Homeಮುಖಪುಟಡಿ.6 ಬಾಬರಿ ಮಸೀದಿ ಧ್ವಂಸ ದಿನ: ಮಥುರಾದಲ್ಲಿ ನಿಷೇದಾಜ್ಞೆ, ಪೊಲೀಸ್ ಬಿಗಿ ಭದ್ರತೆ

ಡಿ.6 ಬಾಬರಿ ಮಸೀದಿ ಧ್ವಂಸ ದಿನ: ಮಥುರಾದಲ್ಲಿ ನಿಷೇದಾಜ್ಞೆ, ಪೊಲೀಸ್ ಬಿಗಿ ಭದ್ರತೆ

- Advertisement -
- Advertisement -

ಬಾಬರಿ ಮಸೀದಿ ಕೆಡವಿದ ದಿನವಾದ ಡಿಸೆಂಬರ್ 6ರಂದು ಯಾವುದೇ ಅಹಿತಕರ ಘಟನೆ ನಡೆಯದಂತೆ ಮಥುರಾದಲ್ಲಿ ನಿಷೇದಾಜ್ಞೆ ಹೇರಲಾಗಿದ್ದು, ಭದ್ರತೆಯನ್ನು ಬಿಗಿಗೊಳಿಸಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಅಯೋಧ್ಯೆಯಲ್ಲಿ 1992ರ ಡಿಸೆಂಬರ್‌ 6 ರಂದು ಬಾಬರಿ ಮಸೀದಿಯನ್ನು ಧ್ವಂಸಗೊಳಿಸಲಾಗಿತ್ತು.

ಅಖಿಲ ಭಾರತ ಹಿಂದೂ ಮಹಾಸಭಾ, ನಾರಾಯಣಿ ಸೇನೆ, ಶ್ರೀಕೃಷ್ಣ ಜನ್ಮಭೂಮಿ ನಿರ್ಮಾಣ್ ನ್ಯಾಸ್ ಮತ್ತು ಶ್ರೀಕೃಷ್ಣ ಮುಕ್ತಿ ದಳ ಎಂಬ ನಾಲ್ಕು ಬಲಪಂಥೀಯ ಗುಂಪುಗಳು ಈ ಹಿಂದೆ ಇಲ್ಲಿ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ಕೋರಿದ್ದವು. ಅಲ್ಲದೇ ಅಖಿಲ ಭಾರತ ಹಿಂದೂ ಮಹಾಸಭಾವು ದೇವರ ನಿಜವಾದ ಜನ್ಮಸ್ಥಳವು ಮಥುರಾ ದೇವಾಲಯದ ಬಳಿಯಿರುವ ಮಸೀದಿಯಲ್ಲಿದೆ. ಅಲ್ಲಿ ಕೃಷ್ಣನ ವಿಗ್ರಹವನ್ನು ಸ್ಥಾಪಿಸಲು ಅನುಮತಿ ನೀಡಬೇಕು ಎಂದು ಕೋರಿತ್ತು.

ಇದನ್ನೂ ಓದಿ: ಬಾಬರಿ ಮಸೀದಿ ಒಡೆದ ಆರೋಪಿಗಳನ್ನು ಖುಲಾಸೆಗೊಳಿಸಿ ತೀರ್ಪು ನೀಡಿದ್ದ ನ್ಯಾಯಾಧೀಶ ಯುಪಿ ಉಪಲೋಕಾಯುಕ್ತರಾಗಿ ನೇಮಕ

ಆದರೆ, ಶಾಂತಿ ಕದಡುವ ಯಾವುದೇ ಕಾರ್ಯಕ್ರಮಕ್ಕೂ ಅನುಮತಿ ನೀಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ನವನೀತ್ ಸಿಂಗ್ ಚಾಹಲ್ ಬಲಪಂಥೀಯ ಗುಂಪುಗಳ ಮನವಿಯನ್ನು ತಿರಸ್ಕರಿಸಿದ್ದರು.

ಶಾಹಿ ಈದ್ಗಾದಲ್ಲಿ ಮಹಾ ಜಲಾಭಿಷೇಕ ನಂತರ ಶುದ್ಧೀಕರಣಕ್ಕಾಗಿ ವಿಗ್ರಹವನ್ನು ಪ್ರತಿಷ್ಠಾಪಿಸುವುದಾಗಿ ಒಂದು ಗುಂಪಿನವರು ಹೇಳಿದ್ದರು. ಹೀಗಾಗಿ ಇವುಗಳನ್ನು ಗಮನದಲ್ಲಿಟ್ಟುಕೊಂಡು ಭದ್ರತಾ ಉದ್ದೇಶಗಳಿಂದ ಮಥುರಾವನ್ನು ಮೂರು ವಲಯಗಳಾಗಿ ವಿಂಗಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೇಶವ ದೇವ್ ದೇವಸ್ಥಾನ ಮತ್ತು ಶಾಹಿ ಈದ್ಗಾ ಪ್ರದೇಶವನ್ನು ಕೆಂಪು ವಲಯ ಎಂದು ಗುರುತಿಸಲಾಗಿದ್ದು ಅಲ್ಲಿ ಅತ್ಯಧಿಕ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

“ಮಥುರಾದ ಪ್ರತಿ ಪ್ರವೇಶ ದ್ವಾರಗಳಲ್ಲಿಯೂ ಸಾಕಷ್ಟು ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಮಥುರಾದಲ್ಲಿ ಸಿಆರ್‌ಪಿಸಿಯ ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಾಜ್ಞೆ ಈಗಾಗಲೇ ಜಾರಿಯಲ್ಲಿವೆ. ಒಂದು ಪ್ರದೇಶದಲ್ಲಿ ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ಜನರು ಸೇರುವುದನ್ನು ನಿಷೇಧಿಸಲಾಗಿದೆ” ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಗೌರವ್ ಗ್ರೋವರ್ ಹೇಳಿದ್ದಾರೆ.


ಇದನ್ನೂ ಓದಿ: ಬಾಬರಿ ಮಸೀದಿ ಧ್ವಂಸದ ಕತೆ ಹೇಳುವ ‘ರಾಮ್‌ ಕೆ ನಾಮ್’ ಸಾಕ್ಷ್ಯ ಚಿತ್ರ ಪ್ರದರ್ಶನ ಮಾಡಲಿರುವ ಜೆಎನ್‌ಯು ವಿದ್ಯಾರ್ಥಿ ಒಕ್ಕೂಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...