Homeಮುಖಪುಟಅಯೋಧ್ಯೆ ತೀರ್ಪಿಗೆ ದಿನಗಣನೆ: ಭಾರಿ ಬಿಗಿಬಂದೋಬಸ್ತ್, ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣು

ಅಯೋಧ್ಯೆ ತೀರ್ಪಿಗೆ ದಿನಗಣನೆ: ಭಾರಿ ಬಿಗಿಬಂದೋಬಸ್ತ್, ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣು

- Advertisement -
- Advertisement -

ಅಯೋಧ್ಯೆ ವಿವಾದ ತೀರ್ಪು ನವೆಂಬರ್ 17ರಂದು ಪ್ರಕಟಗೊಳ್ಳುವ ನಿರೀಕ್ಷೆಯಿದೆ. ಈಗಾಗಲೇ ವಿಚಾರಣೆ ಮುಕ್ತಾಯಗಳಿಸಿರುವ  ಸುಪ್ರೀಂಕೋರ್ಟ್, ತೀರ್ಪನ್ನು ಕಾಯ್ದಿರಿಸಿದ್ದು, ನ.17ರಂದು ಪ್ರಕಟಿಸುವ ನಿರೀಕ್ಷೆಯಿದೆ. ತೀರ್ಪು ಪ್ರಕಟಗೊಳ್ಳುವ ಮೊದಲೇ ಅಯೋಧ್ಯೆ, ಗೋರಖ್ ಪುರ, ರಾಂಪುರ ಸೇರಿದಂತೆ ಹಲವು ಭಾಗಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ತೀರ್ಪಿಗೆ ಇನ್ನು ಕೆಲವೇ ದಿನಗಳು ಬಾಕಿಯಿದ್ದು, ಉತ್ತರ ಪ್ರದೇಶ ಪೊಲೀಸರು ನಾಲ್ಕು ಹಂತಗಳಲ್ಲಿ ಭದ್ರತೆಯನ್ನು ನಿಯೋಜಿಸಿದ್ದಾರೆ. ಎಲ್ಲಿಯಾದರೂ ಭದ್ರತೆ ಕುರಿತ ಯೋಜನೆ ವಿಫಲವಾದರೆ ಮತ್ತೊಂದು ಪಡೆಯನ್ನು ನಿಯೋಜಿಸಲಾಗುವುದು ಎಂದು ಸರ್ಕಾರ ತಿಳಿಸಿದೆ. ಅಯೋಧ್ಯೆ ದೇಗುಲದ ಸುತ್ತಮುತ್ತ 12 ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಅರೆ ಸೈನಿಕ ಪಡೆ, ಪ್ರಾಂತೀಯ ಸಶಸ್ತ್ರ ಪಡೆಯನ್ನು ನಿಯೋಜಿಸಲಾಗಿದೆ. ಇನ್ನು ಅಯೋಧ್ಯೆಯಲ್ಲಿ ಕರ್ಪ್ಯೂ ಹೇರುವ ಅಥವಾ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸುವ ಯಾವುದೇ ಯೋಜನೆಯಿಲ್ಲ. ಎಲ್ಲಾ ತೀರ್ಪಿನಂತೆ ಇದೂ ಸಹ ಸಾಮಾನ್ಯ ತೀರ್ಪು ಆಗಿರಲಿದೆ ಎಂದು ಮೂಲಗಳು ಮಾಹಿತಿ ನೀಡಿವೆ.

ಅಲ್ಲದೇ ಮೊಬೈಲ್ ಕರೆಗಳು, ಸಂದೇಶಗಳು, ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಸುದ್ದಿಗಳ ಮೇಲೂ ನಿಗಾ ಇರಿಸಲಾಗಿದೆ. ಶಾಂತಿಗೆ ಧಕ್ಕೆಯಾಗದಂತೆ, ಪ್ರಚೋದನಾತ್ಮಕ ಸಂದೇಶಗಳು, ದೃಶ್ಯಗಳು ಹರಿದಾಡದಂತೆ ತಡೆಯಲು ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಉತ್ತರಪ್ರದೇಶದ 1600 ಹಳ್ಳಿಗಳಲ್ಲಿ ಪೊಲೀಸರು 1600 ಸ್ವಯಂ ಸೇವಕರನ್ನು ಸಂಪರ್ಕಿಸುವ ಮೊಬೈಲ್ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಲಾಗಿದೆ. ಇದು ಸ್ಥಳೀಯ ಮಟ್ಟದ ಸ್ಥಿತಿಗತಿ ಹೇಗಿದೆ, ಯಾವ ರೀತಿ ವಾತಾವರಣವಿದೆ ಎಂಬುದನ್ನು ತಿಳಿಸುತ್ತದೆ.

