Homeಮುಖಪುಟಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಬೃಹತ್ ಹಗರಣ: ಸಿಎಜಿ ವರದಿಯಲ್ಲಿ ಬಹಿರಂಗ

ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಬೃಹತ್ ಹಗರಣ: ಸಿಎಜಿ ವರದಿಯಲ್ಲಿ ಬಹಿರಂಗ

- Advertisement -
- Advertisement -

ಮೋದಿ ಸರ್ಕಾರವು ಪ್ರಾರಂಭಿಸಿದ ಅತ್ಯಂತ ಮಹತ್ವಾಕಾಂಕ್ಷೆಯ ಸಾಮಾಜಿಕ ಕಲ್ಯಾಣ ಯೋಜನೆಗಳಲ್ಲಿ ಒಂದಾದ, “ಆಯುಷ್ಮಾನ್ ಭಾರತ್-ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ” (AB-PMJAY)ಯಡಿ ಅವ್ಯವಹಾರ ನಡೆದಿದೆ ಎಂದು ಸಿಎಜಿ ವರದಿ ತಿಳಿಸಿದೆ.

ಭಾರತದ ಕಂಟ್ರೋಲರ್ –  ಆಡಿಟರ್ ಜನರಲ್ (ಸಿಎಜಿ)   ಆಯುಷ್ಮಾನ್ ಭಾರತ್  – ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯ ಬಹುದೊಡ್ಡ ಅವ್ಯವಹರಾದ ಬಗ್ಗೆ ಉಲ್ಲೇಖಿಸಿದ್ದು, 7.5 ಲಕ್ಷ ಫಲಾನುಭವಿಗಳು ಎಂದು ಹೇಳಲಾದ ವ್ಯಕ್ತಿಗಳು “ಒಂದೇ ಮೊಬೈಲ್” ಸಂಖ್ಯೆಯೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಬಹಿರಂಗಪಡಿಸಿದ್ದಾರೆ.

ಇದಲ್ಲದೆ ದಾಖಲೆ ಪ್ರಕಾರ ಈ ಮೊದಲೇ  ಮೃತಪಟ್ಟಿದ್ದಾರೆಂದು ಘೋಷಿಸಿಲಾಗಿದ್ದ 3,446 ರೋಗಿಗಳ ಚಿಕಿತ್ಸೆಗಾಗಿ 6.97 ಕೋಟಿ ರೂಪಾಯಿ ಪಾವತಿಸಲಾಗಿದೆ ಎಂದು ಭಾರತದ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ತಿಳಿಸಿದೆ.

ಈ ಯೋಜನೆಯಡಿ ಜನರಿಗೆ  ನಗದು ರಹಿತ ಸೇವೆ ನೀಡಬೇಕಾಗಿತ್ತು. ಆದರೆ  ಫಲಾನುಭವಿಗಳು ಚಿಕಿತ್ಸೆಗಾಗಿ ಹಣವನ್ನು ಪಾವತಿಸಿದ್ದಾರೆ ಎಂದು ಭಾರತದ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (CAG) ಅವರ ವರದಿ ಹೇಳಿದೆ.

ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಮಂಡಿಸಲಾದ PMJAY ಕುರಿತಾದ ಲೆಕ್ಕಪರಿಶೋಧನಾ ವರದಿಯಲ್ಲಿ, CAG, ರೋಗಿಯನ್ನು ಆಸ್ಪತ್ರೆಗೆ ದಾಖಲಿಸಿದ ನಂತರ, ಎಲ್ಲಾ ಪರೀಕ್ಷೆಗಳು, ಔಷಧಿಗಳ  ವೆಚ್ಚವನ್ನು ಆಸ್ಪತ್ರೆಯು ಭರಿಸಬೇಕಾಗುತ್ತದೆ. ಅದಕ್ಕೆ ತಗಲುವ ವೆಚ್ಚವನ್ನು ಪ್ಯಾಕೇಜ್ ಮೊತ್ತದಲ್ಲಿ ಸೇರಿಸಲಾಗಿದೆ.

2018 ರಲ್ಲಿ ಹೊರತಂದ, AB-PMJAY ಯೋಜನೆಯಡಿ ಕುಟುಂಬಕ್ಕೆ ವಾರ್ಷಿಕ   5 ಲಕ್ಷ ರೂಪಾಯಿಗಳವರೆಗೆ ಆರೋಗ್ಯ ರಕ್ಷಣೆಯನ್ನು ಒದಗಿಸುತ್ತದೆ. ಸರ್ಕಾರದ ಮಾಹಿತಿ ಪ್ರಕಾರ ಆರೋಗ್ಯ ರಕ್ಷಣೆ ಯೋಜನೆಯು 50 ಕೋಟಿ ಜನರನ್ನು ಒಳಗೊಂಡಿದೆ.

ಈ ಯೋಜನೆಯಡಿ  ಫಲಾನುಭವಿಗಳಿಗೆ ಸೇವೆಗಳಿಗೆ ನಗದು ರಹಿತ ಮತ್ತು ಕಾಗದ ರಹಿತ ಸೇವೆಯನ್ನು ಒದಗಿಸಬೇಕಿದೆ. ಇತ್ತೀಚೆಗೆ ಸಂಸತ್ತಿನಲ್ಲಿ ಮಂಡಿಸಲಾದ AB-PMJAY ಕುರಿತ CAGಯ ಆಡಿಟ್ ವರದಿಯು,   “SHA (ರಾಜ್ಯ ಆರೋಗ್ಯ ಸಂಸ್ಥೆ) ಮತ್ತು ಖಾಸಗಿ EHCPS (ಎಂಪಾನೆಲ್ಡ್ ಹೆಲ್ತ್ ಕೇರ್ ಪ್ರೊವೈಡರ್ಸ್) ಸಹಿ ಮಾಡಿದ ಒಪ್ಪಂದದ ಪ್ರಕಾರ PMJAY ಫಲಾನುಭವಿಗಳಿಗೆ ಸಂಪೂರ್ಣ ನಗದು ರಹಿತ ರೀತಿಯಲ್ಲಿ ಆರೋಗ್ಯ ಸೌಲಭ್ಯ ನೀಡಬೇಕಿದೆ.

