Homeಮುಖಪುಟಅಯೋಧ್ಯೆ ತೀರ್ಪಿಗೆ ದಿನಗಣನೆ: ಭಾರಿ ಬಿಗಿಬಂದೋಬಸ್ತ್, ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣು

ಅಯೋಧ್ಯೆ ತೀರ್ಪಿಗೆ ದಿನಗಣನೆ: ಭಾರಿ ಬಿಗಿಬಂದೋಬಸ್ತ್, ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣು

- Advertisement -
- Advertisement -

ಅಯೋಧ್ಯೆ ವಿವಾದ ತೀರ್ಪು ನವೆಂಬರ್ 17ರಂದು ಪ್ರಕಟಗೊಳ್ಳುವ ನಿರೀಕ್ಷೆಯಿದೆ. ಈಗಾಗಲೇ ವಿಚಾರಣೆ ಮುಕ್ತಾಯಗಳಿಸಿರುವ  ಸುಪ್ರೀಂಕೋರ್ಟ್, ತೀರ್ಪನ್ನು ಕಾಯ್ದಿರಿಸಿದ್ದು, ನ.17ರಂದು ಪ್ರಕಟಿಸುವ ನಿರೀಕ್ಷೆಯಿದೆ. ತೀರ್ಪು ಪ್ರಕಟಗೊಳ್ಳುವ ಮೊದಲೇ ಅಯೋಧ್ಯೆ, ಗೋರಖ್ ಪುರ, ರಾಂಪುರ ಸೇರಿದಂತೆ ಹಲವು ಭಾಗಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ತೀರ್ಪಿಗೆ ಇನ್ನು ಕೆಲವೇ ದಿನಗಳು ಬಾಕಿಯಿದ್ದು, ಉತ್ತರ ಪ್ರದೇಶ ಪೊಲೀಸರು ನಾಲ್ಕು ಹಂತಗಳಲ್ಲಿ ಭದ್ರತೆಯನ್ನು ನಿಯೋಜಿಸಿದ್ದಾರೆ. ಎಲ್ಲಿಯಾದರೂ ಭದ್ರತೆ ಕುರಿತ ಯೋಜನೆ ವಿಫಲವಾದರೆ ಮತ್ತೊಂದು ಪಡೆಯನ್ನು ನಿಯೋಜಿಸಲಾಗುವುದು ಎಂದು ಸರ್ಕಾರ ತಿಳಿಸಿದೆ. ಅಯೋಧ್ಯೆ ದೇಗುಲದ ಸುತ್ತಮುತ್ತ 12 ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಅರೆ ಸೈನಿಕ ಪಡೆ, ಪ್ರಾಂತೀಯ ಸಶಸ್ತ್ರ ಪಡೆಯನ್ನು ನಿಯೋಜಿಸಲಾಗಿದೆ. ಇನ್ನು ಅಯೋಧ್ಯೆಯಲ್ಲಿ ಕರ್ಪ್ಯೂ ಹೇರುವ ಅಥವಾ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸುವ ಯಾವುದೇ ಯೋಜನೆಯಿಲ್ಲ. ಎಲ್ಲಾ ತೀರ್ಪಿನಂತೆ ಇದೂ ಸಹ ಸಾಮಾನ್ಯ ತೀರ್ಪು ಆಗಿರಲಿದೆ ಎಂದು ಮೂಲಗಳು ಮಾಹಿತಿ ನೀಡಿವೆ.

ಅಲ್ಲದೇ ಮೊಬೈಲ್ ಕರೆಗಳು, ಸಂದೇಶಗಳು, ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಸುದ್ದಿಗಳ ಮೇಲೂ ನಿಗಾ ಇರಿಸಲಾಗಿದೆ. ಶಾಂತಿಗೆ ಧಕ್ಕೆಯಾಗದಂತೆ, ಪ್ರಚೋದನಾತ್ಮಕ ಸಂದೇಶಗಳು, ದೃಶ್ಯಗಳು ಹರಿದಾಡದಂತೆ ತಡೆಯಲು ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಉತ್ತರಪ್ರದೇಶದ 1600 ಹಳ್ಳಿಗಳಲ್ಲಿ ಪೊಲೀಸರು 1600 ಸ್ವಯಂ ಸೇವಕರನ್ನು ಸಂಪರ್ಕಿಸುವ ಮೊಬೈಲ್ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಲಾಗಿದೆ. ಇದು ಸ್ಥಳೀಯ ಮಟ್ಟದ ಸ್ಥಿತಿಗತಿ ಹೇಗಿದೆ, ಯಾವ ರೀತಿ ವಾತಾವರಣವಿದೆ ಎಂಬುದನ್ನು ತಿಳಿಸುತ್ತದೆ.

