Homeಮುಖಪುಟಅಯೋಧ್ಯೆ ಅಭಿವೃದ್ಧಿ: ಆತಂಕದಲ್ಲಿರುವ ವ್ಯಾಪಾರಿಗಳ ಕೂಗು ಬಿಜೆಪಿಗೆ ಮುಳುವಾಗುವುದೇ?

ಅಯೋಧ್ಯೆ ಅಭಿವೃದ್ಧಿ: ಆತಂಕದಲ್ಲಿರುವ ವ್ಯಾಪಾರಿಗಳ ಕೂಗು ಬಿಜೆಪಿಗೆ ಮುಳುವಾಗುವುದೇ?

- Advertisement -
- Advertisement -

ಅಯೋಧ್ಯೆಯ ಹನುಮಾನ್ ಗರ್ಹಿ ದೇವಸ್ಥಾನದಿಂದ ಸಲ್ಪ ದೂರದಲ್ಲಿ 45 ವರ್ಷದ ರಂಜಿತಾ ಗುಪ್ತಾ ಅವರು ಕಲಾಕೃತಿಗಳನ್ನು ಮಾರಾಟ ಮಾಡುವ ಸಣ್ಣ ಅಂಗಡಿಯನ್ನು ನಡೆಸುತ್ತಿದ್ದಾರೆ.

ರಾಮಮಂದಿರದ ಭಾಗವಾಗಿ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ರಸ್ತೆ ವಿಸ್ತರಣೆ ಯೋಜನೆಯಿಂದಾಗಿ ರಂಜಿತಾ ತಮ್ಮ ಅಂಗಡಿಯನ್ನು ಕಳೆದುಕೊಳ್ಳುವ ಆತಂಕದಲ್ಲಿ ಕಳೆದ ಕೆಲವು ತಿಂಗಳುಗಳಿಂದಲೂ ಇದ್ದಾರೆ.

ರಂಜಿತಾ ಅವರಿಗೆ ತೊದಲು ಸಮಸ್ಯೆ ಇದೆ. ಹೀಗಾಗಿ ಅವರು ಮದುವೆಯಾಗುವುದು ಕಷ್ಟವಾಯಿತು. ಸಹೋದರನೇ ರಂಜಿತಾ ಅವರನ್ನು ಪೋಷಣೆ ಮಾಡುತ್ತಿದ್ದು, ರಂಜಿತಾ ಅಂಗಡಿಯನ್ನು ನಡೆಸುತ್ತಿದ್ದಾರೆ.

ರಾಮಮಂದಿರಕ್ಕೆ ತೆರಳುವ ಮುನ್ನ, ಹನುಮಂತನ ಬೃಹತ್ ರಚನೆಯನ್ನು ಹೊಂದಿರುವ ಹನುಮಾನ್ ಗರ್ಹಿ ದೇವಸ್ಥಾನಕ್ಕೆ ಭಕ್ತರು ಮೊದಲು ಭೇಟಿ ನೀಡಬೇಕೆಂಬ ಸಂಪ್ರದಾಯ ಇಲ್ಲಿದೆ. ಹೀಗಾಗಿ ಇಲ್ಲಿನ ವ್ಯಾಪಾರಿಗಳ ಜೀವನ ನೆಮ್ಮದಿಯಾಗಿ ಇತ್ತು.

ರಂಜಿತಾ ಅವರ ಅಂಗಡಿಯನ್ನು ಅವರ ಅಜ್ಜ ನಿರ್ಮಿಸಿದರು. ನಂತರ ಅವರ ತಂದೆ ನಡೆಸುತ್ತಿದ್ದರು. ತಂದೆಯ ಮರಣದ ನಂತರ, ರಂಜಿತಾ ತನ್ನ ಸಹೋದರನೊಂದಿಗೆ ಅಂಗಡಿಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿರಿ: ಭೂ ಹಗರಣ, ಬ್ರಾಹ್ಮಣರ ಮತಗಳು ಕೈ ತಪ್ಪುವ ಭಯ: ಅಯೋಧ್ಯೆಯ ಟಿಕೆಟ್‌ ಯೋಗಿ ಕಳೆದುಕೊಳ್ಳಲು ಕಾರಣವೇ?

ಭಗವಾನ್ ರಾಮನ ಫೋಟೋಗಳೊಂದಿಗೆ ಫೋಟೋ ಫ್ರೇಮ್‌ಗಳು, ಬ್ಯಾಗ್‌ಗಳು, ಧೂಪದ್ರವ್ಯದ ತುಂಡುಗಳು ಮತ್ತು ಇತರ ಕೆಲವು ವರ್ಣರಂಜಿತ ಪೂಜಾ ವಸ್ತುಗಳನ್ನು ಈ ಸಣ್ಣ ಅಂಗಡಿಯಲ್ಲಿ ಕಾಣಬಹುದು. ರಂಜಿತಾ ಮಾರಾಟ ಮಾಡುತ್ತಿರುವ ಬ್ಯಾಗ್‌‌ ಒಂದರ ಮೇಲೆ ‘ಜೈ ಶ್ರೀರಾಮ್‌’ ಎಂದಿರುವುದನ್ನು ನೋಡಬಹುದು.

