Homeಮುಖಪುಟಅಯೋಧ್ಯಾ ಪುಸ್ತಕ ಬಿಡುಗಡೆ: ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಮನೆಗೆ ಬೆಂಕಿ

ಅಯೋಧ್ಯಾ ಪುಸ್ತಕ ಬಿಡುಗಡೆ: ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಮನೆಗೆ ಬೆಂಕಿ

- Advertisement -
- Advertisement -

ಇತ್ತೀಚಿಗೆ ತಾನೇ ಅಯೋಧ್ಯಾ ಬಗ್ಗೆ ಪುಸ್ತಕ ಬರೆದಿದ್ದ ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್‌ರವರ ನೈನಿತಾಲ್‌ನಲ್ಲಿದ್ದ ಮನೆಗೆ ದುಷ್ಕರ್ಮಿಗಳು ಇಂದು ಬೆಂಕಿ ಹಚ್ಚಿದ್ದಾರೆ.

ಈ ಕುರಿತು ಸ್ವತಃ ಸಲ್ಮಾನ್ ಖುರ್ಷಿದ್‌ರವರೆ ತಮ್ಮ ಫೇಸ್‌ಬುಕ್ ಪುಟದಲ್ಲಿ ಮಾಹಿತಿ ನೀಡಿದ್ದು, ತಮ್ಮ ಮನೆಗೆ ಬೆಂಕಿ ಹಚ್ಚಿರುವುದರ ಫೋಟೊ, ವಿಡಿಯೋಗಳನ್ನು ಸಹ ಪೋಸ್ಟ್ ಮಾಡಿದ್ದಾರೆ. ಬಾಗಿಲಿಗೆ ಬೆಂಕಿ ಬಿದ್ದಿ ಧಗಧಗನೇ ಉರಿಯುವ ದೃಶ್ಯಗಳು ವಿಡಿಯೋದಲ್ಲಿವೆ.

ಪ್ರಕರಣದ ಕುರಿತು ರಾಕೇಶ್ ಕಪಿಲ್ ಸೇರಿ 20 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಡಿಜಿಐ (ಕುಮೌನ್) ನೀಲೇಶ್ ಆನಂದ್ ಹೇಳಿದ್ದಾರೆ.

ಸಲ್ಮಾನ್ ಖುರ್ಷಿದ್‌ ರವರು ತಮ್ಮ “ಸನ್‌ರೈಸ್ ಓವರ್ ಅಯೋಧ್ಯಾ: ನೇಷನ್‌ವುಡ್ ಇನ್ ಅವರ್ ಟೈಂ” ಎಂಬ ಪುಸ್ತಕವನ್ನು ನವೆಂಬರ್ 10 ರಂದು ಬಿಡುಗಡೆ ಮಾಡಿದ್ದರು. ಈ ಪುಸ್ತಕದ ಬಗ್ಗೆ ಬಿಜೆಪಿ ಪಕ್ಷವು ಅಪಸ್ವರವೆತ್ತಿತ್ತು. ಇದು ಹಿಂದುತ್ವಕ್ಕೆ ಮಾಡುವ ಅವಮಾನ ಎಂದು ಟೀಕಿಸಿತ್ತು. ಈ ಕುರಿತು ಖುರ್ಷಿದ್ ವಿರುದ್ಧ ದೂರು ಸಹ ದಾಖಲಾಗಿತ್ತು.

ಖುರ್ಷಿದ್ ತಮ್ಮ ಪುಸ್ತಕದಲ್ಲಿ “ಹಿಂದಿನ ಋಷಿಗಳು, ಸಂತರು ಹೇಳಿದ್ದ ಸನಾತನ ಧರ್ಮ ಮತ್ತು ಶಾಸ್ತ್ರೀಯ ಹಿಂದೂ ಧರ್ಮವಾದವನ್ನು ಇಂದಿನ ಉಗ್ರ ಹಿಂದುತ್ವವು ಪಕ್ಕಕ್ಕೆ ತಳ್ಳಿದೆ. ಹಿಂದುತ್ವವೆಂಬುದು ಇತ್ತೀಚಿನ ವರ್ಷಗಳಲ್ಲಿ ಎಲ್ಲಾ ಮಾನದಂಡಗಳಲ್ಲಿಯೂ ISIS ಮತ್ತು ಬೊಕೊ ಹರಾಮ್‌ನಂತಹ ಜಿಹಾದಿಸ್ಟ್ ಇಸ್ಲಾಂ ಗುಂಪುಗಳನ್ನು ಹೋಲುವ ರಾಜಕೀಯ ಆವೃತ್ತಿಯಾಗಿದೆ” ಎಂದು ಬರೆದಿದ್ದರು. ಇದಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿತ್ತು.

