Homeಮುಖಪುಟಅಯೋಧ್ಯೆ ತೀರ್ಪಿಗೆ ದಿನಗಣನೆ: ಭಾರಿ ಬಿಗಿಬಂದೋಬಸ್ತ್, ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣು

ಅಯೋಧ್ಯೆ ತೀರ್ಪಿಗೆ ದಿನಗಣನೆ: ಭಾರಿ ಬಿಗಿಬಂದೋಬಸ್ತ್, ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣು

- Advertisement -
- Advertisement -

ಅಯೋಧ್ಯೆ ವಿವಾದ ತೀರ್ಪು ನವೆಂಬರ್ 17ರಂದು ಪ್ರಕಟಗೊಳ್ಳುವ ನಿರೀಕ್ಷೆಯಿದೆ. ಈಗಾಗಲೇ ವಿಚಾರಣೆ ಮುಕ್ತಾಯಗಳಿಸಿರುವ  ಸುಪ್ರೀಂಕೋರ್ಟ್, ತೀರ್ಪನ್ನು ಕಾಯ್ದಿರಿಸಿದ್ದು, ನ.17ರಂದು ಪ್ರಕಟಿಸುವ ನಿರೀಕ್ಷೆಯಿದೆ. ತೀರ್ಪು ಪ್ರಕಟಗೊಳ್ಳುವ ಮೊದಲೇ ಅಯೋಧ್ಯೆ, ಗೋರಖ್ ಪುರ, ರಾಂಪುರ ಸೇರಿದಂತೆ ಹಲವು ಭಾಗಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ತೀರ್ಪಿಗೆ ಇನ್ನು ಕೆಲವೇ ದಿನಗಳು ಬಾಕಿಯಿದ್ದು, ಉತ್ತರ ಪ್ರದೇಶ ಪೊಲೀಸರು ನಾಲ್ಕು ಹಂತಗಳಲ್ಲಿ ಭದ್ರತೆಯನ್ನು ನಿಯೋಜಿಸಿದ್ದಾರೆ. ಎಲ್ಲಿಯಾದರೂ ಭದ್ರತೆ ಕುರಿತ ಯೋಜನೆ ವಿಫಲವಾದರೆ ಮತ್ತೊಂದು ಪಡೆಯನ್ನು ನಿಯೋಜಿಸಲಾಗುವುದು ಎಂದು ಸರ್ಕಾರ ತಿಳಿಸಿದೆ. ಅಯೋಧ್ಯೆ ದೇಗುಲದ ಸುತ್ತಮುತ್ತ 12 ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಅರೆ ಸೈನಿಕ ಪಡೆ, ಪ್ರಾಂತೀಯ ಸಶಸ್ತ್ರ ಪಡೆಯನ್ನು ನಿಯೋಜಿಸಲಾಗಿದೆ. ಇನ್ನು ಅಯೋಧ್ಯೆಯಲ್ಲಿ ಕರ್ಪ್ಯೂ ಹೇರುವ ಅಥವಾ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸುವ ಯಾವುದೇ ಯೋಜನೆಯಿಲ್ಲ. ಎಲ್ಲಾ ತೀರ್ಪಿನಂತೆ ಇದೂ ಸಹ ಸಾಮಾನ್ಯ ತೀರ್ಪು ಆಗಿರಲಿದೆ ಎಂದು ಮೂಲಗಳು ಮಾಹಿತಿ ನೀಡಿವೆ.

ಅಲ್ಲದೇ ಮೊಬೈಲ್ ಕರೆಗಳು, ಸಂದೇಶಗಳು, ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಸುದ್ದಿಗಳ ಮೇಲೂ ನಿಗಾ ಇರಿಸಲಾಗಿದೆ. ಶಾಂತಿಗೆ ಧಕ್ಕೆಯಾಗದಂತೆ, ಪ್ರಚೋದನಾತ್ಮಕ ಸಂದೇಶಗಳು, ದೃಶ್ಯಗಳು ಹರಿದಾಡದಂತೆ ತಡೆಯಲು ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಉತ್ತರಪ್ರದೇಶದ 1600 ಹಳ್ಳಿಗಳಲ್ಲಿ ಪೊಲೀಸರು 1600 ಸ್ವಯಂ ಸೇವಕರನ್ನು ಸಂಪರ್ಕಿಸುವ ಮೊಬೈಲ್ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಲಾಗಿದೆ. ಇದು ಸ್ಥಳೀಯ ಮಟ್ಟದ ಸ್ಥಿತಿಗತಿ ಹೇಗಿದೆ, ಯಾವ ರೀತಿ ವಾತಾವರಣವಿದೆ ಎಂಬುದನ್ನು ತಿಳಿಸುತ್ತದೆ.

