Homeಮುಖಪುಟಅಯೋಧ್ಯೆ ತೀರ್ಪಿಗೆ ದಿನಗಣನೆ: ಭಾರಿ ಬಿಗಿಬಂದೋಬಸ್ತ್, ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣು

ಅಯೋಧ್ಯೆ ತೀರ್ಪಿಗೆ ದಿನಗಣನೆ: ಭಾರಿ ಬಿಗಿಬಂದೋಬಸ್ತ್, ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣು

- Advertisement -
- Advertisement -

ಅಯೋಧ್ಯೆ ವಿವಾದ ತೀರ್ಪು ನವೆಂಬರ್ 17ರಂದು ಪ್ರಕಟಗೊಳ್ಳುವ ನಿರೀಕ್ಷೆಯಿದೆ. ಈಗಾಗಲೇ ವಿಚಾರಣೆ ಮುಕ್ತಾಯಗಳಿಸಿರುವ  ಸುಪ್ರೀಂಕೋರ್ಟ್, ತೀರ್ಪನ್ನು ಕಾಯ್ದಿರಿಸಿದ್ದು, ನ.17ರಂದು ಪ್ರಕಟಿಸುವ ನಿರೀಕ್ಷೆಯಿದೆ. ತೀರ್ಪು ಪ್ರಕಟಗೊಳ್ಳುವ ಮೊದಲೇ ಅಯೋಧ್ಯೆ, ಗೋರಖ್ ಪುರ, ರಾಂಪುರ ಸೇರಿದಂತೆ ಹಲವು ಭಾಗಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ತೀರ್ಪಿಗೆ ಇನ್ನು ಕೆಲವೇ ದಿನಗಳು ಬಾಕಿಯಿದ್ದು, ಉತ್ತರ ಪ್ರದೇಶ ಪೊಲೀಸರು ನಾಲ್ಕು ಹಂತಗಳಲ್ಲಿ ಭದ್ರತೆಯನ್ನು ನಿಯೋಜಿಸಿದ್ದಾರೆ. ಎಲ್ಲಿಯಾದರೂ ಭದ್ರತೆ ಕುರಿತ ಯೋಜನೆ ವಿಫಲವಾದರೆ ಮತ್ತೊಂದು ಪಡೆಯನ್ನು ನಿಯೋಜಿಸಲಾಗುವುದು ಎಂದು ಸರ್ಕಾರ ತಿಳಿಸಿದೆ. ಅಯೋಧ್ಯೆ ದೇಗುಲದ ಸುತ್ತಮುತ್ತ 12 ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಅರೆ ಸೈನಿಕ ಪಡೆ, ಪ್ರಾಂತೀಯ ಸಶಸ್ತ್ರ ಪಡೆಯನ್ನು ನಿಯೋಜಿಸಲಾಗಿದೆ. ಇನ್ನು ಅಯೋಧ್ಯೆಯಲ್ಲಿ ಕರ್ಪ್ಯೂ ಹೇರುವ ಅಥವಾ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸುವ ಯಾವುದೇ ಯೋಜನೆಯಿಲ್ಲ. ಎಲ್ಲಾ ತೀರ್ಪಿನಂತೆ ಇದೂ ಸಹ ಸಾಮಾನ್ಯ ತೀರ್ಪು ಆಗಿರಲಿದೆ ಎಂದು ಮೂಲಗಳು ಮಾಹಿತಿ ನೀಡಿವೆ.

ಅಲ್ಲದೇ ಮೊಬೈಲ್ ಕರೆಗಳು, ಸಂದೇಶಗಳು, ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಸುದ್ದಿಗಳ ಮೇಲೂ ನಿಗಾ ಇರಿಸಲಾಗಿದೆ. ಶಾಂತಿಗೆ ಧಕ್ಕೆಯಾಗದಂತೆ, ಪ್ರಚೋದನಾತ್ಮಕ ಸಂದೇಶಗಳು, ದೃಶ್ಯಗಳು ಹರಿದಾಡದಂತೆ ತಡೆಯಲು ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಉತ್ತರಪ್ರದೇಶದ 1600 ಹಳ್ಳಿಗಳಲ್ಲಿ ಪೊಲೀಸರು 1600 ಸ್ವಯಂ ಸೇವಕರನ್ನು ಸಂಪರ್ಕಿಸುವ ಮೊಬೈಲ್ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಲಾಗಿದೆ. ಇದು ಸ್ಥಳೀಯ ಮಟ್ಟದ ಸ್ಥಿತಿಗತಿ ಹೇಗಿದೆ, ಯಾವ ರೀತಿ ವಾತಾವರಣವಿದೆ ಎಂಬುದನ್ನು ತಿಳಿಸುತ್ತದೆ.

