Homeಮುಖಪುಟಅಯೋಧ್ಯೆ ತೀರ್ಪು: ಭಾರತೀಯ ಸರ್ವೇಕ್ಷಣಾ ಇಲಾಖೆಯ ಸಾಕ್ಷ್ಯಕ್ಕೆ ಪ್ರಧಾನ ಪಾತ್ರವಿದೆಯೇ?

ಅಯೋಧ್ಯೆ ತೀರ್ಪು: ಭಾರತೀಯ ಸರ್ವೇಕ್ಷಣಾ ಇಲಾಖೆಯ ಸಾಕ್ಷ್ಯಕ್ಕೆ ಪ್ರಧಾನ ಪಾತ್ರವಿದೆಯೇ?

- Advertisement -
- Advertisement -

ಪಂಚ ನ್ಯಾಯಮೂರ್ತಿಗಳ ಸುಪ್ರೀಂಕೋರ್ಟಿನ ಪೀಠವು ನೀಡಿದ ತೀರ್ಪಿನಲ್ಲಿ ಮಹತ್ವದ ಪಾತ್ರ ವಹಿಸಿದ್ದು ಏನು? ಈ ಕುರಿತು ಮುಖ್ಯ ನ್ಯಾಯಮೂರ್ತಿಗಳೇ ಓದಿದ ತೀರ್ಪಿನ ವರದಿ ಏನು ಹೇಳುತ್ತದೆ? ಅದರ ಪ್ರಕಾರ ‘ಕೋರ್ಟು ಸಾಕ್ಷಿಗಳ ಮೇಲಷ್ಟೇ ಹೋಗಬೇಕು. ಧಾರ್ಮಿಕ ಶ್ರದ್ಧೆಯನ್ನು ಕೋರ್ಟು ಗೌರವಿಸುತ್ತದೆ; ಆದರೆ ಅದು ವ್ಯಕ್ತಿಗತ ಆಯ್ಕೆ. ನಂಬಿಕೆಯ ಮೇಲೆ ತೀರ್ಪು ನೀಡಲಾಗುವುದಿಲ್ಲ’ ಎನ್ನುತ್ತದೆ. ಅದೇ ಸಂದರ್ಭದಲ್ಲಿ ಮಸೀದಿಯಿದ್ದ ಜಾಗವೇ ರಾಮನ ಜನ್ಮಭೂಮಿ ಎಂಬ ನಂಬಿಕೆ ಇದೆ ಎನ್ನುವುದನ್ನೂ ಕೋರ್ಟು ಗುರುತಿಸಿದೆ. ಇವೆರಡಕ್ಕೂ ತೀರ್ಪಿನಲ್ಲಿ ಏನು ಸ್ಪಷ್ಟೀಕರಣ ಒದಗಿಸಲಾಗಿದೆ ಎಂಬುದೂ ಕುತೂಹಲಕಾರಿ.

ಹಾಗಾದರೆ, ಯಾವ ಆಧಾರದ ಮೇಲೆ ಸದರಿ ಜಾಗವು ಮಂದಿರ ನಿರ್ಮಾಣಕ್ಕಾಗಿ ಸರ್ಕಾರ ರಚಿಸಬೇಕಾದ ಟ್ರಸ್ಟ್‍ಗೆ ಹೋಗಬೇಕು ಎಂದು ಕೋರ್ಟು ಹೇಳಿದೆ?

