Homeಮುಖಪುಟಅಯೋಧ್ಯೆ: ಮಕ್ಕಳಿಗೆ ಅನ್ನ, ಉಪ್ಪು ತಿನ್ನಿಸಿದ ಶಾಲೆ; ವಿಡಿಯೊ ವೈರಲ್‌

ಅಯೋಧ್ಯೆ: ಮಕ್ಕಳಿಗೆ ಅನ್ನ, ಉಪ್ಪು ತಿನ್ನಿಸಿದ ಶಾಲೆ; ವಿಡಿಯೊ ವೈರಲ್‌

- Advertisement -
- Advertisement -

ಉತ್ತರಪ್ರದೇಶದ ಅಯೋಧ್ಯೆಯ ಕೌನ್ಸಿಲ್ ಶಾಲೆಯೊಂದರಲ್ಲಿ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟವಾಗಿ ಅನ್ನ ಹಾಗೂ ಉಪ್ಪನ್ನು ನೀಡಲಾಗಿದೆ. ಇದರ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಮಕ್ಕಳು ಅನ್ನ ಮತ್ತು ಉಪ್ಪನ್ನು ತಿನ್ನುತ್ತಿರುವುದು ವಿಡಿಯೊದಲ್ಲಿ ದಾಖಲಾಗಿದೆ.

ಬಿಕಾಪುರ ಬ್ಲಾಕ್‌ನಲ್ಲಿರುವ ಬೈಂತಿ ಚೌರೆ ಬಜಾರ್‌ನ ಪಾಂಡೆ ಪ್ರಾಥಮಿಕ ಶಾಲೆಯ ವಿಡಿಯೊ ಇದಾಗಿದೆ ವರದಿಯಾಗಿದೆ. ಮಕ್ಕಳಿಗೆ ಮಂಗಳವಾರ ಮಧ್ಯಾಹ್ನದ ಊಟದ ವೇಳೆ ಸಾದಾ ಅನ್ನ ಮತ್ತು ಉಪ್ಪು ನೀಡಲಾಯಿತು ಎಂದು ಗ್ರಾಮಸ್ಥರು ದೂರಿದ್ದಾರೆ. ಇದೇ ರೀತಿಯ ಕೃತ್ಯ ಹಲವಾರು ದಿನಗಳಿಂದ ನಡೆಯುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಪ್ರಾಥಮಿಕ ಶಿಕ್ಷಣಾಧಿಕಾರಿ (ಬಿಎಸ್‌ಎ) ಸಂತೋಷ್‌ಕುಮಾರ್ ರೈ ಮಾತನಾಡಿ, “ವಿಷಯ ಗಮನಕ್ಕೆ ಬಂದ ತಕ್ಷಣ ಬ್ಲಾಕ್ ಶಿಕ್ಷಣಾಧಿಕಾರಿಯಿಂದ ವರದಿ ತರಿಸಿಕೊಳ್ಳಲಾಗಿದೆ, ತಪ್ಪಿತಸ್ಥರು ಹಾಗೂ ಕಾರಣರಾದ ಶಿಕ್ಷಕರ ವಿರುದ್ಧ ಇಲಾಖೆ ಕ್ರಮ ಜರುಗಿಸುತ್ತದೆ” ಎಂದಿರುವುದಾಗಿ ‘ದೈನಿಕ್ ಭಾಸ್ಕರ್‌’ ವರದಿ ಮಾಡಿದೆ.

“ವಿಡಿಯೋ ನೋಡಿದ ಅಯೋಧ್ಯೆಯ ಶಿಕ್ಷಣಾಧಿಕಾರಿ ಶಾಲೆಯ ಪ್ರಾಂಶುಪಾಲರನ್ನು, ಶಾಲೆಯ ಪ್ರಧಾನರನ್ನು ಅಮಾನತುಗೊಳಿಸಿದ್ದಾರೆ” ಎಂದು ಪತ್ರಕರ್ತ ಪಿಶೂರ್ ರೈ ಟ್ವೀಟ್ ಮಾಡಿದ್ದಾರೆ.

“ಉತ್ತರಪ್ರದೇಶ ಸರ್ಕಾರ ಪ್ರಾಥಮಿಕ ಶಾಲೆಯ ಪ್ರತಿ ವಿದ್ಯಾರ್ಥಿಯ ಮಧ್ಯಾಹ್ನದ ಊಟಕ್ಕೆ ದಿನವೊಂದಕ್ಕೆ 4.97 ರೂ.ಗಳನ್ನು ನೀಡುತ್ತದೆ. ಈ ಹಣದಲ್ಲಿ ಆರೋಗ್ಯಕರವಾದ ಊಟವನ್ನು ನೀಡಲು ಸಾಧ್ಯವಿಲ್ಲ ಎಂದು ಹಲವಾರು ಸಂದರ್ಭಗಳಲ್ಲಿ, ಪ್ರಾಂಶುಪಾಲರು ಮತ್ತು ಪ್ರಧಾನರು ದೂರಿದ್ದಾರೆ. ಅನುದಾನವನ್ನು ಹೆಚ್ಚಿಸುವ ಬಗ್ಗೆ ಸರಕಾರ ಚಿಂತನೆ ನಡೆಸಬೇಕು” ಎಂದು ಪಿಶೂಯ್ ಮತ್ತೊಂದು ಟ್ವೀಟ್ ಮಾಡಿದ್ದಾರೆ.

