Homeಮುಖಪುಟಅಯೋಧ್ಯೆ: ಮಸೀದಿಗಳ ಮೇಲೆ ಆಕ್ಷೇಪಾರ್ಹ ಪೋಸ್ಟರ್‌ ಅಂಟಿಸಿ ಗಲಭೆಗೆ ಪ್ರಚೋದನೆ; 7 ದುಷ್ಕರ್ಮಿಗಳ ಬಂಧನ

ಅಯೋಧ್ಯೆ: ಮಸೀದಿಗಳ ಮೇಲೆ ಆಕ್ಷೇಪಾರ್ಹ ಪೋಸ್ಟರ್‌ ಅಂಟಿಸಿ ಗಲಭೆಗೆ ಪ್ರಚೋದನೆ; 7 ದುಷ್ಕರ್ಮಿಗಳ ಬಂಧನ

- Advertisement -
- Advertisement -

ಅಯೋಧ್ಯೆಯ ಹಲವು ಮಸೀದಿಗಳ ಮೇಲೆ ಆಕ್ಷೇಪಾರ್ಹ ಪೋಸ್ಟರ್‌ ಹಾಕಿ ಹಾಗೂ ವಸ್ತುಗಳನ್ನು ಎಸೆದು ನಗರದ ಶಾಂತಿಯನ್ನು ಕದಡಲು ಯತ್ನಿಸಿದ ಆರೋಪದ ಮೇಲೆ ಏಳು ಜನರನ್ನು ಅಯೋಧ್ಯೆ ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಮಹೇಶ್ ಕುಮಾರ್ ಮಿಶ್ರಾ, ಪ್ರತ್ಯೂಷ್ ಶ್ರೀವಾಸ್ತವ, ನಿತಿನ್ ಕುಮಾರ್, ದೀಪಕ್ ಕುಮಾರ್ ಗೌರ್ ಅಲಿಯಾಸ್ ಗುಂಜನ್, ಬ್ರಿಜೇಶ್ ಪಾಂಡೆ, ಶತ್ರುಘ್ನ ಪ್ರಜಾಪತಿ ಮತ್ತು ವಿಮಲ್ ಪಾಂಡೆ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಅಯೋಧ್ಯೆಯ ನಿವಾಸಿಗಳಾಗಿದ್ದಾರೆ.

ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಅಯೋಧ್ಯೆ) ಶೈಲೇಶ್ ಕುಮಾರ್ ಪಾಂಡೆ ವಿವರಣೆ ನೀಡಿದ್ದು, “ಘಟನೆಯನ್ನು 11 ಜನರು ನಡೆಸಿದ್ದು, ಅದರಲ್ಲಿ ಏಳು ಮಂದಿಯನ್ನು ಬಂಧಿಸಲಾಗಿದೆ. ನಾಲ್ವರು ತಲೆಮರೆಸಿಕೊಂಡಿದ್ದಾರೆ” ಎಂದು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಹೇಶ್ ನೇತೃತ್ವದಲ್ಲಿ ನಾಲ್ಕು ದ್ವಿಚಕ್ರವಾಹನಗಳಲ್ಲಿ ಬಂದ ಒಟ್ಟು ಎಂಟು ಮಂದಿ ಮಸೀದಿಗಳ ಹೊರಗೆ ಆಕ್ಷೇಪಾರ್ಹ ಪೋಸ್ಟರ್‌ಗಳು ಮತ್ತು ವಸ್ತುಗಳನ್ನು ಹಾಕಿದ್ದಾರೆ. ಘಟನೆಯನ್ನು ಗಂಭೀರವಾಗಿ ತೆಗೆದುಕೊಂಡ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ಆರೋಪಿಗಳಿಂದ ಹಲವು ವಸ್ತುಗಳು, ಮೊಬೈಲ್ ಫೋನ್ ಮತ್ತು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

“ನಾವು ಏಳು ಜನರನ್ನು ಬಂಧಿಸಿದ್ದೇವೆ, ನಾಲ್ವರು ತಲೆಮರೆಸಿಕೊಂಡಿದ್ದಾರೆ. ಶೀಘ್ರದಲ್ಲೇ ಅವರನ್ನು ಬಂಧಿಸುತ್ತೇವೆ. ದರೋಡೆಕೋರರ ಕಾಯಿದೆ ಮತ್ತು ಎನ್‌ಎಸ್‌ಎ ಅಡಿಯಲ್ಲಿ ಅವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು” ಎಂದು ಎಸ್‌ಎಸ್‌ಪಿ ತಿಳಿಸಿದ್ದಾರೆ.

