Homeಮುಖಪುಟಅಯೋಧ್ಯೆ ತೀರ್ಪು: ಭಾರತೀಯ ಸರ್ವೇಕ್ಷಣಾ ಇಲಾಖೆಯ ಸಾಕ್ಷ್ಯಕ್ಕೆ ಪ್ರಧಾನ ಪಾತ್ರವಿದೆಯೇ?

ಅಯೋಧ್ಯೆ ತೀರ್ಪು: ಭಾರತೀಯ ಸರ್ವೇಕ್ಷಣಾ ಇಲಾಖೆಯ ಸಾಕ್ಷ್ಯಕ್ಕೆ ಪ್ರಧಾನ ಪಾತ್ರವಿದೆಯೇ?

- Advertisement -
- Advertisement -

ಪಂಚ ನ್ಯಾಯಮೂರ್ತಿಗಳ ಸುಪ್ರೀಂಕೋರ್ಟಿನ ಪೀಠವು ನೀಡಿದ ತೀರ್ಪಿನಲ್ಲಿ ಮಹತ್ವದ ಪಾತ್ರ ವಹಿಸಿದ್ದು ಏನು? ಈ ಕುರಿತು ಮುಖ್ಯ ನ್ಯಾಯಮೂರ್ತಿಗಳೇ ಓದಿದ ತೀರ್ಪಿನ ವರದಿ ಏನು ಹೇಳುತ್ತದೆ? ಅದರ ಪ್ರಕಾರ ‘ಕೋರ್ಟು ಸಾಕ್ಷಿಗಳ ಮೇಲಷ್ಟೇ ಹೋಗಬೇಕು. ಧಾರ್ಮಿಕ ಶ್ರದ್ಧೆಯನ್ನು ಕೋರ್ಟು ಗೌರವಿಸುತ್ತದೆ; ಆದರೆ ಅದು ವ್ಯಕ್ತಿಗತ ಆಯ್ಕೆ. ನಂಬಿಕೆಯ ಮೇಲೆ ತೀರ್ಪು ನೀಡಲಾಗುವುದಿಲ್ಲ’ ಎನ್ನುತ್ತದೆ. ಅದೇ ಸಂದರ್ಭದಲ್ಲಿ ಮಸೀದಿಯಿದ್ದ ಜಾಗವೇ ರಾಮನ ಜನ್ಮಭೂಮಿ ಎಂಬ ನಂಬಿಕೆ ಇದೆ ಎನ್ನುವುದನ್ನೂ ಕೋರ್ಟು ಗುರುತಿಸಿದೆ. ಇವೆರಡಕ್ಕೂ ತೀರ್ಪಿನಲ್ಲಿ ಏನು ಸ್ಪಷ್ಟೀಕರಣ ಒದಗಿಸಲಾಗಿದೆ ಎಂಬುದೂ ಕುತೂಹಲಕಾರಿ.

ಹಾಗಾದರೆ, ಯಾವ ಆಧಾರದ ಮೇಲೆ ಸದರಿ ಜಾಗವು ಮಂದಿರ ನಿರ್ಮಾಣಕ್ಕಾಗಿ ಸರ್ಕಾರ ರಚಿಸಬೇಕಾದ ಟ್ರಸ್ಟ್‍ಗೆ ಹೋಗಬೇಕು ಎಂದು ಕೋರ್ಟು ಹೇಳಿದೆ?