ಇತ್ತ ಅಯೋಧ್ಯೆ ತೀರ್ಪಿಗಾಗಿ ಸಂಪೂರ್ಣ ಸಿದ್ಧಗೊಂಡಿದ್ದೇವೆ. ಎಲ್ಲಾ ಸಮಯದಲ್ಲೂ ಪೊಲೀಸರು ಗಸ್ತು ತಿರುಗುತ್ತಿದ್ದಾರೆ. ಶಾಂತಿ ಸಭೆಗಳನ್ನು ನಡೆಸುವ ಮೂಲಕ ಶಾಂತಿಯಿಂದಿರುವಂತೆ ಮನವರಿಕೆ ಮಾಡಿ ಕೊಡಲಾಗುತ್ತಿದೆ. ಕಾನೂನು ಉಲ್ಲಂಘನೆಯಾಗದಂತೆ ನೋಡಿಕೊಳ್ಳಲಾಗುತ್ತಿದೆ. ಗುಪ್ತಚರ ಸಂಸ್ಥೆ ಸಕ್ರಿಯವಾಗಿದೆ. ಸಾಮಾಜಿಕ ವಿರೋಧಿ ಅಂಶಗಳು ಹರಿದಾಡದಂತೆ ಕ್ರಮ ಕೈಗೊಂಡಿರುವುದಾಗಿ ಉತ್ತರ ಪ್ರದೇಶ ಪೊಲೀಸ್ ಮಹಾ ನಿರ್ದೇಶಕ ಒ.ಪಿ.ಸಿಂಗ್ ಹೇಳಿದರು.

ಬಾಬ್ರಿ ಮಸೀದಿ-ರಾಮಜನ್ಮಭೂಮಿ ವಿವಾದದ ತೀರ್ಪು ಹೊರಬೀಳುತ್ತಿರುವ ಹಿನ್ನೆಲೆಯಲ್ಲಿ ಜಮಿಯತ್ ಉಲಾಮ ಇ ಹಿಂದ್ ಸಂಘಟನೆ ಅಧ್ಯಕ್ಷ ಸೈಯದ್ ಅರ್ಷದ್ ಮದಾನಿ ನವದೆಹಲಿಯಲ್ಲಿಂದು ಆರ್.ಎಸ್.ಎಸ್. ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಭೇಟಿ ಮಾಡಿ ದೇಶದಲ್ಲಿ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಮಾತುಕತೆ ನಡೆಸಿದ್ದಾರೆ.

ಸಭೆಯ ಬಳಿಕ ಮಾತನಾಡಿದ ಮದಾನಿ ಎರಡು ಸಂಘಟನೆಗಳು ಜಂಟಿ ಪತ್ರಿಕಾಗೋಷ್ಟಿ ನಡೆಸಿ ಜನರಲ್ಲಿ ಶಾಂತಿ ಕಾಪಾಡಿಕೊಳ್ಳುವಂತೆ ಮನವಿ ಮಾಡಲು ತೀರ್ಮಾನಿಸಲಾಗಿದೆ. ತೀರ್ಪು ಯಾರ ಪರವೇ ಬರಲಿ ಶಾಂತಿ ನೆಮ್ಮದಿ ಮುಖ್ಯ ಎಂದರು.
ಎರಡು ಸಂಘಟನೆಗಳು ಬಾಬ್ರಿ ಮಸೀದಿ-ರಾಮಜನ್ಮಭೂಮಿ ವಿವಾದದಲ್ಲಿ ಭಿನ್ನ ಅಭಿಪ್ರಾಯಗಳನ್ನು ಹೊಂದಿವೆ. ತೀರ್ಪು ಬಾಬ್ರಿ ಮಸೀದಿಯ ಪರವಾಗಿ ಬರಲಿದೆ. ಈ ಸಂಬಂಧ ನಾವು ವಿಶೇಷ ವ್ಯವಸ್ಥೆ ಮಾಡಿಕೊಂಡಿಲ್ಲ. ಸುಪ್ರೀಂ ಕೋರ್ಟ್ ತೀರ್ಪು ಬಾಬರಿ ಮಸೀಸಿ ಪರವಾಗಿ ಬಂದರು ಶಾಂತಿಯಿಂದ ಇರಬೇಕು ಎಂದು ಹೇಳಿದರು.
ತೀರ್ಪು ಪ್ರಕಟವಾದ ಮೇಲೆ ಕೆಲವು ವಿದ್ರೋಹಿ ಶಕ್ತಿಗಳು ಸಮಾಜದಲ್ಲಿ ಅಸಾಂತಿ ಉಂಟು ಮಾಡಲು ಬೀದಿಗೆ ಇಳಿಯದಂತೆ ತಡೆಯಬೇಕಾದ ಜವಾಬ್ದಾರಿಯನ್ನು ಸರ್ಕಾರ ವಹಿಸಿಕೊಳ್ಳಬೇಕು.ಹಿರಿಯ ವಕೀಲರಾದ ರಾಜೀವ್ ಧವನ್ ಅವರ ಮೂಲಕ ನ್ಯಾಯಾಲಯಕ್ಕೆ ಎಲ್ಲಾ ದಾಖಲೆಗಳನ್ನು ನೀಡಿದ್ದೇವೆ. ತೀರ್ಪು ಬಂದ ಮೇಲೆ  ಶಾಂತಿ ಕಾಪಾಡುವಂತೆ ಜನರಿಗೆ ಮನವಿ ಮಾಡುತ್ತೇವೆ ಎಂದರು.
ಕಾನೂನು ಜನತೆಯನ್ನು ಬೀದಿಗೆ ಬಾರದಂತೆ ತಡಯಬೇಕು. ಘರ್ಷಣೆಗೆ ಅವಕಾಶವಾಘದಂತೆ ನೋಡಿಕೊಳ್ಳಬೇಕು. ತೀರ್ಪು ನಮ್ಮ ಪರ ಬಂದರೂ ಒಪ್ಪಿಕೊಳ್ಳಬೇಕು. ಪ್ರತಿವಾದಿ ಪರ ಬಂದರು ಒಪ್ಪಿಕೊಳ್ಳಬೇಕು ಎಂದು ಹೇಳಿದರು.

