Homeಮುಖಪುಟಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಬೃಹತ್ ಹಗರಣ: ಸಿಎಜಿ ವರದಿಯಲ್ಲಿ ಬಹಿರಂಗ

ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಬೃಹತ್ ಹಗರಣ: ಸಿಎಜಿ ವರದಿಯಲ್ಲಿ ಬಹಿರಂಗ

- Advertisement -
- Advertisement -

ಮೋದಿ ಸರ್ಕಾರವು ಪ್ರಾರಂಭಿಸಿದ ಅತ್ಯಂತ ಮಹತ್ವಾಕಾಂಕ್ಷೆಯ ಸಾಮಾಜಿಕ ಕಲ್ಯಾಣ ಯೋಜನೆಗಳಲ್ಲಿ ಒಂದಾದ, “ಆಯುಷ್ಮಾನ್ ಭಾರತ್-ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ” (AB-PMJAY)ಯಡಿ ಅವ್ಯವಹಾರ ನಡೆದಿದೆ ಎಂದು ಸಿಎಜಿ ವರದಿ ತಿಳಿಸಿದೆ.

ಭಾರತದ ಕಂಟ್ರೋಲರ್ –  ಆಡಿಟರ್ ಜನರಲ್ (ಸಿಎಜಿ)   ಆಯುಷ್ಮಾನ್ ಭಾರತ್  – ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯ ಬಹುದೊಡ್ಡ ಅವ್ಯವಹರಾದ ಬಗ್ಗೆ ಉಲ್ಲೇಖಿಸಿದ್ದು, 7.5 ಲಕ್ಷ ಫಲಾನುಭವಿಗಳು ಎಂದು ಹೇಳಲಾದ ವ್ಯಕ್ತಿಗಳು “ಒಂದೇ ಮೊಬೈಲ್” ಸಂಖ್ಯೆಯೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಬಹಿರಂಗಪಡಿಸಿದ್ದಾರೆ.

ಇದಲ್ಲದೆ ದಾಖಲೆ ಪ್ರಕಾರ ಈ ಮೊದಲೇ  ಮೃತಪಟ್ಟಿದ್ದಾರೆಂದು ಘೋಷಿಸಿಲಾಗಿದ್ದ 3,446 ರೋಗಿಗಳ ಚಿಕಿತ್ಸೆಗಾಗಿ 6.97 ಕೋಟಿ ರೂಪಾಯಿ ಪಾವತಿಸಲಾಗಿದೆ ಎಂದು ಭಾರತದ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ತಿಳಿಸಿದೆ.

ಈ ಯೋಜನೆಯಡಿ ಜನರಿಗೆ  ನಗದು ರಹಿತ ಸೇವೆ ನೀಡಬೇಕಾಗಿತ್ತು. ಆದರೆ  ಫಲಾನುಭವಿಗಳು ಚಿಕಿತ್ಸೆಗಾಗಿ ಹಣವನ್ನು ಪಾವತಿಸಿದ್ದಾರೆ ಎಂದು ಭಾರತದ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (CAG) ಅವರ ವರದಿ ಹೇಳಿದೆ.

ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಮಂಡಿಸಲಾದ PMJAY ಕುರಿತಾದ ಲೆಕ್ಕಪರಿಶೋಧನಾ ವರದಿಯಲ್ಲಿ, CAG, ರೋಗಿಯನ್ನು ಆಸ್ಪತ್ರೆಗೆ ದಾಖಲಿಸಿದ ನಂತರ, ಎಲ್ಲಾ ಪರೀಕ್ಷೆಗಳು, ಔಷಧಿಗಳ  ವೆಚ್ಚವನ್ನು ಆಸ್ಪತ್ರೆಯು ಭರಿಸಬೇಕಾಗುತ್ತದೆ. ಅದಕ್ಕೆ ತಗಲುವ ವೆಚ್ಚವನ್ನು ಪ್ಯಾಕೇಜ್ ಮೊತ್ತದಲ್ಲಿ ಸೇರಿಸಲಾಗಿದೆ.

2018 ರಲ್ಲಿ ಹೊರತಂದ, AB-PMJAY ಯೋಜನೆಯಡಿ ಕುಟುಂಬಕ್ಕೆ ವಾರ್ಷಿಕ   5 ಲಕ್ಷ ರೂಪಾಯಿಗಳವರೆಗೆ ಆರೋಗ್ಯ ರಕ್ಷಣೆಯನ್ನು ಒದಗಿಸುತ್ತದೆ. ಸರ್ಕಾರದ ಮಾಹಿತಿ ಪ್ರಕಾರ ಆರೋಗ್ಯ ರಕ್ಷಣೆ ಯೋಜನೆಯು 50 ಕೋಟಿ ಜನರನ್ನು ಒಳಗೊಂಡಿದೆ.

ಈ ಯೋಜನೆಯಡಿ  ಫಲಾನುಭವಿಗಳಿಗೆ ಸೇವೆಗಳಿಗೆ ನಗದು ರಹಿತ ಮತ್ತು ಕಾಗದ ರಹಿತ ಸೇವೆಯನ್ನು ಒದಗಿಸಬೇಕಿದೆ. ಇತ್ತೀಚೆಗೆ ಸಂಸತ್ತಿನಲ್ಲಿ ಮಂಡಿಸಲಾದ AB-PMJAY ಕುರಿತ CAGಯ ಆಡಿಟ್ ವರದಿಯು,   “SHA (ರಾಜ್ಯ ಆರೋಗ್ಯ ಸಂಸ್ಥೆ) ಮತ್ತು ಖಾಸಗಿ EHCPS (ಎಂಪಾನೆಲ್ಡ್ ಹೆಲ್ತ್ ಕೇರ್ ಪ್ರೊವೈಡರ್ಸ್) ಸಹಿ ಮಾಡಿದ ಒಪ್ಪಂದದ ಪ್ರಕಾರ PMJAY ಫಲಾನುಭವಿಗಳಿಗೆ ಸಂಪೂರ್ಣ ನಗದು ರಹಿತ ರೀತಿಯಲ್ಲಿ ಆರೋಗ್ಯ ಸೌಲಭ್ಯ ನೀಡಬೇಕಿದೆ.

