Homeಮುಖಪುಟಅಯೋಧ್ಯೆ ತೀರ್ಪಿಗೆ ದಿನಗಣನೆ: ಭಾರಿ ಬಿಗಿಬಂದೋಬಸ್ತ್, ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣು

ಅಯೋಧ್ಯೆ ತೀರ್ಪಿಗೆ ದಿನಗಣನೆ: ಭಾರಿ ಬಿಗಿಬಂದೋಬಸ್ತ್, ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣು

- Advertisement -
- Advertisement -

ಅಯೋಧ್ಯೆ ವಿವಾದ ತೀರ್ಪು ನವೆಂಬರ್ 17ರಂದು ಪ್ರಕಟಗೊಳ್ಳುವ ನಿರೀಕ್ಷೆಯಿದೆ. ಈಗಾಗಲೇ ವಿಚಾರಣೆ ಮುಕ್ತಾಯಗಳಿಸಿರುವ  ಸುಪ್ರೀಂಕೋರ್ಟ್, ತೀರ್ಪನ್ನು ಕಾಯ್ದಿರಿಸಿದ್ದು, ನ.17ರಂದು ಪ್ರಕಟಿಸುವ ನಿರೀಕ್ಷೆಯಿದೆ. ತೀರ್ಪು ಪ್ರಕಟಗೊಳ್ಳುವ ಮೊದಲೇ ಅಯೋಧ್ಯೆ, ಗೋರಖ್ ಪುರ, ರಾಂಪುರ ಸೇರಿದಂತೆ ಹಲವು ಭಾಗಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ತೀರ್ಪಿಗೆ ಇನ್ನು ಕೆಲವೇ ದಿನಗಳು ಬಾಕಿಯಿದ್ದು, ಉತ್ತರ ಪ್ರದೇಶ ಪೊಲೀಸರು ನಾಲ್ಕು ಹಂತಗಳಲ್ಲಿ ಭದ್ರತೆಯನ್ನು ನಿಯೋಜಿಸಿದ್ದಾರೆ. ಎಲ್ಲಿಯಾದರೂ ಭದ್ರತೆ ಕುರಿತ ಯೋಜನೆ ವಿಫಲವಾದರೆ ಮತ್ತೊಂದು ಪಡೆಯನ್ನು ನಿಯೋಜಿಸಲಾಗುವುದು ಎಂದು ಸರ್ಕಾರ ತಿಳಿಸಿದೆ. ಅಯೋಧ್ಯೆ ದೇಗುಲದ ಸುತ್ತಮುತ್ತ 12 ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಅರೆ ಸೈನಿಕ ಪಡೆ, ಪ್ರಾಂತೀಯ ಸಶಸ್ತ್ರ ಪಡೆಯನ್ನು ನಿಯೋಜಿಸಲಾಗಿದೆ. ಇನ್ನು ಅಯೋಧ್ಯೆಯಲ್ಲಿ ಕರ್ಪ್ಯೂ ಹೇರುವ ಅಥವಾ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸುವ ಯಾವುದೇ ಯೋಜನೆಯಿಲ್ಲ. ಎಲ್ಲಾ ತೀರ್ಪಿನಂತೆ ಇದೂ ಸಹ ಸಾಮಾನ್ಯ ತೀರ್ಪು ಆಗಿರಲಿದೆ ಎಂದು ಮೂಲಗಳು ಮಾಹಿತಿ ನೀಡಿವೆ.

ಅಲ್ಲದೇ ಮೊಬೈಲ್ ಕರೆಗಳು, ಸಂದೇಶಗಳು, ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಸುದ್ದಿಗಳ ಮೇಲೂ ನಿಗಾ ಇರಿಸಲಾಗಿದೆ. ಶಾಂತಿಗೆ ಧಕ್ಕೆಯಾಗದಂತೆ, ಪ್ರಚೋದನಾತ್ಮಕ ಸಂದೇಶಗಳು, ದೃಶ್ಯಗಳು ಹರಿದಾಡದಂತೆ ತಡೆಯಲು ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಉತ್ತರಪ್ರದೇಶದ 1600 ಹಳ್ಳಿಗಳಲ್ಲಿ ಪೊಲೀಸರು 1600 ಸ್ವಯಂ ಸೇವಕರನ್ನು ಸಂಪರ್ಕಿಸುವ ಮೊಬೈಲ್ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಲಾಗಿದೆ. ಇದು ಸ್ಥಳೀಯ ಮಟ್ಟದ ಸ್ಥಿತಿಗತಿ ಹೇಗಿದೆ, ಯಾವ ರೀತಿ ವಾತಾವರಣವಿದೆ ಎಂಬುದನ್ನು ತಿಳಿಸುತ್ತದೆ.