ಇತ್ತ ಅಯೋಧ್ಯೆ ತೀರ್ಪಿಗಾಗಿ ಸಂಪೂರ್ಣ ಸಿದ್ಧಗೊಂಡಿದ್ದೇವೆ. ಎಲ್ಲಾ ಸಮಯದಲ್ಲೂ ಪೊಲೀಸರು ಗಸ್ತು ತಿರುಗುತ್ತಿದ್ದಾರೆ. ಶಾಂತಿ ಸಭೆಗಳನ್ನು ನಡೆಸುವ ಮೂಲಕ ಶಾಂತಿಯಿಂದಿರುವಂತೆ ಮನವರಿಕೆ ಮಾಡಿ ಕೊಡಲಾಗುತ್ತಿದೆ. ಕಾನೂನು ಉಲ್ಲಂಘನೆಯಾಗದಂತೆ ನೋಡಿಕೊಳ್ಳಲಾಗುತ್ತಿದೆ. ಗುಪ್ತಚರ ಸಂಸ್ಥೆ ಸಕ್ರಿಯವಾಗಿದೆ. ಸಾಮಾಜಿಕ ವಿರೋಧಿ ಅಂಶಗಳು ಹರಿದಾಡದಂತೆ ಕ್ರಮ ಕೈಗೊಂಡಿರುವುದಾಗಿ ಉತ್ತರ ಪ್ರದೇಶ ಪೊಲೀಸ್ ಮಹಾ ನಿರ್ದೇಶಕ ಒ.ಪಿ.ಸಿಂಗ್ ಹೇಳಿದರು.

ಬಾಬ್ರಿ ಮಸೀದಿ-ರಾಮಜನ್ಮಭೂಮಿ ವಿವಾದದ ತೀರ್ಪು ಹೊರಬೀಳುತ್ತಿರುವ ಹಿನ್ನೆಲೆಯಲ್ಲಿ ಜಮಿಯತ್ ಉಲಾಮ ಇ ಹಿಂದ್ ಸಂಘಟನೆ ಅಧ್ಯಕ್ಷ ಸೈಯದ್ ಅರ್ಷದ್ ಮದಾನಿ ನವದೆಹಲಿಯಲ್ಲಿಂದು ಆರ್.ಎಸ್.ಎಸ್. ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಭೇಟಿ ಮಾಡಿ ದೇಶದಲ್ಲಿ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಮಾತುಕತೆ ನಡೆಸಿದ್ದಾರೆ.

ಸಭೆಯ ಬಳಿಕ ಮಾತನಾಡಿದ ಮದಾನಿ ಎರಡು ಸಂಘಟನೆಗಳು ಜಂಟಿ ಪತ್ರಿಕಾಗೋಷ್ಟಿ ನಡೆಸಿ ಜನರಲ್ಲಿ ಶಾಂತಿ ಕಾಪಾಡಿಕೊಳ್ಳುವಂತೆ ಮನವಿ ಮಾಡಲು ತೀರ್ಮಾನಿಸಲಾಗಿದೆ. ತೀರ್ಪು ಯಾರ ಪರವೇ ಬರಲಿ ಶಾಂತಿ ನೆಮ್ಮದಿ ಮುಖ್ಯ ಎಂದರು.
ಎರಡು ಸಂಘಟನೆಗಳು ಬಾಬ್ರಿ ಮಸೀದಿ-ರಾಮಜನ್ಮಭೂಮಿ ವಿವಾದದಲ್ಲಿ ಭಿನ್ನ ಅಭಿಪ್ರಾಯಗಳನ್ನು ಹೊಂದಿವೆ. ತೀರ್ಪು ಬಾಬ್ರಿ ಮಸೀದಿಯ ಪರವಾಗಿ ಬರಲಿದೆ. ಈ ಸಂಬಂಧ ನಾವು ವಿಶೇಷ ವ್ಯವಸ್ಥೆ ಮಾಡಿಕೊಂಡಿಲ್ಲ. ಸುಪ್ರೀಂ ಕೋರ್ಟ್ ತೀರ್ಪು ಬಾಬರಿ ಮಸೀಸಿ ಪರವಾಗಿ ಬಂದರು ಶಾಂತಿಯಿಂದ ಇರಬೇಕು ಎಂದು ಹೇಳಿದರು.
ತೀರ್ಪು ಪ್ರಕಟವಾದ ಮೇಲೆ ಕೆಲವು ವಿದ್ರೋಹಿ ಶಕ್ತಿಗಳು ಸಮಾಜದಲ್ಲಿ ಅಸಾಂತಿ ಉಂಟು ಮಾಡಲು ಬೀದಿಗೆ ಇಳಿಯದಂತೆ ತಡೆಯಬೇಕಾದ ಜವಾಬ್ದಾರಿಯನ್ನು ಸರ್ಕಾರ ವಹಿಸಿಕೊಳ್ಳಬೇಕು.ಹಿರಿಯ ವಕೀಲರಾದ ರಾಜೀವ್ ಧವನ್ ಅವರ ಮೂಲಕ ನ್ಯಾಯಾಲಯಕ್ಕೆ ಎಲ್ಲಾ ದಾಖಲೆಗಳನ್ನು ನೀಡಿದ್ದೇವೆ. ತೀರ್ಪು ಬಂದ ಮೇಲೆ  ಶಾಂತಿ ಕಾಪಾಡುವಂತೆ ಜನರಿಗೆ ಮನವಿ ಮಾಡುತ್ತೇವೆ ಎಂದರು.
ಕಾನೂನು ಜನತೆಯನ್ನು ಬೀದಿಗೆ ಬಾರದಂತೆ ತಡಯಬೇಕು. ಘರ್ಷಣೆಗೆ ಅವಕಾಶವಾಘದಂತೆ ನೋಡಿಕೊಳ್ಳಬೇಕು. ತೀರ್ಪು ನಮ್ಮ ಪರ ಬಂದರೂ ಒಪ್ಪಿಕೊಳ್ಳಬೇಕು. ಪ್ರತಿವಾದಿ ಪರ ಬಂದರು ಒಪ್ಪಿಕೊಳ್ಳಬೇಕು ಎಂದು ಹೇಳಿದರು.

