Homeಮುಖಪುಟಅಯೋಧ್ಯೆ ತೀರ್ಪಿಗೆ ದಿನಗಣನೆ: ಭಾರಿ ಬಿಗಿಬಂದೋಬಸ್ತ್, ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣು

ಅಯೋಧ್ಯೆ ತೀರ್ಪಿಗೆ ದಿನಗಣನೆ: ಭಾರಿ ಬಿಗಿಬಂದೋಬಸ್ತ್, ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣು

- Advertisement -
- Advertisement -

ಅಯೋಧ್ಯೆ ವಿವಾದ ತೀರ್ಪು ನವೆಂಬರ್ 17ರಂದು ಪ್ರಕಟಗೊಳ್ಳುವ ನಿರೀಕ್ಷೆಯಿದೆ. ಈಗಾಗಲೇ ವಿಚಾರಣೆ ಮುಕ್ತಾಯಗಳಿಸಿರುವ  ಸುಪ್ರೀಂಕೋರ್ಟ್, ತೀರ್ಪನ್ನು ಕಾಯ್ದಿರಿಸಿದ್ದು, ನ.17ರಂದು ಪ್ರಕಟಿಸುವ ನಿರೀಕ್ಷೆಯಿದೆ. ತೀರ್ಪು ಪ್ರಕಟಗೊಳ್ಳುವ ಮೊದಲೇ ಅಯೋಧ್ಯೆ, ಗೋರಖ್ ಪುರ, ರಾಂಪುರ ಸೇರಿದಂತೆ ಹಲವು ಭಾಗಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ತೀರ್ಪಿಗೆ ಇನ್ನು ಕೆಲವೇ ದಿನಗಳು ಬಾಕಿಯಿದ್ದು, ಉತ್ತರ ಪ್ರದೇಶ ಪೊಲೀಸರು ನಾಲ್ಕು ಹಂತಗಳಲ್ಲಿ ಭದ್ರತೆಯನ್ನು ನಿಯೋಜಿಸಿದ್ದಾರೆ. ಎಲ್ಲಿಯಾದರೂ ಭದ್ರತೆ ಕುರಿತ ಯೋಜನೆ ವಿಫಲವಾದರೆ ಮತ್ತೊಂದು ಪಡೆಯನ್ನು ನಿಯೋಜಿಸಲಾಗುವುದು ಎಂದು ಸರ್ಕಾರ ತಿಳಿಸಿದೆ. ಅಯೋಧ್ಯೆ ದೇಗುಲದ ಸುತ್ತಮುತ್ತ 12 ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಅರೆ ಸೈನಿಕ ಪಡೆ, ಪ್ರಾಂತೀಯ ಸಶಸ್ತ್ರ ಪಡೆಯನ್ನು ನಿಯೋಜಿಸಲಾಗಿದೆ. ಇನ್ನು ಅಯೋಧ್ಯೆಯಲ್ಲಿ ಕರ್ಪ್ಯೂ ಹೇರುವ ಅಥವಾ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸುವ ಯಾವುದೇ ಯೋಜನೆಯಿಲ್ಲ. ಎಲ್ಲಾ ತೀರ್ಪಿನಂತೆ ಇದೂ ಸಹ ಸಾಮಾನ್ಯ ತೀರ್ಪು ಆಗಿರಲಿದೆ ಎಂದು ಮೂಲಗಳು ಮಾಹಿತಿ ನೀಡಿವೆ.

ಅಲ್ಲದೇ ಮೊಬೈಲ್ ಕರೆಗಳು, ಸಂದೇಶಗಳು, ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಸುದ್ದಿಗಳ ಮೇಲೂ ನಿಗಾ ಇರಿಸಲಾಗಿದೆ. ಶಾಂತಿಗೆ ಧಕ್ಕೆಯಾಗದಂತೆ, ಪ್ರಚೋದನಾತ್ಮಕ ಸಂದೇಶಗಳು, ದೃಶ್ಯಗಳು ಹರಿದಾಡದಂತೆ ತಡೆಯಲು ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಉತ್ತರಪ್ರದೇಶದ 1600 ಹಳ್ಳಿಗಳಲ್ಲಿ ಪೊಲೀಸರು 1600 ಸ್ವಯಂ ಸೇವಕರನ್ನು ಸಂಪರ್ಕಿಸುವ ಮೊಬೈಲ್ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಲಾಗಿದೆ. ಇದು ಸ್ಥಳೀಯ ಮಟ್ಟದ ಸ್ಥಿತಿಗತಿ ಹೇಗಿದೆ, ಯಾವ ರೀತಿ ವಾತಾವರಣವಿದೆ ಎಂಬುದನ್ನು ತಿಳಿಸುತ್ತದೆ.

