Homeಮುಖಪುಟಅಯೋಧ್ಯೆ | ದಲಿತ ಯುವತಿಯ ಕೊಲೆ ಪ್ರಕರಣ; ಮೂವರ ಬಂಧನ

ಅಯೋಧ್ಯೆ | ದಲಿತ ಯುವತಿಯ ಕೊಲೆ ಪ್ರಕರಣ; ಮೂವರ ಬಂಧನ

- Advertisement -
- Advertisement -

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಡೆದ ದಲಿತ ಯುವತಿಯ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಿಗ್ವಿಜಯ್ ಮತ್ತು ಅವರ ಸಹಚರರಾದ ವಿಜಯ್ ಸಾಹು ಮತ್ತು ಹರಿರಾಮ್ ಕೋರಿ ಅವರನ್ನು ಸೋಮವಾರ ಬಂಧಿಸಲಾಗಿದೆ ಎಂದು ವರದಿಯಾಗಿದೆ. ಆರೋಪಿ ದಿಗ್ವಿಜಯ್ ಸಂತ್ರಸ್ತ ಯುವತಿಯ ಹುಟ್ಟೂರು ಸಹ್ನಾವಾ ಮೂಲದವರು ಎಂದು ಎಸ್‌ಎಸ್‌ಪಿ ರಾಜ್‌ಕರಣ್ ನಯ್ಯರ್ ಅವರು ಹೇಳಿದ್ದಾರೆ. ಅಯೋಧ್ಯೆ

ಸಂತ್ರಸ್ತೆಯು ಆರೋಪಿ ದಿಗ್ವಿಜಯ್ ಜೊತೆ ಸ್ನೇಹದೊಂದಿಗೆ ಇದ್ದರು ಎಂದು ವರದಿಯಾಗಿದೆ. ಅವರ ನಡುವಿನ ಸ್ನೇಹ ಸಂಬಂಧವು ಯುವತಿಯ ಸಹೋದರನಿಗೆ ಎರಡು ತಿಂಗಳ ಹಿಂದೆ ಗೊತ್ತಾಗಿತ್ತು ಎಂದು ಪೊಲೀಸರು ಹೇಳಿದ್ದಾರೆ. ಸಂತ್ರಸ್ತ ಯುವತಿಯ ಸಹೋದರನು ಆರೋಪಿ ದಿಗ್ವಿಜಯ್‌ಗೆ ಹಲ್ಲೆ ನಡೆಸಿ ತನ್ನ ಸಹೋದರಿಯಿಂದ ದೂರವಿರಲು ಎಚ್ಚರಿಸಿದ್ದರು. ಈ ಘಟನೆಯಿಂದ ಅವಮಾನಿತನಾಗಿದ್ದ ದಿಗ್ವಿಜಯ್, ಸೇಡು ತೀರಿಸಿಕೊಳ್ಳಲು ಯುವತಿಯನ್ನು ಕೊಂದಿದ್ದಾನೆ ಎಂದು TNIE ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

22 ವರ್ಷದ ದಲಿತ ಯುವತಿಯು ಗುರುವಾರ ರಾತ್ರಿಯಿಂದ ಕಾಣೆಯಾಗಿದ್ದರು. ಶನಿವಾರ ಬೆಳಿಗ್ಗೆ ಅವರ ಮೃತದೇಹವು ಗ್ರಾಮದ ಹೊರಗಿನ ಒಣಗಿದ ಕಾಲುವೆಯಲ್ಲಿ ಪತ್ತೆಯಾಗಿತ್ತು. ಈ ವೇಳೆ ಮೃತದೇಹದಲ್ಲಿ ಹಲವಾರು ಗಾಯಗಳು ಕಂಡುಬಂದಿದ್ದು, ನಗ್ನ ದೇಹದ ಕೈಕಾಲುಗಳು ಮುರಿತಕ್ಕೊಳಗಾಗಿ, ಶರೀರವೂ ಛಿದ್ರಗೊಂಡಿತ್ತು ಎಂದು ವರದಿಗಳು ಉಲ್ಲೇಖಿಸಿವೆ. ಅಯೋಧ್ಯೆ

ಯುವತಿಯ ಕುಟುಂಬ ಮತ್ತು ಗ್ರಾಮಸ್ಥರು ಕೂಡಾ ಘಟನೆಯನ್ನು ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಎಂದು ಶಂಕಿಸಿದ್ದಾರೆ. ನಾಪತ್ತೆಯಾದ ಯುವತಿಯ ಬಗ್ಗೆ ಯಾವುದೇ ಸುಳಿವು ಸಿಗದಿದ್ದಾಗ, ಅವರ ಕುಟುಂಬಿಕರು ಸ್ಥಳೀಯ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ಶುಕ್ರವಾರ ರಾತ್ರಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಅಪಹರಣ ಪ್ರಕರಣ ದಾಖಲಿಸಿದ್ದಾರೆ. ಈ ಮಧ್ಯೆ, ಸಂತ್ರಸ್ತ ಯುವತಿಯ ನಗ್ನ ಮೃತದೇಹವನ್ನು ಯುವತಿಯ ಅಕ್ಕನ ಪತಿ ಗ್ರಾಮದ ಹೊರಗಿನ ಒಣಗಿದ ಚರಂಡಿಯಲ್ಲಿ ಕಂಡುಕೊಂಡಿದ್ದರು.

ಯುವತಿಯ ಕೈಕಾಲುಗಳನ್ನು ಹಗ್ಗದಿಂದ ಕಟ್ಟಲಾಗಿತ್ತು, ಇಡೀ ದೇಹದ ಮೇಲೆ ಗಾಯದ ಗುರುತುಗಳಿದ್ದವು ಮತ್ತು ಆಕೆಯ ಬಟ್ಟೆಗಳು ರಕ್ತದಲ್ಲಿ ತೊಯ್ದಿದ್ದು ಮೃತದೇಹದಿಂದ ಸ್ವಲ್ಪ ದೂರದಲ್ಲಿ ಕಂಡುಬಂದಿತ್ತು. ಪ್ರಾಥಮಿಕವಾಗಿ ಇದು ಕೊಲೆ ಪ್ರಕರಣದಂತೆ ಕಂಡುಬಂದಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಕೊತ್ವಾಲಿ ಪೊಲೀಸ್ ಠಾಣೆಯ ಉಸ್ತುವಾರಿ ಮನೋಜ್ ಶರ್ಮಾ ಶನಿವಾರ ತಿಳಿಸಿದ್ದರು.

ಇದನ್ನೂಓದಿ:  ಅಯೋಧ್ಯೆ | ದಲಿತ ಯುವತಿಯ ನಗ್ನ ಶವ ಪತ್ತೆ; ಸಾಮೂಹಿಕ ಅತ್ಯಾಚಾರ, ಕೊಲೆ ಶಂಕೆ

ಅಯೋಧ್ಯೆ | ದಲಿತ ಯುವತಿಯ ನಗ್ನ ಶವ ಪತ್ತೆ; ಸಾಮೂಹಿಕ ಅತ್ಯಾಚಾರ, ಕೊಲೆ ಶಂಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...