Homeಮುಖಪುಟಅಯೋಧ್ಯೆ | ರಾಮ ಮಂದಿರದ ಸ್ವಚ್ಛತಾ ಸಿಬ್ಬಂದಿಯ ಮೇಲೆ ಪದೇ ಪದೇ ಸಾಮೂಹಿಕ ಅತ್ಯಾಚಾರ; 8...

ಅಯೋಧ್ಯೆ | ರಾಮ ಮಂದಿರದ ಸ್ವಚ್ಛತಾ ಸಿಬ್ಬಂದಿಯ ಮೇಲೆ ಪದೇ ಪದೇ ಸಾಮೂಹಿಕ ಅತ್ಯಾಚಾರ; 8 ಮಂದಿಯ ಬಂಧನ

- Advertisement -
- Advertisement -

ಬಾಬರಿ ಮಸೀದಿ ಒಡೆದು ಕಟ್ಟಲಾಗಿರುವ ಅಯೋಧ್ಯೆ ರಾಮ ಮಂದಿರದ ಸ್ವಚ್ಛತಾ ಸಿಬ್ಬಂದಿಯೂ ಆಗಿರುವ ಕಾಲೇಜು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಶುಕ್ರವಾರ ಎಂಟು ಮಂದಿಯನ್ನು ಅಯೋಧ್ಯೆಯಲ್ಲಿ ಬಂಧಿಸಲಾಗಿದೆ. ವಿದ್ಯಾರ್ಥಿನಿಯ ಸ್ನೇಹಿತ ಅಯೋಧ್ಯಾ ಜಿಲ್ಲೆಯ ಸಹದತ್‌ಗಂಜ್‌ನ ನಿವಾಸಿ ವಂಶ್ ಚೌಧರಿ, “ಮನರಂಜನೆಗಾಗಿ” ಜಿಲ್ಲೆಯ ಪ್ರೇಕ್ಷಣೀಯ ಸ್ಥಳಗಳಿಗೆ ಕರೆದುಕೊಂಡು ಹೋಗುವುದಾಗಿ ಪುಸಲಾಯಿಸಿ ಕರೆದು ಅತಿಥಿ ಗೃಹದಲ್ಲಿ ಅತ್ಯಾಚಾರ ಎಸಗಿದ್ದಾಗಿ ಸಂತ್ರಸ್ತೆ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಆಗಸ್ಟ್ 16 ರಂದು ಅವರು ನನ್ನನ್ನು ಅತಿಥಿ ಗೃಹಕ್ಕೆ ಕರೆದೊಯ್ದು ಅಲ್ಲಿ ನನ್ನನ್ನು ಬಂಧಿಸಿದರು. ಮೊದಲಿಗೆ ವಂಶ್‌ ಚೌಧರಿ ತನ್ನ ಇತರ ಇಬ್ಬರು ಸ್ನೇಹಿತರೊಂದಿಗೆ ಸೇರಿ ನನ್ನ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದನು. ನಂತರ ನನಗೆ ಆಘಾತವನ್ನುಂಟುಮಾಡಲು ಇನ್ನೂ ಮೂರು ಸ್ನೇಹಿತರನ್ನು ಆಹ್ವಾನಿಸಿದ್ದಾನೆ” ಎಂದು ವಿದ್ಯಾರ್ಥಿನಿ ಹೇಳಿದ್ದಾರೆ.

ಅಯೋಧ್ಯಾ ಪಟ್ಟಣದ ಪದವಿ ಕಾಲೇಜಿನಲ್ಲಿ ಮೂರನೇ ವರ್ಷದ ಬಿಎ ವಿದ್ಯಾರ್ಥಿನಿಯಾಗಿರುವ ಸಂತ್ರಸ್ತೆ, ಬಾಬರಿ ಮಸೀದಿ ಒಡೆದು ಕಟ್ಟಿರುವ ರಾಮ ಮಂದಿರದಲ್ಲಿ ಸ್ವಚ್ಛತಾ ಸಿಬ್ಬಂದಿಯಾಗಿಯೂ ಕೆಲಸ ಮಾಡುತ್ತಿದ್ದಾರೆ. “ಅತಿಥಿ ಗೃಹದಿಂದ, ಅವರು ನನ್ನನ್ನು ಬಂವೀರ್‌ಪುರದ ಬ್ಯಾರೇಜ್‌ಗೆ ಕರೆದೊಯ್ದು ಮತ್ತೆ ಅತ್ಯಾಚಾರ ನಡೆಸಿದ್ದಾರೆ. ಅವರು ನನ್ನನ್ನು ಆಗಸ್ಟ್ 18 ರಂದು ಬಿಡುಗಡೆ ಮಾಡಿದರು”ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ: Arvind Kejriwal | ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರಾಜೀನಾಮೆ!

