Homeಮುಖಪುಟಅಯೋಧ್ಯೆ ಅಭಿವೃದ್ಧಿ: ಆತಂಕದಲ್ಲಿರುವ ವ್ಯಾಪಾರಿಗಳ ಕೂಗು ಬಿಜೆಪಿಗೆ ಮುಳುವಾಗುವುದೇ?

ಅಯೋಧ್ಯೆ ಅಭಿವೃದ್ಧಿ: ಆತಂಕದಲ್ಲಿರುವ ವ್ಯಾಪಾರಿಗಳ ಕೂಗು ಬಿಜೆಪಿಗೆ ಮುಳುವಾಗುವುದೇ?

- Advertisement -
- Advertisement -

ಅಯೋಧ್ಯೆಯ ಹನುಮಾನ್ ಗರ್ಹಿ ದೇವಸ್ಥಾನದಿಂದ ಸಲ್ಪ ದೂರದಲ್ಲಿ 45 ವರ್ಷದ ರಂಜಿತಾ ಗುಪ್ತಾ ಅವರು ಕಲಾಕೃತಿಗಳನ್ನು ಮಾರಾಟ ಮಾಡುವ ಸಣ್ಣ ಅಂಗಡಿಯನ್ನು ನಡೆಸುತ್ತಿದ್ದಾರೆ.

ರಾಮಮಂದಿರದ ಭಾಗವಾಗಿ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ರಸ್ತೆ ವಿಸ್ತರಣೆ ಯೋಜನೆಯಿಂದಾಗಿ ರಂಜಿತಾ ತಮ್ಮ ಅಂಗಡಿಯನ್ನು ಕಳೆದುಕೊಳ್ಳುವ ಆತಂಕದಲ್ಲಿ ಕಳೆದ ಕೆಲವು ತಿಂಗಳುಗಳಿಂದಲೂ ಇದ್ದಾರೆ.

ರಂಜಿತಾ ಅವರಿಗೆ ತೊದಲು ಸಮಸ್ಯೆ ಇದೆ. ಹೀಗಾಗಿ ಅವರು ಮದುವೆಯಾಗುವುದು ಕಷ್ಟವಾಯಿತು. ಸಹೋದರನೇ ರಂಜಿತಾ ಅವರನ್ನು ಪೋಷಣೆ ಮಾಡುತ್ತಿದ್ದು, ರಂಜಿತಾ ಅಂಗಡಿಯನ್ನು ನಡೆಸುತ್ತಿದ್ದಾರೆ.

ರಾಮಮಂದಿರಕ್ಕೆ ತೆರಳುವ ಮುನ್ನ, ಹನುಮಂತನ ಬೃಹತ್ ರಚನೆಯನ್ನು ಹೊಂದಿರುವ ಹನುಮಾನ್ ಗರ್ಹಿ ದೇವಸ್ಥಾನಕ್ಕೆ ಭಕ್ತರು ಮೊದಲು ಭೇಟಿ ನೀಡಬೇಕೆಂಬ ಸಂಪ್ರದಾಯ ಇಲ್ಲಿದೆ. ಹೀಗಾಗಿ ಇಲ್ಲಿನ ವ್ಯಾಪಾರಿಗಳ ಜೀವನ ನೆಮ್ಮದಿಯಾಗಿ ಇತ್ತು.

ರಂಜಿತಾ ಅವರ ಅಂಗಡಿಯನ್ನು ಅವರ ಅಜ್ಜ ನಿರ್ಮಿಸಿದರು. ನಂತರ ಅವರ ತಂದೆ ನಡೆಸುತ್ತಿದ್ದರು. ತಂದೆಯ ಮರಣದ ನಂತರ, ರಂಜಿತಾ ತನ್ನ ಸಹೋದರನೊಂದಿಗೆ ಅಂಗಡಿಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿರಿ: ಭೂ ಹಗರಣ, ಬ್ರಾಹ್ಮಣರ ಮತಗಳು ಕೈ ತಪ್ಪುವ ಭಯ: ಅಯೋಧ್ಯೆಯ ಟಿಕೆಟ್‌ ಯೋಗಿ ಕಳೆದುಕೊಳ್ಳಲು ಕಾರಣವೇ?

ಭಗವಾನ್ ರಾಮನ ಫೋಟೋಗಳೊಂದಿಗೆ ಫೋಟೋ ಫ್ರೇಮ್‌ಗಳು, ಬ್ಯಾಗ್‌ಗಳು, ಧೂಪದ್ರವ್ಯದ ತುಂಡುಗಳು ಮತ್ತು ಇತರ ಕೆಲವು ವರ್ಣರಂಜಿತ ಪೂಜಾ ವಸ್ತುಗಳನ್ನು ಈ ಸಣ್ಣ ಅಂಗಡಿಯಲ್ಲಿ ಕಾಣಬಹುದು. ರಂಜಿತಾ ಮಾರಾಟ ಮಾಡುತ್ತಿರುವ ಬ್ಯಾಗ್‌‌ ಒಂದರ ಮೇಲೆ ‘ಜೈ ಶ್ರೀರಾಮ್‌’ ಎಂದಿರುವುದನ್ನು ನೋಡಬಹುದು.