ಆರ್ಕಿಯಾಲಾಜಿಕಲ್ ಸರ್ವೇ ಆಫ್ ಇಂಡಿಯಾ- ಭಾರತೀಯ ಸರ್ವೇಕ್ಷಣಾ ಇಲಾಖೆಯು ನಡೆಸಿದ ಉತ್ಖನನ ಮತ್ತು ಸಂಶೋಧನೆಯನ್ನು ಕೋರ್ಟು ಒಂದು ಮಹತ್ವದ ಸಾಕ್ಷ್ಯವಾಗಿ ಪರಿಗಣಿಸಿದಂತೆ ಮೇಲ್ನೋಟಕ್ಕೆ ತೋರುತ್ತದೆ. (ಈ ಉತ್ಖನನ ನಡೆದ ರೀತಿಯ ಕುರಿತು ಸರ್ವೇಕ್ಷಣಾ ತಜ್ಞರು ಮತ್ತು ಇತಿಹಾಸಜ್ಞರಲ್ಲಿ ಒಮ್ಮತವಿರಲಿಲ್ಲ). ಅದರ ಪ್ರಕಾರ 1528ರಲ್ಲಿ ಮಸೀದಿಯು (ದೊರೆ ಬಾಬರ್‍ನ ಸೈನ್ಯದ ಸುಬೇದಾರನೊಬ್ಬನಿಂದ) ನಿರ್ಮಾಣವಾದಾಗ, ಅದರ ಕೆಳಗೆ ಬೇರೊಂದು ಕಟ್ಟಡ ಇತ್ತು. ಆದರೆ, ಅಲ್ಲಿ ಮಂದಿರವಿತ್ತೆಂಬುದನ್ನು ಇಲಾಖೆಯು ಒಪ್ಪಿಲ್ಲ. ಅಲ್ಲಿ ಮಂದಿರವಿತ್ತೆನ್ನುವುದಕ್ಕೆ ಸಾಕ್ಷಿಯಿಲ್ಲ; ಅದೇ ರೀತಿ ಅಲ್ಲಿ ಇಸ್ಲಾಮಿಕ್ ಕಟ್ಟಡವೂ ಇರಲಿಲ್ಲ ಎಂದು ಸರ್ವೇಕ್ಷಣಾ ಇಲಾಖೆಯು ಹೇಳಿದ್ದನ್ನು ಕೋರ್ಟ್ ತೀರ್ಪಿನಲ್ಲಿ ಉಲ್ಲೇಖಿಸಲಾಗಿದೆ.

ಬೇರೆ ಬೇರೆ ಅವಧಿಗಳಿಂದ ವಿವಾದಿತ ಜಾಗದ ಒಳಾವರಣದಲ್ಲಿ ನಮಾಜ್ ನಡೆಯುತ್ತಿತ್ತು ಮತ್ತು ಹೊರಾವರಣದಲ್ಲಿ ಪೂಜೆ ನಡೆಯುತ್ತಿತ್ತು ಎಂಬುದನ್ನೂ ಕೋರ್ಟು ಗಮನಿಸಿದೆ. ಆದರೆ, ಇದು ಯಾರಿಗೆ ಸದರಿ ಜಾಗ ಸೇರಬೇಕು ಎಂಬುದಕ್ಕೆ ಆಧಾರವಾದಂತಿಲ್ಲ. ಬದಲಿಗೆ ಬೇರೊಂದು ಕಟ್ಟಡವನ್ನು ಕೆಡವಿ ಅಲ್ಲಿ ಮಸೀದಿ ಕಟ್ಟಲಾಗಿದೆ, ಕೆಡವಲಾದ ಕಟ್ಟಡ ಇಸ್ಲಾಮಿಕ್ ಕಟ್ಟಡ ಆಗಿರಲಿಲ್ಲ ಎಂಬುದು ಆ ಸ್ಥಳ ಸುನ್ನಿ ವಕ್ಫ್ ಬೋರ್ಡ್ ಅಥವಾ ಮುಸ್ಲಿಮರಿಗೆ ಸೇರಬಾರದು ಎಂಬುದನ್ನು ತೀರ್ಮಾನಿಸಲು ಆಧಾರವಾದಂತಿದೆ.

