Homeಮುಖಪುಟಅಯೋಧ್ಯೆ ಅಭಿವೃದ್ಧಿ: ಆತಂಕದಲ್ಲಿರುವ ವ್ಯಾಪಾರಿಗಳ ಕೂಗು ಬಿಜೆಪಿಗೆ ಮುಳುವಾಗುವುದೇ?

ಅಯೋಧ್ಯೆ ಅಭಿವೃದ್ಧಿ: ಆತಂಕದಲ್ಲಿರುವ ವ್ಯಾಪಾರಿಗಳ ಕೂಗು ಬಿಜೆಪಿಗೆ ಮುಳುವಾಗುವುದೇ?

- Advertisement -
- Advertisement -

ಅಯೋಧ್ಯೆಯ ಹನುಮಾನ್ ಗರ್ಹಿ ದೇವಸ್ಥಾನದಿಂದ ಸಲ್ಪ ದೂರದಲ್ಲಿ 45 ವರ್ಷದ ರಂಜಿತಾ ಗುಪ್ತಾ ಅವರು ಕಲಾಕೃತಿಗಳನ್ನು ಮಾರಾಟ ಮಾಡುವ ಸಣ್ಣ ಅಂಗಡಿಯನ್ನು ನಡೆಸುತ್ತಿದ್ದಾರೆ.

ರಾಮಮಂದಿರದ ಭಾಗವಾಗಿ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ರಸ್ತೆ ವಿಸ್ತರಣೆ ಯೋಜನೆಯಿಂದಾಗಿ ರಂಜಿತಾ ತಮ್ಮ ಅಂಗಡಿಯನ್ನು ಕಳೆದುಕೊಳ್ಳುವ ಆತಂಕದಲ್ಲಿ ಕಳೆದ ಕೆಲವು ತಿಂಗಳುಗಳಿಂದಲೂ ಇದ್ದಾರೆ.

ರಂಜಿತಾ ಅವರಿಗೆ ತೊದಲು ಸಮಸ್ಯೆ ಇದೆ. ಹೀಗಾಗಿ ಅವರು ಮದುವೆಯಾಗುವುದು ಕಷ್ಟವಾಯಿತು. ಸಹೋದರನೇ ರಂಜಿತಾ ಅವರನ್ನು ಪೋಷಣೆ ಮಾಡುತ್ತಿದ್ದು, ರಂಜಿತಾ ಅಂಗಡಿಯನ್ನು ನಡೆಸುತ್ತಿದ್ದಾರೆ.

ರಾಮಮಂದಿರಕ್ಕೆ ತೆರಳುವ ಮುನ್ನ, ಹನುಮಂತನ ಬೃಹತ್ ರಚನೆಯನ್ನು ಹೊಂದಿರುವ ಹನುಮಾನ್ ಗರ್ಹಿ ದೇವಸ್ಥಾನಕ್ಕೆ ಭಕ್ತರು ಮೊದಲು ಭೇಟಿ ನೀಡಬೇಕೆಂಬ ಸಂಪ್ರದಾಯ ಇಲ್ಲಿದೆ. ಹೀಗಾಗಿ ಇಲ್ಲಿನ ವ್ಯಾಪಾರಿಗಳ ಜೀವನ ನೆಮ್ಮದಿಯಾಗಿ ಇತ್ತು.

ರಂಜಿತಾ ಅವರ ಅಂಗಡಿಯನ್ನು ಅವರ ಅಜ್ಜ ನಿರ್ಮಿಸಿದರು. ನಂತರ ಅವರ ತಂದೆ ನಡೆಸುತ್ತಿದ್ದರು. ತಂದೆಯ ಮರಣದ ನಂತರ, ರಂಜಿತಾ ತನ್ನ ಸಹೋದರನೊಂದಿಗೆ ಅಂಗಡಿಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿರಿ: ಭೂ ಹಗರಣ, ಬ್ರಾಹ್ಮಣರ ಮತಗಳು ಕೈ ತಪ್ಪುವ ಭಯ: ಅಯೋಧ್ಯೆಯ ಟಿಕೆಟ್‌ ಯೋಗಿ ಕಳೆದುಕೊಳ್ಳಲು ಕಾರಣವೇ?

ಭಗವಾನ್ ರಾಮನ ಫೋಟೋಗಳೊಂದಿಗೆ ಫೋಟೋ ಫ್ರೇಮ್‌ಗಳು, ಬ್ಯಾಗ್‌ಗಳು, ಧೂಪದ್ರವ್ಯದ ತುಂಡುಗಳು ಮತ್ತು ಇತರ ಕೆಲವು ವರ್ಣರಂಜಿತ ಪೂಜಾ ವಸ್ತುಗಳನ್ನು ಈ ಸಣ್ಣ ಅಂಗಡಿಯಲ್ಲಿ ಕಾಣಬಹುದು. ರಂಜಿತಾ ಮಾರಾಟ ಮಾಡುತ್ತಿರುವ ಬ್ಯಾಗ್‌‌ ಒಂದರ ಮೇಲೆ ‘ಜೈ ಶ್ರೀರಾಮ್‌’ ಎಂದಿರುವುದನ್ನು ನೋಡಬಹುದು.

