Homeಮುಖಪುಟಅಯೋಧ್ಯೆ ತೀರ್ಪಿಗೆ ದಿನಗಣನೆ: ಭಾರಿ ಬಿಗಿಬಂದೋಬಸ್ತ್, ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣು

ಅಯೋಧ್ಯೆ ತೀರ್ಪಿಗೆ ದಿನಗಣನೆ: ಭಾರಿ ಬಿಗಿಬಂದೋಬಸ್ತ್, ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣು

- Advertisement -
- Advertisement -

ಅಯೋಧ್ಯೆ ವಿವಾದ ತೀರ್ಪು ನವೆಂಬರ್ 17ರಂದು ಪ್ರಕಟಗೊಳ್ಳುವ ನಿರೀಕ್ಷೆಯಿದೆ. ಈಗಾಗಲೇ ವಿಚಾರಣೆ ಮುಕ್ತಾಯಗಳಿಸಿರುವ  ಸುಪ್ರೀಂಕೋರ್ಟ್, ತೀರ್ಪನ್ನು ಕಾಯ್ದಿರಿಸಿದ್ದು, ನ.17ರಂದು ಪ್ರಕಟಿಸುವ ನಿರೀಕ್ಷೆಯಿದೆ. ತೀರ್ಪು ಪ್ರಕಟಗೊಳ್ಳುವ ಮೊದಲೇ ಅಯೋಧ್ಯೆ, ಗೋರಖ್ ಪುರ, ರಾಂಪುರ ಸೇರಿದಂತೆ ಹಲವು ಭಾಗಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ತೀರ್ಪಿಗೆ ಇನ್ನು ಕೆಲವೇ ದಿನಗಳು ಬಾಕಿಯಿದ್ದು, ಉತ್ತರ ಪ್ರದೇಶ ಪೊಲೀಸರು ನಾಲ್ಕು ಹಂತಗಳಲ್ಲಿ ಭದ್ರತೆಯನ್ನು ನಿಯೋಜಿಸಿದ್ದಾರೆ. ಎಲ್ಲಿಯಾದರೂ ಭದ್ರತೆ ಕುರಿತ ಯೋಜನೆ ವಿಫಲವಾದರೆ ಮತ್ತೊಂದು ಪಡೆಯನ್ನು ನಿಯೋಜಿಸಲಾಗುವುದು ಎಂದು ಸರ್ಕಾರ ತಿಳಿಸಿದೆ. ಅಯೋಧ್ಯೆ ದೇಗುಲದ ಸುತ್ತಮುತ್ತ 12 ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಅರೆ ಸೈನಿಕ ಪಡೆ, ಪ್ರಾಂತೀಯ ಸಶಸ್ತ್ರ ಪಡೆಯನ್ನು ನಿಯೋಜಿಸಲಾಗಿದೆ. ಇನ್ನು ಅಯೋಧ್ಯೆಯಲ್ಲಿ ಕರ್ಪ್ಯೂ ಹೇರುವ ಅಥವಾ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸುವ ಯಾವುದೇ ಯೋಜನೆಯಿಲ್ಲ. ಎಲ್ಲಾ ತೀರ್ಪಿನಂತೆ ಇದೂ ಸಹ ಸಾಮಾನ್ಯ ತೀರ್ಪು ಆಗಿರಲಿದೆ ಎಂದು ಮೂಲಗಳು ಮಾಹಿತಿ ನೀಡಿವೆ.

ಅಲ್ಲದೇ ಮೊಬೈಲ್ ಕರೆಗಳು, ಸಂದೇಶಗಳು, ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಸುದ್ದಿಗಳ ಮೇಲೂ ನಿಗಾ ಇರಿಸಲಾಗಿದೆ. ಶಾಂತಿಗೆ ಧಕ್ಕೆಯಾಗದಂತೆ, ಪ್ರಚೋದನಾತ್ಮಕ ಸಂದೇಶಗಳು, ದೃಶ್ಯಗಳು ಹರಿದಾಡದಂತೆ ತಡೆಯಲು ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಉತ್ತರಪ್ರದೇಶದ 1600 ಹಳ್ಳಿಗಳಲ್ಲಿ ಪೊಲೀಸರು 1600 ಸ್ವಯಂ ಸೇವಕರನ್ನು ಸಂಪರ್ಕಿಸುವ ಮೊಬೈಲ್ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಲಾಗಿದೆ. ಇದು ಸ್ಥಳೀಯ ಮಟ್ಟದ ಸ್ಥಿತಿಗತಿ ಹೇಗಿದೆ, ಯಾವ ರೀತಿ ವಾತಾವರಣವಿದೆ ಎಂಬುದನ್ನು ತಿಳಿಸುತ್ತದೆ.

