್ಷೆ ಅಂಗೀಕರಿಸಿದ ಕೂಡಲೇ ಯೋಜನೆಯ ಕಾಮಗಾರಿ ಪ್ರಾರಂಭವಾಗುತ್ತದೆ. ಎರಡು ವರ್ಷಗಳಲ್ಲಿ ರಚನೆ ಸಿದ್ಧವಾಗುವ ನಿರೀಕ್ಷೆಯಿದೆ.


ಇದನ್ನೂ ಓದಿ: ರಾಜ್ಯ ಬಿಜೆಪಿ ಸರ್ಕಾರ ಖಾಸಗಿ ಶಾಲೆಗಳ ಜೊತೆ ‍‍ಷಾಮೀಲಾಗಿದೆ: ಸಿದ್ದರಾಮಯ್ಯ ಸರಣಿ ಟ್ವೀಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...