ರಾಮ ಮಂದಿರ ರಸ್ತೆ ವಿಸ್ತರಣೆ ಯೋಜನೆಯಿಂದಾಗಿ ತನ್ನ ಅಂಗಡಿ ಶೀಘ್ರದಲ್ಲೇ ನೆಲಸಮವಾಗಲಿದೆ ಎಂದು ರಂಜಿತಾ ನೋವು ತೋಡಿಕೊಂಡರು.

PC: The Wire, Ismat Ara

ಅಯೋಧ್ಯೆ ಅಭಿವೃದ್ಧಿ ಯೋಜನೆ

ಅಯೋಧ್ಯೆಯ ಅಭಿವೃದ್ಧಿ ಯೋಜನೆಯ ಭಾಗವಾಗಿ ಹನುಮಾನ್ ಗರ್ಹಿ ಮಾರ್ಗದಲ್ಲಿನ ನೂರಾರು ಅಂಗಡಿಗಳಿರುವ ರಸ್ತೆಯ ಅಗಲೀಕರಣ ಮಾಡಲು ಉದ್ದೇಶಿಸಲಾಗಿದೆ. ಇದರ ವಿರುದ್ಧ 2021ರಲ್ಲಿಯೇ ವ್ಯಾಪಾರಿಗಳು ಪ್ರತಿಭಟಿಸಿದರು.

ಅಂಗಡಿಗಳ ಮಾಲೀಕರು ಹಲವಾರು ಮೆರವಣಿಗೆಗಳನ್ನು ನಡೆಸಿದರು. ಜಿಲ್ಲಾಧಿಕಾರಿಗಳ ಕಚೇರಿಯ ಹೊರಗೆ ಧರಣಿ ಕುಳಿತರು. ನಂತರ ಪತ್ರಗಳನ್ನೂ ಬರೆದರು. ಸುಮಾರು ಒಂದು ವರ್ಷ ವರ್ಷದಿಂದಲೂ ವ್ಯಾಪಾರಿಗಳು ಆಡಳಿತದ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ.

ತೆರವುಗೊಳಿಸುವ ಅಂಗಡಿಗಳಿಗೆ ನೀಡುವ ಪರಿಹಾರದ ಬಗ್ಗೆಯಾಗಲೀ, ಸ್ಥಳಾಂತರಗೊಳ್ಳುವವರಿಗೆ ಹೊಸ ಅಂಗಡಿಗಳಾಗಲಿ ನೀಡುವ ಕುರಿತು ಸ್ಪಷ್ಟತೆ ಇಲ್ಲ ಎಂದು ವ್ಯಾಪಾರಿಗಳು ಆರೋಪಿಸಿದ್ದಾರೆ.

2019ರಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಬಾಬರಿ ಮಸೀದಿ ಭೂಮಿಯನ್ನು ಸುಪ್ರೀಂ ಕೋರ್ಟ್ ನೀಡಿದ ನಂತರ ರಾಮಮಂದಿರ ನಿರ್ಮಾಣ ಯೋಜನೆ ತ್ವರಿತವಾಗಿ ಪ್ರಗತಿಯಲ್ಲಿದೆ.

ಚುನಾವಣಾ ರಾಜಕೀಯ

ಜಿಲ್ಲೆಯಲ್ಲಿ ಫೆಬ್ರವರಿ 27 ರಂದು ಚುನಾವಣೆ ನಡೆಯಲಿದ್ದು, ಪ್ರತಿಪಕ್ಷಗಳು ವ್ಯಾಪಾರಿಗಳ ಆಗ್ರಹವನ್ನು ಚುನಾವಣಾ ವಿಷಯವನ್ನಾಗಿ ಬಳಸುತ್ತಿವೆ.

ಬಿಜೆಪಿ ಅಭ್ಯರ್ಥಿ ವಿವೇಕ್ ಪ್ರಕಾಶ್ ಗುಪ್ತಾ ವಿರುದ್ಧ ಮತದಾರರನ್ನು ಒಗ್ಗೂಡಿಸಲು ಅಯೋಧ್ಯೆಯ ಇಂಡಸ್ಟ್ರಿ ಅಂಡ್ ಬ್ಯುಸಿನೆಸ್ ಟ್ರಸ್ಟ್‌ನ ಮುಖ್ಯಸ್ಥ ಸಮಾಜವಾದಿ ಪಕ್ಷದ ನಂದ್ ಕುಮಾರ್ ಗುಪ್ತಾ ಮುಂದಾಗಿದ್ದಾರೆ.