ಇತ್ತ ಅಯೋಧ್ಯೆ ತೀರ್ಪಿಗಾಗಿ ಸಂಪೂರ್ಣ ಸಿದ್ಧಗೊಂಡಿದ್ದೇವೆ. ಎಲ್ಲಾ ಸಮಯದಲ್ಲೂ ಪೊಲೀಸರು ಗಸ್ತು ತಿರುಗುತ್ತಿದ್ದಾರೆ. ಶಾಂತಿ ಸಭೆಗಳನ್ನು ನಡೆಸುವ ಮೂಲಕ ಶಾಂತಿಯಿಂದಿರುವಂತೆ ಮನವರಿಕೆ ಮಾಡಿ ಕೊಡಲಾಗುತ್ತಿದೆ. ಕಾನೂನು ಉಲ್ಲಂಘನೆಯಾಗದಂತೆ ನೋಡಿಕೊಳ್ಳಲಾಗುತ್ತಿದೆ. ಗುಪ್ತಚರ ಸಂಸ್ಥೆ ಸಕ್ರಿಯವಾಗಿದೆ. ಸಾಮಾಜಿಕ ವಿರೋಧಿ ಅಂಶಗಳು ಹರಿದಾಡದಂತೆ ಕ್ರಮ ಕೈಗೊಂಡಿರುವುದಾಗಿ ಉತ್ತರ ಪ್ರದೇಶ ಪೊಲೀಸ್ ಮಹಾ ನಿರ್ದೇಶಕ ಒ.ಪಿ.ಸಿಂಗ್ ಹೇಳಿದರು.

ಬಾಬ್ರಿ ಮಸೀದಿ-ರಾಮಜನ್ಮಭೂಮಿ ವಿವಾದದ ತೀರ್ಪು ಹೊರಬೀಳುತ್ತಿರುವ ಹಿನ್ನೆಲೆಯಲ್ಲಿ ಜಮಿಯತ್ ಉಲಾಮ ಇ ಹಿಂದ್ ಸಂಘಟನೆ ಅಧ್ಯಕ್ಷ ಸೈಯದ್ ಅರ್ಷದ್ ಮದಾನಿ ನವದೆಹಲಿಯಲ್ಲಿಂದು ಆರ್.ಎಸ್.ಎಸ್. ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಭೇಟಿ ಮಾಡಿ ದೇಶದಲ್ಲಿ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಮಾತುಕತೆ ನಡೆಸಿದ್ದಾರೆ.

ಸಭೆಯ ಬಳಿಕ ಮಾತನಾಡಿದ ಮದಾನಿ ಎರಡು ಸಂಘಟನೆಗಳು ಜಂಟಿ ಪತ್ರಿಕಾಗೋಷ್ಟಿ ನಡೆಸಿ ಜನರಲ್ಲಿ ಶಾಂತಿ ಕಾಪಾಡಿಕೊಳ್ಳುವಂತೆ ಮನವಿ ಮಾಡಲು ತೀರ್ಮಾನಿಸಲಾಗಿದೆ. ತೀರ್ಪು ಯಾರ ಪರವೇ ಬರಲಿ ಶಾಂತಿ ನೆಮ್ಮದಿ ಮುಖ್ಯ ಎಂದರು.
ಎರಡು ಸಂಘಟನೆಗಳು ಬಾಬ್ರಿ ಮಸೀದಿ-ರಾಮಜನ್ಮಭೂಮಿ ವಿವಾದದಲ್ಲಿ ಭಿನ್ನ ಅಭಿಪ್ರಾಯಗಳನ್ನು ಹೊಂದಿವೆ. ತೀರ್ಪು ಬಾಬ್ರಿ ಮಸೀದಿಯ ಪರವಾಗಿ ಬರಲಿದೆ. ಈ ಸಂಬಂಧ ನಾವು ವಿಶೇಷ ವ್ಯವಸ್ಥೆ ಮಾಡಿಕೊಂಡಿಲ್ಲ. ಸುಪ್ರೀಂ ಕೋರ್ಟ್ ತೀರ್ಪು ಬಾಬರಿ ಮಸೀಸಿ ಪರವಾಗಿ ಬಂದರು ಶಾಂತಿಯಿಂದ ಇರಬೇಕು ಎಂದು ಹೇಳಿದರು.
ತೀರ್ಪು ಪ್ರಕಟವಾದ ಮೇಲೆ ಕೆಲವು ವಿದ್ರೋಹಿ ಶಕ್ತಿಗಳು ಸಮಾಜದಲ್ಲಿ ಅಸಾಂತಿ ಉಂಟು ಮಾಡಲು ಬೀದಿಗೆ ಇಳಿಯದಂತೆ ತಡೆಯಬೇಕಾದ ಜವಾಬ್ದಾರಿಯನ್ನು ಸರ್ಕಾರ ವಹಿಸಿಕೊಳ್ಳಬೇಕು.ಹಿರಿಯ ವಕೀಲರಾದ ರಾಜೀವ್ ಧವನ್ ಅವರ ಮೂಲಕ ನ್ಯಾಯಾಲಯಕ್ಕೆ ಎಲ್ಲಾ ದಾಖಲೆಗಳನ್ನು ನೀಡಿದ್ದೇವೆ. ತೀರ್ಪು ಬಂದ ಮೇಲೆ  ಶಾಂತಿ ಕಾಪಾಡುವಂತೆ ಜನರಿಗೆ ಮನವಿ ಮಾಡುತ್ತೇವೆ ಎಂದರು.
ಕಾನೂನು ಜನತೆಯನ್ನು ಬೀದಿಗೆ ಬಾರದಂತೆ ತಡಯಬೇಕು. ಘರ್ಷಣೆಗೆ ಅವಕಾಶವಾಘದಂತೆ ನೋಡಿಕೊಳ್ಳಬೇಕು. ತೀರ್ಪು ನಮ್ಮ ಪರ ಬಂದರೂ ಒಪ್ಪಿಕೊಳ್ಳಬೇಕು. ಪ್ರತಿವಾದಿ ಪರ ಬಂದರು ಒಪ್ಪಿಕೊಳ್ಳಬೇಕು ಎಂದು ಹೇಳಿದರು.