ಆರ್ಕಿಯಾಲಾಜಿಕಲ್ ಸರ್ವೇ ಆಫ್ ಇಂಡಿಯಾ- ಭಾರತೀಯ ಸರ್ವೇಕ್ಷಣಾ ಇಲಾಖೆಯು ನಡೆಸಿದ ಉತ್ಖನನ ಮತ್ತು ಸಂಶೋಧನೆಯನ್ನು ಕೋರ್ಟು ಒಂದು ಮಹತ್ವದ ಸಾಕ್ಷ್ಯವಾಗಿ ಪರಿಗಣಿಸಿದಂತೆ ಮೇಲ್ನೋಟಕ್ಕೆ ತೋರುತ್ತದೆ. (ಈ ಉತ್ಖನನ ನಡೆದ ರೀತಿಯ ಕುರಿತು ಸರ್ವೇಕ್ಷಣಾ ತಜ್ಞರು ಮತ್ತು ಇತಿಹಾಸಜ್ಞರಲ್ಲಿ ಒಮ್ಮತವಿರಲಿಲ್ಲ). ಅದರ ಪ್ರಕಾರ 1528ರಲ್ಲಿ ಮಸೀದಿಯು (ದೊರೆ ಬಾಬರ್‍ನ ಸೈನ್ಯದ ಸುಬೇದಾರನೊಬ್ಬನಿಂದ) ನಿರ್ಮಾಣವಾದಾಗ, ಅದರ ಕೆಳಗೆ ಬೇರೊಂದು ಕಟ್ಟಡ ಇತ್ತು. ಆದರೆ, ಅಲ್ಲಿ ಮಂದಿರವಿತ್ತೆಂಬುದನ್ನು ಇಲಾಖೆಯು ಒಪ್ಪಿಲ್ಲ. ಅಲ್ಲಿ ಮಂದಿರವಿತ್ತೆನ್ನುವುದಕ್ಕೆ ಸಾಕ್ಷಿಯಿಲ್ಲ; ಅದೇ ರೀತಿ ಅಲ್ಲಿ ಇಸ್ಲಾಮಿಕ್ ಕಟ್ಟಡವೂ ಇರಲಿಲ್ಲ ಎಂದು ಸರ್ವೇಕ್ಷಣಾ ಇಲಾಖೆಯು ಹೇಳಿದ್ದನ್ನು ಕೋರ್ಟ್ ತೀರ್ಪಿನಲ್ಲಿ ಉಲ್ಲೇಖಿಸಲಾಗಿದೆ.

ಬೇರೆ ಬೇರೆ ಅವಧಿಗಳಿಂದ ವಿವಾದಿತ ಜಾಗದ ಒಳಾವರಣದಲ್ಲಿ ನಮಾಜ್ ನಡೆಯುತ್ತಿತ್ತು ಮತ್ತು ಹೊರಾವರಣದಲ್ಲಿ ಪೂಜೆ ನಡೆಯುತ್ತಿತ್ತು ಎಂಬುದನ್ನೂ ಕೋರ್ಟು ಗಮನಿಸಿದೆ. ಆದರೆ, ಇದು ಯಾರಿಗೆ ಸದರಿ ಜಾಗ ಸೇರಬೇಕು ಎಂಬುದಕ್ಕೆ ಆಧಾರವಾದಂತಿಲ್ಲ. ಬದಲಿಗೆ ಬೇರೊಂದು ಕಟ್ಟಡವನ್ನು ಕೆಡವಿ ಅಲ್ಲಿ ಮಸೀದಿ ಕಟ್ಟಲಾಗಿದೆ, ಕೆಡವಲಾದ ಕಟ್ಟಡ ಇಸ್ಲಾಮಿಕ್ ಕಟ್ಟಡ ಆಗಿರಲಿಲ್ಲ ಎಂಬುದು ಆ ಸ್ಥಳ ಸುನ್ನಿ ವಕ್ಫ್ ಬೋರ್ಡ್ ಅಥವಾ ಮುಸ್ಲಿಮರಿಗೆ ಸೇರಬಾರದು ಎಂಬುದನ್ನು ತೀರ್ಮಾನಿಸಲು ಆಧಾರವಾದಂತಿದೆ.