ಇತ್ತ ಅಯೋಧ್ಯೆ ತೀರ್ಪಿಗಾಗಿ ಸಂಪೂರ್ಣ ಸಿದ್ಧಗೊಂಡಿದ್ದೇವೆ. ಎಲ್ಲಾ ಸಮಯದಲ್ಲೂ ಪೊಲೀಸರು ಗಸ್ತು ತಿರುಗುತ್ತಿದ್ದಾರೆ. ಶಾಂತಿ ಸಭೆಗಳನ್ನು ನಡೆಸುವ ಮೂಲಕ ಶಾಂತಿಯಿಂದಿರುವಂತೆ ಮನವರಿಕೆ ಮಾಡಿ ಕೊಡಲಾಗುತ್ತಿದೆ. ಕಾನೂನು ಉಲ್ಲಂಘನೆಯಾಗದಂತೆ ನೋಡಿಕೊಳ್ಳಲಾಗುತ್ತಿದೆ. ಗುಪ್ತಚರ ಸಂಸ್ಥೆ ಸಕ್ರಿಯವಾಗಿದೆ. ಸಾಮಾಜಿಕ ವಿರೋಧಿ ಅಂಶಗಳು ಹರಿದಾಡದಂತೆ ಕ್ರಮ ಕೈಗೊಂಡಿರುವುದಾಗಿ ಉತ್ತರ ಪ್ರದೇಶ ಪೊಲೀಸ್ ಮಹಾ ನಿರ್ದೇಶಕ ಒ.ಪಿ.ಸಿಂಗ್ ಹೇಳಿದರು.

ಬಾಬ್ರಿ ಮಸೀದಿ-ರಾಮಜನ್ಮಭೂಮಿ ವಿವಾದದ ತೀರ್ಪು ಹೊರಬೀಳುತ್ತಿರುವ ಹಿನ್ನೆಲೆಯಲ್ಲಿ ಜಮಿಯತ್ ಉಲಾಮ ಇ ಹಿಂದ್ ಸಂಘಟನೆ ಅಧ್ಯಕ್ಷ ಸೈಯದ್ ಅರ್ಷದ್ ಮದಾನಿ ನವದೆಹಲಿಯಲ್ಲಿಂದು ಆರ್.ಎಸ್.ಎಸ್. ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಭೇಟಿ ಮಾಡಿ ದೇಶದಲ್ಲಿ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಮಾತುಕತೆ ನಡೆಸಿದ್ದಾರೆ.

ಸಭೆಯ ಬಳಿಕ ಮಾತನಾಡಿದ ಮದಾನಿ ಎರಡು ಸಂಘಟನೆಗಳು ಜಂಟಿ ಪತ್ರಿಕಾಗೋಷ್ಟಿ ನಡೆಸಿ ಜನರಲ್ಲಿ ಶಾಂತಿ ಕಾಪಾಡಿಕೊಳ್ಳುವಂತೆ ಮನವಿ ಮಾಡಲು ತೀರ್ಮಾನಿಸಲಾಗಿದೆ. ತೀರ್ಪು ಯಾರ ಪರವೇ ಬರಲಿ ಶಾಂತಿ ನೆಮ್ಮದಿ ಮುಖ್ಯ ಎಂದರು.
ಎರಡು ಸಂಘಟನೆಗಳು ಬಾಬ್ರಿ ಮಸೀದಿ-ರಾಮಜನ್ಮಭೂಮಿ ವಿವಾದದಲ್ಲಿ ಭಿನ್ನ ಅಭಿಪ್ರಾಯಗಳನ್ನು ಹೊಂದಿವೆ. ತೀರ್ಪು ಬಾಬ್ರಿ ಮಸೀದಿಯ ಪರವಾಗಿ ಬರಲಿದೆ. ಈ ಸಂಬಂಧ ನಾವು ವಿಶೇಷ ವ್ಯವಸ್ಥೆ ಮಾಡಿಕೊಂಡಿಲ್ಲ. ಸುಪ್ರೀಂ ಕೋರ್ಟ್ ತೀರ್ಪು ಬಾಬರಿ ಮಸೀಸಿ ಪರವಾಗಿ ಬಂದರು ಶಾಂತಿಯಿಂದ ಇರಬೇಕು ಎಂದು ಹೇಳಿದರು.
ತೀರ್ಪು ಪ್ರಕಟವಾದ ಮೇಲೆ ಕೆಲವು ವಿದ್ರೋಹಿ ಶಕ್ತಿಗಳು ಸಮಾಜದಲ್ಲಿ ಅಸಾಂತಿ ಉಂಟು ಮಾಡಲು ಬೀದಿಗೆ ಇಳಿಯದಂತೆ ತಡೆಯಬೇಕಾದ ಜವಾಬ್ದಾರಿಯನ್ನು ಸರ್ಕಾರ ವಹಿಸಿಕೊಳ್ಳಬೇಕು.ಹಿರಿಯ ವಕೀಲರಾದ ರಾಜೀವ್ ಧವನ್ ಅವರ ಮೂಲಕ ನ್ಯಾಯಾಲಯಕ್ಕೆ ಎಲ್ಲಾ ದಾಖಲೆಗಳನ್ನು ನೀಡಿದ್ದೇವೆ. ತೀರ್ಪು ಬಂದ ಮೇಲೆ  ಶಾಂತಿ ಕಾಪಾಡುವಂತೆ ಜನರಿಗೆ ಮನವಿ ಮಾಡುತ್ತೇವೆ ಎಂದರು.
ಕಾನೂನು ಜನತೆಯನ್ನು ಬೀದಿಗೆ ಬಾರದಂತೆ ತಡಯಬೇಕು. ಘರ್ಷಣೆಗೆ ಅವಕಾಶವಾಘದಂತೆ ನೋಡಿಕೊಳ್ಳಬೇಕು. ತೀರ್ಪು ನಮ್ಮ ಪರ ಬಂದರೂ ಒಪ್ಪಿಕೊಳ್ಳಬೇಕು. ಪ್ರತಿವಾದಿ ಪರ ಬಂದರು ಒಪ್ಪಿಕೊಳ್ಳಬೇಕು ಎಂದು ಹೇಳಿದರು.

