Homeಮುಖಪುಟಅಯೋಧ್ಯೆ ತೀರ್ಪು: ಭಾರತೀಯ ಸರ್ವೇಕ್ಷಣಾ ಇಲಾಖೆಯ ಸಾಕ್ಷ್ಯಕ್ಕೆ ಪ್ರಧಾನ ಪಾತ್ರವಿದೆಯೇ?

ಅಯೋಧ್ಯೆ ತೀರ್ಪು: ಭಾರತೀಯ ಸರ್ವೇಕ್ಷಣಾ ಇಲಾಖೆಯ ಸಾಕ್ಷ್ಯಕ್ಕೆ ಪ್ರಧಾನ ಪಾತ್ರವಿದೆಯೇ?

- Advertisement -
- Advertisement -

ಪಂಚ ನ್ಯಾಯಮೂರ್ತಿಗಳ ಸುಪ್ರೀಂಕೋರ್ಟಿನ ಪೀಠವು ನೀಡಿದ ತೀರ್ಪಿನಲ್ಲಿ ಮಹತ್ವದ ಪಾತ್ರ ವಹಿಸಿದ್ದು ಏನು? ಈ ಕುರಿತು ಮುಖ್ಯ ನ್ಯಾಯಮೂರ್ತಿಗಳೇ ಓದಿದ ತೀರ್ಪಿನ ವರದಿ ಏನು ಹೇಳುತ್ತದೆ? ಅದರ ಪ್ರಕಾರ ‘ಕೋರ್ಟು ಸಾಕ್ಷಿಗಳ ಮೇಲಷ್ಟೇ ಹೋಗಬೇಕು. ಧಾರ್ಮಿಕ ಶ್ರದ್ಧೆಯನ್ನು ಕೋರ್ಟು ಗೌರವಿಸುತ್ತದೆ; ಆದರೆ ಅದು ವ್ಯಕ್ತಿಗತ ಆಯ್ಕೆ. ನಂಬಿಕೆಯ ಮೇಲೆ ತೀರ್ಪು ನೀಡಲಾಗುವುದಿಲ್ಲ’ ಎನ್ನುತ್ತದೆ. ಅದೇ ಸಂದರ್ಭದಲ್ಲಿ ಮಸೀದಿಯಿದ್ದ ಜಾಗವೇ ರಾಮನ ಜನ್ಮಭೂಮಿ ಎಂಬ ನಂಬಿಕೆ ಇದೆ ಎನ್ನುವುದನ್ನೂ ಕೋರ್ಟು ಗುರುತಿಸಿದೆ. ಇವೆರಡಕ್ಕೂ ತೀರ್ಪಿನಲ್ಲಿ ಏನು ಸ್ಪಷ್ಟೀಕರಣ ಒದಗಿಸಲಾಗಿದೆ ಎಂಬುದೂ ಕುತೂಹಲಕಾರಿ.

ಹಾಗಾದರೆ, ಯಾವ ಆಧಾರದ ಮೇಲೆ ಸದರಿ ಜಾಗವು ಮಂದಿರ ನಿರ್ಮಾಣಕ್ಕಾಗಿ ಸರ್ಕಾರ ರಚಿಸಬೇಕಾದ ಟ್ರಸ್ಟ್‍ಗೆ ಹೋಗಬೇಕು ಎಂದು ಕೋರ್ಟು ಹೇಳಿದೆ?