ಇತ್ತ ಅಯೋಧ್ಯೆ ತೀರ್ಪಿಗಾಗಿ ಸಂಪೂರ್ಣ ಸಿದ್ಧಗೊಂಡಿದ್ದೇವೆ. ಎಲ್ಲಾ ಸಮಯದಲ್ಲೂ ಪೊಲೀಸರು ಗಸ್ತು ತಿರುಗುತ್ತಿದ್ದಾರೆ. ಶಾಂತಿ ಸಭೆಗಳನ್ನು ನಡೆಸುವ ಮೂಲಕ ಶಾಂತಿಯಿಂದಿರುವಂತೆ ಮನವರಿಕೆ ಮಾಡಿ ಕೊಡಲಾಗುತ್ತಿದೆ. ಕಾನೂನು ಉಲ್ಲಂಘನೆಯಾಗದಂತೆ ನೋಡಿಕೊಳ್ಳಲಾಗುತ್ತಿದೆ. ಗುಪ್ತಚರ ಸಂಸ್ಥೆ ಸಕ್ರಿಯವಾಗಿದೆ. ಸಾಮಾಜಿಕ ವಿರೋಧಿ ಅಂಶಗಳು ಹರಿದಾಡದಂತೆ ಕ್ರಮ ಕೈಗೊಂಡಿರುವುದಾಗಿ ಉತ್ತರ ಪ್ರದೇಶ ಪೊಲೀಸ್ ಮಹಾ ನಿರ್ದೇಶಕ ಒ.ಪಿ.ಸಿಂಗ್ ಹೇಳಿದರು.

ಬಾಬ್ರಿ ಮಸೀದಿ-ರಾಮಜನ್ಮಭೂಮಿ ವಿವಾದದ ತೀರ್ಪು ಹೊರಬೀಳುತ್ತಿರುವ ಹಿನ್ನೆಲೆಯಲ್ಲಿ ಜಮಿಯತ್ ಉಲಾಮ ಇ ಹಿಂದ್ ಸಂಘಟನೆ ಅಧ್ಯಕ್ಷ ಸೈಯದ್ ಅರ್ಷದ್ ಮದಾನಿ ನವದೆಹಲಿಯಲ್ಲಿಂದು ಆರ್.ಎಸ್.ಎಸ್. ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಭೇಟಿ ಮಾಡಿ ದೇಶದಲ್ಲಿ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಮಾತುಕತೆ ನಡೆಸಿದ್ದಾರೆ.

ಸಭೆಯ ಬಳಿಕ ಮಾತನಾಡಿದ ಮದಾನಿ ಎರಡು ಸಂಘಟನೆಗಳು ಜಂಟಿ ಪತ್ರಿಕಾಗೋಷ್ಟಿ ನಡೆಸಿ ಜನರಲ್ಲಿ ಶಾಂತಿ ಕಾಪಾಡಿಕೊಳ್ಳುವಂತೆ ಮನವಿ ಮಾಡಲು ತೀರ್ಮಾನಿಸಲಾಗಿದೆ. ತೀರ್ಪು ಯಾರ ಪರವೇ ಬರಲಿ ಶಾಂತಿ ನೆಮ್ಮದಿ ಮುಖ್ಯ ಎಂದರು.
ಎರಡು ಸಂಘಟನೆಗಳು ಬಾಬ್ರಿ ಮಸೀದಿ-ರಾಮಜನ್ಮಭೂಮಿ ವಿವಾದದಲ್ಲಿ ಭಿನ್ನ ಅಭಿಪ್ರಾಯಗಳನ್ನು ಹೊಂದಿವೆ. ತೀರ್ಪು ಬಾಬ್ರಿ ಮಸೀದಿಯ ಪರವಾಗಿ ಬರಲಿದೆ. ಈ ಸಂಬಂಧ ನಾವು ವಿಶೇಷ ವ್ಯವಸ್ಥೆ ಮಾಡಿಕೊಂಡಿಲ್ಲ. ಸುಪ್ರೀಂ ಕೋರ್ಟ್ ತೀರ್ಪು ಬಾಬರಿ ಮಸೀಸಿ ಪರವಾಗಿ ಬಂದರು ಶಾಂತಿಯಿಂದ ಇರಬೇಕು ಎಂದು ಹೇಳಿದರು.
ತೀರ್ಪು ಪ್ರಕಟವಾದ ಮೇಲೆ ಕೆಲವು ವಿದ್ರೋಹಿ ಶಕ್ತಿಗಳು ಸಮಾಜದಲ್ಲಿ ಅಸಾಂತಿ ಉಂಟು ಮಾಡಲು ಬೀದಿಗೆ ಇಳಿಯದಂತೆ ತಡೆಯಬೇಕಾದ ಜವಾಬ್ದಾರಿಯನ್ನು ಸರ್ಕಾರ ವಹಿಸಿಕೊಳ್ಳಬೇಕು.ಹಿರಿಯ ವಕೀಲರಾದ ರಾಜೀವ್ ಧವನ್ ಅವರ ಮೂಲಕ ನ್ಯಾಯಾಲಯಕ್ಕೆ ಎಲ್ಲಾ ದಾಖಲೆಗಳನ್ನು ನೀಡಿದ್ದೇವೆ. ತೀರ್ಪು ಬಂದ ಮೇಲೆ  ಶಾಂತಿ ಕಾಪಾಡುವಂತೆ ಜನರಿಗೆ ಮನವಿ ಮಾಡುತ್ತೇವೆ ಎಂದರು.
ಕಾನೂನು ಜನತೆಯನ್ನು ಬೀದಿಗೆ ಬಾರದಂತೆ ತಡಯಬೇಕು. ಘರ್ಷಣೆಗೆ ಅವಕಾಶವಾಘದಂತೆ ನೋಡಿಕೊಳ್ಳಬೇಕು. ತೀರ್ಪು ನಮ್ಮ ಪರ ಬಂದರೂ ಒಪ್ಪಿಕೊಳ್ಳಬೇಕು. ಪ್ರತಿವಾದಿ ಪರ ಬಂದರು ಒಪ್ಪಿಕೊಳ್ಳಬೇಕು ಎಂದು ಹೇಳಿದರು.