ಇತ್ತ ಅಯೋಧ್ಯೆ ತೀರ್ಪಿಗಾಗಿ ಸಂಪೂರ್ಣ ಸಿದ್ಧಗೊಂಡಿದ್ದೇವೆ. ಎಲ್ಲಾ ಸಮಯದಲ್ಲೂ ಪೊಲೀಸರು ಗಸ್ತು ತಿರುಗುತ್ತಿದ್ದಾರೆ. ಶಾಂತಿ ಸಭೆಗಳನ್ನು ನಡೆಸುವ ಮೂಲಕ ಶಾಂತಿಯಿಂದಿರುವಂತೆ ಮನವರಿಕೆ ಮಾಡಿ ಕೊಡಲಾಗುತ್ತಿದೆ. ಕಾನೂನು ಉಲ್ಲಂಘನೆಯಾಗದಂತೆ ನೋಡಿಕೊಳ್ಳಲಾಗುತ್ತಿದೆ. ಗುಪ್ತಚರ ಸಂಸ್ಥೆ ಸಕ್ರಿಯವಾಗಿದೆ. ಸಾಮಾಜಿಕ ವಿರೋಧಿ ಅಂಶಗಳು ಹರಿದಾಡದಂತೆ ಕ್ರಮ ಕೈಗೊಂಡಿರುವುದಾಗಿ ಉತ್ತರ ಪ್ರದೇಶ ಪೊಲೀಸ್ ಮಹಾ ನಿರ್ದೇಶಕ ಒ.ಪಿ.ಸಿಂಗ್ ಹೇಳಿದರು.

ಬಾಬ್ರಿ ಮಸೀದಿ-ರಾಮಜನ್ಮಭೂಮಿ ವಿವಾದದ ತೀರ್ಪು ಹೊರಬೀಳುತ್ತಿರುವ ಹಿನ್ನೆಲೆಯಲ್ಲಿ ಜಮಿಯತ್ ಉಲಾಮ ಇ ಹಿಂದ್ ಸಂಘಟನೆ ಅಧ್ಯಕ್ಷ ಸೈಯದ್ ಅರ್ಷದ್ ಮದಾನಿ ನವದೆಹಲಿಯಲ್ಲಿಂದು ಆರ್.ಎಸ್.ಎಸ್. ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಭೇಟಿ ಮಾಡಿ ದೇಶದಲ್ಲಿ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಮಾತುಕತೆ ನಡೆಸಿದ್ದಾರೆ.

ಸಭೆಯ ಬಳಿಕ ಮಾತನಾಡಿದ ಮದಾನಿ ಎರಡು ಸಂಘಟನೆಗಳು ಜಂಟಿ ಪತ್ರಿಕಾಗೋಷ್ಟಿ ನಡೆಸಿ ಜನರಲ್ಲಿ ಶಾಂತಿ ಕಾಪಾಡಿಕೊಳ್ಳುವಂತೆ ಮನವಿ ಮಾಡಲು ತೀರ್ಮಾನಿಸಲಾಗಿದೆ. ತೀರ್ಪು ಯಾರ ಪರವೇ ಬರಲಿ ಶಾಂತಿ ನೆಮ್ಮದಿ ಮುಖ್ಯ ಎಂದರು.
ಎರಡು ಸಂಘಟನೆಗಳು ಬಾಬ್ರಿ ಮಸೀದಿ-ರಾಮಜನ್ಮಭೂಮಿ ವಿವಾದದಲ್ಲಿ ಭಿನ್ನ ಅಭಿಪ್ರಾಯಗಳನ್ನು ಹೊಂದಿವೆ. ತೀರ್ಪು ಬಾಬ್ರಿ ಮಸೀದಿಯ ಪರವಾಗಿ ಬರಲಿದೆ. ಈ ಸಂಬಂಧ ನಾವು ವಿಶೇಷ ವ್ಯವಸ್ಥೆ ಮಾಡಿಕೊಂಡಿಲ್ಲ. ಸುಪ್ರೀಂ ಕೋರ್ಟ್ ತೀರ್ಪು ಬಾಬರಿ ಮಸೀಸಿ ಪರವಾಗಿ ಬಂದರು ಶಾಂತಿಯಿಂದ ಇರಬೇಕು ಎಂದು ಹೇಳಿದರು.
ತೀರ್ಪು ಪ್ರಕಟವಾದ ಮೇಲೆ ಕೆಲವು ವಿದ್ರೋಹಿ ಶಕ್ತಿಗಳು ಸಮಾಜದಲ್ಲಿ ಅಸಾಂತಿ ಉಂಟು ಮಾಡಲು ಬೀದಿಗೆ ಇಳಿಯದಂತೆ ತಡೆಯಬೇಕಾದ ಜವಾಬ್ದಾರಿಯನ್ನು ಸರ್ಕಾರ ವಹಿಸಿಕೊಳ್ಳಬೇಕು.ಹಿರಿಯ ವಕೀಲರಾದ ರಾಜೀವ್ ಧವನ್ ಅವರ ಮೂಲಕ ನ್ಯಾಯಾಲಯಕ್ಕೆ ಎಲ್ಲಾ ದಾಖಲೆಗಳನ್ನು ನೀಡಿದ್ದೇವೆ. ತೀರ್ಪು ಬಂದ ಮೇಲೆ  ಶಾಂತಿ ಕಾಪಾಡುವಂತೆ ಜನರಿಗೆ ಮನವಿ ಮಾಡುತ್ತೇವೆ ಎಂದರು.
ಕಾನೂನು ಜನತೆಯನ್ನು ಬೀದಿಗೆ ಬಾರದಂತೆ ತಡಯಬೇಕು. ಘರ್ಷಣೆಗೆ ಅವಕಾಶವಾಘದಂತೆ ನೋಡಿಕೊಳ್ಳಬೇಕು. ತೀರ್ಪು ನಮ್ಮ ಪರ ಬಂದರೂ ಒಪ್ಪಿಕೊಳ್ಳಬೇಕು. ಪ್ರತಿವಾದಿ ಪರ ಬಂದರು ಒಪ್ಪಿಕೊಳ್ಳಬೇಕು ಎಂದು ಹೇಳಿದರು.

