Homeಮುಖಪುಟಅಯೋಧ್ಯೆ ತೀರ್ಪು: ಭಾರತೀಯ ಸರ್ವೇಕ್ಷಣಾ ಇಲಾಖೆಯ ಸಾಕ್ಷ್ಯಕ್ಕೆ ಪ್ರಧಾನ ಪಾತ್ರವಿದೆಯೇ?

ಅಯೋಧ್ಯೆ ತೀರ್ಪು: ಭಾರತೀಯ ಸರ್ವೇಕ್ಷಣಾ ಇಲಾಖೆಯ ಸಾಕ್ಷ್ಯಕ್ಕೆ ಪ್ರಧಾನ ಪಾತ್ರವಿದೆಯೇ?

- Advertisement -
- Advertisement -

ಪಂಚ ನ್ಯಾಯಮೂರ್ತಿಗಳ ಸುಪ್ರೀಂಕೋರ್ಟಿನ ಪೀಠವು ನೀಡಿದ ತೀರ್ಪಿನಲ್ಲಿ ಮಹತ್ವದ ಪಾತ್ರ ವಹಿಸಿದ್ದು ಏನು? ಈ ಕುರಿತು ಮುಖ್ಯ ನ್ಯಾಯಮೂರ್ತಿಗಳೇ ಓದಿದ ತೀರ್ಪಿನ ವರದಿ ಏನು ಹೇಳುತ್ತದೆ? ಅದರ ಪ್ರಕಾರ ‘ಕೋರ್ಟು ಸಾಕ್ಷಿಗಳ ಮೇಲಷ್ಟೇ ಹೋಗಬೇಕು. ಧಾರ್ಮಿಕ ಶ್ರದ್ಧೆಯನ್ನು ಕೋರ್ಟು ಗೌರವಿಸುತ್ತದೆ; ಆದರೆ ಅದು ವ್ಯಕ್ತಿಗತ ಆಯ್ಕೆ. ನಂಬಿಕೆಯ ಮೇಲೆ ತೀರ್ಪು ನೀಡಲಾಗುವುದಿಲ್ಲ’ ಎನ್ನುತ್ತದೆ. ಅದೇ ಸಂದರ್ಭದಲ್ಲಿ ಮಸೀದಿಯಿದ್ದ ಜಾಗವೇ ರಾಮನ ಜನ್ಮಭೂಮಿ ಎಂಬ ನಂಬಿಕೆ ಇದೆ ಎನ್ನುವುದನ್ನೂ ಕೋರ್ಟು ಗುರುತಿಸಿದೆ. ಇವೆರಡಕ್ಕೂ ತೀರ್ಪಿನಲ್ಲಿ ಏನು ಸ್ಪಷ್ಟೀಕರಣ ಒದಗಿಸಲಾಗಿದೆ ಎಂಬುದೂ ಕುತೂಹಲಕಾರಿ.

ಹಾಗಾದರೆ, ಯಾವ ಆಧಾರದ ಮೇಲೆ ಸದರಿ ಜಾಗವು ಮಂದಿರ ನಿರ್ಮಾಣಕ್ಕಾಗಿ ಸರ್ಕಾರ ರಚಿಸಬೇಕಾದ ಟ್ರಸ್ಟ್‍ಗೆ ಹೋಗಬೇಕು ಎಂದು ಕೋರ್ಟು ಹೇಳಿದೆ?