ಅದೇ ಸಂದರ್ಭದಲ್ಲಿ 19ನೇ ಶತಮಾನದಿಂದ ಈ ಜಾಗಕ್ಕಾಗಿ ಕಾನೂನು ವ್ಯಾಜ್ಯನಿರತವಾಗಿದ್ದ ನಿರ್ಮೋಹಿ ಅಖಾರಾಕ್ಕೂ ವಿವಾದಿತ ಜಾಗವನ್ನು ನೀಡಿಲ್ಲ. ಏಕೆಂದರೆ ಸದರಿ ಜಾಗದ ಒಡೆತನವು ಅಧಿಕೃತವಾಗಿ ಸುನ್ನಿ ವಕ್ಫ್ ಬೋರ್ಡ್ ಹೆಸರಿನಲ್ಲಿ ಇತ್ತೇ ಹೊರತು ಬೇರೆಯವರು ಅದನ್ನು ಪಡೆಯಲು ಸಾಧ್ಯವಿರಲಿಲ್ಲ.

ಹಾಗಾದರೆ ಈ ಜಾಗ ಯಾರಿಗೆ ಸೇರಬೇಕು ಎಂಬ ಪ್ರಶ್ನೆ ಉದ್ಭವಿಸುತ್ತದೆ. ಅಲಹಾಬಾದ್ ಹೈಕೋರ್ಟ್ ಅದನ್ನು ಸುನ್ನಿ ವಕ್ಫ್ ಬೋರ್ಡ್, ಬಾಲರಾಮ (ದೇವರು) ಮತ್ತು ನಿರ್ಮೋಹಿ ಅಖಾರಾಕ್ಕೆ ಮೂರು ಭಾಗಗಳಾಗಿ ಹಂಚಿತ್ತು. ಆದರೆ, ಸುಪ್ರೀಂಕೋರ್ಟ್ ಇದನ್ನು ರಾಮಮಂದಿರ ನಿರ್ಮಾಣಕ್ಕಾಗಿ ಬಾಲರಾಮನಿಗೆ ನೀಡಲಾಗಿದೆ. ಬಾಲರಾಮನನ್ನು ಪ್ರತಿನಿಧಿಸುತ್ತೇವೆಂದು ಹೇಳಿಕೊಂಡವರಿಗೆ ಅದನ್ನು ವಹಿಸಿಲ್ಲ; ಬದಲಿಗೆ ಸರ್ಕಾರವೇ ಮೂರು ತಿಂಗಳಲ್ಲಿ ಒಂದು ಟ್ರಸ್ಟ್ ಮಾಡಲಿ, ಆ ಟ್ರಸ್ಟ್‍ನಲ್ಲಿ ನಿರ್ಮೋಹಿ ಅಖಾರಾದವರೂ ಇರಲಿ ಎಂದು ಕೋರ್ಟ್ ಹೇಳಿದೆ.