ಇನ್ನು ತುಮಕೂರಿನಲ್ಲಿ ರಾಮಜನ್ಮಭೂಮಿ-ಬಾಬ್ರಿ ಮಸೀದಿ ಭೂ ವಿವಾದದ ತೀರ್ಪು, ಟಿಪ್ಪು ಜಯಂತಿ ಹಾಗೂ ಈದ್ ಮಿಲಾದ್ ಹಬ್ಬದ ಆಚರಣೆಯ ಕುರಿತು ತುಮಕೂರಿನ ಚಿಲುಮೆ ಪೊಲೀಸ್ ಸಮುದಾಯ ಭವನದಲ್ಲಿ ಮುಸ್ಲೀಂ ಮುಖಂಡರು, ಡಿಎಸ್ಎಸ್ ಮುಖಂಡರೊಂದಿಗೆ ಪೊಲೀಸರು ಶಾಂತಿ ಸಭೆ ನಡೆಸಿದರು. ಸಭೆಯಲ್ಲಿ ಈ ಮೂರು ವಿಷಗಳ ಕುರಿತು ಚರ್ಚೆ ನಡೆಯಿತು.

ಮುಸ್ಲೀಂ ಸಮುದಾಯದ ಹಿರಿಯರು, ಧರ್ಮಗುರುಗಳು, ವಿವಿಧ ಸಂಘಟನೆಗಳ ಮುಖಂಡರು, ದಲಿತ ಸಂಘರ್ಷ ಸಮಿತಿಯ ಮುಖಂಡರು ಕೂಡ ಸಭೆಯಲ್ಲಿ ಭಾಗವಹಿಸಿ ಶಾಂತಿ ಕಾಪಾಡುವ ಕುರಿತು ಸಲಹೆ ನೀಡಿದರು. ಟಿಪ್ಪು ಜಯಂತಿ ಆಚರಣೆ ನಿಷೇಧಿಸುವ ಸರ್ಕಾರದ ನಿರ್ಧಾರಕ್ಕೆ ಕೆಲವು ಆಕ್ಷೇಪ ವ್ಯಕ್ತಪಡಿಸಿ ಅಸಮಾಧಾನ ಹೊರ ಹಾಕಿದರು.

ರಾಮಜನ್ಮಭೂಮಿ ಬಾಬ್ರಿ ಮಸೀದಿ ವಿವಾದದ ತೀರ್ಪು ಯಾರ ಪರವೇ ಬರಲಿ ಸಮಾಜದಲ್ಲಿ ಶಾಂತಿ ಕಾಡಿಕೊಳ್ಳುವುದಾಗಿ ಮುಸ್ಲೀಂ ಮುಖಂಡರು ಭರವಸೆ ನೀಡಿದರು.  ಇದೇ ವೇಳೆ ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಮತ್ತು ಜಿಲ್ಲಾ ಪೋಲೀಸ್ ವರಿಷ್ಠ ಡಾ. ವಂಶಿಕೃಷ್ಣ ಕೂಡ ಸಮಾಜದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವಂತೆ ಸಮುದಾದ ಮುಖಂಡರಲ್ಲಿ ಮನವಿ ಮಾಡಿದರು.

ಸಮಾರಂಭದಲ್ಲಿ ಹೆಚ್ಚವರಿ ಎಎಸ್ಪಿ ಉದೇಶ ಟಿ.ಜೆ., ಬೆಸ್ಕಾಂ ಇಲಾಖೆಯ ಅದಿಕಾರಿ ಗೋವಿಂದಪ್ಪ, ಮಹಾನಗರ ಪಾಲಿಕೆಯ ಆರೋಗ್ಯ ಅದಿಕಾರಿ ನಾಗೇಶ್ ,ನಗರದ ಪೊಲೀಸ್ ಅದಿಕಾರಿಗಳು ಉಪಸ್ಥಿತಿತರಿದ್ದರು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...