Homeಮುಖಪುಟಅಯೋಧ್ಯೆ | ರಾಮ ಮಂದಿರದ ಸ್ವಚ್ಛತಾ ಸಿಬ್ಬಂದಿಯ ಮೇಲೆ ಪದೇ ಪದೇ ಸಾಮೂಹಿಕ ಅತ್ಯಾಚಾರ; 8...

ಅಯೋಧ್ಯೆ | ರಾಮ ಮಂದಿರದ ಸ್ವಚ್ಛತಾ ಸಿಬ್ಬಂದಿಯ ಮೇಲೆ ಪದೇ ಪದೇ ಸಾಮೂಹಿಕ ಅತ್ಯಾಚಾರ; 8 ಮಂದಿಯ ಬಂಧನ

- Advertisement -
- Advertisement -

ಬಾಬರಿ ಮಸೀದಿ ಒಡೆದು ಕಟ್ಟಲಾಗಿರುವ ಅಯೋಧ್ಯೆ ರಾಮ ಮಂದಿರದ ಸ್ವಚ್ಛತಾ ಸಿಬ್ಬಂದಿಯೂ ಆಗಿರುವ ಕಾಲೇಜು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಶುಕ್ರವಾರ ಎಂಟು ಮಂದಿಯನ್ನು ಅಯೋಧ್ಯೆಯಲ್ಲಿ ಬಂಧಿಸಲಾಗಿದೆ. ವಿದ್ಯಾರ್ಥಿನಿಯ ಸ್ನೇಹಿತ ಅಯೋಧ್ಯಾ ಜಿಲ್ಲೆಯ ಸಹದತ್‌ಗಂಜ್‌ನ ನಿವಾಸಿ ವಂಶ್ ಚೌಧರಿ, “ಮನರಂಜನೆಗಾಗಿ” ಜಿಲ್ಲೆಯ ಪ್ರೇಕ್ಷಣೀಯ ಸ್ಥಳಗಳಿಗೆ ಕರೆದುಕೊಂಡು ಹೋಗುವುದಾಗಿ ಪುಸಲಾಯಿಸಿ ಕರೆದು ಅತಿಥಿ ಗೃಹದಲ್ಲಿ ಅತ್ಯಾಚಾರ ಎಸಗಿದ್ದಾಗಿ ಸಂತ್ರಸ್ತೆ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಆಗಸ್ಟ್ 16 ರಂದು ಅವರು ನನ್ನನ್ನು ಅತಿಥಿ ಗೃಹಕ್ಕೆ ಕರೆದೊಯ್ದು ಅಲ್ಲಿ ನನ್ನನ್ನು ಬಂಧಿಸಿದರು. ಮೊದಲಿಗೆ ವಂಶ್‌ ಚೌಧರಿ ತನ್ನ ಇತರ ಇಬ್ಬರು ಸ್ನೇಹಿತರೊಂದಿಗೆ ಸೇರಿ ನನ್ನ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದನು. ನಂತರ ನನಗೆ ಆಘಾತವನ್ನುಂಟುಮಾಡಲು ಇನ್ನೂ ಮೂರು ಸ್ನೇಹಿತರನ್ನು ಆಹ್ವಾನಿಸಿದ್ದಾನೆ” ಎಂದು ವಿದ್ಯಾರ್ಥಿನಿ ಹೇಳಿದ್ದಾರೆ.

ಅಯೋಧ್ಯಾ ಪಟ್ಟಣದ ಪದವಿ ಕಾಲೇಜಿನಲ್ಲಿ ಮೂರನೇ ವರ್ಷದ ಬಿಎ ವಿದ್ಯಾರ್ಥಿನಿಯಾಗಿರುವ ಸಂತ್ರಸ್ತೆ, ಬಾಬರಿ ಮಸೀದಿ ಒಡೆದು ಕಟ್ಟಿರುವ ರಾಮ ಮಂದಿರದಲ್ಲಿ ಸ್ವಚ್ಛತಾ ಸಿಬ್ಬಂದಿಯಾಗಿಯೂ ಕೆಲಸ ಮಾಡುತ್ತಿದ್ದಾರೆ. “ಅತಿಥಿ ಗೃಹದಿಂದ, ಅವರು ನನ್ನನ್ನು ಬಂವೀರ್‌ಪುರದ ಬ್ಯಾರೇಜ್‌ಗೆ ಕರೆದೊಯ್ದು ಮತ್ತೆ ಅತ್ಯಾಚಾರ ನಡೆಸಿದ್ದಾರೆ. ಅವರು ನನ್ನನ್ನು ಆಗಸ್ಟ್ 18 ರಂದು ಬಿಡುಗಡೆ ಮಾಡಿದರು”ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ: Arvind Kejriwal | ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರಾಜೀನಾಮೆ!

“ನಮ್ಮೆಲ್ಲರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರಿಂದ ನನ್ನ ಕುಟುಂಬದ ಸದಸ್ಯರು, ಜೀವ ಭಯಕ್ಕೆ ನಾವು ಪೊಲೀಸರಿಗೆ ದೂರು ನೀಡಿರಲಿಲ್ಲ. ಆದರೆ ಆಗಸ್ಟ್ 25 ರಂದು ನಾನು ರಾಮ ಮಂದಿರಕ್ಕೆ ಹೋಗುತ್ತಿದ್ದಾಗ ವಂಶ್ ಮತ್ತೆ ನನ್ನನ್ನು ಅಪಹರಿಸಿದ್ದಾನೆ. ಆತನೊಂದಿಗೆ ಆತನ ಸ್ನೇಹಿತರಾದ ಉದಿತ್ ಕುಮಾರ್, ಸತ್ರಾಂ ಚೌಧರಿ ಹಾಗೂ ಇಬ್ಬರು ಅಪರಿಚಿತ ವ್ಯಕ್ತಿಗಳಿದ್ದರು. ಅವರು ಕಾರಿನಲ್ಲಿ ನನ್ನ ಮೇಲೆ ಹಲ್ಲೆ ಮಾಡಲು ಪ್ರಯತ್ನಿಸಿದಾಗ, ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಿತ್ತು. ಈ ವೇಳೆ ನಾನು ಅವರಿಂದ ತಪ್ಪಿಸಿಕೊಂಡಿ ಓಡಿಹೋಗಿದ್ದೆ” ಎಂದು ದೂರಿನಲ್ಲಿ ಸಂತ್ರಸ್ತೆ ಉಲ್ಲೇಖಿಸಿದ್ದಾಗಿ ಪೊಲೀಸ್ ಮೂಲಗಳ ಹೇಳಿವೆ ಎಂದು ವರದಿಯಾಗಿದೆ.

ಅಪರಾಧದ ಸ್ಥಳಗಳೆಂದು ವಿದ್ಯಾರ್ಥಿನಿ ಗುರುತಿಸಿರುವ ಪ್ರದೇಶಗಳು ರಾಮ ಮಂದಿರ ಪಟ್ಟಣದ ಹೆಚ್ಚಿನ ಭದ್ರತೆ ಇರುವ ವಲಯಗಳಾಗಿವೆ. ಬಾಲಕಿ ಸ್ಥಳೀಯ ಸುದ್ದಿಗಾರರೊಂದಿಗೆ ಮಾತನಾಡಿ, ತಾನು ಮೊದಲು ಆಗಸ್ಟ್ 26 ರಂದು ಪೊಲೀಸರಿಗೆ ದೂರು ನೀಡಲು ಹೋಗಿದ್ದೆ ಆದರೆ ತನ್ನ ಪ್ರಕರಣ ದಾಖಲಿಸಲಾಗಿಲ್ಲ ಎಂದು ಹೇಳಿದ್ದಾರೆ.

“ನಾವು ವಿಚಾರಣೆಯ ನಂತರ ಸೆಪ್ಟೆಂಬರ್ 2 ರಂದು ಪ್ರಕರಣವನ್ನು ದಾಖಲಿಸಿದ್ದೇವೆ. ಅಂತಿಮವಾಗಿ ಎಲ್ಲಾ ಎಂಟು ಆರೋಪಿಗಳನ್ನು ಬಂಧಿಸಿದ್ದೇವೆ. ಅವರನ್ನು ನ್ಯಾಯಾಲಯದಿಂದ ಜೈಲಿಗೆ ಕಳುಹಿಸಲಾಗಿದೆ. ಎಂದು ಅಯೋಧ್ಯೆ ಕ್ಯಾಂಟ್ ಪೊಲೀಸ್ ಠಾಣೆಯ ಉಸ್ತುವಾರಿ ಅಮರೇಂದ್ರ ಸಿಂಗ್ ಹೇಳಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಪ್ರಮುಖ ಆರೋಪಿ ವಂಶ್ ಚೌದರಿಯನ್ನು ತಿಳಿದಿರುವ ಕಾರಣ ಹುಡುಗಿ ವಂಶ್ ಅವರನ್ನು ನಂಬಿದ್ದಳು ಎಂದು ಅಧಿಕಾರಿ ಹೇಳಿದ್ದಾರೆ.

ವಿಡಿಯೊ ನೋಡಿ: ಚಕ್ರವರ್ತಿ ಸೂಲಿಬೆಲೆ ಪ್ರತಾಪ್ ಸಿಂಹ ಜಗಳವಾಡ್ತಿರೋದು ಏಕೆ? ಫುಲ್ ಎಪಿಸೋಡ್ Sulibele versus Pratap Simha

ಇದನ್ನೂ ಓದಿ: ‘Prisonor No. 626710 is present’ ಸಾಕ್ಷ್ಯ ಚಿತ್ರ | ‘ನಿನ್ನೆಯ ಸಂಜೆ ಉಮರ್‌ ಜೊತೆ…’ | ಉಮರ್ ಖಾಲಿದ್ ವಿಚಾರಣೆಯಿಲ್ಲದ ಬಂಧನಕ್ಕೆ 4 ವರ್ಷಗಳು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...