ಇತ್ತ ಅಯೋಧ್ಯೆ ತೀರ್ಪಿಗಾಗಿ ಸಂಪೂರ್ಣ ಸಿದ್ಧಗೊಂಡಿದ್ದೇವೆ. ಎಲ್ಲಾ ಸಮಯದಲ್ಲೂ ಪೊಲೀಸರು ಗಸ್ತು ತಿರುಗುತ್ತಿದ್ದಾರೆ. ಶಾಂತಿ ಸಭೆಗಳನ್ನು ನಡೆಸುವ ಮೂಲಕ ಶಾಂತಿಯಿಂದಿರುವಂತೆ ಮನವರಿಕೆ ಮಾಡಿ ಕೊಡಲಾಗುತ್ತಿದೆ. ಕಾನೂನು ಉಲ್ಲಂಘನೆಯಾಗದಂತೆ ನೋಡಿಕೊಳ್ಳಲಾಗುತ್ತಿದೆ. ಗುಪ್ತಚರ ಸಂಸ್ಥೆ ಸಕ್ರಿಯವಾಗಿದೆ. ಸಾಮಾಜಿಕ ವಿರೋಧಿ ಅಂಶಗಳು ಹರಿದಾಡದಂತೆ ಕ್ರಮ ಕೈಗೊಂಡಿರುವುದಾಗಿ ಉತ್ತರ ಪ್ರದೇಶ ಪೊಲೀಸ್ ಮಹಾ ನಿರ್ದೇಶಕ ಒ.ಪಿ.ಸಿಂಗ್ ಹೇಳಿದರು.

ಬಾಬ್ರಿ ಮಸೀದಿ-ರಾಮಜನ್ಮಭೂಮಿ ವಿವಾದದ ತೀರ್ಪು ಹೊರಬೀಳುತ್ತಿರುವ ಹಿನ್ನೆಲೆಯಲ್ಲಿ ಜಮಿಯತ್ ಉಲಾಮ ಇ ಹಿಂದ್ ಸಂಘಟನೆ ಅಧ್ಯಕ್ಷ ಸೈಯದ್ ಅರ್ಷದ್ ಮದಾನಿ ನವದೆಹಲಿಯಲ್ಲಿಂದು ಆರ್.ಎಸ್.ಎಸ್. ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಭೇಟಿ ಮಾಡಿ ದೇಶದಲ್ಲಿ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಮಾತುಕತೆ ನಡೆಸಿದ್ದಾರೆ.

ಸಭೆಯ ಬಳಿಕ ಮಾತನಾಡಿದ ಮದಾನಿ ಎರಡು ಸಂಘಟನೆಗಳು ಜಂಟಿ ಪತ್ರಿಕಾಗೋಷ್ಟಿ ನಡೆಸಿ ಜನರಲ್ಲಿ ಶಾಂತಿ ಕಾಪಾಡಿಕೊಳ್ಳುವಂತೆ ಮನವಿ ಮಾಡಲು ತೀರ್ಮಾನಿಸಲಾಗಿದೆ. ತೀರ್ಪು ಯಾರ ಪರವೇ ಬರಲಿ ಶಾಂತಿ ನೆಮ್ಮದಿ ಮುಖ್ಯ ಎಂದರು.
ಎರಡು ಸಂಘಟನೆಗಳು ಬಾಬ್ರಿ ಮಸೀದಿ-ರಾಮಜನ್ಮಭೂಮಿ ವಿವಾದದಲ್ಲಿ ಭಿನ್ನ ಅಭಿಪ್ರಾಯಗಳನ್ನು ಹೊಂದಿವೆ. ತೀರ್ಪು ಬಾಬ್ರಿ ಮಸೀದಿಯ ಪರವಾಗಿ ಬರಲಿದೆ. ಈ ಸಂಬಂಧ ನಾವು ವಿಶೇಷ ವ್ಯವಸ್ಥೆ ಮಾಡಿಕೊಂಡಿಲ್ಲ. ಸುಪ್ರೀಂ ಕೋರ್ಟ್ ತೀರ್ಪು ಬಾಬರಿ ಮಸೀಸಿ ಪರವಾಗಿ ಬಂದರು ಶಾಂತಿಯಿಂದ ಇರಬೇಕು ಎಂದು ಹೇಳಿದರು.
ತೀರ್ಪು ಪ್ರಕಟವಾದ ಮೇಲೆ ಕೆಲವು ವಿದ್ರೋಹಿ ಶಕ್ತಿಗಳು ಸಮಾಜದಲ್ಲಿ ಅಸಾಂತಿ ಉಂಟು ಮಾಡಲು ಬೀದಿಗೆ ಇಳಿಯದಂತೆ ತಡೆಯಬೇಕಾದ ಜವಾಬ್ದಾರಿಯನ್ನು ಸರ್ಕಾರ ವಹಿಸಿಕೊಳ್ಳಬೇಕು.ಹಿರಿಯ ವಕೀಲರಾದ ರಾಜೀವ್ ಧವನ್ ಅವರ ಮೂಲಕ ನ್ಯಾಯಾಲಯಕ್ಕೆ ಎಲ್ಲಾ ದಾಖಲೆಗಳನ್ನು ನೀಡಿದ್ದೇವೆ. ತೀರ್ಪು ಬಂದ ಮೇಲೆ  ಶಾಂತಿ ಕಾಪಾಡುವಂತೆ ಜನರಿಗೆ ಮನವಿ ಮಾಡುತ್ತೇವೆ ಎಂದರು.
ಕಾನೂನು ಜನತೆಯನ್ನು ಬೀದಿಗೆ ಬಾರದಂತೆ ತಡಯಬೇಕು. ಘರ್ಷಣೆಗೆ ಅವಕಾಶವಾಘದಂತೆ ನೋಡಿಕೊಳ್ಳಬೇಕು. ತೀರ್ಪು ನಮ್ಮ ಪರ ಬಂದರೂ ಒಪ್ಪಿಕೊಳ್ಳಬೇಕು. ಪ್ರತಿವಾದಿ ಪರ ಬಂದರು ಒಪ್ಪಿಕೊಳ್ಳಬೇಕು ಎಂದು ಹೇಳಿದರು.

