Homeಮುಖಪುಟಅಯೋಧ್ಯೆ: ಮಸೀದಿಗಳ ಮೇಲೆ ಆಕ್ಷೇಪಾರ್ಹ ಪೋಸ್ಟರ್‌ ಅಂಟಿಸಿ ಗಲಭೆಗೆ ಪ್ರಚೋದನೆ; 7 ದುಷ್ಕರ್ಮಿಗಳ ಬಂಧನ

ಅಯೋಧ್ಯೆ: ಮಸೀದಿಗಳ ಮೇಲೆ ಆಕ್ಷೇಪಾರ್ಹ ಪೋಸ್ಟರ್‌ ಅಂಟಿಸಿ ಗಲಭೆಗೆ ಪ್ರಚೋದನೆ; 7 ದುಷ್ಕರ್ಮಿಗಳ ಬಂಧನ

- Advertisement -
- Advertisement -

ಅಯೋಧ್ಯೆಯ ಹಲವು ಮಸೀದಿಗಳ ಮೇಲೆ ಆಕ್ಷೇಪಾರ್ಹ ಪೋಸ್ಟರ್‌ ಹಾಕಿ ಹಾಗೂ ವಸ್ತುಗಳನ್ನು ಎಸೆದು ನಗರದ ಶಾಂತಿಯನ್ನು ಕದಡಲು ಯತ್ನಿಸಿದ ಆರೋಪದ ಮೇಲೆ ಏಳು ಜನರನ್ನು ಅಯೋಧ್ಯೆ ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಮಹೇಶ್ ಕುಮಾರ್ ಮಿಶ್ರಾ, ಪ್ರತ್ಯೂಷ್ ಶ್ರೀವಾಸ್ತವ, ನಿತಿನ್ ಕುಮಾರ್, ದೀಪಕ್ ಕುಮಾರ್ ಗೌರ್ ಅಲಿಯಾಸ್ ಗುಂಜನ್, ಬ್ರಿಜೇಶ್ ಪಾಂಡೆ, ಶತ್ರುಘ್ನ ಪ್ರಜಾಪತಿ ಮತ್ತು ವಿಮಲ್ ಪಾಂಡೆ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಅಯೋಧ್ಯೆಯ ನಿವಾಸಿಗಳಾಗಿದ್ದಾರೆ.

ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಅಯೋಧ್ಯೆ) ಶೈಲೇಶ್ ಕುಮಾರ್ ಪಾಂಡೆ ವಿವರಣೆ ನೀಡಿದ್ದು, “ಘಟನೆಯನ್ನು 11 ಜನರು ನಡೆಸಿದ್ದು, ಅದರಲ್ಲಿ ಏಳು ಮಂದಿಯನ್ನು ಬಂಧಿಸಲಾಗಿದೆ. ನಾಲ್ವರು ತಲೆಮರೆಸಿಕೊಂಡಿದ್ದಾರೆ” ಎಂದು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಹೇಶ್ ನೇತೃತ್ವದಲ್ಲಿ ನಾಲ್ಕು ದ್ವಿಚಕ್ರವಾಹನಗಳಲ್ಲಿ ಬಂದ ಒಟ್ಟು ಎಂಟು ಮಂದಿ ಮಸೀದಿಗಳ ಹೊರಗೆ ಆಕ್ಷೇಪಾರ್ಹ ಪೋಸ್ಟರ್‌ಗಳು ಮತ್ತು ವಸ್ತುಗಳನ್ನು ಹಾಕಿದ್ದಾರೆ. ಘಟನೆಯನ್ನು ಗಂಭೀರವಾಗಿ ತೆಗೆದುಕೊಂಡ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ಆರೋಪಿಗಳಿಂದ ಹಲವು ವಸ್ತುಗಳು, ಮೊಬೈಲ್ ಫೋನ್ ಮತ್ತು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

“ನಾವು ಏಳು ಜನರನ್ನು ಬಂಧಿಸಿದ್ದೇವೆ, ನಾಲ್ವರು ತಲೆಮರೆಸಿಕೊಂಡಿದ್ದಾರೆ. ಶೀಘ್ರದಲ್ಲೇ ಅವರನ್ನು ಬಂಧಿಸುತ್ತೇವೆ. ದರೋಡೆಕೋರರ ಕಾಯಿದೆ ಮತ್ತು ಎನ್‌ಎಸ್‌ಎ ಅಡಿಯಲ್ಲಿ ಅವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು” ಎಂದು ಎಸ್‌ಎಸ್‌ಪಿ ತಿಳಿಸಿದ್ದಾರೆ.