ರಾಮ ಮಂದಿರ ರಸ್ತೆ ವಿಸ್ತರಣೆ ಯೋಜನೆಯಿಂದಾಗಿ ತನ್ನ ಅಂಗಡಿ ಶೀಘ್ರದಲ್ಲೇ ನೆಲಸಮವಾಗಲಿದೆ ಎಂದು ರಂಜಿತಾ ನೋವು ತೋಡಿಕೊಂಡರು.

PC: The Wire, Ismat Ara

ಅಯೋಧ್ಯೆ ಅಭಿವೃದ್ಧಿ ಯೋಜನೆ

ಅಯೋಧ್ಯೆಯ ಅಭಿವೃದ್ಧಿ ಯೋಜನೆಯ ಭಾಗವಾಗಿ ಹನುಮಾನ್ ಗರ್ಹಿ ಮಾರ್ಗದಲ್ಲಿನ ನೂರಾರು ಅಂಗಡಿಗಳಿರುವ ರಸ್ತೆಯ ಅಗಲೀಕರಣ ಮಾಡಲು ಉದ್ದೇಶಿಸಲಾಗಿದೆ. ಇದರ ವಿರುದ್ಧ 2021ರಲ್ಲಿಯೇ ವ್ಯಾಪಾರಿಗಳು ಪ್ರತಿಭಟಿಸಿದರು.

ಅಂಗಡಿಗಳ ಮಾಲೀಕರು ಹಲವಾರು ಮೆರವಣಿಗೆಗಳನ್ನು ನಡೆಸಿದರು. ಜಿಲ್ಲಾಧಿಕಾರಿಗಳ ಕಚೇರಿಯ ಹೊರಗೆ ಧರಣಿ ಕುಳಿತರು. ನಂತರ ಪತ್ರಗಳನ್ನೂ ಬರೆದರು. ಸುಮಾರು ಒಂದು ವರ್ಷ ವರ್ಷದಿಂದಲೂ ವ್ಯಾಪಾರಿಗಳು ಆಡಳಿತದ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ.

ತೆರವುಗೊಳಿಸುವ ಅಂಗಡಿಗಳಿಗೆ ನೀಡುವ ಪರಿಹಾರದ ಬಗ್ಗೆಯಾಗಲೀ, ಸ್ಥಳಾಂತರಗೊಳ್ಳುವವರಿಗೆ ಹೊಸ ಅಂಗಡಿಗಳಾಗಲಿ ನೀಡುವ ಕುರಿತು ಸ್ಪಷ್ಟತೆ ಇಲ್ಲ ಎಂದು ವ್ಯಾಪಾರಿಗಳು ಆರೋಪಿಸಿದ್ದಾರೆ.

2019ರಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಬಾಬರಿ ಮಸೀದಿ ಭೂಮಿಯನ್ನು ಸುಪ್ರೀಂ ಕೋರ್ಟ್ ನೀಡಿದ ನಂತರ ರಾಮಮಂದಿರ ನಿರ್ಮಾಣ ಯೋಜನೆ ತ್ವರಿತವಾಗಿ ಪ್ರಗತಿಯಲ್ಲಿದೆ.

ಚುನಾವಣಾ ರಾಜಕೀಯ

ಜಿಲ್ಲೆಯಲ್ಲಿ ಫೆಬ್ರವರಿ 27 ರಂದು ಚುನಾವಣೆ ನಡೆಯಲಿದ್ದು, ಪ್ರತಿಪಕ್ಷಗಳು ವ್ಯಾಪಾರಿಗಳ ಆಗ್ರಹವನ್ನು ಚುನಾವಣಾ ವಿಷಯವನ್ನಾಗಿ ಬಳಸುತ್ತಿವೆ.

ಬಿಜೆಪಿ ಅಭ್ಯರ್ಥಿ ವಿವೇಕ್ ಪ್ರಕಾಶ್ ಗುಪ್ತಾ ವಿರುದ್ಧ ಮತದಾರರನ್ನು ಒಗ್ಗೂಡಿಸಲು ಅಯೋಧ್ಯೆಯ ಇಂಡಸ್ಟ್ರಿ ಅಂಡ್ ಬ್ಯುಸಿನೆಸ್ ಟ್ರಸ್ಟ್‌ನ ಮುಖ್ಯಸ್ಥ ಸಮಾಜವಾದಿ ಪಕ್ಷದ ನಂದ್ ಕುಮಾರ್ ಗುಪ್ತಾ ಮುಂದಾಗಿದ್ದಾರೆ.