ಹಿಮಾಚಲ ಪ್ರದೇಶದಲ್ಲಿ, ಐದು EHCP ಗಳ 50 ಫಲಾನುಭವಿಗಳು ತಮ್ಮ ವೈದ್ಯಕೀಯ ಪರೀಕ್ಷೆಗಳನ್ನು ಇತರ ಆಸ್ಪತ್ರೆ ಅಥವಾ ವೈದ್ಯಕೀಯ ಪರೀಕ್ಷಾ ಕೇಂದ್ರದಲ್ಲಿ ಮಾಡಿಸಿದ್ದರು. ಈ  ಪರೀಕ್ಷೆಗಳ ವೆಚ್ಚವನ್ನು ಫಲಾನುಭವಿಗಳೇ ಭರಿಸಿದ್ದರು.

ಜಮ್ಮು ಮತ್ತು ಕಾಶ್ಮೀರದಲ್ಲಿ, 459 ರೋಗಿಗಳು ತಮ್ಮ ಸ್ವಂತ ಜೇಬಿನಿಂದ ಆರಂಭದಲ್ಲಿ 43.27 ಲಕ್ಷ ರೂ.ಗಳನ್ನು ಪಾವತಿಸಿದರು, ಬಿಲ್‌ಗಳನ್ನು ಪರಿಶೀಲಿಸಿದ ನಂತರ ರೋಗಿಗಳಿಗೆ ಮರುಪಾವತಿ ಮಾಡಲಾಯಿತು.75 ರೋಗಿಗಳಿಗೆ ಇನ್ನೂ 6.70 ಲಕ್ಷ ರೂಪಾಯಿ ಮರುಪಾವತಿ ಮಾಡಬೇಕಾಗಿದೆ ಎಂದು ಆಡಿಟ್ ಸಮಯದಲ್ಲಿ ಸಿಎಜಿ ಕಂಡುಹಿಡಿದಿದೆ.

ಜಾರ್ಖಂಡ್‌ನಲ್ಲಿ ಲೈಫ್ ಕೇರ್ ಆಸ್ಪತ್ರೆಯ 36 ರೋಗಿಗಳು  ಔಷಧಿಗಳು, ಚುಚ್ಚುಮದ್ದು, ರಕ್ತ ಇತ್ಯಾದಿಗಳನ್ನು ಖರೀದಿಸಲು ವಿವಿಧ ಮೊತ್ತವನ್ನು ಪಾವತಿಸಿರುವುದನ್ನು ವಿಮಾ ಕಂಪನಿ ಗಮನಿಸಿದೆ. ಈ ವೆಚ್ಚದ ವಿವರಗಳು SHA ಬಳಿ ಲಭ್ಯವಿರಲಿಲ್ಲ. ವಿಮಾ ಕಂಪನಿಯ ಅವಲೋಕನದ ಆಧಾರದ ಮೇಲೆ, SHA (ಆಗಸ್ಟ್ 28, 2020 ರಂದು) ಐದು ದಿನಗಳಲ್ಲಿ ತನ್ನ ವಿವರಣೆಯನ್ನು ಸಲ್ಲಿಸುವಂತೆ ಆಸ್ಪತ್ರೆಯನ್ನು ಕೇಳಿದೆ.

ಮೇಘಾಲಯದಲ್ಲಿ, ಫೆಬ್ರವರಿ 2019 ರಿಂದ ಮಾರ್ಚ್ 2021 ರವರೆಗೆ ಐದು ಖಾಸಗಿ EHCP ಗಳಲ್ಲಿ ಚಿಕಿತ್ಸೆ ಪಡೆದ 19,459 ಫಲಾನುಭವಿಗಳಲ್ಲಿ, 13,418 (ಶೇ. 69) ಜನರು ಡಿಸ್ಚಾರ್ಜ್ ಸಮಯದಲ್ಲಿ 12.34 ಕೋಟಿ ರೂ.ಗಳನ್ನು ಹೆಚ್ಚುವರಿಯಾಗಿ ಪಾವತಿಸಬೇಕಾಗಿತ್ತು.

ಈ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ, ಮೋದಿ ಸರ್ಕಾರವು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರವನ್ನು (NHA) ಸ್ಥಾಪಿಸಿದೆ. PMJAY ಅನ್ನು ಜಾರಿಗೆ ತರಲು 33 ರಾಜ್ಯಗಳು/ ಕೇಂದ್ರಾಡಳಿತ ಪ್ರದೇಶಗಳೊಂದಿಗೆ ಒಪ್ಪಂದಗಳಿಗೆ ಸಹಿ ಹಾಕಲಾಗಿತ್ತು.ಇದೀಗ ಯೋಜನೆಯಡಿ ಹಗರಣ ನಡೆದಿರುವುದು ಸಿಎಜಿ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

ಇದನ್ನು ಓದಿ: ಜಾತಿ ನಿಂದನೆ ಪ್ರಕರಣ: ನಟ ಉಪೇಂದ್ರ ವಿರುದ್ಧದ 2ನೇ FIRಗೆ ಹೈಕೋರ್ಟ್ ಮಧ್ಯಂತರ ತಡೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...