ಈ ಪುಸ್ತಕವು ಹಿಂದೂಗಳ ಭಾವನೆಗೆ ಘಾಸಿಯನ್ನುಂಟು ಮಾಡಿದೆ. ಕಾಂಗ್ರೆಸ್ ಮುಸ್ಲಿಮ ಮತಗಳಿಗಾಗಿ ಕೋಮುವಾದ ರಾಜಕೀಯ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿತ್ತು.

ಪುಸ್ತಕದ ಕುರಿತು ಕಾಂಗ್ರೆಸ್ ಒಳಗಿನಿಂದಲೇ ಟೀಕೆಗಳು ವ್ಯಕ್ತವಾಗಿದ್ದವು. ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ರವರು “ನಾವು ಹಿಂದುತ್ವವನ್ನು ರಾಜಕೀಯ ಸಿದ್ಧಾಂತವಾಗಿ ಒಪ್ಪದಿರಬಹುದು ಆದರೆ ಅದನ್ನು ಐಸಿಸ್ ಮತ್ತು ಜಿಹಾದಿಸ್ಟ್ ಇಸ್ಲಾಂನೊಂದಿಗೆ ಹೋಲಿಸುವುದು ವಾಸ್ತವಿಕವಾಗಿ ತಪ್ಪು ಮತ್ತು ಉತ್ಪ್ರೇಕ್ಷೆಯಾಗಿದೆ” ಎಂದು ಪ್ರತಿಕ್ರಿಯಿಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು, ಹಿಂದುತ್ವ ಮತ್ತು ಹಿಂದೂ ಧರ್ಮ ಎಂಬುದು ಒಂದೇ ಅಲ್ಲ. ಅವು ಎರಡು ವಿಭಿನ್ನ ಪರಿಕಲ್ಪನೆಗಳು ಎಂದಿದ್ದರು. ಮಹರಾಷ್ಟ್ರದ ವಾರ್ಧದಲ್ಲಿ ನಡೆದ ಪಕ್ಷದ ಕಾರ್ಯಕರ್ತರ ನಾಲ್ಕು ದಿನಗಳ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, “ಹಿಂದೂ ಧರ್ಮವು ಸಿಖ್ಖರನ್ನು ಅಥವಾ ಮುಸಲ್ಮಾನರನ್ನು ಹೊಡೆಯಿರಿ ಎಂದು ಹೇಳುತ್ತದೆಯೇ? ಹಾಗೆಂದು ಯಾವ ಪುಸ್ತಕದಲ್ಲಿ ಬರೆಯಲಾಗಿದೆ? ನಾನು ಉಪನಿಷತ್ತುಗಳನ್ನು ಓದಿದ್ದೇನೆ, ಎಲ್ಲಿಯೂ ಹಾಗೆ ಹೇಳಿಲ್ಲ. ಆದರೆ ಹಿಂದುತ್ವವು ಸಹಜವಾಗಿಯೇ ಏಕೆ ದ್ವೇಷಿಸಲು ಕರೆ ಕೊಡುತ್ತದೆ? ಹಿಂದುತ್ವ ಮತ್ತು ಹಿಂದೂ ಧರ್ಮದ ನಡುವೆ ವ್ಯತ್ಯಾಸವಿದೆ ಎಂದು ನಾವು ಹೇಳುತ್ತೇವೆ. ಇದು ಸರಳವಾದ ತರ್ಕ. ನೀವು ಹಿಂದೂ ಆಗಿದ್ದರೆ ನಿಮಗೆ ಹಿಂದುತ್ವ ಏಕೆ ಬೇಕು? ನಿಮಗೆ ಈ ಹೊಸ ಹೆಸರು ಏಕೆ ಬೇಕು?” ಎಂದು ಹೇಳಿದ್ದರು.


ಇದನ್ನೂ ಓದಿ: ಹಿಂದೂ ಧರ್ಮ ಮತ್ತು ಹಿಂದುತ್ವ ಒಂದೇ ಅಲ್ಲ: ಹಿಂದುತ್ವ ಎಂದರೆ ರಾಜಕೀಯ – ನಟಿ ರಮ್ಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...