“ಅನೇಕ ವ್ಯಾಪಾರಿಗಳು, ವಿಶೇಷವಾಗಿ ಸಣ್ಣ ಸಣ್ಣ ವ್ಯಾಪಾರಿಗಳು ಬಿಜೆಪಿಯಿಂದ ಭ್ರಮನಿರಸನಗೊಂಡಿದ್ದಾರೆ. ಏಕೆಂದರೆ ಅಭಿವೃದ್ಧಿ ಯೋಜನೆಯು ವ್ಯಾಪಾರಿಗಳ ಜೀವನೋಪಾಯದ ಮೇಲೆ ನೇರವಾಗಿ ದಾಳಿ ಮಾಡುತ್ತಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿರಿ: ಉತ್ತರ ಪ್ರದೇಶ: 2004ರ ನಕಲಿ ಎನ್‌ಕೌಂಟರ್‌ ಪ್ರಕರಣದಲ್ಲಿ 18 ಪೊಲೀಸರ ವಿರುದ್ಧ FIR ದಾಖಲು

ಆಗಸ್ಟ್ 5, 2020ರಂದು ರಾಮ ಮಂದಿರದ ಉದ್ಘಾಟನಾ ದಿನದಂದು (ಭೂಮಿ ಪೂಜೆಯಂದು) ಪ್ರಧಾನಿ ನರೇಂದ್ರ ಮೋದಿಯವರ ಭೇಟಿ ನೀಡುತ್ತಿದ್ದಾರೆಂದು ಸಣ್ಣ ಅಂಗಡಿಗಳನ್ನು ರಸ್ತೆಬದಿಯಿಂದ ತೆರವುಗೊಳಿಸಲಾಯಿತು ಎಂದು ಅವರು ದೂರುತ್ತಾರೆ.

“ಬಿಜೆಪಿ ನಿರ್ಮಿಸಲು ಬಯಸುವ ಈ ಹೊಸ ಮಾಲ್‌ನಂತಹ ಅಯೋಧ್ಯೆಯಲ್ಲಿ ವ್ಯಾಪಾರಿಗಳ ಸ್ಥಾನ ಎಲ್ಲಿದೆ?” ನಂದಕುಮಾರ್‌ ಪ್ರಶ್ನಿಸುತ್ತಾರೆ.

ವ್ಯಾಪಾರಿಗಳಿಗೆ ಪರಿಹಾರ ಸಿಗದಿರುವ ಆತಂಕ, ಆಡಳಿತದಿಂದ ಯಾವುದೇ ಅಧಿಕೃತ ಭರವಸೆ ಇಲ್ಲದಿರುವುದರಿಂದ ವ್ಯಾಪಾರಿ ವರ್ಗದ ಮತಗಳು ಬಿಜೆಪಿಯ ಕೈತಪ್ಪುವ ಸಾಧ್ಯತೆಯನ್ನು ಊಹಿಸಲಾಗಿದೆ.

ದೊಡ್ಡ ಕೈಗಾರಿಕೋದ್ಯಮಿಗಳಿಗೆ ಅಯೋಧ್ಯೆಯಲ್ಲಿ ಅವಕಾಶಗಳನ್ನು ನೀಡುವ ದೊಡ್ಡ ಯೋಜನೆ ರೂಪಿಸಲಾಗಿದೆ ಎಂದು ನಂದ್ ಕುಮಾರ್ ದೂರುತ್ತಾರೆ.

“ಅವರು ಅಯೋಧ್ಯೆಯಿಂದ ಇತರ ಆಟಗಾರರನ್ನು ಹೊರ ಹಾಕಲು ಬಯಸುತ್ತಾರೆ. ಏಕಾಂಗಿಯಾಗಿ ಆಡಳಿತ ನಡೆಸಲು ಇಚ್ಛಿಸುತ್ತಾರೆ” ಎನ್ನುವ ನಂದಕುಮಾರ್‌, “ಬುಲ್ಡೋಜರ್ ಪೆ ಸೈಕಲ್ ಭರಿ (ಬುಲ್ಡೋಜರ್‌ಅನ್ನು ಸೈಕಲ್ ಸೋಲಿಸುತ್ತದೆ)” ಎಂದಿದ್ದಾರೆ.

“ನಾವೂ ರಾಮನ ಸೇವೆ ಮಾಡಿದ್ದೇವೆ…”

ರಾಮಮಂದಿರ ಚಳವಳಿಯ ನಂತರ ಅಯೋಧ್ಯೆ ಅವಕಾಶಗಳ ಕೇಂದ್ರವಾಗಿದೆ ಎಂದು ಮುಖಂಡ ಅಭಯ್ ಕುಮಾರ್ ಪಾಂಡೆ ಅಭಿಪ್ರಾಯಪಡುತ್ತಾರೆ.