ದೆಹಲಿಯ ಜಹಾಂಗೀರ್ಪುರಿಯಲ್ಲಿ ಇತ್ತೀಚೆಗೆ ನಡೆದ ಘಟನೆಗೆ ವಿರೋಧವಾಗಿ ಪ್ರಮುಖ ಸಂಚುಕೋರ ಮಹೇಶ್ ಕುಮಾರ್ ಮಿಶ್ರಾ ಮತ್ತು ಆತನ ಇತರ ಸಹಚರರೊಂದಿಗೆ ಬ್ರಿಜೇಶ್ ಪಾಂಡೆ ಮನೆಯಲ್ಲಿ ಸಂಚು ರೂಪಿಸಲಾಗಿದೆ ಎಂದು ತನಿಖೆಯ ವೇಳೆ ತಿಳಿದುಬಂದಿದೆ.

ಬುಧವಾರ ರಾತ್ರಿ ಆರೋಪಿಗಳು ಮೊದಲು ಬೆನ್ನಿಗಂಜ್ ತಿರಾಹಾಕ್ಕೆ ಹೋಗಿದ್ದರು. ಅಲ್ಲಿ ಪೊಲೀಸ್ ರೆಸ್ಪಾನ್ಸ್ ವೆಹಿಕಲ್ (ಪಿಆರ್‌ವಿ) ನೋಡಿದರು. ಹೀಗಾಗಿ ಬೆಣಿಗಂಜ್ ಮಸೀದಿಯ ಬಳಿ ದುಷ್ಕೃತ್ಯ ನಡೆಸಲು ಸಾಧ್ಯವಾಗಲಿಲ್ಲ. ಆನಂತರ ಇತರ ಮಸೀದಿಗಳಿಗೆ ತೆರಳುತ್ತಾರೆ. ದುಷ್ಕರ್ಮಿಗಳು ಅಯೋಧ್ಯೆಯ ಮಸೀದಿ ಕಾಶ್ಮೀರಿ ಮೊಹಲ್ಲಾ, ತತ್ಶಾ ಮಸೀದಿ, ಘೋಸಿಯಾನ ರಾಮನಗರ ಮಸೀದಿ, ಈದ್ಗಾ ಸಿವಿಲ್ ಲೈನ್ ಮಸೀದಿ ಮತ್ತು ದರ್ಗಾ ಜೈಲಿನ ಹಿಂಭಾಗದಲ್ಲಿರುವ ಗುಲಾಬ್ ಶಾ ದರ್ಗಾದಲ್ಲಿ ಆಕ್ಷೇಪಾರ್ಹ ಪೋಸ್ಟರ್‌ಗಳು ಮತ್ತು ವಸ್ತುಗಳನ್ನು ಹಾಕಿದ್ದಾರೆ.

ಇದನ್ನೂ ಓದಿರಿ: ಗುಜರಾತ್ ಶಾಸಕ, ದಲಿತ ನಾಯಕ ಜಿಗ್ನೇಶ್ ಮೇವಾನಿಗೆ ಜಾಮೀನು ಮಂಜೂರು

ಬಂಧಿತ ಏಳು ಮಂದಿಯ ಪೈಕಿ ಮೂವರು ಆರೋಪಿಗಳು ಈ ಹಿಂದೆ ಹಲವು ಕೃತ್ಯಗಳಲ್ಲಿ ಭಾಗಿಯಾಗಿರುವ ಇತಿಹಾಸವನ್ನು ಹೊಂದಿದ್ದಾರೆ.

“ಆರೋಪಿ ಮಹೇಶ್ ವಿರುದ್ಧ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಅಯೋಧ್ಯೆಯಲ್ಲಿ ನಾಲ್ಕು ಪ್ರಕರಣಗಳು ದಾಖಲಾಗಿವೆ. ಇದಲ್ಲದೆ ಆರೋಪಿಗಳಾದ ನಿತಿನ್ ಮತ್ತು ವಿಮಲ್ ಅವರ ವಿರುದ್ಧವೂ ಪ್ರಕರಣಗಳು ದಾಖಲಾಗಿವೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಎಲ್ಲಾ ಏಳು ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 295 (ಯಾವುದೇ ವರ್ಗದ ಧರ್ಮವನ್ನು ಅವಮಾನಿಸುವ ಉದ್ದೇಶದಿಂದ ಪೂಜಾ ಸ್ಥಳಗಳನ್ನು ಅಪವಿತ್ರಗೊಳಿಸುವುದು), ಮತ್ತು 295-ಎ (ಯಾವುದೇ ವರ್ಗದ ಧಾರ್ಮಿಕ ಭಾವನೆಗಳನ್ನು ಆಕ್ರೋಶಗೊಳಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...