“ಅನೇಕ ವ್ಯಾಪಾರಿಗಳು, ವಿಶೇಷವಾಗಿ ಸಣ್ಣ ಸಣ್ಣ ವ್ಯಾಪಾರಿಗಳು ಬಿಜೆಪಿಯಿಂದ ಭ್ರಮನಿರಸನಗೊಂಡಿದ್ದಾರೆ. ಏಕೆಂದರೆ ಅಭಿವೃದ್ಧಿ ಯೋಜನೆಯು ವ್ಯಾಪಾರಿಗಳ ಜೀವನೋಪಾಯದ ಮೇಲೆ ನೇರವಾಗಿ ದಾಳಿ ಮಾಡುತ್ತಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿರಿ: ಉತ್ತರ ಪ್ರದೇಶ: 2004ರ ನಕಲಿ ಎನ್‌ಕೌಂಟರ್‌ ಪ್ರಕರಣದಲ್ಲಿ 18 ಪೊಲೀಸರ ವಿರುದ್ಧ FIR ದಾಖಲು

ಆಗಸ್ಟ್ 5, 2020ರಂದು ರಾಮ ಮಂದಿರದ ಉದ್ಘಾಟನಾ ದಿನದಂದು (ಭೂಮಿ ಪೂಜೆಯಂದು) ಪ್ರಧಾನಿ ನರೇಂದ್ರ ಮೋದಿಯವರ ಭೇಟಿ ನೀಡುತ್ತಿದ್ದಾರೆಂದು ಸಣ್ಣ ಅಂಗಡಿಗಳನ್ನು ರಸ್ತೆಬದಿಯಿಂದ ತೆರವುಗೊಳಿಸಲಾಯಿತು ಎಂದು ಅವರು ದೂರುತ್ತಾರೆ.

“ಬಿಜೆಪಿ ನಿರ್ಮಿಸಲು ಬಯಸುವ ಈ ಹೊಸ ಮಾಲ್‌ನಂತಹ ಅಯೋಧ್ಯೆಯಲ್ಲಿ ವ್ಯಾಪಾರಿಗಳ ಸ್ಥಾನ ಎಲ್ಲಿದೆ?” ನಂದಕುಮಾರ್‌ ಪ್ರಶ್ನಿಸುತ್ತಾರೆ.

ವ್ಯಾಪಾರಿಗಳಿಗೆ ಪರಿಹಾರ ಸಿಗದಿರುವ ಆತಂಕ, ಆಡಳಿತದಿಂದ ಯಾವುದೇ ಅಧಿಕೃತ ಭರವಸೆ ಇಲ್ಲದಿರುವುದರಿಂದ ವ್ಯಾಪಾರಿ ವರ್ಗದ ಮತಗಳು ಬಿಜೆಪಿಯ ಕೈತಪ್ಪುವ ಸಾಧ್ಯತೆಯನ್ನು ಊಹಿಸಲಾಗಿದೆ.

ದೊಡ್ಡ ಕೈಗಾರಿಕೋದ್ಯಮಿಗಳಿಗೆ ಅಯೋಧ್ಯೆಯಲ್ಲಿ ಅವಕಾಶಗಳನ್ನು ನೀಡುವ ದೊಡ್ಡ ಯೋಜನೆ ರೂಪಿಸಲಾಗಿದೆ ಎಂದು ನಂದ್ ಕುಮಾರ್ ದೂರುತ್ತಾರೆ.

“ಅವರು ಅಯೋಧ್ಯೆಯಿಂದ ಇತರ ಆಟಗಾರರನ್ನು ಹೊರ ಹಾಕಲು ಬಯಸುತ್ತಾರೆ. ಏಕಾಂಗಿಯಾಗಿ ಆಡಳಿತ ನಡೆಸಲು ಇಚ್ಛಿಸುತ್ತಾರೆ” ಎನ್ನುವ ನಂದಕುಮಾರ್‌, “ಬುಲ್ಡೋಜರ್ ಪೆ ಸೈಕಲ್ ಭರಿ (ಬುಲ್ಡೋಜರ್‌ಅನ್ನು ಸೈಕಲ್ ಸೋಲಿಸುತ್ತದೆ)” ಎಂದಿದ್ದಾರೆ.

“ನಾವೂ ರಾಮನ ಸೇವೆ ಮಾಡಿದ್ದೇವೆ…”

ರಾಮಮಂದಿರ ಚಳವಳಿಯ ನಂತರ ಅಯೋಧ್ಯೆ ಅವಕಾಶಗಳ ಕೇಂದ್ರವಾಗಿದೆ ಎಂದು ಮುಖಂಡ ಅಭಯ್ ಕುಮಾರ್ ಪಾಂಡೆ ಅಭಿಪ್ರಾಯಪಡುತ್ತಾರೆ.