ರಾಮ ಮಂದಿರ ರಸ್ತೆ ವಿಸ್ತರಣೆ ಯೋಜನೆಯಿಂದಾಗಿ ತನ್ನ ಅಂಗಡಿ ಶೀಘ್ರದಲ್ಲೇ ನೆಲಸಮವಾಗಲಿದೆ ಎಂದು ರಂಜಿತಾ ನೋವು ತೋಡಿಕೊಂಡರು.

PC: The Wire, Ismat Ara

ಅಯೋಧ್ಯೆ ಅಭಿವೃದ್ಧಿ ಯೋಜನೆ

ಅಯೋಧ್ಯೆಯ ಅಭಿವೃದ್ಧಿ ಯೋಜನೆಯ ಭಾಗವಾಗಿ ಹನುಮಾನ್ ಗರ್ಹಿ ಮಾರ್ಗದಲ್ಲಿನ ನೂರಾರು ಅಂಗಡಿಗಳಿರುವ ರಸ್ತೆಯ ಅಗಲೀಕರಣ ಮಾಡಲು ಉದ್ದೇಶಿಸಲಾಗಿದೆ. ಇದರ ವಿರುದ್ಧ 2021ರಲ್ಲಿಯೇ ವ್ಯಾಪಾರಿಗಳು ಪ್ರತಿಭಟಿಸಿದರು.

ಅಂಗಡಿಗಳ ಮಾಲೀಕರು ಹಲವಾರು ಮೆರವಣಿಗೆಗಳನ್ನು ನಡೆಸಿದರು. ಜಿಲ್ಲಾಧಿಕಾರಿಗಳ ಕಚೇರಿಯ ಹೊರಗೆ ಧರಣಿ ಕುಳಿತರು. ನಂತರ ಪತ್ರಗಳನ್ನೂ ಬರೆದರು. ಸುಮಾರು ಒಂದು ವರ್ಷ ವರ್ಷದಿಂದಲೂ ವ್ಯಾಪಾರಿಗಳು ಆಡಳಿತದ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ.

ತೆರವುಗೊಳಿಸುವ ಅಂಗಡಿಗಳಿಗೆ ನೀಡುವ ಪರಿಹಾರದ ಬಗ್ಗೆಯಾಗಲೀ, ಸ್ಥಳಾಂತರಗೊಳ್ಳುವವರಿಗೆ ಹೊಸ ಅಂಗಡಿಗಳಾಗಲಿ ನೀಡುವ ಕುರಿತು ಸ್ಪಷ್ಟತೆ ಇಲ್ಲ ಎಂದು ವ್ಯಾಪಾರಿಗಳು ಆರೋಪಿಸಿದ್ದಾರೆ.

2019ರಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಬಾಬರಿ ಮಸೀದಿ ಭೂಮಿಯನ್ನು ಸುಪ್ರೀಂ ಕೋರ್ಟ್ ನೀಡಿದ ನಂತರ ರಾಮಮಂದಿರ ನಿರ್ಮಾಣ ಯೋಜನೆ ತ್ವರಿತವಾಗಿ ಪ್ರಗತಿಯಲ್ಲಿದೆ.

ಚುನಾವಣಾ ರಾಜಕೀಯ

ಜಿಲ್ಲೆಯಲ್ಲಿ ಫೆಬ್ರವರಿ 27 ರಂದು ಚುನಾವಣೆ ನಡೆಯಲಿದ್ದು, ಪ್ರತಿಪಕ್ಷಗಳು ವ್ಯಾಪಾರಿಗಳ ಆಗ್ರಹವನ್ನು ಚುನಾವಣಾ ವಿಷಯವನ್ನಾಗಿ ಬಳಸುತ್ತಿವೆ.

ಬಿಜೆಪಿ ಅಭ್ಯರ್ಥಿ ವಿವೇಕ್ ಪ್ರಕಾಶ್ ಗುಪ್ತಾ ವಿರುದ್ಧ ಮತದಾರರನ್ನು ಒಗ್ಗೂಡಿಸಲು ಅಯೋಧ್ಯೆಯ ಇಂಡಸ್ಟ್ರಿ ಅಂಡ್ ಬ್ಯುಸಿನೆಸ್ ಟ್ರಸ್ಟ್‌ನ ಮುಖ್ಯಸ್ಥ ಸಮಾಜವಾದಿ ಪಕ್ಷದ ನಂದ್ ಕುಮಾರ್ ಗುಪ್ತಾ ಮುಂದಾಗಿದ್ದಾರೆ.