ಅಂದರೆ ಸದರಿ ಜಾಗದ ಒಡೆತನದ ಮೇಲಿದ್ದ ಸಿವಿಲ್ ವ್ಯಾಜ್ಯಕ್ಕೆ ನಿರ್ದಿಷ್ಟವಾಗಿ ಯಾರಿಗೂ ಸೇರಿದ್ದಲ್ಲ ಎಂಬುದನ್ನು ಲಭ್ಯವಿದ್ದ ಸಾಕ್ಷಿಗಳ ಮೇಲೆ ಕೋರ್ಟು ತೀರ್ಮಾನಿಸಿದೆ; ಅದಕ್ಕೆ ಭಾರತೀಯ ಸರ್ವೇಕ್ಷಣಾ ಇಲಾಖೆಯ ಸಾಕ್ಷಿಯನ್ನು ಪ್ರಧಾನವಾಗಿ ಪರಿಗಣಿಸಿದಂತಿದೆ. ಆದರೆ ನಂಬಿಕೆಯ ಆಧಾರದ ಮೇಲೆಯೇ ರಾಮಮಂದಿರ ನಿರ್ಮಾಣಕ್ಕೆ ಅವಕಾಶ ಮಾಡಿಕೊಟ್ಟಂತಿದೆ ಎಂಬುದು ಮೇಲ್ನೋಟಕ್ಕೆ ಕಾಣುತ್ತಿದೆ. ಅಂದರೆ ವ್ಯಕ್ತಿಗತ ನಂಬಿಕೆ, ರಾಜಕಾರಣ, ಧರ್ಮ ಇವುಗಳನ್ನು ದಾಟಿ ನ್ಯಾಯಾಲಯವು ಸಾಕ್ಷಿಯ ಆಧಾರದ ಮೇಲೆ ತೀರ್ಪು ನೀಡುತ್ತದೆ ಎಂದು ಹೇಳಿದ ಕೋರ್ಟು, ಅರ್ಧ ಅದೇ ರೀತಿ ತೀರ್ಮಾನ ಮಾಡಿದೆ; ಇನ್ನರ್ಧವನ್ನು ನಂಬಿಕೆ ಯಾವಾಗಿನಿಂದ ಇತ್ತು ಎಂಬುದಕ್ಕೆ ಇದ್ದ ಸಾಕ್ಷ್ಯಗಳನ್ನು ಗಣನೆಗೆ ತೆಗೆದುಕೊಂಡಿದೆ.

ಇಲ್ಲಿಯೂ ಯಾರ ನಂಬಿಕೆ ಎಂಬ ಪ್ರಶ್ನೆ ಏಳುತ್ತದೆ. ಆ ವಿಚಾರದಲ್ಲಿ ಅದೇ ಜಾಗದಲ್ಲಿ ಭಗವಾನ್ ರಾವi ಹುಟ್ಟಿದ್ದು ಎಂಬ ನಂಬಿಕೆಗೆ ಮಹತ್ವ ನೀಡಲಾಗಿದೆ. ಇದಕ್ಕೂ ತೀರ್ಪಿನ 167ರಿಂದ 170ನೇ ಅಂಶಗಳಲ್ಲಿ ಉತ್ತರವಿದ್ದಂತಿದೆ. ಬಾಬ್ರಿ ಮಸೀದಿ ನಿರ್ಮಾಣಕ್ಕೂ ಮುಂಚಿನಿಂದಲೂ ಈ ನಂಬಿಕೆ ಇದೆ ಎಂಬುದಕ್ಕೆ ಹಲವು ಆಧಾರಗಳನ್ನು ಕೋರ್ಟ್ ಒದಗಿಸಿದೆ.