ಆರ್ಕಿಯಾಲಾಜಿಕಲ್ ಸರ್ವೇ ಆಫ್ ಇಂಡಿಯಾ- ಭಾರತೀಯ ಸರ್ವೇಕ್ಷಣಾ ಇಲಾಖೆಯು ನಡೆಸಿದ ಉತ್ಖನನ ಮತ್ತು ಸಂಶೋಧನೆಯನ್ನು ಕೋರ್ಟು ಒಂದು ಮಹತ್ವದ ಸಾಕ್ಷ್ಯವಾಗಿ ಪರಿಗಣಿಸಿದಂತೆ ಮೇಲ್ನೋಟಕ್ಕೆ ತೋರುತ್ತದೆ. (ಈ ಉತ್ಖನನ ನಡೆದ ರೀತಿಯ ಕುರಿತು ಸರ್ವೇಕ್ಷಣಾ ತಜ್ಞರು ಮತ್ತು ಇತಿಹಾಸಜ್ಞರಲ್ಲಿ ಒಮ್ಮತವಿರಲಿಲ್ಲ). ಅದರ ಪ್ರಕಾರ 1528ರಲ್ಲಿ ಮಸೀದಿಯು (ದೊರೆ ಬಾಬರ್‍ನ ಸೈನ್ಯದ ಸುಬೇದಾರನೊಬ್ಬನಿಂದ) ನಿರ್ಮಾಣವಾದಾಗ, ಅದರ ಕೆಳಗೆ ಬೇರೊಂದು ಕಟ್ಟಡ ಇತ್ತು. ಆದರೆ, ಅಲ್ಲಿ ಮಂದಿರವಿತ್ತೆಂಬುದನ್ನು ಇಲಾಖೆಯು ಒಪ್ಪಿಲ್ಲ. ಅಲ್ಲಿ ಮಂದಿರವಿತ್ತೆನ್ನುವುದಕ್ಕೆ ಸಾಕ್ಷಿಯಿಲ್ಲ; ಅದೇ ರೀತಿ ಅಲ್ಲಿ ಇಸ್ಲಾಮಿಕ್ ಕಟ್ಟಡವೂ ಇರಲಿಲ್ಲ ಎಂದು ಸರ್ವೇಕ್ಷಣಾ ಇಲಾಖೆಯು ಹೇಳಿದ್ದನ್ನು ಕೋರ್ಟ್ ತೀರ್ಪಿನಲ್ಲಿ ಉಲ್ಲೇಖಿಸಲಾಗಿದೆ.

ಬೇರೆ ಬೇರೆ ಅವಧಿಗಳಿಂದ ವಿವಾದಿತ ಜಾಗದ ಒಳಾವರಣದಲ್ಲಿ ನಮಾಜ್ ನಡೆಯುತ್ತಿತ್ತು ಮತ್ತು ಹೊರಾವರಣದಲ್ಲಿ ಪೂಜೆ ನಡೆಯುತ್ತಿತ್ತು ಎಂಬುದನ್ನೂ ಕೋರ್ಟು ಗಮನಿಸಿದೆ. ಆದರೆ, ಇದು ಯಾರಿಗೆ ಸದರಿ ಜಾಗ ಸೇರಬೇಕು ಎಂಬುದಕ್ಕೆ ಆಧಾರವಾದಂತಿಲ್ಲ. ಬದಲಿಗೆ ಬೇರೊಂದು ಕಟ್ಟಡವನ್ನು ಕೆಡವಿ ಅಲ್ಲಿ ಮಸೀದಿ ಕಟ್ಟಲಾಗಿದೆ, ಕೆಡವಲಾದ ಕಟ್ಟಡ ಇಸ್ಲಾಮಿಕ್ ಕಟ್ಟಡ ಆಗಿರಲಿಲ್ಲ ಎಂಬುದು ಆ ಸ್ಥಳ ಸುನ್ನಿ ವಕ್ಫ್ ಬೋರ್ಡ್ ಅಥವಾ ಮುಸ್ಲಿಮರಿಗೆ ಸೇರಬಾರದು ಎಂಬುದನ್ನು ತೀರ್ಮಾನಿಸಲು ಆಧಾರವಾದಂತಿದೆ.

