Homeಕರೋನಾ ತಲ್ಲಣಆಯುಷ್ ಸಚಿವ ಶ್ರೀಪಾದ್ ವೈ ನಾಯಕ್‌ಗೆ ಕೊರೊನಾ ಪಾಸಿಟಿವ್

ಆಯುಷ್ ಸಚಿವ ಶ್ರೀಪಾದ್ ವೈ ನಾಯಕ್‌ಗೆ ಕೊರೊನಾ ಪಾಸಿಟಿವ್

ಕೊರೊನಾ ವಿರುದ್ದ ಹೋರಾಡಲು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಆಯುಷ್ ಕಿಟ್‌ಗಳನ್ನು ಅವರು ಇತ್ತೀಚೆಗೆ ಬಿಡುಗಡೆ ಮಾಡಿದ್ದರು.

- Advertisement -
- Advertisement -

ಕೇಂದ್ರ ಆಯುಷ್ ಮತ್ತು ರಕ್ಷಣಾ ರಾಜ್ಯ ಸಚಿವರಾದ ಶ್ರೀಪಾದ್ ವೈ ನಾಯಕ್‌ರವರಿಗೆ ಕೊರೊನಾ ಸೋಂಕು ತಗುಲಿದೆ. ತಾನು ಪಾಸಿಟಿವ್ ಆಗಿದ್ದೇನೆ ಸಚಿವರು ಟ್ವೀಟ್‌ ಮಾಡಿದ್ದು, ಲಕ್ಷಣ ರಹಿತರಾಗಿರುವುದರಿಂದ ಮನೆಯಲ್ಲಿಯೇ ಐಸೋಲೇಷನ್‌ನಲ್ಲಿರುವುದಾಗಿ ತಿಳಿಸಿದ್ದಾರೆ.

ಕೊರೊನಾ ವಿರುದ್ದ ಹೋರಾಡಲು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಆಯುಷ್ ಕಿಟ್‌ಗಳನ್ನು ಅವರು ಇತ್ತೀಚೆಗೆ ಬಿಡುಗಡೆ ಮಾಡಿದ್ದರು ಎಂದು ಟ್ವಿಟರ್ ಬಳಕೆದಾರ ಡಾ. ಅಝೀಂ ಹೇಳಿದ್ದಾರೆ.

ಗೋವಾ ಸರ್ಕಾರದ ಪತ್ರಿಕಾ ಪ್ರಕಟಣೆಯಲ್ಲಿ, ಮೇ 19 ರಂದು ಶ್ರೀಪಾದ್ ನಾಯಕ್ ತನ್ನ ಸಚಿವಾಲಯದಿಂದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಔಷಧೀಯ ಕಿಟ್‌ಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಪಣಜಿಯ ಕಲೆಕ್ಟರೇಟ್ ಸಿಬ್ಬಂದಿಗೆ ವಿತರಿಸಿದೆ ಎಂದು ಉಲ್ಲೇಖಿಸಿದೆ.

ಕಿಟ್‌ನಲ್ಲಿ ಹ್ಯಾಂಡ್ ಸ್ಯಾನಿಟೈಸರ್, ಆಯುರ್ವೇದ ಆರೋಗ್ಯ ಪೂರಕ ಚವಾನ್‌ಪ್ರಾಶ್, ಹೋಮಿಯೋಪತಿ ಮಾತ್ರೆಗಳು ಆರ್ಸೆನಿಕಮ್ ಆಲ್ಬಮ್ -30 ಒಳಗೊಂಡಿದೆ. ಅದರಲ್ಲಿ “ಚವಾನ್‌ಪ್ರಾಶ್ ಮತ್ತು ಪುಡಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ” ಎಂದು ಒತ್ತಿಹೇಳಿದೆ.

ಆಯುಷ್ ಸಚಿವಾಲಯವು ವೈದ್ಯಕೀಯ ಸಮಸ್ಯೆಗಳಿಗೆ ದೃಢೀಕರಿಸದ ಪರಿಹಾರಗಳನ್ನು ನೀಡುತ್ತಿದೆ ಎಂಬ ಟೀಕೆಗಳು ಈ ಹಿಂದೆ ಕೇಳಿಬಂದಿದ್ದವು.

ಆಗಸ್ಟ್ 12 ರಂದು, ಶ್ರೀಪಾದ್ ನಾಯಕ್ ತಮ್ಮ ಸಚಿವಾಲಯವು ಪ್ರಾರಂಭಿಸಿದ “ಆಯುಷ್ ಫಾರ್ ಇಮ್ಯೂನಿಟಿ” ಅಭಿಯಾನದ ವೀಡಿಯೊ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಅದರಲ್ಲಿ ಪ್ರಸ್ತುತ ಸಾಂಕ್ರಾಮಿಕ ರೋಗದಲ್ಲಿ ಯೋಗ ಮತ್ತು ಆಯುರ್ವೇದದ ಪಾತ್ರ ಮಹತ್ವದ್ದು ಎಂದು ಅವರು ಹೇಳಿದ್ದರು.

ಆಯುಷ್ ಸಚಿವಾಲಯವು ಜನವರಿ 29 ರಂದು ಬೆಳಿಗ್ಗೆ 10: 30 ಕ್ಕೆ ಪತ್ರಿಕಾ ಹೇಳಿಕೆ ನೀಡಿದ್ದು, ಅದರಲ್ಲಿ ಕೊರೊನಾ ವೈರಸ್‌ನಿಂದ ತಮ್ಮನ್ನು ರಕ್ಷಿಸಿಕೊಳ್ಳಲು ವಿವಿಧ ಹೋಮಿಯೋಪತಿ ಮತ್ತು ಆಯುರ್ವೇದ ತಂತ್ರಗಳನ್ನು ವಿವರಿಸಿದೆ.


ಓದಿ: ಹಪ್ಪಳ ತಿಂದರೆ ಕೊರೊನಾ ತಡೆಗಟ್ಟಬಹುದು ಎಂದಿದ್ದ ಕೇಂದ್ರ ಸಚಿವನಿಗೆ ಕೊರೊನಾ ಪಾಸಿಟಿವ್!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...