ಹಿಮಾಚಲ ಪ್ರದೇಶದಲ್ಲಿ, ಐದು EHCP ಗಳ 50 ಫಲಾನುಭವಿಗಳು ತಮ್ಮ ವೈದ್ಯಕೀಯ ಪರೀಕ್ಷೆಗಳನ್ನು ಇತರ ಆಸ್ಪತ್ರೆ ಅಥವಾ ವೈದ್ಯಕೀಯ ಪರೀಕ್ಷಾ ಕೇಂದ್ರದಲ್ಲಿ ಮಾಡಿಸಿದ್ದರು. ಈ  ಪರೀಕ್ಷೆಗಳ ವೆಚ್ಚವನ್ನು ಫಲಾನುಭವಿಗಳೇ ಭರಿಸಿದ್ದರು.

ಜಮ್ಮು ಮತ್ತು ಕಾಶ್ಮೀರದಲ್ಲಿ, 459 ರೋಗಿಗಳು ತಮ್ಮ ಸ್ವಂತ ಜೇಬಿನಿಂದ ಆರಂಭದಲ್ಲಿ 43.27 ಲಕ್ಷ ರೂ.ಗಳನ್ನು ಪಾವತಿಸಿದರು, ಬಿಲ್‌ಗಳನ್ನು ಪರಿಶೀಲಿಸಿದ ನಂತರ ರೋಗಿಗಳಿಗೆ ಮರುಪಾವತಿ ಮಾಡಲಾಯಿತು.75 ರೋಗಿಗಳಿಗೆ ಇನ್ನೂ 6.70 ಲಕ್ಷ ರೂಪಾಯಿ ಮರುಪಾವತಿ ಮಾಡಬೇಕಾಗಿದೆ ಎಂದು ಆಡಿಟ್ ಸಮಯದಲ್ಲಿ ಸಿಎಜಿ ಕಂಡುಹಿಡಿದಿದೆ.

ಜಾರ್ಖಂಡ್‌ನಲ್ಲಿ ಲೈಫ್ ಕೇರ್ ಆಸ್ಪತ್ರೆಯ 36 ರೋಗಿಗಳು  ಔಷಧಿಗಳು, ಚುಚ್ಚುಮದ್ದು, ರಕ್ತ ಇತ್ಯಾದಿಗಳನ್ನು ಖರೀದಿಸಲು ವಿವಿಧ ಮೊತ್ತವನ್ನು ಪಾವತಿಸಿರುವುದನ್ನು ವಿಮಾ ಕಂಪನಿ ಗಮನಿಸಿದೆ. ಈ ವೆಚ್ಚದ ವಿವರಗಳು SHA ಬಳಿ ಲಭ್ಯವಿರಲಿಲ್ಲ. ವಿಮಾ ಕಂಪನಿಯ ಅವಲೋಕನದ ಆಧಾರದ ಮೇಲೆ, SHA (ಆಗಸ್ಟ್ 28, 2020 ರಂದು) ಐದು ದಿನಗಳಲ್ಲಿ ತನ್ನ ವಿವರಣೆಯನ್ನು ಸಲ್ಲಿಸುವಂತೆ ಆಸ್ಪತ್ರೆಯನ್ನು ಕೇಳಿದೆ.

ಮೇಘಾಲಯದಲ್ಲಿ, ಫೆಬ್ರವರಿ 2019 ರಿಂದ ಮಾರ್ಚ್ 2021 ರವರೆಗೆ ಐದು ಖಾಸಗಿ EHCP ಗಳಲ್ಲಿ ಚಿಕಿತ್ಸೆ ಪಡೆದ 19,459 ಫಲಾನುಭವಿಗಳಲ್ಲಿ, 13,418 (ಶೇ. 69) ಜನರು ಡಿಸ್ಚಾರ್ಜ್ ಸಮಯದಲ್ಲಿ 12.34 ಕೋಟಿ ರೂ.ಗಳನ್ನು ಹೆಚ್ಚುವರಿಯಾಗಿ ಪಾವತಿಸಬೇಕಾಗಿತ್ತು.

ಈ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ, ಮೋದಿ ಸರ್ಕಾರವು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರವನ್ನು (NHA) ಸ್ಥಾಪಿಸಿದೆ. PMJAY ಅನ್ನು ಜಾರಿಗೆ ತರಲು 33 ರಾಜ್ಯಗಳು/ ಕೇಂದ್ರಾಡಳಿತ ಪ್ರದೇಶಗಳೊಂದಿಗೆ ಒಪ್ಪಂದಗಳಿಗೆ ಸಹಿ ಹಾಕಲಾಗಿತ್ತು.ಇದೀಗ ಯೋಜನೆಯಡಿ ಹಗರಣ ನಡೆದಿರುವುದು ಸಿಎಜಿ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

ಇದನ್ನು ಓದಿ: ಜಾತಿ ನಿಂದನೆ ಪ್ರಕರಣ: ನಟ ಉಪೇಂದ್ರ ವಿರುದ್ಧದ 2ನೇ FIRಗೆ ಹೈಕೋರ್ಟ್ ಮಧ್ಯಂತರ ತಡೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...