“ಅನೇಕ ವ್ಯಾಪಾರಿಗಳು, ವಿಶೇಷವಾಗಿ ಸಣ್ಣ ಸಣ್ಣ ವ್ಯಾಪಾರಿಗಳು ಬಿಜೆಪಿಯಿಂದ ಭ್ರಮನಿರಸನಗೊಂಡಿದ್ದಾರೆ. ಏಕೆಂದರೆ ಅಭಿವೃದ್ಧಿ ಯೋಜನೆಯು ವ್ಯಾಪಾರಿಗಳ ಜೀವನೋಪಾಯದ ಮೇಲೆ ನೇರವಾಗಿ ದಾಳಿ ಮಾಡುತ್ತಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿರಿ: ಉತ್ತರ ಪ್ರದೇಶ: 2004ರ ನಕಲಿ ಎನ್‌ಕೌಂಟರ್‌ ಪ್ರಕರಣದಲ್ಲಿ 18 ಪೊಲೀಸರ ವಿರುದ್ಧ FIR ದಾಖಲು

ಆಗಸ್ಟ್ 5, 2020ರಂದು ರಾಮ ಮಂದಿರದ ಉದ್ಘಾಟನಾ ದಿನದಂದು (ಭೂಮಿ ಪೂಜೆಯಂದು) ಪ್ರಧಾನಿ ನರೇಂದ್ರ ಮೋದಿಯವರ ಭೇಟಿ ನೀಡುತ್ತಿದ್ದಾರೆಂದು ಸಣ್ಣ ಅಂಗಡಿಗಳನ್ನು ರಸ್ತೆಬದಿಯಿಂದ ತೆರವುಗೊಳಿಸಲಾಯಿತು ಎಂದು ಅವರು ದೂರುತ್ತಾರೆ.

“ಬಿಜೆಪಿ ನಿರ್ಮಿಸಲು ಬಯಸುವ ಈ ಹೊಸ ಮಾಲ್‌ನಂತಹ ಅಯೋಧ್ಯೆಯಲ್ಲಿ ವ್ಯಾಪಾರಿಗಳ ಸ್ಥಾನ ಎಲ್ಲಿದೆ?” ನಂದಕುಮಾರ್‌ ಪ್ರಶ್ನಿಸುತ್ತಾರೆ.

ವ್ಯಾಪಾರಿಗಳಿಗೆ ಪರಿಹಾರ ಸಿಗದಿರುವ ಆತಂಕ, ಆಡಳಿತದಿಂದ ಯಾವುದೇ ಅಧಿಕೃತ ಭರವಸೆ ಇಲ್ಲದಿರುವುದರಿಂದ ವ್ಯಾಪಾರಿ ವರ್ಗದ ಮತಗಳು ಬಿಜೆಪಿಯ ಕೈತಪ್ಪುವ ಸಾಧ್ಯತೆಯನ್ನು ಊಹಿಸಲಾಗಿದೆ.

ದೊಡ್ಡ ಕೈಗಾರಿಕೋದ್ಯಮಿಗಳಿಗೆ ಅಯೋಧ್ಯೆಯಲ್ಲಿ ಅವಕಾಶಗಳನ್ನು ನೀಡುವ ದೊಡ್ಡ ಯೋಜನೆ ರೂಪಿಸಲಾಗಿದೆ ಎಂದು ನಂದ್ ಕುಮಾರ್ ದೂರುತ್ತಾರೆ.

“ಅವರು ಅಯೋಧ್ಯೆಯಿಂದ ಇತರ ಆಟಗಾರರನ್ನು ಹೊರ ಹಾಕಲು ಬಯಸುತ್ತಾರೆ. ಏಕಾಂಗಿಯಾಗಿ ಆಡಳಿತ ನಡೆಸಲು ಇಚ್ಛಿಸುತ್ತಾರೆ” ಎನ್ನುವ ನಂದಕುಮಾರ್‌, “ಬುಲ್ಡೋಜರ್ ಪೆ ಸೈಕಲ್ ಭರಿ (ಬುಲ್ಡೋಜರ್‌ಅನ್ನು ಸೈಕಲ್ ಸೋಲಿಸುತ್ತದೆ)” ಎಂದಿದ್ದಾರೆ.

“ನಾವೂ ರಾಮನ ಸೇವೆ ಮಾಡಿದ್ದೇವೆ…”

ರಾಮಮಂದಿರ ಚಳವಳಿಯ ನಂತರ ಅಯೋಧ್ಯೆ ಅವಕಾಶಗಳ ಕೇಂದ್ರವಾಗಿದೆ ಎಂದು ಮುಖಂಡ ಅಭಯ್ ಕುಮಾರ್ ಪಾಂಡೆ ಅಭಿಪ್ರಾಯಪಡುತ್ತಾರೆ.