ದೆಹಲಿಯ ಜಹಾಂಗೀರ್ಪುರಿಯಲ್ಲಿ ಇತ್ತೀಚೆಗೆ ನಡೆದ ಘಟನೆಗೆ ವಿರೋಧವಾಗಿ ಪ್ರಮುಖ ಸಂಚುಕೋರ ಮಹೇಶ್ ಕುಮಾರ್ ಮಿಶ್ರಾ ಮತ್ತು ಆತನ ಇತರ ಸಹಚರರೊಂದಿಗೆ ಬ್ರಿಜೇಶ್ ಪಾಂಡೆ ಮನೆಯಲ್ಲಿ ಸಂಚು ರೂಪಿಸಲಾಗಿದೆ ಎಂದು ತನಿಖೆಯ ವೇಳೆ ತಿಳಿದುಬಂದಿದೆ.

ಬುಧವಾರ ರಾತ್ರಿ ಆರೋಪಿಗಳು ಮೊದಲು ಬೆನ್ನಿಗಂಜ್ ತಿರಾಹಾಕ್ಕೆ ಹೋಗಿದ್ದರು. ಅಲ್ಲಿ ಪೊಲೀಸ್ ರೆಸ್ಪಾನ್ಸ್ ವೆಹಿಕಲ್ (ಪಿಆರ್‌ವಿ) ನೋಡಿದರು. ಹೀಗಾಗಿ ಬೆಣಿಗಂಜ್ ಮಸೀದಿಯ ಬಳಿ ದುಷ್ಕೃತ್ಯ ನಡೆಸಲು ಸಾಧ್ಯವಾಗಲಿಲ್ಲ. ಆನಂತರ ಇತರ ಮಸೀದಿಗಳಿಗೆ ತೆರಳುತ್ತಾರೆ. ದುಷ್ಕರ್ಮಿಗಳು ಅಯೋಧ್ಯೆಯ ಮಸೀದಿ ಕಾಶ್ಮೀರಿ ಮೊಹಲ್ಲಾ, ತತ್ಶಾ ಮಸೀದಿ, ಘೋಸಿಯಾನ ರಾಮನಗರ ಮಸೀದಿ, ಈದ್ಗಾ ಸಿವಿಲ್ ಲೈನ್ ಮಸೀದಿ ಮತ್ತು ದರ್ಗಾ ಜೈಲಿನ ಹಿಂಭಾಗದಲ್ಲಿರುವ ಗುಲಾಬ್ ಶಾ ದರ್ಗಾದಲ್ಲಿ ಆಕ್ಷೇಪಾರ್ಹ ಪೋಸ್ಟರ್‌ಗಳು ಮತ್ತು ವಸ್ತುಗಳನ್ನು ಹಾಕಿದ್ದಾರೆ.

ಇದನ್ನೂ ಓದಿರಿ: ಗುಜರಾತ್ ಶಾಸಕ, ದಲಿತ ನಾಯಕ ಜಿಗ್ನೇಶ್ ಮೇವಾನಿಗೆ ಜಾಮೀನು ಮಂಜೂರು

ಬಂಧಿತ ಏಳು ಮಂದಿಯ ಪೈಕಿ ಮೂವರು ಆರೋಪಿಗಳು ಈ ಹಿಂದೆ ಹಲವು ಕೃತ್ಯಗಳಲ್ಲಿ ಭಾಗಿಯಾಗಿರುವ ಇತಿಹಾಸವನ್ನು ಹೊಂದಿದ್ದಾರೆ.

“ಆರೋಪಿ ಮಹೇಶ್ ವಿರುದ್ಧ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಅಯೋಧ್ಯೆಯಲ್ಲಿ ನಾಲ್ಕು ಪ್ರಕರಣಗಳು ದಾಖಲಾಗಿವೆ. ಇದಲ್ಲದೆ ಆರೋಪಿಗಳಾದ ನಿತಿನ್ ಮತ್ತು ವಿಮಲ್ ಅವರ ವಿರುದ್ಧವೂ ಪ್ರಕರಣಗಳು ದಾಖಲಾಗಿವೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಎಲ್ಲಾ ಏಳು ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 295 (ಯಾವುದೇ ವರ್ಗದ ಧರ್ಮವನ್ನು ಅವಮಾನಿಸುವ ಉದ್ದೇಶದಿಂದ ಪೂಜಾ ಸ್ಥಳಗಳನ್ನು ಅಪವಿತ್ರಗೊಳಿಸುವುದು), ಮತ್ತು 295-ಎ (ಯಾವುದೇ ವರ್ಗದ ಧಾರ್ಮಿಕ ಭಾವನೆಗಳನ್ನು ಆಕ್ರೋಶಗೊಳಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...