ಇನ್ನು ತುಮಕೂರಿನಲ್ಲಿ ರಾಮಜನ್ಮಭೂಮಿ-ಬಾಬ್ರಿ ಮಸೀದಿ ಭೂ ವಿವಾದದ ತೀರ್ಪು, ಟಿಪ್ಪು ಜಯಂತಿ ಹಾಗೂ ಈದ್ ಮಿಲಾದ್ ಹಬ್ಬದ ಆಚರಣೆಯ ಕುರಿತು ತುಮಕೂರಿನ ಚಿಲುಮೆ ಪೊಲೀಸ್ ಸಮುದಾಯ ಭವನದಲ್ಲಿ ಮುಸ್ಲೀಂ ಮುಖಂಡರು, ಡಿಎಸ್ಎಸ್ ಮುಖಂಡರೊಂದಿಗೆ ಪೊಲೀಸರು ಶಾಂತಿ ಸಭೆ ನಡೆಸಿದರು. ಸಭೆಯಲ್ಲಿ ಈ ಮೂರು ವಿಷಗಳ ಕುರಿತು ಚರ್ಚೆ ನಡೆಯಿತು.

ಮುಸ್ಲೀಂ ಸಮುದಾಯದ ಹಿರಿಯರು, ಧರ್ಮಗುರುಗಳು, ವಿವಿಧ ಸಂಘಟನೆಗಳ ಮುಖಂಡರು, ದಲಿತ ಸಂಘರ್ಷ ಸಮಿತಿಯ ಮುಖಂಡರು ಕೂಡ ಸಭೆಯಲ್ಲಿ ಭಾಗವಹಿಸಿ ಶಾಂತಿ ಕಾಪಾಡುವ ಕುರಿತು ಸಲಹೆ ನೀಡಿದರು. ಟಿಪ್ಪು ಜಯಂತಿ ಆಚರಣೆ ನಿಷೇಧಿಸುವ ಸರ್ಕಾರದ ನಿರ್ಧಾರಕ್ಕೆ ಕೆಲವು ಆಕ್ಷೇಪ ವ್ಯಕ್ತಪಡಿಸಿ ಅಸಮಾಧಾನ ಹೊರ ಹಾಕಿದರು.

ರಾಮಜನ್ಮಭೂಮಿ ಬಾಬ್ರಿ ಮಸೀದಿ ವಿವಾದದ ತೀರ್ಪು ಯಾರ ಪರವೇ ಬರಲಿ ಸಮಾಜದಲ್ಲಿ ಶಾಂತಿ ಕಾಡಿಕೊಳ್ಳುವುದಾಗಿ ಮುಸ್ಲೀಂ ಮುಖಂಡರು ಭರವಸೆ ನೀಡಿದರು.  ಇದೇ ವೇಳೆ ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಮತ್ತು ಜಿಲ್ಲಾ ಪೋಲೀಸ್ ವರಿಷ್ಠ ಡಾ. ವಂಶಿಕೃಷ್ಣ ಕೂಡ ಸಮಾಜದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವಂತೆ ಸಮುದಾದ ಮುಖಂಡರಲ್ಲಿ ಮನವಿ ಮಾಡಿದರು.

ಸಮಾರಂಭದಲ್ಲಿ ಹೆಚ್ಚವರಿ ಎಎಸ್ಪಿ ಉದೇಶ ಟಿ.ಜೆ., ಬೆಸ್ಕಾಂ ಇಲಾಖೆಯ ಅದಿಕಾರಿ ಗೋವಿಂದಪ್ಪ, ಮಹಾನಗರ ಪಾಲಿಕೆಯ ಆರೋಗ್ಯ ಅದಿಕಾರಿ ನಾಗೇಶ್ ,ನಗರದ ಪೊಲೀಸ್ ಅದಿಕಾರಿಗಳು ಉಪಸ್ಥಿತಿತರಿದ್ದರು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...