ಹಲವು ತಲೆಮಾರಿನ ಕುಟುಂಬಗಳ ಒಡೆತನದ ಈ ಅಂಗಡಿಗಳ ಭಾವನಾತ್ಮಕ ಮೌಲ್ಯವನ್ನು ಹಣದಿಂದ ಸರಿದೂಗಿಸಲು ಸಾಧ್ಯವಿಲ್ಲವಾದರೂ, ಅಯೋಧ್ಯೆಯ ಅಭಿವೃದ್ಧಿಯಿಂದ ವ್ಯಾಪಾರಿಗಳು ಸಹ ಪ್ರಯೋಜನ ಪಡೆಯುವಂತೆ ಆಡಳಿತವು ಖಾತ್ರಿಪಡಿಸಬೇಕು ಎಂದು ಪಾಂಡೆ ಹೇಳುತ್ತಾರೆ.

“ರಾಮಜನ್ಮಭೂಮಿ ಆಂದೋಲನದ ಸಂದರ್ಭದಲ್ಲಿ ಕರಸೇವಕರಿಗೆ ನೀರು, ಅನ್ನ ಬಡಿಸಿದ್ದು ನಾವು. ಶ್ರೀರಾಮನನ್ನು ಗೌರವಿಸಿದ ಜನರಿಗೆ ಜೀವನೋಪಾಯದ ಮಾರ್ಗವಿಲ್ಲವಾದರೆ, ಅವರು ಬಿಜೆಪಿಗೆ ಏಕೆ ಮತ ಹಾಕುತ್ತಾರೆ?” ಎಂದು ಅವರು ಪ್ರಶ್ನಿಸುತ್ತಾರೆ.

“ಮೆಹೆಂಗಾಯಿ ತೋ ರೋಕ್ ನಹೀಂ ಪಯೇಂಗೇ, ಮಗರ್ ಹುಮಾರಾ ಉತ್ಪಿದನ್ ರೋಕ್ ಸಕ್ತೇ ಹೈಂ (ಅವರು ಯಾವಾಗಲೂ ಹಣದುಬ್ಬರ ಮತ್ತು ಬೆಲೆ ಏರಿಕೆಯನ್ನು ನಿಯಂತ್ರಿಸಲು ಸಾಧ್ಯವಿಲ್ಲ. ಆದರೆ ಅವರು ಮಾಡಬಹುದಾದ ಕೆಲಸವೆಂದರೆ ನಮ್ಮ ಸಂಕಟವನ್ನು ತಡೆಯುವುದು)” ಎಂದು ವ್ಯಕ್ತಿಯೊಬ್ಬರು ಪ್ರತಿಕ್ರಿಯಿಸಿದ್ದಾರೆ.

ಅಯೋಧ್ಯೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ವಿವೇಕ್ ಪ್ರಕಾಶ್ ಗುಪ್ತಾ, ಎಸ್‌ಪಿಯ ತೇಜ್ ನಾರಾಯಣ ಪಾಂಡೆ ಮತ್ತು ಬಿಎಸ್‌ಪಿಯ ರವಿ ಮೌರ್ಯ ನಡುವೆ ಹಣಾಹಣಿ ನಡೆಯಲಿದೆ. ಕಾಂಗ್ರೆಸ್‌ನ ರೀತಾ ಮೌರ್ಯ ಮತ್ತು ಆಪ್‌ನ ಶುಭಂ ಶ್ರೀವಾಸ್ತವ ಕೂಡ ಕಣದಲ್ಲಿದ್ದಾರೆ.

ಮೂಲ: ದಿ ವೈರ್‌ (ಇಸ್ಮತ್ ಅರಾ)


ಇದನ್ನೂ ಓದಿರಿ: ಯೋಗಿ ಆದಿತ್ಯನಾಥ್‌ಗೆ ಅಯೋಧ್ಯೆಯಲ್ಲಿ ಹೆಚ್ಚು ವಿರೋಧವಿದೆ: ರಾಮ ಮಂದಿರದ ಪ್ರಧಾನ ಅರ್ಚಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಾಬ್ರಿ ಮಸೀದಿ ಧ್ವಂಸ ಮಾಡಿದ ಕರಸೇವಕರಿಗೆ ಸಕಲ ಸವಲತ್ತು ಪೂರೈಸಿದ ಬೀದಿ ವ್ಯಾಪಾರಿಗಳಿಗೆ ಶ್ರೀ ರಾಮನೇ ಶಿಕ್ಷೆ ವಿಧಿಸುತ್ತಿದ್ದಾನೆಂದು ಆತ್ಮ ವಿಮರ್ಶೆ ಮಾಡಿ ಕೊಳ್ಳುವುದು.

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...