Homeಮುಖಪುಟಕೇರಳ: ರಾಮಮಂದಿರ ಉದ್ಘಾಟನೆ ದಿನ ಅನುಮತಿಯಿಲ್ಲದೆ ಶಾಲೆಗೆ ರಜೆ; ತನಿಖೆಗೆ ಆದೇಶ

ಕೇರಳ: ರಾಮಮಂದಿರ ಉದ್ಘಾಟನೆ ದಿನ ಅನುಮತಿಯಿಲ್ಲದೆ ಶಾಲೆಗೆ ರಜೆ; ತನಿಖೆಗೆ ಆದೇಶ

- Advertisement -
- Advertisement -

ಕೇರಳ ಸರಕಾರದ ಅನುಮತಿಯಿಲ್ಲದೆ ಅಯೋಧ್ಯೆಯಲ್ಲಿ ನಡೆದ ಪ್ರಾಣ ಪ್ರತಿಷ್ಠಾನ ಸಮಾರಂಭದ ನಿಮಿತ್ತ ಕಾಸರಗೋಡು ಜಿಲ್ಲೆಯ ಪ್ರೌಢಶಾಲೆಗೆ ಸೋಮವಾರ ರಜೆ ಘೋಷಿಸಿರುವ ಘಟನೆ ನಡೆದಿದ್ದು, ಈ ಕುರಿತು ತನಿಖೆಗೆ ಕೇರಳ ಸರಕಾರ ಆದೇಶಿಸಿದೆ.

ಕೇರಳದಲ್ಲಿ ಪಿಣರಾಯ್‌ ವಿಜಯನ್‌ ನೇತೃತ್ವದ ಸಿಪಿಐ(ಎಂ) ಸರಕಾರವಿದೆ. ರಾಮಮಂದಿರ ಉದ್ಘಾಟನೆ ದಿನ ಯಾವುದೇ ಸರಕಾರಿ ರಜೆಯನ್ನು ಸರಕಾರಿ ಕಚೇರಿ ಅಥವಾ ಶಿಕ್ಷಣ ಸಂಸ್ಥೆಗಳಿಗೆ ಘೋಷಿಸಿರಲಿಲ್ಲ. ಆದರೆ ಕಾಸರಗೋಡಿನ ಕೂಡ್ಲುನಲ್ಲಿರುವ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿತ್ತು.

ಈ ಬಗ್ಗೆ ತಿಳಿಯುತ್ತಿದ್ದಂತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ  ಶಿಕ್ಷಣ ಸಚಿವ ವಿ ಶಿವನ್‌ಕುಟ್ಟಿ ಅವರು ಸಾರ್ವಜನಿಕ ಶಿಕ್ಷಣ ಮಹಾನಿರ್ದೇಶಕರಿಂದ ವರದಿ ಕೇಳಿದ್ದಾರೆ. ಶಿಕ್ಷಣ ಇಲಾಖೆಯಿಂದ ಯಾವುದೇ ಅಧಿಕೃತ ನಿರ್ದೇಶನವಿಲ್ಲದೆ ನಿರ್ದಿಷ್ಟ ಶಾಲೆಗೆ ಏಕೆ ರಜೆ ಘೋಷಿಸಲಾಗಿದೆ ಎಂಬುದರ ಕುರಿತು 24 ಗಂಟೆಗಳ ಒಳಗೆ ವರದಿ ಸಲ್ಲಿಸುವಂತೆ ಮಹಾನಿರ್ದೇಶಕರಿಗೆ ತಿಳಿಸಲಾಗಿದೆ ಎಂದು ಸಚಿವರು ತಮ್ಮ ಫೇಸ್‌ಬುಕ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಕೂಡ್ಲುನಲ್ಲಿರುವ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆಯು ಬಿಜೆಪಿ ಆಡಳಿತವಿರುವ ಮಧೂರು ಪಂಚಾಯತ್‌ ವ್ಯಾಪ್ತಿಯಲ್ಲಿದೆ. ಪಂಚಾಯಿತಿಯ 20 ವಾರ್ಡ್‌ಗಳಲ್ಲಿ 13 ಮಂದಿ ಬಿಜೆಪಿಯ ಪ್ರತಿನಿಧಿಗಳಿದ್ದಾರೆ.