ಇನ್ನು ತುಮಕೂರಿನಲ್ಲಿ ರಾಮಜನ್ಮಭೂಮಿ-ಬಾಬ್ರಿ ಮಸೀದಿ ಭೂ ವಿವಾದದ ತೀರ್ಪು, ಟಿಪ್ಪು ಜಯಂತಿ ಹಾಗೂ ಈದ್ ಮಿಲಾದ್ ಹಬ್ಬದ ಆಚರಣೆಯ ಕುರಿತು ತುಮಕೂರಿನ ಚಿಲುಮೆ ಪೊಲೀಸ್ ಸಮುದಾಯ ಭವನದಲ್ಲಿ ಮುಸ್ಲೀಂ ಮುಖಂಡರು, ಡಿಎಸ್ಎಸ್ ಮುಖಂಡರೊಂದಿಗೆ ಪೊಲೀಸರು ಶಾಂತಿ ಸಭೆ ನಡೆಸಿದರು. ಸಭೆಯಲ್ಲಿ ಈ ಮೂರು ವಿಷಗಳ ಕುರಿತು ಚರ್ಚೆ ನಡೆಯಿತು.

ಮುಸ್ಲೀಂ ಸಮುದಾಯದ ಹಿರಿಯರು, ಧರ್ಮಗುರುಗಳು, ವಿವಿಧ ಸಂಘಟನೆಗಳ ಮುಖಂಡರು, ದಲಿತ ಸಂಘರ್ಷ ಸಮಿತಿಯ ಮುಖಂಡರು ಕೂಡ ಸಭೆಯಲ್ಲಿ ಭಾಗವಹಿಸಿ ಶಾಂತಿ ಕಾಪಾಡುವ ಕುರಿತು ಸಲಹೆ ನೀಡಿದರು. ಟಿಪ್ಪು ಜಯಂತಿ ಆಚರಣೆ ನಿಷೇಧಿಸುವ ಸರ್ಕಾರದ ನಿರ್ಧಾರಕ್ಕೆ ಕೆಲವು ಆಕ್ಷೇಪ ವ್ಯಕ್ತಪಡಿಸಿ ಅಸಮಾಧಾನ ಹೊರ ಹಾಕಿದರು.

ರಾಮಜನ್ಮಭೂಮಿ ಬಾಬ್ರಿ ಮಸೀದಿ ವಿವಾದದ ತೀರ್ಪು ಯಾರ ಪರವೇ ಬರಲಿ ಸಮಾಜದಲ್ಲಿ ಶಾಂತಿ ಕಾಡಿಕೊಳ್ಳುವುದಾಗಿ ಮುಸ್ಲೀಂ ಮುಖಂಡರು ಭರವಸೆ ನೀಡಿದರು.  ಇದೇ ವೇಳೆ ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಮತ್ತು ಜಿಲ್ಲಾ ಪೋಲೀಸ್ ವರಿಷ್ಠ ಡಾ. ವಂಶಿಕೃಷ್ಣ ಕೂಡ ಸಮಾಜದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವಂತೆ ಸಮುದಾದ ಮುಖಂಡರಲ್ಲಿ ಮನವಿ ಮಾಡಿದರು.

ಸಮಾರಂಭದಲ್ಲಿ ಹೆಚ್ಚವರಿ ಎಎಸ್ಪಿ ಉದೇಶ ಟಿ.ಜೆ., ಬೆಸ್ಕಾಂ ಇಲಾಖೆಯ ಅದಿಕಾರಿ ಗೋವಿಂದಪ್ಪ, ಮಹಾನಗರ ಪಾಲಿಕೆಯ ಆರೋಗ್ಯ ಅದಿಕಾರಿ ನಾಗೇಶ್ ,ನಗರದ ಪೊಲೀಸ್ ಅದಿಕಾರಿಗಳು ಉಪಸ್ಥಿತಿತರಿದ್ದರು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...