ಅದೇ ಸಂದರ್ಭದಲ್ಲಿ 19ನೇ ಶತಮಾನದಿಂದ ಈ ಜಾಗಕ್ಕಾಗಿ ಕಾನೂನು ವ್ಯಾಜ್ಯನಿರತವಾಗಿದ್ದ ನಿರ್ಮೋಹಿ ಅಖಾರಾಕ್ಕೂ ವಿವಾದಿತ ಜಾಗವನ್ನು ನೀಡಿಲ್ಲ. ಏಕೆಂದರೆ ಸದರಿ ಜಾಗದ ಒಡೆತನವು ಅಧಿಕೃತವಾಗಿ ಸುನ್ನಿ ವಕ್ಫ್ ಬೋರ್ಡ್ ಹೆಸರಿನಲ್ಲಿ ಇತ್ತೇ ಹೊರತು ಬೇರೆಯವರು ಅದನ್ನು ಪಡೆಯಲು ಸಾಧ್ಯವಿರಲಿಲ್ಲ.

ಹಾಗಾದರೆ ಈ ಜಾಗ ಯಾರಿಗೆ ಸೇರಬೇಕು ಎಂಬ ಪ್ರಶ್ನೆ ಉದ್ಭವಿಸುತ್ತದೆ. ಅಲಹಾಬಾದ್ ಹೈಕೋರ್ಟ್ ಅದನ್ನು ಸುನ್ನಿ ವಕ್ಫ್ ಬೋರ್ಡ್, ಬಾಲರಾಮ (ದೇವರು) ಮತ್ತು ನಿರ್ಮೋಹಿ ಅಖಾರಾಕ್ಕೆ ಮೂರು ಭಾಗಗಳಾಗಿ ಹಂಚಿತ್ತು. ಆದರೆ, ಸುಪ್ರೀಂಕೋರ್ಟ್ ಇದನ್ನು ರಾಮಮಂದಿರ ನಿರ್ಮಾಣಕ್ಕಾಗಿ ಬಾಲರಾಮನಿಗೆ ನೀಡಲಾಗಿದೆ. ಬಾಲರಾಮನನ್ನು ಪ್ರತಿನಿಧಿಸುತ್ತೇವೆಂದು ಹೇಳಿಕೊಂಡವರಿಗೆ ಅದನ್ನು ವಹಿಸಿಲ್ಲ; ಬದಲಿಗೆ ಸರ್ಕಾರವೇ ಮೂರು ತಿಂಗಳಲ್ಲಿ ಒಂದು ಟ್ರಸ್ಟ್ ಮಾಡಲಿ, ಆ ಟ್ರಸ್ಟ್‍ನಲ್ಲಿ ನಿರ್ಮೋಹಿ ಅಖಾರಾದವರೂ ಇರಲಿ ಎಂದು ಕೋರ್ಟ್ ಹೇಳಿದೆ.

