Homeಮುಖಪುಟಅಯೋಧ್ಯಾ ಪುಸ್ತಕ ಬಿಡುಗಡೆ: ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಮನೆಗೆ ಬೆಂಕಿ

ಅಯೋಧ್ಯಾ ಪುಸ್ತಕ ಬಿಡುಗಡೆ: ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಮನೆಗೆ ಬೆಂಕಿ

- Advertisement -
- Advertisement -

ಇತ್ತೀಚಿಗೆ ತಾನೇ ಅಯೋಧ್ಯಾ ಬಗ್ಗೆ ಪುಸ್ತಕ ಬರೆದಿದ್ದ ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್‌ರವರ ನೈನಿತಾಲ್‌ನಲ್ಲಿದ್ದ ಮನೆಗೆ ದುಷ್ಕರ್ಮಿಗಳು ಇಂದು ಬೆಂಕಿ ಹಚ್ಚಿದ್ದಾರೆ.

ಈ ಕುರಿತು ಸ್ವತಃ ಸಲ್ಮಾನ್ ಖುರ್ಷಿದ್‌ರವರೆ ತಮ್ಮ ಫೇಸ್‌ಬುಕ್ ಪುಟದಲ್ಲಿ ಮಾಹಿತಿ ನೀಡಿದ್ದು, ತಮ್ಮ ಮನೆಗೆ ಬೆಂಕಿ ಹಚ್ಚಿರುವುದರ ಫೋಟೊ, ವಿಡಿಯೋಗಳನ್ನು ಸಹ ಪೋಸ್ಟ್ ಮಾಡಿದ್ದಾರೆ. ಬಾಗಿಲಿಗೆ ಬೆಂಕಿ ಬಿದ್ದಿ ಧಗಧಗನೇ ಉರಿಯುವ ದೃಶ್ಯಗಳು ವಿಡಿಯೋದಲ್ಲಿವೆ.

ಪ್ರಕರಣದ ಕುರಿತು ರಾಕೇಶ್ ಕಪಿಲ್ ಸೇರಿ 20 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಡಿಜಿಐ (ಕುಮೌನ್) ನೀಲೇಶ್ ಆನಂದ್ ಹೇಳಿದ್ದಾರೆ.

ಸಲ್ಮಾನ್ ಖುರ್ಷಿದ್‌ ರವರು ತಮ್ಮ “ಸನ್‌ರೈಸ್ ಓವರ್ ಅಯೋಧ್ಯಾ: ನೇಷನ್‌ವುಡ್ ಇನ್ ಅವರ್ ಟೈಂ” ಎಂಬ ಪುಸ್ತಕವನ್ನು ನವೆಂಬರ್ 10 ರಂದು ಬಿಡುಗಡೆ ಮಾಡಿದ್ದರು. ಈ ಪುಸ್ತಕದ ಬಗ್ಗೆ ಬಿಜೆಪಿ ಪಕ್ಷವು ಅಪಸ್ವರವೆತ್ತಿತ್ತು. ಇದು ಹಿಂದುತ್ವಕ್ಕೆ ಮಾಡುವ ಅವಮಾನ ಎಂದು ಟೀಕಿಸಿತ್ತು. ಈ ಕುರಿತು ಖುರ್ಷಿದ್ ವಿರುದ್ಧ ದೂರು ಸಹ ದಾಖಲಾಗಿತ್ತು.

ಖುರ್ಷಿದ್ ತಮ್ಮ ಪುಸ್ತಕದಲ್ಲಿ “ಹಿಂದಿನ ಋಷಿಗಳು, ಸಂತರು ಹೇಳಿದ್ದ ಸನಾತನ ಧರ್ಮ ಮತ್ತು ಶಾಸ್ತ್ರೀಯ ಹಿಂದೂ ಧರ್ಮವಾದವನ್ನು ಇಂದಿನ ಉಗ್ರ ಹಿಂದುತ್ವವು ಪಕ್ಕಕ್ಕೆ ತಳ್ಳಿದೆ. ಹಿಂದುತ್ವವೆಂಬುದು ಇತ್ತೀಚಿನ ವರ್ಷಗಳಲ್ಲಿ ಎಲ್ಲಾ ಮಾನದಂಡಗಳಲ್ಲಿಯೂ ISIS ಮತ್ತು ಬೊಕೊ ಹರಾಮ್‌ನಂತಹ ಜಿಹಾದಿಸ್ಟ್ ಇಸ್ಲಾಂ ಗುಂಪುಗಳನ್ನು ಹೋಲುವ ರಾಜಕೀಯ ಆವೃತ್ತಿಯಾಗಿದೆ” ಎಂದು ಬರೆದಿದ್ದರು. ಇದಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿತ್ತು.

