Homeಮುಖಪುಟಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಬೃಹತ್ ಹಗರಣ: ಸಿಎಜಿ ವರದಿಯಲ್ಲಿ ಬಹಿರಂಗ

ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಬೃಹತ್ ಹಗರಣ: ಸಿಎಜಿ ವರದಿಯಲ್ಲಿ ಬಹಿರಂಗ

- Advertisement -
- Advertisement -

ಮೋದಿ ಸರ್ಕಾರವು ಪ್ರಾರಂಭಿಸಿದ ಅತ್ಯಂತ ಮಹತ್ವಾಕಾಂಕ್ಷೆಯ ಸಾಮಾಜಿಕ ಕಲ್ಯಾಣ ಯೋಜನೆಗಳಲ್ಲಿ ಒಂದಾದ, “ಆಯುಷ್ಮಾನ್ ಭಾರತ್-ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ” (AB-PMJAY)ಯಡಿ ಅವ್ಯವಹಾರ ನಡೆದಿದೆ ಎಂದು ಸಿಎಜಿ ವರದಿ ತಿಳಿಸಿದೆ.

ಭಾರತದ ಕಂಟ್ರೋಲರ್ –  ಆಡಿಟರ್ ಜನರಲ್ (ಸಿಎಜಿ)   ಆಯುಷ್ಮಾನ್ ಭಾರತ್  – ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯ ಬಹುದೊಡ್ಡ ಅವ್ಯವಹರಾದ ಬಗ್ಗೆ ಉಲ್ಲೇಖಿಸಿದ್ದು, 7.5 ಲಕ್ಷ ಫಲಾನುಭವಿಗಳು ಎಂದು ಹೇಳಲಾದ ವ್ಯಕ್ತಿಗಳು “ಒಂದೇ ಮೊಬೈಲ್” ಸಂಖ್ಯೆಯೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಬಹಿರಂಗಪಡಿಸಿದ್ದಾರೆ.

ಇದಲ್ಲದೆ ದಾಖಲೆ ಪ್ರಕಾರ ಈ ಮೊದಲೇ  ಮೃತಪಟ್ಟಿದ್ದಾರೆಂದು ಘೋಷಿಸಿಲಾಗಿದ್ದ 3,446 ರೋಗಿಗಳ ಚಿಕಿತ್ಸೆಗಾಗಿ 6.97 ಕೋಟಿ ರೂಪಾಯಿ ಪಾವತಿಸಲಾಗಿದೆ ಎಂದು ಭಾರತದ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ತಿಳಿಸಿದೆ.

ಈ ಯೋಜನೆಯಡಿ ಜನರಿಗೆ  ನಗದು ರಹಿತ ಸೇವೆ ನೀಡಬೇಕಾಗಿತ್ತು. ಆದರೆ  ಫಲಾನುಭವಿಗಳು ಚಿಕಿತ್ಸೆಗಾಗಿ ಹಣವನ್ನು ಪಾವತಿಸಿದ್ದಾರೆ ಎಂದು ಭಾರತದ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (CAG) ಅವರ ವರದಿ ಹೇಳಿದೆ.

ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಮಂಡಿಸಲಾದ PMJAY ಕುರಿತಾದ ಲೆಕ್ಕಪರಿಶೋಧನಾ ವರದಿಯಲ್ಲಿ, CAG, ರೋಗಿಯನ್ನು ಆಸ್ಪತ್ರೆಗೆ ದಾಖಲಿಸಿದ ನಂತರ, ಎಲ್ಲಾ ಪರೀಕ್ಷೆಗಳು, ಔಷಧಿಗಳ  ವೆಚ್ಚವನ್ನು ಆಸ್ಪತ್ರೆಯು ಭರಿಸಬೇಕಾಗುತ್ತದೆ. ಅದಕ್ಕೆ ತಗಲುವ ವೆಚ್ಚವನ್ನು ಪ್ಯಾಕೇಜ್ ಮೊತ್ತದಲ್ಲಿ ಸೇರಿಸಲಾಗಿದೆ.

2018 ರಲ್ಲಿ ಹೊರತಂದ, AB-PMJAY ಯೋಜನೆಯಡಿ ಕುಟುಂಬಕ್ಕೆ ವಾರ್ಷಿಕ   5 ಲಕ್ಷ ರೂಪಾಯಿಗಳವರೆಗೆ ಆರೋಗ್ಯ ರಕ್ಷಣೆಯನ್ನು ಒದಗಿಸುತ್ತದೆ. ಸರ್ಕಾರದ ಮಾಹಿತಿ ಪ್ರಕಾರ ಆರೋಗ್ಯ ರಕ್ಷಣೆ ಯೋಜನೆಯು 50 ಕೋಟಿ ಜನರನ್ನು ಒಳಗೊಂಡಿದೆ.

ಈ ಯೋಜನೆಯಡಿ  ಫಲಾನುಭವಿಗಳಿಗೆ ಸೇವೆಗಳಿಗೆ ನಗದು ರಹಿತ ಮತ್ತು ಕಾಗದ ರಹಿತ ಸೇವೆಯನ್ನು ಒದಗಿಸಬೇಕಿದೆ. ಇತ್ತೀಚೆಗೆ ಸಂಸತ್ತಿನಲ್ಲಿ ಮಂಡಿಸಲಾದ AB-PMJAY ಕುರಿತ CAGಯ ಆಡಿಟ್ ವರದಿಯು,   “SHA (ರಾಜ್ಯ ಆರೋಗ್ಯ ಸಂಸ್ಥೆ) ಮತ್ತು ಖಾಸಗಿ EHCPS (ಎಂಪಾನೆಲ್ಡ್ ಹೆಲ್ತ್ ಕೇರ್ ಪ್ರೊವೈಡರ್ಸ್) ಸಹಿ ಮಾಡಿದ ಒಪ್ಪಂದದ ಪ್ರಕಾರ PMJAY ಫಲಾನುಭವಿಗಳಿಗೆ ಸಂಪೂರ್ಣ ನಗದು ರಹಿತ ರೀತಿಯಲ್ಲಿ ಆರೋಗ್ಯ ಸೌಲಭ್ಯ ನೀಡಬೇಕಿದೆ.