ಆರ್ಕಿಯಾಲಾಜಿಕಲ್ ಸರ್ವೇ ಆಫ್ ಇಂಡಿಯಾ- ಭಾರತೀಯ ಸರ್ವೇಕ್ಷಣಾ ಇಲಾಖೆಯು ನಡೆಸಿದ ಉತ್ಖನನ ಮತ್ತು ಸಂಶೋಧನೆಯನ್ನು ಕೋರ್ಟು ಒಂದು ಮಹತ್ವದ ಸಾಕ್ಷ್ಯವಾಗಿ ಪರಿಗಣಿಸಿದಂತೆ ಮೇಲ್ನೋಟಕ್ಕೆ ತೋರುತ್ತದೆ. (ಈ ಉತ್ಖನನ ನಡೆದ ರೀತಿಯ ಕುರಿತು ಸರ್ವೇಕ್ಷಣಾ ತಜ್ಞರು ಮತ್ತು ಇತಿಹಾಸಜ್ಞರಲ್ಲಿ ಒಮ್ಮತವಿರಲಿಲ್ಲ). ಅದರ ಪ್ರಕಾರ 1528ರಲ್ಲಿ ಮಸೀದಿಯು (ದೊರೆ ಬಾಬರ್‍ನ ಸೈನ್ಯದ ಸುಬೇದಾರನೊಬ್ಬನಿಂದ) ನಿರ್ಮಾಣವಾದಾಗ, ಅದರ ಕೆಳಗೆ ಬೇರೊಂದು ಕಟ್ಟಡ ಇತ್ತು. ಆದರೆ, ಅಲ್ಲಿ ಮಂದಿರವಿತ್ತೆಂಬುದನ್ನು ಇಲಾಖೆಯು ಒಪ್ಪಿಲ್ಲ. ಅಲ್ಲಿ ಮಂದಿರವಿತ್ತೆನ್ನುವುದಕ್ಕೆ ಸಾಕ್ಷಿಯಿಲ್ಲ; ಅದೇ ರೀತಿ ಅಲ್ಲಿ ಇಸ್ಲಾಮಿಕ್ ಕಟ್ಟಡವೂ ಇರಲಿಲ್ಲ ಎಂದು ಸರ್ವೇಕ್ಷಣಾ ಇಲಾಖೆಯು ಹೇಳಿದ್ದನ್ನು ಕೋರ್ಟ್ ತೀರ್ಪಿನಲ್ಲಿ ಉಲ್ಲೇಖಿಸಲಾಗಿದೆ.

ಬೇರೆ ಬೇರೆ ಅವಧಿಗಳಿಂದ ವಿವಾದಿತ ಜಾಗದ ಒಳಾವರಣದಲ್ಲಿ ನಮಾಜ್ ನಡೆಯುತ್ತಿತ್ತು ಮತ್ತು ಹೊರಾವರಣದಲ್ಲಿ ಪೂಜೆ ನಡೆಯುತ್ತಿತ್ತು ಎಂಬುದನ್ನೂ ಕೋರ್ಟು ಗಮನಿಸಿದೆ. ಆದರೆ, ಇದು ಯಾರಿಗೆ ಸದರಿ ಜಾಗ ಸೇರಬೇಕು ಎಂಬುದಕ್ಕೆ ಆಧಾರವಾದಂತಿಲ್ಲ. ಬದಲಿಗೆ ಬೇರೊಂದು ಕಟ್ಟಡವನ್ನು ಕೆಡವಿ ಅಲ್ಲಿ ಮಸೀದಿ ಕಟ್ಟಲಾಗಿದೆ, ಕೆಡವಲಾದ ಕಟ್ಟಡ ಇಸ್ಲಾಮಿಕ್ ಕಟ್ಟಡ ಆಗಿರಲಿಲ್ಲ ಎಂಬುದು ಆ ಸ್ಥಳ ಸುನ್ನಿ ವಕ್ಫ್ ಬೋರ್ಡ್ ಅಥವಾ ಮುಸ್ಲಿಮರಿಗೆ ಸೇರಬಾರದು ಎಂಬುದನ್ನು ತೀರ್ಮಾನಿಸಲು ಆಧಾರವಾದಂತಿದೆ.