ಇನ್ನು ತುಮಕೂರಿನಲ್ಲಿ ರಾಮಜನ್ಮಭೂಮಿ-ಬಾಬ್ರಿ ಮಸೀದಿ ಭೂ ವಿವಾದದ ತೀರ್ಪು, ಟಿಪ್ಪು ಜಯಂತಿ ಹಾಗೂ ಈದ್ ಮಿಲಾದ್ ಹಬ್ಬದ ಆಚರಣೆಯ ಕುರಿತು ತುಮಕೂರಿನ ಚಿಲುಮೆ ಪೊಲೀಸ್ ಸಮುದಾಯ ಭವನದಲ್ಲಿ ಮುಸ್ಲೀಂ ಮುಖಂಡರು, ಡಿಎಸ್ಎಸ್ ಮುಖಂಡರೊಂದಿಗೆ ಪೊಲೀಸರು ಶಾಂತಿ ಸಭೆ ನಡೆಸಿದರು. ಸಭೆಯಲ್ಲಿ ಈ ಮೂರು ವಿಷಗಳ ಕುರಿತು ಚರ್ಚೆ ನಡೆಯಿತು.

ಮುಸ್ಲೀಂ ಸಮುದಾಯದ ಹಿರಿಯರು, ಧರ್ಮಗುರುಗಳು, ವಿವಿಧ ಸಂಘಟನೆಗಳ ಮುಖಂಡರು, ದಲಿತ ಸಂಘರ್ಷ ಸಮಿತಿಯ ಮುಖಂಡರು ಕೂಡ ಸಭೆಯಲ್ಲಿ ಭಾಗವಹಿಸಿ ಶಾಂತಿ ಕಾಪಾಡುವ ಕುರಿತು ಸಲಹೆ ನೀಡಿದರು. ಟಿಪ್ಪು ಜಯಂತಿ ಆಚರಣೆ ನಿಷೇಧಿಸುವ ಸರ್ಕಾರದ ನಿರ್ಧಾರಕ್ಕೆ ಕೆಲವು ಆಕ್ಷೇಪ ವ್ಯಕ್ತಪಡಿಸಿ ಅಸಮಾಧಾನ ಹೊರ ಹಾಕಿದರು.

ರಾಮಜನ್ಮಭೂಮಿ ಬಾಬ್ರಿ ಮಸೀದಿ ವಿವಾದದ ತೀರ್ಪು ಯಾರ ಪರವೇ ಬರಲಿ ಸಮಾಜದಲ್ಲಿ ಶಾಂತಿ ಕಾಡಿಕೊಳ್ಳುವುದಾಗಿ ಮುಸ್ಲೀಂ ಮುಖಂಡರು ಭರವಸೆ ನೀಡಿದರು.  ಇದೇ ವೇಳೆ ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಮತ್ತು ಜಿಲ್ಲಾ ಪೋಲೀಸ್ ವರಿಷ್ಠ ಡಾ. ವಂಶಿಕೃಷ್ಣ ಕೂಡ ಸಮಾಜದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವಂತೆ ಸಮುದಾದ ಮುಖಂಡರಲ್ಲಿ ಮನವಿ ಮಾಡಿದರು.

ಸಮಾರಂಭದಲ್ಲಿ ಹೆಚ್ಚವರಿ ಎಎಸ್ಪಿ ಉದೇಶ ಟಿ.ಜೆ., ಬೆಸ್ಕಾಂ ಇಲಾಖೆಯ ಅದಿಕಾರಿ ಗೋವಿಂದಪ್ಪ, ಮಹಾನಗರ ಪಾಲಿಕೆಯ ಆರೋಗ್ಯ ಅದಿಕಾರಿ ನಾಗೇಶ್ ,ನಗರದ ಪೊಲೀಸ್ ಅದಿಕಾರಿಗಳು ಉಪಸ್ಥಿತಿತರಿದ್ದರು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...