Homeಮುಖಪುಟಅಯೋಧ್ಯೆ ಅಭಿವೃದ್ಧಿ: ಆತಂಕದಲ್ಲಿರುವ ವ್ಯಾಪಾರಿಗಳ ಕೂಗು ಬಿಜೆಪಿಗೆ ಮುಳುವಾಗುವುದೇ?

ಅಯೋಧ್ಯೆ ಅಭಿವೃದ್ಧಿ: ಆತಂಕದಲ್ಲಿರುವ ವ್ಯಾಪಾರಿಗಳ ಕೂಗು ಬಿಜೆಪಿಗೆ ಮುಳುವಾಗುವುದೇ?

- Advertisement -
- Advertisement -

ಅಯೋಧ್ಯೆಯ ಹನುಮಾನ್ ಗರ್ಹಿ ದೇವಸ್ಥಾನದಿಂದ ಸಲ್ಪ ದೂರದಲ್ಲಿ 45 ವರ್ಷದ ರಂಜಿತಾ ಗುಪ್ತಾ ಅವರು ಕಲಾಕೃತಿಗಳನ್ನು ಮಾರಾಟ ಮಾಡುವ ಸಣ್ಣ ಅಂಗಡಿಯನ್ನು ನಡೆಸುತ್ತಿದ್ದಾರೆ.

ರಾಮಮಂದಿರದ ಭಾಗವಾಗಿ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ರಸ್ತೆ ವಿಸ್ತರಣೆ ಯೋಜನೆಯಿಂದಾಗಿ ರಂಜಿತಾ ತಮ್ಮ ಅಂಗಡಿಯನ್ನು ಕಳೆದುಕೊಳ್ಳುವ ಆತಂಕದಲ್ಲಿ ಕಳೆದ ಕೆಲವು ತಿಂಗಳುಗಳಿಂದಲೂ ಇದ್ದಾರೆ.

ರಂಜಿತಾ ಅವರಿಗೆ ತೊದಲು ಸಮಸ್ಯೆ ಇದೆ. ಹೀಗಾಗಿ ಅವರು ಮದುವೆಯಾಗುವುದು ಕಷ್ಟವಾಯಿತು. ಸಹೋದರನೇ ರಂಜಿತಾ ಅವರನ್ನು ಪೋಷಣೆ ಮಾಡುತ್ತಿದ್ದು, ರಂಜಿತಾ ಅಂಗಡಿಯನ್ನು ನಡೆಸುತ್ತಿದ್ದಾರೆ.

ರಾಮಮಂದಿರಕ್ಕೆ ತೆರಳುವ ಮುನ್ನ, ಹನುಮಂತನ ಬೃಹತ್ ರಚನೆಯನ್ನು ಹೊಂದಿರುವ ಹನುಮಾನ್ ಗರ್ಹಿ ದೇವಸ್ಥಾನಕ್ಕೆ ಭಕ್ತರು ಮೊದಲು ಭೇಟಿ ನೀಡಬೇಕೆಂಬ ಸಂಪ್ರದಾಯ ಇಲ್ಲಿದೆ. ಹೀಗಾಗಿ ಇಲ್ಲಿನ ವ್ಯಾಪಾರಿಗಳ ಜೀವನ ನೆಮ್ಮದಿಯಾಗಿ ಇತ್ತು.

ರಂಜಿತಾ ಅವರ ಅಂಗಡಿಯನ್ನು ಅವರ ಅಜ್ಜ ನಿರ್ಮಿಸಿದರು. ನಂತರ ಅವರ ತಂದೆ ನಡೆಸುತ್ತಿದ್ದರು. ತಂದೆಯ ಮರಣದ ನಂತರ, ರಂಜಿತಾ ತನ್ನ ಸಹೋದರನೊಂದಿಗೆ ಅಂಗಡಿಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿರಿ: ಭೂ ಹಗರಣ, ಬ್ರಾಹ್ಮಣರ ಮತಗಳು ಕೈ ತಪ್ಪುವ ಭಯ: ಅಯೋಧ್ಯೆಯ ಟಿಕೆಟ್‌ ಯೋಗಿ ಕಳೆದುಕೊಳ್ಳಲು ಕಾರಣವೇ?

ಭಗವಾನ್ ರಾಮನ ಫೋಟೋಗಳೊಂದಿಗೆ ಫೋಟೋ ಫ್ರೇಮ್‌ಗಳು, ಬ್ಯಾಗ್‌ಗಳು, ಧೂಪದ್ರವ್ಯದ ತುಂಡುಗಳು ಮತ್ತು ಇತರ ಕೆಲವು ವರ್ಣರಂಜಿತ ಪೂಜಾ ವಸ್ತುಗಳನ್ನು ಈ ಸಣ್ಣ ಅಂಗಡಿಯಲ್ಲಿ ಕಾಣಬಹುದು. ರಂಜಿತಾ ಮಾರಾಟ ಮಾಡುತ್ತಿರುವ ಬ್ಯಾಗ್‌‌ ಒಂದರ ಮೇಲೆ ‘ಜೈ ಶ್ರೀರಾಮ್‌’ ಎಂದಿರುವುದನ್ನು ನೋಡಬಹುದು.