ಇನ್ನು ತುಮಕೂರಿನಲ್ಲಿ ರಾಮಜನ್ಮಭೂಮಿ-ಬಾಬ್ರಿ ಮಸೀದಿ ಭೂ ವಿವಾದದ ತೀರ್ಪು, ಟಿಪ್ಪು ಜಯಂತಿ ಹಾಗೂ ಈದ್ ಮಿಲಾದ್ ಹಬ್ಬದ ಆಚರಣೆಯ ಕುರಿತು ತುಮಕೂರಿನ ಚಿಲುಮೆ ಪೊಲೀಸ್ ಸಮುದಾಯ ಭವನದಲ್ಲಿ ಮುಸ್ಲೀಂ ಮುಖಂಡರು, ಡಿಎಸ್ಎಸ್ ಮುಖಂಡರೊಂದಿಗೆ ಪೊಲೀಸರು ಶಾಂತಿ ಸಭೆ ನಡೆಸಿದರು. ಸಭೆಯಲ್ಲಿ ಈ ಮೂರು ವಿಷಗಳ ಕುರಿತು ಚರ್ಚೆ ನಡೆಯಿತು.

ಮುಸ್ಲೀಂ ಸಮುದಾಯದ ಹಿರಿಯರು, ಧರ್ಮಗುರುಗಳು, ವಿವಿಧ ಸಂಘಟನೆಗಳ ಮುಖಂಡರು, ದಲಿತ ಸಂಘರ್ಷ ಸಮಿತಿಯ ಮುಖಂಡರು ಕೂಡ ಸಭೆಯಲ್ಲಿ ಭಾಗವಹಿಸಿ ಶಾಂತಿ ಕಾಪಾಡುವ ಕುರಿತು ಸಲಹೆ ನೀಡಿದರು. ಟಿಪ್ಪು ಜಯಂತಿ ಆಚರಣೆ ನಿಷೇಧಿಸುವ ಸರ್ಕಾರದ ನಿರ್ಧಾರಕ್ಕೆ ಕೆಲವು ಆಕ್ಷೇಪ ವ್ಯಕ್ತಪಡಿಸಿ ಅಸಮಾಧಾನ ಹೊರ ಹಾಕಿದರು.

ರಾಮಜನ್ಮಭೂಮಿ ಬಾಬ್ರಿ ಮಸೀದಿ ವಿವಾದದ ತೀರ್ಪು ಯಾರ ಪರವೇ ಬರಲಿ ಸಮಾಜದಲ್ಲಿ ಶಾಂತಿ ಕಾಡಿಕೊಳ್ಳುವುದಾಗಿ ಮುಸ್ಲೀಂ ಮುಖಂಡರು ಭರವಸೆ ನೀಡಿದರು.  ಇದೇ ವೇಳೆ ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಮತ್ತು ಜಿಲ್ಲಾ ಪೋಲೀಸ್ ವರಿಷ್ಠ ಡಾ. ವಂಶಿಕೃಷ್ಣ ಕೂಡ ಸಮಾಜದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವಂತೆ ಸಮುದಾದ ಮುಖಂಡರಲ್ಲಿ ಮನವಿ ಮಾಡಿದರು.

ಸಮಾರಂಭದಲ್ಲಿ ಹೆಚ್ಚವರಿ ಎಎಸ್ಪಿ ಉದೇಶ ಟಿ.ಜೆ., ಬೆಸ್ಕಾಂ ಇಲಾಖೆಯ ಅದಿಕಾರಿ ಗೋವಿಂದಪ್ಪ, ಮಹಾನಗರ ಪಾಲಿಕೆಯ ಆರೋಗ್ಯ ಅದಿಕಾರಿ ನಾಗೇಶ್ ,ನಗರದ ಪೊಲೀಸ್ ಅದಿಕಾರಿಗಳು ಉಪಸ್ಥಿತಿತರಿದ್ದರು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...