ಇದರ ಕುರಿತು ಸುನ್ನಿ ವಕ್ಫ್ ಬೋರ್ಡ್ ಪರವಾಗಿ ರಾಜೀವ್ ಧವನ್ ಮಂಡಿಸಿದ ವಾದವನ್ನು ಕೋರ್ಟ್ ಒಪ್ಪಿಲ್ಲ. 450 ವರ್ಷಗಳಿಂದ ಇದ್ದ ತಮ್ಮ ಪ್ರಾರ್ಥನಾ ಮಂದಿರವನ್ನು ಕಾನೂನುಬಾಹಿರವಾಗಿ ನಡೆದ ಕೃತ್ಯವೊಂದರಿಂದ ಮುಸ್ಲಿಮರು ಕಳೆದುಕೊಳ್ಳಬೇಕಾಯಿತು ಎಂದು ಉಲ್ಲೇಖಿಸುವ ಕೋರ್ಟು, ಈ ವಿವಾದದ ಬಹು ಹಿಂದಿನ ಮೈಲುಗಲ್ಲುಗಳಾದ 1856ಕ್ಕಿಂತ ಮುಂಚೆಯೂ ಆ ಪ್ರಾರ್ಥನಾ ಮಂದಿರ ಮುಸ್ಲಿಮರ ವಶದಲ್ಲಿತ್ತು ಎಂಬುದಕ್ಕೆ ದಾಖಲೆಗಳನ್ನು ಕೇಳುವುದು ಆಶ್ಚರ್ಯಕರವಾಗಿದೆ. ಬೇರೆ ದೇಶಗಳಿಂದ ಇಲ್ಲಿಗೆ ಆಗಮಿಸಿದ ಪ್ರವಾಸಿಗಳು ಉಲ್ಲೇಖಿಸಿದ ಹಿಂದೂ ಪೂಜೆಯ ವಿವರಗಳನ್ನು ಉಲ್ಲೇಖಿಸುವ ಕೋರ್ಟು, ಅದೊಂದು ಮಸೀದಿಯಾಗಿತ್ತು ಮತ್ತು ನಮಾಜ್ ನಡೆಯುತ್ತಿತ್ತು ಎಂಬುದಕ್ಕೆ ದಾಖಲೆಗಳು ಇಲ್ಲ ಎಂದು ಹೇಳುತ್ತದೆ. ಅದನ್ನು ಕಟ್ಟಿದ್ದೇ ಮಸೀದಿಯಾಗಿ ಎಂಬುದನ್ನಾಗಲೀ, ಆ ಕಾರಣಕ್ಕೇ ವಿವಾದ ಹುಟ್ಟಿಕೊಂಡಿತ್ತು ಎಂಬುದನ್ನು ಗಣನೆಗೆ ತೆಗೆದುಕೊಳ್ಳದಿರುವುದು ಕಂಡು ಬರುತ್ತದೆ.

ಹೀಗಾಗಿ ಕೇವಲ ಭಾರತೀಯ ಸರ್ವೇಕ್ಷಣಾ ಇಲಾಖೆಯ ಸಾಕ್ಷ್ಯವಲ್ಲದೇ, ರಾಮಮಂದಿರಕ್ಕಾಗಿ ಭೂಮಿ ನೀಡುವುದರಲ್ಲಿ ತಾರ್ಕಿಕವಲ್ಲದ ಕಾರಣಗಳು ಕೆಲಸ ಮಾಡಿವೆ ಎಂಬುದು ಎದ್ದು ಕಾಣುತ್ತದೆ. ಆದರೆ ನಂಬಿಕೆಯ ಆಧಾರದ ಮೇಲೆ ನಾವು ತೀರ್ಮಾನಕ್ಕೆ ಬಂದಿಲ್ಲ ಎಂತಲೂ ಕೋರ್ಟ್ ಹೇಳಳುತ್ತದೆ.

ಅದೇನೇ ಇದ್ದರೂ ಸಂಬಂಧಪಟ್ಟವರೆಲ್ಲರೂ ಕೋರ್ಟ್ ತೀರ್ಪನ್ನು ಗೌರವಿಸುತ್ತ, ಶಾಂತಿ ಸೌಹಾರ್ದತೆ ಕಾಪಾಡಲು ಹೇಳಿರುವುದು ಇಂದಿನ ಮಹತ್ವದ ಬೆಳವಣಿಗೆಯಾಗಿದೆ. ತೀರ್ಪಿನ ಕುರಿತು ಅಸಮಾಧಾನ ಇದ್ದು, ಪುನರ್‍ಪರಿಶೀಲನಾ ಅರ್ಜಿ ಸಲ್ಲಿಸಬೇಕೇ ಎಂಬುದನ್ನೂ ಚರ್ಚಿಸುತ್ತೇವೆ ಎಂದು ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ಪರವಾಗಿ ಹೇಳಿಕೆ ಬಂದಿದ್ದು, ಮೇಲಿನ ಅಂಶಗಳ ವಿಶ್ಲೇಷಣೆ ಹಾಗೂ ಚರ್ಚೆ ಮುಂದಿನ ದಿನಗಳಲ್ಲಿ ಹೇಗೆ ನಡೆಯುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

  • ದಿ ವೈರ್‌
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...