ರಾಮ ಮಂದಿರ ರಸ್ತೆ ವಿಸ್ತರಣೆ ಯೋಜನೆಯಿಂದಾಗಿ ತನ್ನ ಅಂಗಡಿ ಶೀಘ್ರದಲ್ಲೇ ನೆಲಸಮವಾಗಲಿದೆ ಎಂದು ರಂಜಿತಾ ನೋವು ತೋಡಿಕೊಂಡರು.

PC: The Wire, Ismat Ara

ಅಯೋಧ್ಯೆ ಅಭಿವೃದ್ಧಿ ಯೋಜನೆ

ಅಯೋಧ್ಯೆಯ ಅಭಿವೃದ್ಧಿ ಯೋಜನೆಯ ಭಾಗವಾಗಿ ಹನುಮಾನ್ ಗರ್ಹಿ ಮಾರ್ಗದಲ್ಲಿನ ನೂರಾರು ಅಂಗಡಿಗಳಿರುವ ರಸ್ತೆಯ ಅಗಲೀಕರಣ ಮಾಡಲು ಉದ್ದೇಶಿಸಲಾಗಿದೆ. ಇದರ ವಿರುದ್ಧ 2021ರಲ್ಲಿಯೇ ವ್ಯಾಪಾರಿಗಳು ಪ್ರತಿಭಟಿಸಿದರು.

ಅಂಗಡಿಗಳ ಮಾಲೀಕರು ಹಲವಾರು ಮೆರವಣಿಗೆಗಳನ್ನು ನಡೆಸಿದರು. ಜಿಲ್ಲಾಧಿಕಾರಿಗಳ ಕಚೇರಿಯ ಹೊರಗೆ ಧರಣಿ ಕುಳಿತರು. ನಂತರ ಪತ್ರಗಳನ್ನೂ ಬರೆದರು. ಸುಮಾರು ಒಂದು ವರ್ಷ ವರ್ಷದಿಂದಲೂ ವ್ಯಾಪಾರಿಗಳು ಆಡಳಿತದ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ.

ತೆರವುಗೊಳಿಸುವ ಅಂಗಡಿಗಳಿಗೆ ನೀಡುವ ಪರಿಹಾರದ ಬಗ್ಗೆಯಾಗಲೀ, ಸ್ಥಳಾಂತರಗೊಳ್ಳುವವರಿಗೆ ಹೊಸ ಅಂಗಡಿಗಳಾಗಲಿ ನೀಡುವ ಕುರಿತು ಸ್ಪಷ್ಟತೆ ಇಲ್ಲ ಎಂದು ವ್ಯಾಪಾರಿಗಳು ಆರೋಪಿಸಿದ್ದಾರೆ.

2019ರಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಬಾಬರಿ ಮಸೀದಿ ಭೂಮಿಯನ್ನು ಸುಪ್ರೀಂ ಕೋರ್ಟ್ ನೀಡಿದ ನಂತರ ರಾಮಮಂದಿರ ನಿರ್ಮಾಣ ಯೋಜನೆ ತ್ವರಿತವಾಗಿ ಪ್ರಗತಿಯಲ್ಲಿದೆ.

ಚುನಾವಣಾ ರಾಜಕೀಯ

ಜಿಲ್ಲೆಯಲ್ಲಿ ಫೆಬ್ರವರಿ 27 ರಂದು ಚುನಾವಣೆ ನಡೆಯಲಿದ್ದು, ಪ್ರತಿಪಕ್ಷಗಳು ವ್ಯಾಪಾರಿಗಳ ಆಗ್ರಹವನ್ನು ಚುನಾವಣಾ ವಿಷಯವನ್ನಾಗಿ ಬಳಸುತ್ತಿವೆ.

ಬಿಜೆಪಿ ಅಭ್ಯರ್ಥಿ ವಿವೇಕ್ ಪ್ರಕಾಶ್ ಗುಪ್ತಾ ವಿರುದ್ಧ ಮತದಾರರನ್ನು ಒಗ್ಗೂಡಿಸಲು ಅಯೋಧ್ಯೆಯ ಇಂಡಸ್ಟ್ರಿ ಅಂಡ್ ಬ್ಯುಸಿನೆಸ್ ಟ್ರಸ್ಟ್‌ನ ಮುಖ್ಯಸ್ಥ ಸಮಾಜವಾದಿ ಪಕ್ಷದ ನಂದ್ ಕುಮಾರ್ ಗುಪ್ತಾ ಮುಂದಾಗಿದ್ದಾರೆ.