ಈ ಪುಸ್ತಕವು ಹಿಂದೂಗಳ ಭಾವನೆಗೆ ಘಾಸಿಯನ್ನುಂಟು ಮಾಡಿದೆ. ಕಾಂಗ್ರೆಸ್ ಮುಸ್ಲಿಮ ಮತಗಳಿಗಾಗಿ ಕೋಮುವಾದ ರಾಜಕೀಯ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿತ್ತು.

ಪುಸ್ತಕದ ಕುರಿತು ಕಾಂಗ್ರೆಸ್ ಒಳಗಿನಿಂದಲೇ ಟೀಕೆಗಳು ವ್ಯಕ್ತವಾಗಿದ್ದವು. ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ರವರು “ನಾವು ಹಿಂದುತ್ವವನ್ನು ರಾಜಕೀಯ ಸಿದ್ಧಾಂತವಾಗಿ ಒಪ್ಪದಿರಬಹುದು ಆದರೆ ಅದನ್ನು ಐಸಿಸ್ ಮತ್ತು ಜಿಹಾದಿಸ್ಟ್ ಇಸ್ಲಾಂನೊಂದಿಗೆ ಹೋಲಿಸುವುದು ವಾಸ್ತವಿಕವಾಗಿ ತಪ್ಪು ಮತ್ತು ಉತ್ಪ್ರೇಕ್ಷೆಯಾಗಿದೆ” ಎಂದು ಪ್ರತಿಕ್ರಿಯಿಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು, ಹಿಂದುತ್ವ ಮತ್ತು ಹಿಂದೂ ಧರ್ಮ ಎಂಬುದು ಒಂದೇ ಅಲ್ಲ. ಅವು ಎರಡು ವಿಭಿನ್ನ ಪರಿಕಲ್ಪನೆಗಳು ಎಂದಿದ್ದರು. ಮಹರಾಷ್ಟ್ರದ ವಾರ್ಧದಲ್ಲಿ ನಡೆದ ಪಕ್ಷದ ಕಾರ್ಯಕರ್ತರ ನಾಲ್ಕು ದಿನಗಳ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, “ಹಿಂದೂ ಧರ್ಮವು ಸಿಖ್ಖರನ್ನು ಅಥವಾ ಮುಸಲ್ಮಾನರನ್ನು ಹೊಡೆಯಿರಿ ಎಂದು ಹೇಳುತ್ತದೆಯೇ? ಹಾಗೆಂದು ಯಾವ ಪುಸ್ತಕದಲ್ಲಿ ಬರೆಯಲಾಗಿದೆ? ನಾನು ಉಪನಿಷತ್ತುಗಳನ್ನು ಓದಿದ್ದೇನೆ, ಎಲ್ಲಿಯೂ ಹಾಗೆ ಹೇಳಿಲ್ಲ. ಆದರೆ ಹಿಂದುತ್ವವು ಸಹಜವಾಗಿಯೇ ಏಕೆ ದ್ವೇಷಿಸಲು ಕರೆ ಕೊಡುತ್ತದೆ? ಹಿಂದುತ್ವ ಮತ್ತು ಹಿಂದೂ ಧರ್ಮದ ನಡುವೆ ವ್ಯತ್ಯಾಸವಿದೆ ಎಂದು ನಾವು ಹೇಳುತ್ತೇವೆ. ಇದು ಸರಳವಾದ ತರ್ಕ. ನೀವು ಹಿಂದೂ ಆಗಿದ್ದರೆ ನಿಮಗೆ ಹಿಂದುತ್ವ ಏಕೆ ಬೇಕು? ನಿಮಗೆ ಈ ಹೊಸ ಹೆಸರು ಏಕೆ ಬೇಕು?” ಎಂದು ಹೇಳಿದ್ದರು.


ಇದನ್ನೂ ಓದಿ: ಹಿಂದೂ ಧರ್ಮ ಮತ್ತು ಹಿಂದುತ್ವ ಒಂದೇ ಅಲ್ಲ: ಹಿಂದುತ್ವ ಎಂದರೆ ರಾಜಕೀಯ – ನಟಿ ರಮ್ಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...