ಹಲವು ತಲೆಮಾರಿನ ಕುಟುಂಬಗಳ ಒಡೆತನದ ಈ ಅಂಗಡಿಗಳ ಭಾವನಾತ್ಮಕ ಮೌಲ್ಯವನ್ನು ಹಣದಿಂದ ಸರಿದೂಗಿಸಲು ಸಾಧ್ಯವಿಲ್ಲವಾದರೂ, ಅಯೋಧ್ಯೆಯ ಅಭಿವೃದ್ಧಿಯಿಂದ ವ್ಯಾಪಾರಿಗಳು ಸಹ ಪ್ರಯೋಜನ ಪಡೆಯುವಂತೆ ಆಡಳಿತವು ಖಾತ್ರಿಪಡಿಸಬೇಕು ಎಂದು ಪಾಂಡೆ ಹೇಳುತ್ತಾರೆ.

“ರಾಮಜನ್ಮಭೂಮಿ ಆಂದೋಲನದ ಸಂದರ್ಭದಲ್ಲಿ ಕರಸೇವಕರಿಗೆ ನೀರು, ಅನ್ನ ಬಡಿಸಿದ್ದು ನಾವು. ಶ್ರೀರಾಮನನ್ನು ಗೌರವಿಸಿದ ಜನರಿಗೆ ಜೀವನೋಪಾಯದ ಮಾರ್ಗವಿಲ್ಲವಾದರೆ, ಅವರು ಬಿಜೆಪಿಗೆ ಏಕೆ ಮತ ಹಾಕುತ್ತಾರೆ?” ಎಂದು ಅವರು ಪ್ರಶ್ನಿಸುತ್ತಾರೆ.

“ಮೆಹೆಂಗಾಯಿ ತೋ ರೋಕ್ ನಹೀಂ ಪಯೇಂಗೇ, ಮಗರ್ ಹುಮಾರಾ ಉತ್ಪಿದನ್ ರೋಕ್ ಸಕ್ತೇ ಹೈಂ (ಅವರು ಯಾವಾಗಲೂ ಹಣದುಬ್ಬರ ಮತ್ತು ಬೆಲೆ ಏರಿಕೆಯನ್ನು ನಿಯಂತ್ರಿಸಲು ಸಾಧ್ಯವಿಲ್ಲ. ಆದರೆ ಅವರು ಮಾಡಬಹುದಾದ ಕೆಲಸವೆಂದರೆ ನಮ್ಮ ಸಂಕಟವನ್ನು ತಡೆಯುವುದು)” ಎಂದು ವ್ಯಕ್ತಿಯೊಬ್ಬರು ಪ್ರತಿಕ್ರಿಯಿಸಿದ್ದಾರೆ.

ಅಯೋಧ್ಯೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ವಿವೇಕ್ ಪ್ರಕಾಶ್ ಗುಪ್ತಾ, ಎಸ್‌ಪಿಯ ತೇಜ್ ನಾರಾಯಣ ಪಾಂಡೆ ಮತ್ತು ಬಿಎಸ್‌ಪಿಯ ರವಿ ಮೌರ್ಯ ನಡುವೆ ಹಣಾಹಣಿ ನಡೆಯಲಿದೆ. ಕಾಂಗ್ರೆಸ್‌ನ ರೀತಾ ಮೌರ್ಯ ಮತ್ತು ಆಪ್‌ನ ಶುಭಂ ಶ್ರೀವಾಸ್ತವ ಕೂಡ ಕಣದಲ್ಲಿದ್ದಾರೆ.

ಮೂಲ: ದಿ ವೈರ್‌ (ಇಸ್ಮತ್ ಅರಾ)


ಇದನ್ನೂ ಓದಿರಿ: ಯೋಗಿ ಆದಿತ್ಯನಾಥ್‌ಗೆ ಅಯೋಧ್ಯೆಯಲ್ಲಿ ಹೆಚ್ಚು ವಿರೋಧವಿದೆ: ರಾಮ ಮಂದಿರದ ಪ್ರಧಾನ ಅರ್ಚಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಾಬ್ರಿ ಮಸೀದಿ ಧ್ವಂಸ ಮಾಡಿದ ಕರಸೇವಕರಿಗೆ ಸಕಲ ಸವಲತ್ತು ಪೂರೈಸಿದ ಬೀದಿ ವ್ಯಾಪಾರಿಗಳಿಗೆ ಶ್ರೀ ರಾಮನೇ ಶಿಕ್ಷೆ ವಿಧಿಸುತ್ತಿದ್ದಾನೆಂದು ಆತ್ಮ ವಿಮರ್ಶೆ ಮಾಡಿ ಕೊಳ್ಳುವುದು.

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...