ಅದೇ ಸಂದರ್ಭದಲ್ಲಿ 19ನೇ ಶತಮಾನದಿಂದ ಈ ಜಾಗಕ್ಕಾಗಿ ಕಾನೂನು ವ್ಯಾಜ್ಯನಿರತವಾಗಿದ್ದ ನಿರ್ಮೋಹಿ ಅಖಾರಾಕ್ಕೂ ವಿವಾದಿತ ಜಾಗವನ್ನು ನೀಡಿಲ್ಲ. ಏಕೆಂದರೆ ಸದರಿ ಜಾಗದ ಒಡೆತನವು ಅಧಿಕೃತವಾಗಿ ಸುನ್ನಿ ವಕ್ಫ್ ಬೋರ್ಡ್ ಹೆಸರಿನಲ್ಲಿ ಇತ್ತೇ ಹೊರತು ಬೇರೆಯವರು ಅದನ್ನು ಪಡೆಯಲು ಸಾಧ್ಯವಿರಲಿಲ್ಲ.

ಹಾಗಾದರೆ ಈ ಜಾಗ ಯಾರಿಗೆ ಸೇರಬೇಕು ಎಂಬ ಪ್ರಶ್ನೆ ಉದ್ಭವಿಸುತ್ತದೆ. ಅಲಹಾಬಾದ್ ಹೈಕೋರ್ಟ್ ಅದನ್ನು ಸುನ್ನಿ ವಕ್ಫ್ ಬೋರ್ಡ್, ಬಾಲರಾಮ (ದೇವರು) ಮತ್ತು ನಿರ್ಮೋಹಿ ಅಖಾರಾಕ್ಕೆ ಮೂರು ಭಾಗಗಳಾಗಿ ಹಂಚಿತ್ತು. ಆದರೆ, ಸುಪ್ರೀಂಕೋರ್ಟ್ ಇದನ್ನು ರಾಮಮಂದಿರ ನಿರ್ಮಾಣಕ್ಕಾಗಿ ಬಾಲರಾಮನಿಗೆ ನೀಡಲಾಗಿದೆ. ಬಾಲರಾಮನನ್ನು ಪ್ರತಿನಿಧಿಸುತ್ತೇವೆಂದು ಹೇಳಿಕೊಂಡವರಿಗೆ ಅದನ್ನು ವಹಿಸಿಲ್ಲ; ಬದಲಿಗೆ ಸರ್ಕಾರವೇ ಮೂರು ತಿಂಗಳಲ್ಲಿ ಒಂದು ಟ್ರಸ್ಟ್ ಮಾಡಲಿ, ಆ ಟ್ರಸ್ಟ್‍ನಲ್ಲಿ ನಿರ್ಮೋಹಿ ಅಖಾರಾದವರೂ ಇರಲಿ ಎಂದು ಕೋರ್ಟ್ ಹೇಳಿದೆ.