“ಅನೇಕ ವ್ಯಾಪಾರಿಗಳು, ವಿಶೇಷವಾಗಿ ಸಣ್ಣ ಸಣ್ಣ ವ್ಯಾಪಾರಿಗಳು ಬಿಜೆಪಿಯಿಂದ ಭ್ರಮನಿರಸನಗೊಂಡಿದ್ದಾರೆ. ಏಕೆಂದರೆ ಅಭಿವೃದ್ಧಿ ಯೋಜನೆಯು ವ್ಯಾಪಾರಿಗಳ ಜೀವನೋಪಾಯದ ಮೇಲೆ ನೇರವಾಗಿ ದಾಳಿ ಮಾಡುತ್ತಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿರಿ: ಉತ್ತರ ಪ್ರದೇಶ: 2004ರ ನಕಲಿ ಎನ್‌ಕೌಂಟರ್‌ ಪ್ರಕರಣದಲ್ಲಿ 18 ಪೊಲೀಸರ ವಿರುದ್ಧ FIR ದಾಖಲು

ಆಗಸ್ಟ್ 5, 2020ರಂದು ರಾಮ ಮಂದಿರದ ಉದ್ಘಾಟನಾ ದಿನದಂದು (ಭೂಮಿ ಪೂಜೆಯಂದು) ಪ್ರಧಾನಿ ನರೇಂದ್ರ ಮೋದಿಯವರ ಭೇಟಿ ನೀಡುತ್ತಿದ್ದಾರೆಂದು ಸಣ್ಣ ಅಂಗಡಿಗಳನ್ನು ರಸ್ತೆಬದಿಯಿಂದ ತೆರವುಗೊಳಿಸಲಾಯಿತು ಎಂದು ಅವರು ದೂರುತ್ತಾರೆ.

“ಬಿಜೆಪಿ ನಿರ್ಮಿಸಲು ಬಯಸುವ ಈ ಹೊಸ ಮಾಲ್‌ನಂತಹ ಅಯೋಧ್ಯೆಯಲ್ಲಿ ವ್ಯಾಪಾರಿಗಳ ಸ್ಥಾನ ಎಲ್ಲಿದೆ?” ನಂದಕುಮಾರ್‌ ಪ್ರಶ್ನಿಸುತ್ತಾರೆ.

ವ್ಯಾಪಾರಿಗಳಿಗೆ ಪರಿಹಾರ ಸಿಗದಿರುವ ಆತಂಕ, ಆಡಳಿತದಿಂದ ಯಾವುದೇ ಅಧಿಕೃತ ಭರವಸೆ ಇಲ್ಲದಿರುವುದರಿಂದ ವ್ಯಾಪಾರಿ ವರ್ಗದ ಮತಗಳು ಬಿಜೆಪಿಯ ಕೈತಪ್ಪುವ ಸಾಧ್ಯತೆಯನ್ನು ಊಹಿಸಲಾಗಿದೆ.

ದೊಡ್ಡ ಕೈಗಾರಿಕೋದ್ಯಮಿಗಳಿಗೆ ಅಯೋಧ್ಯೆಯಲ್ಲಿ ಅವಕಾಶಗಳನ್ನು ನೀಡುವ ದೊಡ್ಡ ಯೋಜನೆ ರೂಪಿಸಲಾಗಿದೆ ಎಂದು ನಂದ್ ಕುಮಾರ್ ದೂರುತ್ತಾರೆ.

“ಅವರು ಅಯೋಧ್ಯೆಯಿಂದ ಇತರ ಆಟಗಾರರನ್ನು ಹೊರ ಹಾಕಲು ಬಯಸುತ್ತಾರೆ. ಏಕಾಂಗಿಯಾಗಿ ಆಡಳಿತ ನಡೆಸಲು ಇಚ್ಛಿಸುತ್ತಾರೆ” ಎನ್ನುವ ನಂದಕುಮಾರ್‌, “ಬುಲ್ಡೋಜರ್ ಪೆ ಸೈಕಲ್ ಭರಿ (ಬುಲ್ಡೋಜರ್‌ಅನ್ನು ಸೈಕಲ್ ಸೋಲಿಸುತ್ತದೆ)” ಎಂದಿದ್ದಾರೆ.

“ನಾವೂ ರಾಮನ ಸೇವೆ ಮಾಡಿದ್ದೇವೆ…”

ರಾಮಮಂದಿರ ಚಳವಳಿಯ ನಂತರ ಅಯೋಧ್ಯೆ ಅವಕಾಶಗಳ ಕೇಂದ್ರವಾಗಿದೆ ಎಂದು ಮುಖಂಡ ಅಭಯ್ ಕುಮಾರ್ ಪಾಂಡೆ ಅಭಿಪ್ರಾಯಪಡುತ್ತಾರೆ.