“ಗ್ರಾಮದ ಸಮೀಪವೇ ಶಾಲೆ ಇರುವುದರಿಂದ ಅನೇಕ ಮಕ್ಕಳು ಮಧ್ಯಾಹ್ನದ ಊಟಕ್ಕಾಗಿ ಮನೆಗೆ ಹೋಗುತ್ತಿದ್ದಾರೆ. ಊಟ ಮುಗಿಸಿಕೊಂಡು ಮತ್ತೆ ಶಾಲೆಗೆ ಹಿಂತಿರುಗುತ್ತಾರೆ. ಉಪ್ಪು, ಅನ್ನ ನೀಡುತ್ತಿರುವ ವಿಚಾರವನ್ನು ಮಕ್ಕಳು ಪೋಷಕರಿಗೆ ತಿಳಿಸಿದಾಗ ಶಾಲೆಯಲ್ಲಿ ಊಟ ಮಾಡದಂತೆ ಪೋಷಕರು ತಿಳಿಸಿದ್ದಾರೆ” ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.

ಮಂಗಳವಾರವೂ ಇದೇ ರೀತಿಯ ಆಹಾರ ಕಂಡುಬಂದಾಗ ಗ್ರಾಮದ ಅನೇಕ ಪುರುಷರು ಮತ್ತು ಮಹಿಳೆಯರು ಶಾಲೆಗೆ ಆಗಮಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿಕ್ಷಕರಿಗೆ ದೂರು ನೀಡಿದರೂ ಶಿಕ್ಷಕರು ಪಾಲಕರ ಮಾತನ್ನು ನಿರ್ಲಕ್ಷಿಸಿದ್ದಾರೆ.

ಈ ಘಟನೆಯನ್ನು ಗ್ರಾಮಸ್ಥರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಬ್ಲಾಕ್ ಶಿಕ್ಷಣಾಧಿಕಾರಿ ಅಮಿತ್ ಕುಮಾರ್ ಶ್ರೀವಾಸ್ತವ ತಿಳಿಸಿದ್ದಾರೆ ಎಂದು ‘ದೈನಿಕ್ ಭಾಸ್ಕರ್‌’ ವರದಿ ಮಾಡಿದೆ.

ಬಿಎಸ್‌ಎ ಸಂತೋಷ್‌ಕುಮಾರ್ ರೈ ಮಾತನಾಡಿ, ಈ ಸಂಬಂಧ ಸಂಜೆ ವೇಳೆಗೆ ಬ್ಲಾಕ್ ಶಿಕ್ಷಣಾಧಿಕಾರಿಯಿಂದ ವರದಿ ಕೇಳಲಾಗಿದ್ದು, ವರದಿ ಆಧರಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

ಉಪ್ಪು ನೀಡಿದ ಘಟನೆ ಇದೇ ಮೊದಲಲ್ಲ

ಉತ್ತರ ಪ್ರದೇಶದ ಶಾಲೆಯಲ್ಲಿ ಮಕ್ಕಳಿಗೆ ಉಪ್ಪು ಬಡಿಸಿದ್ದು ಇದೇ ಮೊದಲೇನೂ ಅಲ್ಲ. 2019ರಲ್ಲಿ ಫ್ರೀಲ್ಯಾನ್ಸ್‌ ಪತ್ರಕರ್ತ ಪವನ್‌ ಜೈಸ್ವಾಲ್‌ ವಿಡಿಯೊವನ್ನು ಹಂಚಿಕೊಂಡಿದ್ದರು. ಘಟನೆಯನ್ನು ಬೆಳಕಿಗೆ ತಂದಿದ್ದಕ್ಕೆ ಅವರ ವಿರುದ್ಧ ಪ್ರಕರಣವನ್ನೂ ದಾಖಲಿಸಲಾಗಿತ್ತು.

ಮಿರ್ಜಾಪುರ ಜಿಲ್ಲೆಯ ಶಿಯುರ್‌ನಲ್ಲಿರುವ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಮಧ್ಯಾಹ್ನದ ಊಟದಲ್ಲಿ ಉಪ್ಪು ಮತ್ತು ರೊಟ್ಟಿ (ಚಪಾತಿ) ನೀಡುತ್ತಿರುವ ವೀಡಿಯೊವನ್ನು ಪ್ರಸಾರ ಮಾಡಿದ ಆರೋಪದ ಮೇಲೆ ಜೈಸ್ವಾಲ್ ವಿರುದ್ಧ 2019ರಲ್ಲಿ ಪ್ರಕರಣ ದಾಖಲಿಸಲಾಗಿತ್ತು. ತನಿಖೆಯ ನಂತರ ಕ್ಲೀನ್ ಚಿಟ್ ನೀಡಲಾಯಿತು.

ಕ್ಯಾನ್ಸರ್‌ನಿಂದ ಬಳಸುತ್ತಿದ್ದ ಪತ್ರಕರ್ತ ಜೈಸ್ವಾಲ್‌ ಕಳೆದ ಮೇ ತಿಂಗಳಿನಲ್ಲಿ ನಿಧನರಾದರು. ಜೈಸ್ವಾಲ್ ಅವರು ಕ್ಯಾನ್ಸರ್ ಚಿಕಿತ್ಸೆಗಾಗಿ ಹಣ ನೀಡುವಂತೆ ಮನವಿ ಮಾಡಿದ್ದರು. ಕಾಯಿಲೆಯಿಂದ ಬಳಲುತ್ತಿದ್ದ ಪತ್ರಕರ್ತನಿಗೆ ಸಹಾಯ ಮಾಡಲು ಎಎಪಿ ಸಂಸದ ಸಂಜಯ್ ಸಿಂಗ್ ಸೇರಿದಂತೆ ಹಲವರು ಮುಂದೆ ಬಂದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...