ಹಿಮಾಚಲ ಪ್ರದೇಶದಲ್ಲಿ, ಐದು EHCP ಗಳ 50 ಫಲಾನುಭವಿಗಳು ತಮ್ಮ ವೈದ್ಯಕೀಯ ಪರೀಕ್ಷೆಗಳನ್ನು ಇತರ ಆಸ್ಪತ್ರೆ ಅಥವಾ ವೈದ್ಯಕೀಯ ಪರೀಕ್ಷಾ ಕೇಂದ್ರದಲ್ಲಿ ಮಾಡಿಸಿದ್ದರು. ಈ  ಪರೀಕ್ಷೆಗಳ ವೆಚ್ಚವನ್ನು ಫಲಾನುಭವಿಗಳೇ ಭರಿಸಿದ್ದರು.

ಜಮ್ಮು ಮತ್ತು ಕಾಶ್ಮೀರದಲ್ಲಿ, 459 ರೋಗಿಗಳು ತಮ್ಮ ಸ್ವಂತ ಜೇಬಿನಿಂದ ಆರಂಭದಲ್ಲಿ 43.27 ಲಕ್ಷ ರೂ.ಗಳನ್ನು ಪಾವತಿಸಿದರು, ಬಿಲ್‌ಗಳನ್ನು ಪರಿಶೀಲಿಸಿದ ನಂತರ ರೋಗಿಗಳಿಗೆ ಮರುಪಾವತಿ ಮಾಡಲಾಯಿತು.75 ರೋಗಿಗಳಿಗೆ ಇನ್ನೂ 6.70 ಲಕ್ಷ ರೂಪಾಯಿ ಮರುಪಾವತಿ ಮಾಡಬೇಕಾಗಿದೆ ಎಂದು ಆಡಿಟ್ ಸಮಯದಲ್ಲಿ ಸಿಎಜಿ ಕಂಡುಹಿಡಿದಿದೆ.

ಜಾರ್ಖಂಡ್‌ನಲ್ಲಿ ಲೈಫ್ ಕೇರ್ ಆಸ್ಪತ್ರೆಯ 36 ರೋಗಿಗಳು  ಔಷಧಿಗಳು, ಚುಚ್ಚುಮದ್ದು, ರಕ್ತ ಇತ್ಯಾದಿಗಳನ್ನು ಖರೀದಿಸಲು ವಿವಿಧ ಮೊತ್ತವನ್ನು ಪಾವತಿಸಿರುವುದನ್ನು ವಿಮಾ ಕಂಪನಿ ಗಮನಿಸಿದೆ. ಈ ವೆಚ್ಚದ ವಿವರಗಳು SHA ಬಳಿ ಲಭ್ಯವಿರಲಿಲ್ಲ. ವಿಮಾ ಕಂಪನಿಯ ಅವಲೋಕನದ ಆಧಾರದ ಮೇಲೆ, SHA (ಆಗಸ್ಟ್ 28, 2020 ರಂದು) ಐದು ದಿನಗಳಲ್ಲಿ ತನ್ನ ವಿವರಣೆಯನ್ನು ಸಲ್ಲಿಸುವಂತೆ ಆಸ್ಪತ್ರೆಯನ್ನು ಕೇಳಿದೆ.

ಮೇಘಾಲಯದಲ್ಲಿ, ಫೆಬ್ರವರಿ 2019 ರಿಂದ ಮಾರ್ಚ್ 2021 ರವರೆಗೆ ಐದು ಖಾಸಗಿ EHCP ಗಳಲ್ಲಿ ಚಿಕಿತ್ಸೆ ಪಡೆದ 19,459 ಫಲಾನುಭವಿಗಳಲ್ಲಿ, 13,418 (ಶೇ. 69) ಜನರು ಡಿಸ್ಚಾರ್ಜ್ ಸಮಯದಲ್ಲಿ 12.34 ಕೋಟಿ ರೂ.ಗಳನ್ನು ಹೆಚ್ಚುವರಿಯಾಗಿ ಪಾವತಿಸಬೇಕಾಗಿತ್ತು.

ಈ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ, ಮೋದಿ ಸರ್ಕಾರವು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರವನ್ನು (NHA) ಸ್ಥಾಪಿಸಿದೆ. PMJAY ಅನ್ನು ಜಾರಿಗೆ ತರಲು 33 ರಾಜ್ಯಗಳು/ ಕೇಂದ್ರಾಡಳಿತ ಪ್ರದೇಶಗಳೊಂದಿಗೆ ಒಪ್ಪಂದಗಳಿಗೆ ಸಹಿ ಹಾಕಲಾಗಿತ್ತು.ಇದೀಗ ಯೋಜನೆಯಡಿ ಹಗರಣ ನಡೆದಿರುವುದು ಸಿಎಜಿ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

ಇದನ್ನು ಓದಿ: ಜಾತಿ ನಿಂದನೆ ಪ್ರಕರಣ: ನಟ ಉಪೇಂದ್ರ ವಿರುದ್ಧದ 2ನೇ FIRಗೆ ಹೈಕೋರ್ಟ್ ಮಧ್ಯಂತರ ತಡೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...