ಹಲವು ತಲೆಮಾರಿನ ಕುಟುಂಬಗಳ ಒಡೆತನದ ಈ ಅಂಗಡಿಗಳ ಭಾವನಾತ್ಮಕ ಮೌಲ್ಯವನ್ನು ಹಣದಿಂದ ಸರಿದೂಗಿಸಲು ಸಾಧ್ಯವಿಲ್ಲವಾದರೂ, ಅಯೋಧ್ಯೆಯ ಅಭಿವೃದ್ಧಿಯಿಂದ ವ್ಯಾಪಾರಿಗಳು ಸಹ ಪ್ರಯೋಜನ ಪಡೆಯುವಂತೆ ಆಡಳಿತವು ಖಾತ್ರಿಪಡಿಸಬೇಕು ಎಂದು ಪಾಂಡೆ ಹೇಳುತ್ತಾರೆ.

“ರಾಮಜನ್ಮಭೂಮಿ ಆಂದೋಲನದ ಸಂದರ್ಭದಲ್ಲಿ ಕರಸೇವಕರಿಗೆ ನೀರು, ಅನ್ನ ಬಡಿಸಿದ್ದು ನಾವು. ಶ್ರೀರಾಮನನ್ನು ಗೌರವಿಸಿದ ಜನರಿಗೆ ಜೀವನೋಪಾಯದ ಮಾರ್ಗವಿಲ್ಲವಾದರೆ, ಅವರು ಬಿಜೆಪಿಗೆ ಏಕೆ ಮತ ಹಾಕುತ್ತಾರೆ?” ಎಂದು ಅವರು ಪ್ರಶ್ನಿಸುತ್ತಾರೆ.

“ಮೆಹೆಂಗಾಯಿ ತೋ ರೋಕ್ ನಹೀಂ ಪಯೇಂಗೇ, ಮಗರ್ ಹುಮಾರಾ ಉತ್ಪಿದನ್ ರೋಕ್ ಸಕ್ತೇ ಹೈಂ (ಅವರು ಯಾವಾಗಲೂ ಹಣದುಬ್ಬರ ಮತ್ತು ಬೆಲೆ ಏರಿಕೆಯನ್ನು ನಿಯಂತ್ರಿಸಲು ಸಾಧ್ಯವಿಲ್ಲ. ಆದರೆ ಅವರು ಮಾಡಬಹುದಾದ ಕೆಲಸವೆಂದರೆ ನಮ್ಮ ಸಂಕಟವನ್ನು ತಡೆಯುವುದು)” ಎಂದು ವ್ಯಕ್ತಿಯೊಬ್ಬರು ಪ್ರತಿಕ್ರಿಯಿಸಿದ್ದಾರೆ.

ಅಯೋಧ್ಯೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ವಿವೇಕ್ ಪ್ರಕಾಶ್ ಗುಪ್ತಾ, ಎಸ್‌ಪಿಯ ತೇಜ್ ನಾರಾಯಣ ಪಾಂಡೆ ಮತ್ತು ಬಿಎಸ್‌ಪಿಯ ರವಿ ಮೌರ್ಯ ನಡುವೆ ಹಣಾಹಣಿ ನಡೆಯಲಿದೆ. ಕಾಂಗ್ರೆಸ್‌ನ ರೀತಾ ಮೌರ್ಯ ಮತ್ತು ಆಪ್‌ನ ಶುಭಂ ಶ್ರೀವಾಸ್ತವ ಕೂಡ ಕಣದಲ್ಲಿದ್ದಾರೆ.

ಮೂಲ: ದಿ ವೈರ್‌ (ಇಸ್ಮತ್ ಅರಾ)


ಇದನ್ನೂ ಓದಿರಿ: ಯೋಗಿ ಆದಿತ್ಯನಾಥ್‌ಗೆ ಅಯೋಧ್ಯೆಯಲ್ಲಿ ಹೆಚ್ಚು ವಿರೋಧವಿದೆ: ರಾಮ ಮಂದಿರದ ಪ್ರಧಾನ ಅರ್ಚಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಾಬ್ರಿ ಮಸೀದಿ ಧ್ವಂಸ ಮಾಡಿದ ಕರಸೇವಕರಿಗೆ ಸಕಲ ಸವಲತ್ತು ಪೂರೈಸಿದ ಬೀದಿ ವ್ಯಾಪಾರಿಗಳಿಗೆ ಶ್ರೀ ರಾಮನೇ ಶಿಕ್ಷೆ ವಿಧಿಸುತ್ತಿದ್ದಾನೆಂದು ಆತ್ಮ ವಿಮರ್ಶೆ ಮಾಡಿ ಕೊಳ್ಳುವುದು.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...