ಹಲವು ತಲೆಮಾರಿನ ಕುಟುಂಬಗಳ ಒಡೆತನದ ಈ ಅಂಗಡಿಗಳ ಭಾವನಾತ್ಮಕ ಮೌಲ್ಯವನ್ನು ಹಣದಿಂದ ಸರಿದೂಗಿಸಲು ಸಾಧ್ಯವಿಲ್ಲವಾದರೂ, ಅಯೋಧ್ಯೆಯ ಅಭಿವೃದ್ಧಿಯಿಂದ ವ್ಯಾಪಾರಿಗಳು ಸಹ ಪ್ರಯೋಜನ ಪಡೆಯುವಂತೆ ಆಡಳಿತವು ಖಾತ್ರಿಪಡಿಸಬೇಕು ಎಂದು ಪಾಂಡೆ ಹೇಳುತ್ತಾರೆ.

“ರಾಮಜನ್ಮಭೂಮಿ ಆಂದೋಲನದ ಸಂದರ್ಭದಲ್ಲಿ ಕರಸೇವಕರಿಗೆ ನೀರು, ಅನ್ನ ಬಡಿಸಿದ್ದು ನಾವು. ಶ್ರೀರಾಮನನ್ನು ಗೌರವಿಸಿದ ಜನರಿಗೆ ಜೀವನೋಪಾಯದ ಮಾರ್ಗವಿಲ್ಲವಾದರೆ, ಅವರು ಬಿಜೆಪಿಗೆ ಏಕೆ ಮತ ಹಾಕುತ್ತಾರೆ?” ಎಂದು ಅವರು ಪ್ರಶ್ನಿಸುತ್ತಾರೆ.

“ಮೆಹೆಂಗಾಯಿ ತೋ ರೋಕ್ ನಹೀಂ ಪಯೇಂಗೇ, ಮಗರ್ ಹುಮಾರಾ ಉತ್ಪಿದನ್ ರೋಕ್ ಸಕ್ತೇ ಹೈಂ (ಅವರು ಯಾವಾಗಲೂ ಹಣದುಬ್ಬರ ಮತ್ತು ಬೆಲೆ ಏರಿಕೆಯನ್ನು ನಿಯಂತ್ರಿಸಲು ಸಾಧ್ಯವಿಲ್ಲ. ಆದರೆ ಅವರು ಮಾಡಬಹುದಾದ ಕೆಲಸವೆಂದರೆ ನಮ್ಮ ಸಂಕಟವನ್ನು ತಡೆಯುವುದು)” ಎಂದು ವ್ಯಕ್ತಿಯೊಬ್ಬರು ಪ್ರತಿಕ್ರಿಯಿಸಿದ್ದಾರೆ.

ಅಯೋಧ್ಯೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ವಿವೇಕ್ ಪ್ರಕಾಶ್ ಗುಪ್ತಾ, ಎಸ್‌ಪಿಯ ತೇಜ್ ನಾರಾಯಣ ಪಾಂಡೆ ಮತ್ತು ಬಿಎಸ್‌ಪಿಯ ರವಿ ಮೌರ್ಯ ನಡುವೆ ಹಣಾಹಣಿ ನಡೆಯಲಿದೆ. ಕಾಂಗ್ರೆಸ್‌ನ ರೀತಾ ಮೌರ್ಯ ಮತ್ತು ಆಪ್‌ನ ಶುಭಂ ಶ್ರೀವಾಸ್ತವ ಕೂಡ ಕಣದಲ್ಲಿದ್ದಾರೆ.

ಮೂಲ: ದಿ ವೈರ್‌ (ಇಸ್ಮತ್ ಅರಾ)


ಇದನ್ನೂ ಓದಿರಿ: ಯೋಗಿ ಆದಿತ್ಯನಾಥ್‌ಗೆ ಅಯೋಧ್ಯೆಯಲ್ಲಿ ಹೆಚ್ಚು ವಿರೋಧವಿದೆ: ರಾಮ ಮಂದಿರದ ಪ್ರಧಾನ ಅರ್ಚಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಾಬ್ರಿ ಮಸೀದಿ ಧ್ವಂಸ ಮಾಡಿದ ಕರಸೇವಕರಿಗೆ ಸಕಲ ಸವಲತ್ತು ಪೂರೈಸಿದ ಬೀದಿ ವ್ಯಾಪಾರಿಗಳಿಗೆ ಶ್ರೀ ರಾಮನೇ ಶಿಕ್ಷೆ ವಿಧಿಸುತ್ತಿದ್ದಾನೆಂದು ಆತ್ಮ ವಿಮರ್ಶೆ ಮಾಡಿ ಕೊಳ್ಳುವುದು.

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...