ಅದೇ ಸಂದರ್ಭದಲ್ಲಿ 19ನೇ ಶತಮಾನದಿಂದ ಈ ಜಾಗಕ್ಕಾಗಿ ಕಾನೂನು ವ್ಯಾಜ್ಯನಿರತವಾಗಿದ್ದ ನಿರ್ಮೋಹಿ ಅಖಾರಾಕ್ಕೂ ವಿವಾದಿತ ಜಾಗವನ್ನು ನೀಡಿಲ್ಲ. ಏಕೆಂದರೆ ಸದರಿ ಜಾಗದ ಒಡೆತನವು ಅಧಿಕೃತವಾಗಿ ಸುನ್ನಿ ವಕ್ಫ್ ಬೋರ್ಡ್ ಹೆಸರಿನಲ್ಲಿ ಇತ್ತೇ ಹೊರತು ಬೇರೆಯವರು ಅದನ್ನು ಪಡೆಯಲು ಸಾಧ್ಯವಿರಲಿಲ್ಲ.

ಹಾಗಾದರೆ ಈ ಜಾಗ ಯಾರಿಗೆ ಸೇರಬೇಕು ಎಂಬ ಪ್ರಶ್ನೆ ಉದ್ಭವಿಸುತ್ತದೆ. ಅಲಹಾಬಾದ್ ಹೈಕೋರ್ಟ್ ಅದನ್ನು ಸುನ್ನಿ ವಕ್ಫ್ ಬೋರ್ಡ್, ಬಾಲರಾಮ (ದೇವರು) ಮತ್ತು ನಿರ್ಮೋಹಿ ಅಖಾರಾಕ್ಕೆ ಮೂರು ಭಾಗಗಳಾಗಿ ಹಂಚಿತ್ತು. ಆದರೆ, ಸುಪ್ರೀಂಕೋರ್ಟ್ ಇದನ್ನು ರಾಮಮಂದಿರ ನಿರ್ಮಾಣಕ್ಕಾಗಿ ಬಾಲರಾಮನಿಗೆ ನೀಡಲಾಗಿದೆ. ಬಾಲರಾಮನನ್ನು ಪ್ರತಿನಿಧಿಸುತ್ತೇವೆಂದು ಹೇಳಿಕೊಂಡವರಿಗೆ ಅದನ್ನು ವಹಿಸಿಲ್ಲ; ಬದಲಿಗೆ ಸರ್ಕಾರವೇ ಮೂರು ತಿಂಗಳಲ್ಲಿ ಒಂದು ಟ್ರಸ್ಟ್ ಮಾಡಲಿ, ಆ ಟ್ರಸ್ಟ್‍ನಲ್ಲಿ ನಿರ್ಮೋಹಿ ಅಖಾರಾದವರೂ ಇರಲಿ ಎಂದು ಕೋರ್ಟ್ ಹೇಳಿದೆ.