ಅಂದರೆ ಸದರಿ ಜಾಗದ ಒಡೆತನದ ಮೇಲಿದ್ದ ಸಿವಿಲ್ ವ್ಯಾಜ್ಯಕ್ಕೆ ನಿರ್ದಿಷ್ಟವಾಗಿ ಯಾರಿಗೂ ಸೇರಿದ್ದಲ್ಲ ಎಂಬುದನ್ನು ಲಭ್ಯವಿದ್ದ ಸಾಕ್ಷಿಗಳ ಮೇಲೆ ಕೋರ್ಟು ತೀರ್ಮಾನಿಸಿದೆ; ಅದಕ್ಕೆ ಭಾರತೀಯ ಸರ್ವೇಕ್ಷಣಾ ಇಲಾಖೆಯ ಸಾಕ್ಷಿಯನ್ನು ಪ್ರಧಾನವಾಗಿ ಪರಿಗಣಿಸಿದಂತಿದೆ. ಆದರೆ ನಂಬಿಕೆಯ ಆಧಾರದ ಮೇಲೆಯೇ ರಾಮಮಂದಿರ ನಿರ್ಮಾಣಕ್ಕೆ ಅವಕಾಶ ಮಾಡಿಕೊಟ್ಟಂತಿದೆ ಎಂಬುದು ಮೇಲ್ನೋಟಕ್ಕೆ ಕಾಣುತ್ತಿದೆ. ಅಂದರೆ ವ್ಯಕ್ತಿಗತ ನಂಬಿಕೆ, ರಾಜಕಾರಣ, ಧರ್ಮ ಇವುಗಳನ್ನು ದಾಟಿ ನ್ಯಾಯಾಲಯವು ಸಾಕ್ಷಿಯ ಆಧಾರದ ಮೇಲೆ ತೀರ್ಪು ನೀಡುತ್ತದೆ ಎಂದು ಹೇಳಿದ ಕೋರ್ಟು, ಅರ್ಧ ಅದೇ ರೀತಿ ತೀರ್ಮಾನ ಮಾಡಿದೆ; ಇನ್ನರ್ಧವನ್ನು ನಂಬಿಕೆ ಯಾವಾಗಿನಿಂದ ಇತ್ತು ಎಂಬುದಕ್ಕೆ ಇದ್ದ ಸಾಕ್ಷ್ಯಗಳನ್ನು ಗಣನೆಗೆ ತೆಗೆದುಕೊಂಡಿದೆ.

ಇಲ್ಲಿಯೂ ಯಾರ ನಂಬಿಕೆ ಎಂಬ ಪ್ರಶ್ನೆ ಏಳುತ್ತದೆ. ಆ ವಿಚಾರದಲ್ಲಿ ಅದೇ ಜಾಗದಲ್ಲಿ ಭಗವಾನ್ ರಾವi ಹುಟ್ಟಿದ್ದು ಎಂಬ ನಂಬಿಕೆಗೆ ಮಹತ್ವ ನೀಡಲಾಗಿದೆ. ಇದಕ್ಕೂ ತೀರ್ಪಿನ 167ರಿಂದ 170ನೇ ಅಂಶಗಳಲ್ಲಿ ಉತ್ತರವಿದ್ದಂತಿದೆ. ಬಾಬ್ರಿ ಮಸೀದಿ ನಿರ್ಮಾಣಕ್ಕೂ ಮುಂಚಿನಿಂದಲೂ ಈ ನಂಬಿಕೆ ಇದೆ ಎಂಬುದಕ್ಕೆ ಹಲವು ಆಧಾರಗಳನ್ನು ಕೋರ್ಟ್ ಒದಗಿಸಿದೆ.