ಅಂದರೆ ಸದರಿ ಜಾಗದ ಒಡೆತನದ ಮೇಲಿದ್ದ ಸಿವಿಲ್ ವ್ಯಾಜ್ಯಕ್ಕೆ ನಿರ್ದಿಷ್ಟವಾಗಿ ಯಾರಿಗೂ ಸೇರಿದ್ದಲ್ಲ ಎಂಬುದನ್ನು ಲಭ್ಯವಿದ್ದ ಸಾಕ್ಷಿಗಳ ಮೇಲೆ ಕೋರ್ಟು ತೀರ್ಮಾನಿಸಿದೆ; ಅದಕ್ಕೆ ಭಾರತೀಯ ಸರ್ವೇಕ್ಷಣಾ ಇಲಾಖೆಯ ಸಾಕ್ಷಿಯನ್ನು ಪ್ರಧಾನವಾಗಿ ಪರಿಗಣಿಸಿದಂತಿದೆ. ಆದರೆ ನಂಬಿಕೆಯ ಆಧಾರದ ಮೇಲೆಯೇ ರಾಮಮಂದಿರ ನಿರ್ಮಾಣಕ್ಕೆ ಅವಕಾಶ ಮಾಡಿಕೊಟ್ಟಂತಿದೆ ಎಂಬುದು ಮೇಲ್ನೋಟಕ್ಕೆ ಕಾಣುತ್ತಿದೆ. ಅಂದರೆ ವ್ಯಕ್ತಿಗತ ನಂಬಿಕೆ, ರಾಜಕಾರಣ, ಧರ್ಮ ಇವುಗಳನ್ನು ದಾಟಿ ನ್ಯಾಯಾಲಯವು ಸಾಕ್ಷಿಯ ಆಧಾರದ ಮೇಲೆ ತೀರ್ಪು ನೀಡುತ್ತದೆ ಎಂದು ಹೇಳಿದ ಕೋರ್ಟು, ಅರ್ಧ ಅದೇ ರೀತಿ ತೀರ್ಮಾನ ಮಾಡಿದೆ; ಇನ್ನರ್ಧವನ್ನು ನಂಬಿಕೆ ಯಾವಾಗಿನಿಂದ ಇತ್ತು ಎಂಬುದಕ್ಕೆ ಇದ್ದ ಸಾಕ್ಷ್ಯಗಳನ್ನು ಗಣನೆಗೆ ತೆಗೆದುಕೊಂಡಿದೆ.

ಇಲ್ಲಿಯೂ ಯಾರ ನಂಬಿಕೆ ಎಂಬ ಪ್ರಶ್ನೆ ಏಳುತ್ತದೆ. ಆ ವಿಚಾರದಲ್ಲಿ ಅದೇ ಜಾಗದಲ್ಲಿ ಭಗವಾನ್ ರಾವi ಹುಟ್ಟಿದ್ದು ಎಂಬ ನಂಬಿಕೆಗೆ ಮಹತ್ವ ನೀಡಲಾಗಿದೆ. ಇದಕ್ಕೂ ತೀರ್ಪಿನ 167ರಿಂದ 170ನೇ ಅಂಶಗಳಲ್ಲಿ ಉತ್ತರವಿದ್ದಂತಿದೆ. ಬಾಬ್ರಿ ಮಸೀದಿ ನಿರ್ಮಾಣಕ್ಕೂ ಮುಂಚಿನಿಂದಲೂ ಈ ನಂಬಿಕೆ ಇದೆ ಎಂಬುದಕ್ಕೆ ಹಲವು ಆಧಾರಗಳನ್ನು ಕೋರ್ಟ್ ಒದಗಿಸಿದೆ.