ಅಂದರೆ ಸದರಿ ಜಾಗದ ಒಡೆತನದ ಮೇಲಿದ್ದ ಸಿವಿಲ್ ವ್ಯಾಜ್ಯಕ್ಕೆ ನಿರ್ದಿಷ್ಟವಾಗಿ ಯಾರಿಗೂ ಸೇರಿದ್ದಲ್ಲ ಎಂಬುದನ್ನು ಲಭ್ಯವಿದ್ದ ಸಾಕ್ಷಿಗಳ ಮೇಲೆ ಕೋರ್ಟು ತೀರ್ಮಾನಿಸಿದೆ; ಅದಕ್ಕೆ ಭಾರತೀಯ ಸರ್ವೇಕ್ಷಣಾ ಇಲಾಖೆಯ ಸಾಕ್ಷಿಯನ್ನು ಪ್ರಧಾನವಾಗಿ ಪರಿಗಣಿಸಿದಂತಿದೆ. ಆದರೆ ನಂಬಿಕೆಯ ಆಧಾರದ ಮೇಲೆಯೇ ರಾಮಮಂದಿರ ನಿರ್ಮಾಣಕ್ಕೆ ಅವಕಾಶ ಮಾಡಿಕೊಟ್ಟಂತಿದೆ ಎಂಬುದು ಮೇಲ್ನೋಟಕ್ಕೆ ಕಾಣುತ್ತಿದೆ. ಅಂದರೆ ವ್ಯಕ್ತಿಗತ ನಂಬಿಕೆ, ರಾಜಕಾರಣ, ಧರ್ಮ ಇವುಗಳನ್ನು ದಾಟಿ ನ್ಯಾಯಾಲಯವು ಸಾಕ್ಷಿಯ ಆಧಾರದ ಮೇಲೆ ತೀರ್ಪು ನೀಡುತ್ತದೆ ಎಂದು ಹೇಳಿದ ಕೋರ್ಟು, ಅರ್ಧ ಅದೇ ರೀತಿ ತೀರ್ಮಾನ ಮಾಡಿದೆ; ಇನ್ನರ್ಧವನ್ನು ನಂಬಿಕೆ ಯಾವಾಗಿನಿಂದ ಇತ್ತು ಎಂಬುದಕ್ಕೆ ಇದ್ದ ಸಾಕ್ಷ್ಯಗಳನ್ನು ಗಣನೆಗೆ ತೆಗೆದುಕೊಂಡಿದೆ.

ಇಲ್ಲಿಯೂ ಯಾರ ನಂಬಿಕೆ ಎಂಬ ಪ್ರಶ್ನೆ ಏಳುತ್ತದೆ. ಆ ವಿಚಾರದಲ್ಲಿ ಅದೇ ಜಾಗದಲ್ಲಿ ಭಗವಾನ್ ರಾವi ಹುಟ್ಟಿದ್ದು ಎಂಬ ನಂಬಿಕೆಗೆ ಮಹತ್ವ ನೀಡಲಾಗಿದೆ. ಇದಕ್ಕೂ ತೀರ್ಪಿನ 167ರಿಂದ 170ನೇ ಅಂಶಗಳಲ್ಲಿ ಉತ್ತರವಿದ್ದಂತಿದೆ. ಬಾಬ್ರಿ ಮಸೀದಿ ನಿರ್ಮಾಣಕ್ಕೂ ಮುಂಚಿನಿಂದಲೂ ಈ ನಂಬಿಕೆ ಇದೆ ಎಂಬುದಕ್ಕೆ ಹಲವು ಆಧಾರಗಳನ್ನು ಕೋರ್ಟ್ ಒದಗಿಸಿದೆ.