“ನಮ್ಮೆಲ್ಲರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರಿಂದ ನನ್ನ ಕುಟುಂಬದ ಸದಸ್ಯರು, ಜೀವ ಭಯಕ್ಕೆ ನಾವು ಪೊಲೀಸರಿಗೆ ದೂರು ನೀಡಿರಲಿಲ್ಲ. ಆದರೆ ಆಗಸ್ಟ್ 25 ರಂದು ನಾನು ರಾಮ ಮಂದಿರಕ್ಕೆ ಹೋಗುತ್ತಿದ್ದಾಗ ವಂಶ್ ಮತ್ತೆ ನನ್ನನ್ನು ಅಪಹರಿಸಿದ್ದಾನೆ. ಆತನೊಂದಿಗೆ ಆತನ ಸ್ನೇಹಿತರಾದ ಉದಿತ್ ಕುಮಾರ್, ಸತ್ರಾಂ ಚೌಧರಿ ಹಾಗೂ ಇಬ್ಬರು ಅಪರಿಚಿತ ವ್ಯಕ್ತಿಗಳಿದ್ದರು. ಅವರು ಕಾರಿನಲ್ಲಿ ನನ್ನ ಮೇಲೆ ಹಲ್ಲೆ ಮಾಡಲು ಪ್ರಯತ್ನಿಸಿದಾಗ, ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಿತ್ತು. ಈ ವೇಳೆ ನಾನು ಅವರಿಂದ ತಪ್ಪಿಸಿಕೊಂಡಿ ಓಡಿಹೋಗಿದ್ದೆ” ಎಂದು ದೂರಿನಲ್ಲಿ ಸಂತ್ರಸ್ತೆ ಉಲ್ಲೇಖಿಸಿದ್ದಾಗಿ ಪೊಲೀಸ್ ಮೂಲಗಳ ಹೇಳಿವೆ ಎಂದು ವರದಿಯಾಗಿದೆ.

ಅಪರಾಧದ ಸ್ಥಳಗಳೆಂದು ವಿದ್ಯಾರ್ಥಿನಿ ಗುರುತಿಸಿರುವ ಪ್ರದೇಶಗಳು ರಾಮ ಮಂದಿರ ಪಟ್ಟಣದ ಹೆಚ್ಚಿನ ಭದ್ರತೆ ಇರುವ ವಲಯಗಳಾಗಿವೆ. ಬಾಲಕಿ ಸ್ಥಳೀಯ ಸುದ್ದಿಗಾರರೊಂದಿಗೆ ಮಾತನಾಡಿ, ತಾನು ಮೊದಲು ಆಗಸ್ಟ್ 26 ರಂದು ಪೊಲೀಸರಿಗೆ ದೂರು ನೀಡಲು ಹೋಗಿದ್ದೆ ಆದರೆ ತನ್ನ ಪ್ರಕರಣ ದಾಖಲಿಸಲಾಗಿಲ್ಲ ಎಂದು ಹೇಳಿದ್ದಾರೆ.

“ನಾವು ವಿಚಾರಣೆಯ ನಂತರ ಸೆಪ್ಟೆಂಬರ್ 2 ರಂದು ಪ್ರಕರಣವನ್ನು ದಾಖಲಿಸಿದ್ದೇವೆ. ಅಂತಿಮವಾಗಿ ಎಲ್ಲಾ ಎಂಟು ಆರೋಪಿಗಳನ್ನು ಬಂಧಿಸಿದ್ದೇವೆ. ಅವರನ್ನು ನ್ಯಾಯಾಲಯದಿಂದ ಜೈಲಿಗೆ ಕಳುಹಿಸಲಾಗಿದೆ. ಎಂದು ಅಯೋಧ್ಯೆ ಕ್ಯಾಂಟ್ ಪೊಲೀಸ್ ಠಾಣೆಯ ಉಸ್ತುವಾರಿ ಅಮರೇಂದ್ರ ಸಿಂಗ್ ಹೇಳಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಪ್ರಮುಖ ಆರೋಪಿ ವಂಶ್ ಚೌದರಿಯನ್ನು ತಿಳಿದಿರುವ ಕಾರಣ ಹುಡುಗಿ ವಂಶ್ ಅವರನ್ನು ನಂಬಿದ್ದಳು ಎಂದು ಅಧಿಕಾರಿ ಹೇಳಿದ್ದಾರೆ.

ವಿಡಿಯೊ ನೋಡಿ: ಚಕ್ರವರ್ತಿ ಸೂಲಿಬೆಲೆ ಪ್ರತಾಪ್ ಸಿಂಹ ಜಗಳವಾಡ್ತಿರೋದು ಏಕೆ? ಫುಲ್ ಎಪಿಸೋಡ್ Sulibele versus Pratap Simha

ಇದನ್ನೂ ಓದಿ: ‘Prisonor No. 626710 is present’ ಸಾಕ್ಷ್ಯ ಚಿತ್ರ | ‘ನಿನ್ನೆಯ ಸಂಜೆ ಉಮರ್‌ ಜೊತೆ…’ | ಉಮರ್ ಖಾಲಿದ್ ವಿಚಾರಣೆಯಿಲ್ಲದ ಬಂಧನಕ್ಕೆ 4 ವರ್ಷಗಳು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...