ಇನ್ನು ತುಮಕೂರಿನಲ್ಲಿ ರಾಮಜನ್ಮಭೂಮಿ-ಬಾಬ್ರಿ ಮಸೀದಿ ಭೂ ವಿವಾದದ ತೀರ್ಪು, ಟಿಪ್ಪು ಜಯಂತಿ ಹಾಗೂ ಈದ್ ಮಿಲಾದ್ ಹಬ್ಬದ ಆಚರಣೆಯ ಕುರಿತು ತುಮಕೂರಿನ ಚಿಲುಮೆ ಪೊಲೀಸ್ ಸಮುದಾಯ ಭವನದಲ್ಲಿ ಮುಸ್ಲೀಂ ಮುಖಂಡರು, ಡಿಎಸ್ಎಸ್ ಮುಖಂಡರೊಂದಿಗೆ ಪೊಲೀಸರು ಶಾಂತಿ ಸಭೆ ನಡೆಸಿದರು. ಸಭೆಯಲ್ಲಿ ಈ ಮೂರು ವಿಷಗಳ ಕುರಿತು ಚರ್ಚೆ ನಡೆಯಿತು.

ಮುಸ್ಲೀಂ ಸಮುದಾಯದ ಹಿರಿಯರು, ಧರ್ಮಗುರುಗಳು, ವಿವಿಧ ಸಂಘಟನೆಗಳ ಮುಖಂಡರು, ದಲಿತ ಸಂಘರ್ಷ ಸಮಿತಿಯ ಮುಖಂಡರು ಕೂಡ ಸಭೆಯಲ್ಲಿ ಭಾಗವಹಿಸಿ ಶಾಂತಿ ಕಾಪಾಡುವ ಕುರಿತು ಸಲಹೆ ನೀಡಿದರು. ಟಿಪ್ಪು ಜಯಂತಿ ಆಚರಣೆ ನಿಷೇಧಿಸುವ ಸರ್ಕಾರದ ನಿರ್ಧಾರಕ್ಕೆ ಕೆಲವು ಆಕ್ಷೇಪ ವ್ಯಕ್ತಪಡಿಸಿ ಅಸಮಾಧಾನ ಹೊರ ಹಾಕಿದರು.

ರಾಮಜನ್ಮಭೂಮಿ ಬಾಬ್ರಿ ಮಸೀದಿ ವಿವಾದದ ತೀರ್ಪು ಯಾರ ಪರವೇ ಬರಲಿ ಸಮಾಜದಲ್ಲಿ ಶಾಂತಿ ಕಾಡಿಕೊಳ್ಳುವುದಾಗಿ ಮುಸ್ಲೀಂ ಮುಖಂಡರು ಭರವಸೆ ನೀಡಿದರು.  ಇದೇ ವೇಳೆ ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಮತ್ತು ಜಿಲ್ಲಾ ಪೋಲೀಸ್ ವರಿಷ್ಠ ಡಾ. ವಂಶಿಕೃಷ್ಣ ಕೂಡ ಸಮಾಜದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವಂತೆ ಸಮುದಾದ ಮುಖಂಡರಲ್ಲಿ ಮನವಿ ಮಾಡಿದರು.

ಸಮಾರಂಭದಲ್ಲಿ ಹೆಚ್ಚವರಿ ಎಎಸ್ಪಿ ಉದೇಶ ಟಿ.ಜೆ., ಬೆಸ್ಕಾಂ ಇಲಾಖೆಯ ಅದಿಕಾರಿ ಗೋವಿಂದಪ್ಪ, ಮಹಾನಗರ ಪಾಲಿಕೆಯ ಆರೋಗ್ಯ ಅದಿಕಾರಿ ನಾಗೇಶ್ ,ನಗರದ ಪೊಲೀಸ್ ಅದಿಕಾರಿಗಳು ಉಪಸ್ಥಿತಿತರಿದ್ದರು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...