ಇದರ ಕುರಿತು ಸುನ್ನಿ ವಕ್ಫ್ ಬೋರ್ಡ್ ಪರವಾಗಿ ರಾಜೀವ್ ಧವನ್ ಮಂಡಿಸಿದ ವಾದವನ್ನು ಕೋರ್ಟ್ ಒಪ್ಪಿಲ್ಲ. 450 ವರ್ಷಗಳಿಂದ ಇದ್ದ ತಮ್ಮ ಪ್ರಾರ್ಥನಾ ಮಂದಿರವನ್ನು ಕಾನೂನುಬಾಹಿರವಾಗಿ ನಡೆದ ಕೃತ್ಯವೊಂದರಿಂದ ಮುಸ್ಲಿಮರು ಕಳೆದುಕೊಳ್ಳಬೇಕಾಯಿತು ಎಂದು ಉಲ್ಲೇಖಿಸುವ ಕೋರ್ಟು, ಈ ವಿವಾದದ ಬಹು ಹಿಂದಿನ ಮೈಲುಗಲ್ಲುಗಳಾದ 1856ಕ್ಕಿಂತ ಮುಂಚೆಯೂ ಆ ಪ್ರಾರ್ಥನಾ ಮಂದಿರ ಮುಸ್ಲಿಮರ ವಶದಲ್ಲಿತ್ತು ಎಂಬುದಕ್ಕೆ ದಾಖಲೆಗಳನ್ನು ಕೇಳುವುದು ಆಶ್ಚರ್ಯಕರವಾಗಿದೆ. ಬೇರೆ ದೇಶಗಳಿಂದ ಇಲ್ಲಿಗೆ ಆಗಮಿಸಿದ ಪ್ರವಾಸಿಗಳು ಉಲ್ಲೇಖಿಸಿದ ಹಿಂದೂ ಪೂಜೆಯ ವಿವರಗಳನ್ನು ಉಲ್ಲೇಖಿಸುವ ಕೋರ್ಟು, ಅದೊಂದು ಮಸೀದಿಯಾಗಿತ್ತು ಮತ್ತು ನಮಾಜ್ ನಡೆಯುತ್ತಿತ್ತು ಎಂಬುದಕ್ಕೆ ದಾಖಲೆಗಳು ಇಲ್ಲ ಎಂದು ಹೇಳುತ್ತದೆ. ಅದನ್ನು ಕಟ್ಟಿದ್ದೇ ಮಸೀದಿಯಾಗಿ ಎಂಬುದನ್ನಾಗಲೀ, ಆ ಕಾರಣಕ್ಕೇ ವಿವಾದ ಹುಟ್ಟಿಕೊಂಡಿತ್ತು ಎಂಬುದನ್ನು ಗಣನೆಗೆ ತೆಗೆದುಕೊಳ್ಳದಿರುವುದು ಕಂಡು ಬರುತ್ತದೆ.

ಹೀಗಾಗಿ ಕೇವಲ ಭಾರತೀಯ ಸರ್ವೇಕ್ಷಣಾ ಇಲಾಖೆಯ ಸಾಕ್ಷ್ಯವಲ್ಲದೇ, ರಾಮಮಂದಿರಕ್ಕಾಗಿ ಭೂಮಿ ನೀಡುವುದರಲ್ಲಿ ತಾರ್ಕಿಕವಲ್ಲದ ಕಾರಣಗಳು ಕೆಲಸ ಮಾಡಿವೆ ಎಂಬುದು ಎದ್ದು ಕಾಣುತ್ತದೆ. ಆದರೆ ನಂಬಿಕೆಯ ಆಧಾರದ ಮೇಲೆ ನಾವು ತೀರ್ಮಾನಕ್ಕೆ ಬಂದಿಲ್ಲ ಎಂತಲೂ ಕೋರ್ಟ್ ಹೇಳಳುತ್ತದೆ.

ಅದೇನೇ ಇದ್ದರೂ ಸಂಬಂಧಪಟ್ಟವರೆಲ್ಲರೂ ಕೋರ್ಟ್ ತೀರ್ಪನ್ನು ಗೌರವಿಸುತ್ತ, ಶಾಂತಿ ಸೌಹಾರ್ದತೆ ಕಾಪಾಡಲು ಹೇಳಿರುವುದು ಇಂದಿನ ಮಹತ್ವದ ಬೆಳವಣಿಗೆಯಾಗಿದೆ. ತೀರ್ಪಿನ ಕುರಿತು ಅಸಮಾಧಾನ ಇದ್ದು, ಪುನರ್‍ಪರಿಶೀಲನಾ ಅರ್ಜಿ ಸಲ್ಲಿಸಬೇಕೇ ಎಂಬುದನ್ನೂ ಚರ್ಚಿಸುತ್ತೇವೆ ಎಂದು ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ಪರವಾಗಿ ಹೇಳಿಕೆ ಬಂದಿದ್ದು, ಮೇಲಿನ ಅಂಶಗಳ ವಿಶ್ಲೇಷಣೆ ಹಾಗೂ ಚರ್ಚೆ ಮುಂದಿನ ದಿನಗಳಲ್ಲಿ ಹೇಗೆ ನಡೆಯುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

  • ದಿ ವೈರ್‌
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...