ಬಿಜೆಪಿ ಆಡಳಿತದ ಪಂಚಾಯತ್ ಮತ್ತು ಪೋಷಕರ ಒಂದು ವಿಭಾಗದ ಒತ್ತಡದಿಂದಾಗಿ ಶಾಲೆಯ ಮುಖ್ಯೋಪಾಧ್ಯಾಯರು ಸೋಮವಾರ ರಜೆ ಘೋಷಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಶಾಲೆಯು ಸೋಮವಾರ ರಜೆ ಘೋಷಿಸಲು ಇಲಾಖೆಯಿಂದ ಅನುಮತಿ ಕೋರಿತ್ತು, ಆದರೆ ಶಿಕ್ಷಣ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಬೇಡಿಕೆಯನ್ನು ತಿರಸ್ಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಪ್ರಾಣ ಪ್ರತಿಷ್ಠಾನ ಸಮಾರಂಭವನ್ನು ರಾಜ್ಯದ ಕಾರ್ಯಕ್ರಮವಾಗಿ ವೀಕ್ಷಣೆಗೆ ಅವಕಾಶ ನೀಡಲು ನಿರಾಕರಿಸಿದ್ದರು. ಸಂವಿಧಾನವನ್ನು ಸಂರಕ್ಷಿಸಲು ಪ್ರತಿಜ್ಞೆ ಮಾಡಿದವರಾಗಿ, ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಪಿಣರಾಯ್‌ ವಿಜಯನ್‌ ನಿರಾಕರಿಸಿದ್ದರು. ಪ್ರಾಣ ಪ್ರತಿಷ್ಠಾ ಸಮಾರಂಭವು ರಾಜಕೀಯ ತಿರುವು ಪಡೆದುಕೊಂಡಿರುವುದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಧಾರ್ಮಿಕ ಆರಾಧನೆಯ ಸ್ಥಳದಲ್ಲಿ ನಡೆಯುವ ಸಮಾರಂಭವನ್ನು ರಾಷ್ಟ್ರದ ಕಾರ್ಯಕ್ರಮವಾಗಿ ಆಚರಿಸುವುದು ಗಮನಾರ್ಹ ಬದಲಾವಣೆಯನ್ನು ಸೂಚಿಸುತ್ತದೆ. ಭಾರತದ ಜಾತ್ಯತೀತತೆ ಎಂದರೆ ಧರ್ಮ ಹಾಗೂ ರಾಷ್ಟ್ರದ ಪ್ರತ್ಯೇಕತೆ. ಆ ಪ್ರತ್ಯೇಕತೆಯನ್ನು ಕಾಪಾಡಿಕೊಳ್ಳುವ ಸಂಪ್ರದಾಯವನ್ನು ನಾವು ಹೊಂದಿದ್ದೇವೆ ಎಂದು ಹೇಳಿದ್ದರು.

ಇದನ್ನು ಓದಿ: ರಾಮಮಂದಿರದ ಉದ್ಘಾಟನೆಯಲ್ಲಿ ಮೋದಿ: ಕಳವಳ ವ್ಯಕ್ತಪಡಿಸಿ ಹೇಳಿಕೆ ಬಿಡುಗಡೆ ಮಾಡಿದ 22 ಅನಿವಾಸಿ ಸಂಸ್ಥೆಗಳು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಬಿಎಸ್‌ಪಿ ತೀವ್ರ ಆಕ್ರೋಶ, ಕುಟುಂಬಕ್ಕೆ ನೆರವು ನೀಡುವಂತೆ ಸರ್ಕಾರಕ್ಕೆ ಆಗ್ರಹ

ರಾಯಚೂರು ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ದಲಿತ ಮುಖಂಡ ಹಾಗೂ ಯುವಕ ಭೂಮಾನಂದ (32) ಅವರನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ಘಟನೆಯು ದೇವದುರ್ಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...