ಇನ್ನು ತುಮಕೂರಿನಲ್ಲಿ ರಾಮಜನ್ಮಭೂಮಿ-ಬಾಬ್ರಿ ಮಸೀದಿ ಭೂ ವಿವಾದದ ತೀರ್ಪು, ಟಿಪ್ಪು ಜಯಂತಿ ಹಾಗೂ ಈದ್ ಮಿಲಾದ್ ಹಬ್ಬದ ಆಚರಣೆಯ ಕುರಿತು ತುಮಕೂರಿನ ಚಿಲುಮೆ ಪೊಲೀಸ್ ಸಮುದಾಯ ಭವನದಲ್ಲಿ ಮುಸ್ಲೀಂ ಮುಖಂಡರು, ಡಿಎಸ್ಎಸ್ ಮುಖಂಡರೊಂದಿಗೆ ಪೊಲೀಸರು ಶಾಂತಿ ಸಭೆ ನಡೆಸಿದರು. ಸಭೆಯಲ್ಲಿ ಈ ಮೂರು ವಿಷಗಳ ಕುರಿತು ಚರ್ಚೆ ನಡೆಯಿತು.

ಮುಸ್ಲೀಂ ಸಮುದಾಯದ ಹಿರಿಯರು, ಧರ್ಮಗುರುಗಳು, ವಿವಿಧ ಸಂಘಟನೆಗಳ ಮುಖಂಡರು, ದಲಿತ ಸಂಘರ್ಷ ಸಮಿತಿಯ ಮುಖಂಡರು ಕೂಡ ಸಭೆಯಲ್ಲಿ ಭಾಗವಹಿಸಿ ಶಾಂತಿ ಕಾಪಾಡುವ ಕುರಿತು ಸಲಹೆ ನೀಡಿದರು. ಟಿಪ್ಪು ಜಯಂತಿ ಆಚರಣೆ ನಿಷೇಧಿಸುವ ಸರ್ಕಾರದ ನಿರ್ಧಾರಕ್ಕೆ ಕೆಲವು ಆಕ್ಷೇಪ ವ್ಯಕ್ತಪಡಿಸಿ ಅಸಮಾಧಾನ ಹೊರ ಹಾಕಿದರು.

ರಾಮಜನ್ಮಭೂಮಿ ಬಾಬ್ರಿ ಮಸೀದಿ ವಿವಾದದ ತೀರ್ಪು ಯಾರ ಪರವೇ ಬರಲಿ ಸಮಾಜದಲ್ಲಿ ಶಾಂತಿ ಕಾಡಿಕೊಳ್ಳುವುದಾಗಿ ಮುಸ್ಲೀಂ ಮುಖಂಡರು ಭರವಸೆ ನೀಡಿದರು.  ಇದೇ ವೇಳೆ ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಮತ್ತು ಜಿಲ್ಲಾ ಪೋಲೀಸ್ ವರಿಷ್ಠ ಡಾ. ವಂಶಿಕೃಷ್ಣ ಕೂಡ ಸಮಾಜದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವಂತೆ ಸಮುದಾದ ಮುಖಂಡರಲ್ಲಿ ಮನವಿ ಮಾಡಿದರು.

ಸಮಾರಂಭದಲ್ಲಿ ಹೆಚ್ಚವರಿ ಎಎಸ್ಪಿ ಉದೇಶ ಟಿ.ಜೆ., ಬೆಸ್ಕಾಂ ಇಲಾಖೆಯ ಅದಿಕಾರಿ ಗೋವಿಂದಪ್ಪ, ಮಹಾನಗರ ಪಾಲಿಕೆಯ ಆರೋಗ್ಯ ಅದಿಕಾರಿ ನಾಗೇಶ್ ,ನಗರದ ಪೊಲೀಸ್ ಅದಿಕಾರಿಗಳು ಉಪಸ್ಥಿತಿತರಿದ್ದರು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...