ಇದರ ಕುರಿತು ಸುನ್ನಿ ವಕ್ಫ್ ಬೋರ್ಡ್ ಪರವಾಗಿ ರಾಜೀವ್ ಧವನ್ ಮಂಡಿಸಿದ ವಾದವನ್ನು ಕೋರ್ಟ್ ಒಪ್ಪಿಲ್ಲ. 450 ವರ್ಷಗಳಿಂದ ಇದ್ದ ತಮ್ಮ ಪ್ರಾರ್ಥನಾ ಮಂದಿರವನ್ನು ಕಾನೂನುಬಾಹಿರವಾಗಿ ನಡೆದ ಕೃತ್ಯವೊಂದರಿಂದ ಮುಸ್ಲಿಮರು ಕಳೆದುಕೊಳ್ಳಬೇಕಾಯಿತು ಎಂದು ಉಲ್ಲೇಖಿಸುವ ಕೋರ್ಟು, ಈ ವಿವಾದದ ಬಹು ಹಿಂದಿನ ಮೈಲುಗಲ್ಲುಗಳಾದ 1856ಕ್ಕಿಂತ ಮುಂಚೆಯೂ ಆ ಪ್ರಾರ್ಥನಾ ಮಂದಿರ ಮುಸ್ಲಿಮರ ವಶದಲ್ಲಿತ್ತು ಎಂಬುದಕ್ಕೆ ದಾಖಲೆಗಳನ್ನು ಕೇಳುವುದು ಆಶ್ಚರ್ಯಕರವಾಗಿದೆ. ಬೇರೆ ದೇಶಗಳಿಂದ ಇಲ್ಲಿಗೆ ಆಗಮಿಸಿದ ಪ್ರವಾಸಿಗಳು ಉಲ್ಲೇಖಿಸಿದ ಹಿಂದೂ ಪೂಜೆಯ ವಿವರಗಳನ್ನು ಉಲ್ಲೇಖಿಸುವ ಕೋರ್ಟು, ಅದೊಂದು ಮಸೀದಿಯಾಗಿತ್ತು ಮತ್ತು ನಮಾಜ್ ನಡೆಯುತ್ತಿತ್ತು ಎಂಬುದಕ್ಕೆ ದಾಖಲೆಗಳು ಇಲ್ಲ ಎಂದು ಹೇಳುತ್ತದೆ. ಅದನ್ನು ಕಟ್ಟಿದ್ದೇ ಮಸೀದಿಯಾಗಿ ಎಂಬುದನ್ನಾಗಲೀ, ಆ ಕಾರಣಕ್ಕೇ ವಿವಾದ ಹುಟ್ಟಿಕೊಂಡಿತ್ತು ಎಂಬುದನ್ನು ಗಣನೆಗೆ ತೆಗೆದುಕೊಳ್ಳದಿರುವುದು ಕಂಡು ಬರುತ್ತದೆ.

ಹೀಗಾಗಿ ಕೇವಲ ಭಾರತೀಯ ಸರ್ವೇಕ್ಷಣಾ ಇಲಾಖೆಯ ಸಾಕ್ಷ್ಯವಲ್ಲದೇ, ರಾಮಮಂದಿರಕ್ಕಾಗಿ ಭೂಮಿ ನೀಡುವುದರಲ್ಲಿ ತಾರ್ಕಿಕವಲ್ಲದ ಕಾರಣಗಳು ಕೆಲಸ ಮಾಡಿವೆ ಎಂಬುದು ಎದ್ದು ಕಾಣುತ್ತದೆ. ಆದರೆ ನಂಬಿಕೆಯ ಆಧಾರದ ಮೇಲೆ ನಾವು ತೀರ್ಮಾನಕ್ಕೆ ಬಂದಿಲ್ಲ ಎಂತಲೂ ಕೋರ್ಟ್ ಹೇಳಳುತ್ತದೆ.

ಅದೇನೇ ಇದ್ದರೂ ಸಂಬಂಧಪಟ್ಟವರೆಲ್ಲರೂ ಕೋರ್ಟ್ ತೀರ್ಪನ್ನು ಗೌರವಿಸುತ್ತ, ಶಾಂತಿ ಸೌಹಾರ್ದತೆ ಕಾಪಾಡಲು ಹೇಳಿರುವುದು ಇಂದಿನ ಮಹತ್ವದ ಬೆಳವಣಿಗೆಯಾಗಿದೆ. ತೀರ್ಪಿನ ಕುರಿತು ಅಸಮಾಧಾನ ಇದ್ದು, ಪುನರ್‍ಪರಿಶೀಲನಾ ಅರ್ಜಿ ಸಲ್ಲಿಸಬೇಕೇ ಎಂಬುದನ್ನೂ ಚರ್ಚಿಸುತ್ತೇವೆ ಎಂದು ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ಪರವಾಗಿ ಹೇಳಿಕೆ ಬಂದಿದ್ದು, ಮೇಲಿನ ಅಂಶಗಳ ವಿಶ್ಲೇಷಣೆ ಹಾಗೂ ಚರ್ಚೆ ಮುಂದಿನ ದಿನಗಳಲ್ಲಿ ಹೇಗೆ ನಡೆಯುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

  • ದಿ ವೈರ್‌
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...