ಇದರ ಕುರಿತು ಸುನ್ನಿ ವಕ್ಫ್ ಬೋರ್ಡ್ ಪರವಾಗಿ ರಾಜೀವ್ ಧವನ್ ಮಂಡಿಸಿದ ವಾದವನ್ನು ಕೋರ್ಟ್ ಒಪ್ಪಿಲ್ಲ. 450 ವರ್ಷಗಳಿಂದ ಇದ್ದ ತಮ್ಮ ಪ್ರಾರ್ಥನಾ ಮಂದಿರವನ್ನು ಕಾನೂನುಬಾಹಿರವಾಗಿ ನಡೆದ ಕೃತ್ಯವೊಂದರಿಂದ ಮುಸ್ಲಿಮರು ಕಳೆದುಕೊಳ್ಳಬೇಕಾಯಿತು ಎಂದು ಉಲ್ಲೇಖಿಸುವ ಕೋರ್ಟು, ಈ ವಿವಾದದ ಬಹು ಹಿಂದಿನ ಮೈಲುಗಲ್ಲುಗಳಾದ 1856ಕ್ಕಿಂತ ಮುಂಚೆಯೂ ಆ ಪ್ರಾರ್ಥನಾ ಮಂದಿರ ಮುಸ್ಲಿಮರ ವಶದಲ್ಲಿತ್ತು ಎಂಬುದಕ್ಕೆ ದಾಖಲೆಗಳನ್ನು ಕೇಳುವುದು ಆಶ್ಚರ್ಯಕರವಾಗಿದೆ. ಬೇರೆ ದೇಶಗಳಿಂದ ಇಲ್ಲಿಗೆ ಆಗಮಿಸಿದ ಪ್ರವಾಸಿಗಳು ಉಲ್ಲೇಖಿಸಿದ ಹಿಂದೂ ಪೂಜೆಯ ವಿವರಗಳನ್ನು ಉಲ್ಲೇಖಿಸುವ ಕೋರ್ಟು, ಅದೊಂದು ಮಸೀದಿಯಾಗಿತ್ತು ಮತ್ತು ನಮಾಜ್ ನಡೆಯುತ್ತಿತ್ತು ಎಂಬುದಕ್ಕೆ ದಾಖಲೆಗಳು ಇಲ್ಲ ಎಂದು ಹೇಳುತ್ತದೆ. ಅದನ್ನು ಕಟ್ಟಿದ್ದೇ ಮಸೀದಿಯಾಗಿ ಎಂಬುದನ್ನಾಗಲೀ, ಆ ಕಾರಣಕ್ಕೇ ವಿವಾದ ಹುಟ್ಟಿಕೊಂಡಿತ್ತು ಎಂಬುದನ್ನು ಗಣನೆಗೆ ತೆಗೆದುಕೊಳ್ಳದಿರುವುದು ಕಂಡು ಬರುತ್ತದೆ.

ಹೀಗಾಗಿ ಕೇವಲ ಭಾರತೀಯ ಸರ್ವೇಕ್ಷಣಾ ಇಲಾಖೆಯ ಸಾಕ್ಷ್ಯವಲ್ಲದೇ, ರಾಮಮಂದಿರಕ್ಕಾಗಿ ಭೂಮಿ ನೀಡುವುದರಲ್ಲಿ ತಾರ್ಕಿಕವಲ್ಲದ ಕಾರಣಗಳು ಕೆಲಸ ಮಾಡಿವೆ ಎಂಬುದು ಎದ್ದು ಕಾಣುತ್ತದೆ. ಆದರೆ ನಂಬಿಕೆಯ ಆಧಾರದ ಮೇಲೆ ನಾವು ತೀರ್ಮಾನಕ್ಕೆ ಬಂದಿಲ್ಲ ಎಂತಲೂ ಕೋರ್ಟ್ ಹೇಳಳುತ್ತದೆ.

ಅದೇನೇ ಇದ್ದರೂ ಸಂಬಂಧಪಟ್ಟವರೆಲ್ಲರೂ ಕೋರ್ಟ್ ತೀರ್ಪನ್ನು ಗೌರವಿಸುತ್ತ, ಶಾಂತಿ ಸೌಹಾರ್ದತೆ ಕಾಪಾಡಲು ಹೇಳಿರುವುದು ಇಂದಿನ ಮಹತ್ವದ ಬೆಳವಣಿಗೆಯಾಗಿದೆ. ತೀರ್ಪಿನ ಕುರಿತು ಅಸಮಾಧಾನ ಇದ್ದು, ಪುನರ್‍ಪರಿಶೀಲನಾ ಅರ್ಜಿ ಸಲ್ಲಿಸಬೇಕೇ ಎಂಬುದನ್ನೂ ಚರ್ಚಿಸುತ್ತೇವೆ ಎಂದು ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ಪರವಾಗಿ ಹೇಳಿಕೆ ಬಂದಿದ್ದು, ಮೇಲಿನ ಅಂಶಗಳ ವಿಶ್ಲೇಷಣೆ ಹಾಗೂ ಚರ್ಚೆ ಮುಂದಿನ ದಿನಗಳಲ್ಲಿ ಹೇಗೆ ನಡೆಯುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

  • ದಿ ವೈರ್‌
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...