Homeಮುಖಪುಟಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಬೃಹತ್ ಹಗರಣ: ಸಿಎಜಿ ವರದಿಯಲ್ಲಿ ಬಹಿರಂಗ

ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಬೃಹತ್ ಹಗರಣ: ಸಿಎಜಿ ವರದಿಯಲ್ಲಿ ಬಹಿರಂಗ

- Advertisement -
- Advertisement -

ಮೋದಿ ಸರ್ಕಾರವು ಪ್ರಾರಂಭಿಸಿದ ಅತ್ಯಂತ ಮಹತ್ವಾಕಾಂಕ್ಷೆಯ ಸಾಮಾಜಿಕ ಕಲ್ಯಾಣ ಯೋಜನೆಗಳಲ್ಲಿ ಒಂದಾದ, “ಆಯುಷ್ಮಾನ್ ಭಾರತ್-ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ” (AB-PMJAY)ಯಡಿ ಅವ್ಯವಹಾರ ನಡೆದಿದೆ ಎಂದು ಸಿಎಜಿ ವರದಿ ತಿಳಿಸಿದೆ.

ಭಾರತದ ಕಂಟ್ರೋಲರ್ –  ಆಡಿಟರ್ ಜನರಲ್ (ಸಿಎಜಿ)   ಆಯುಷ್ಮಾನ್ ಭಾರತ್  – ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯ ಬಹುದೊಡ್ಡ ಅವ್ಯವಹರಾದ ಬಗ್ಗೆ ಉಲ್ಲೇಖಿಸಿದ್ದು, 7.5 ಲಕ್ಷ ಫಲಾನುಭವಿಗಳು ಎಂದು ಹೇಳಲಾದ ವ್ಯಕ್ತಿಗಳು “ಒಂದೇ ಮೊಬೈಲ್” ಸಂಖ್ಯೆಯೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಬಹಿರಂಗಪಡಿಸಿದ್ದಾರೆ.

ಇದಲ್ಲದೆ ದಾಖಲೆ ಪ್ರಕಾರ ಈ ಮೊದಲೇ  ಮೃತಪಟ್ಟಿದ್ದಾರೆಂದು ಘೋಷಿಸಿಲಾಗಿದ್ದ 3,446 ರೋಗಿಗಳ ಚಿಕಿತ್ಸೆಗಾಗಿ 6.97 ಕೋಟಿ ರೂಪಾಯಿ ಪಾವತಿಸಲಾಗಿದೆ ಎಂದು ಭಾರತದ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ತಿಳಿಸಿದೆ.

ಈ ಯೋಜನೆಯಡಿ ಜನರಿಗೆ  ನಗದು ರಹಿತ ಸೇವೆ ನೀಡಬೇಕಾಗಿತ್ತು. ಆದರೆ  ಫಲಾನುಭವಿಗಳು ಚಿಕಿತ್ಸೆಗಾಗಿ ಹಣವನ್ನು ಪಾವತಿಸಿದ್ದಾರೆ ಎಂದು ಭಾರತದ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (CAG) ಅವರ ವರದಿ ಹೇಳಿದೆ.

ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಮಂಡಿಸಲಾದ PMJAY ಕುರಿತಾದ ಲೆಕ್ಕಪರಿಶೋಧನಾ ವರದಿಯಲ್ಲಿ, CAG, ರೋಗಿಯನ್ನು ಆಸ್ಪತ್ರೆಗೆ ದಾಖಲಿಸಿದ ನಂತರ, ಎಲ್ಲಾ ಪರೀಕ್ಷೆಗಳು, ಔಷಧಿಗಳ  ವೆಚ್ಚವನ್ನು ಆಸ್ಪತ್ರೆಯು ಭರಿಸಬೇಕಾಗುತ್ತದೆ. ಅದಕ್ಕೆ ತಗಲುವ ವೆಚ್ಚವನ್ನು ಪ್ಯಾಕೇಜ್ ಮೊತ್ತದಲ್ಲಿ ಸೇರಿಸಲಾಗಿದೆ.

2018 ರಲ್ಲಿ ಹೊರತಂದ, AB-PMJAY ಯೋಜನೆಯಡಿ ಕುಟುಂಬಕ್ಕೆ ವಾರ್ಷಿಕ   5 ಲಕ್ಷ ರೂಪಾಯಿಗಳವರೆಗೆ ಆರೋಗ್ಯ ರಕ್ಷಣೆಯನ್ನು ಒದಗಿಸುತ್ತದೆ. ಸರ್ಕಾರದ ಮಾಹಿತಿ ಪ್ರಕಾರ ಆರೋಗ್ಯ ರಕ್ಷಣೆ ಯೋಜನೆಯು 50 ಕೋಟಿ ಜನರನ್ನು ಒಳಗೊಂಡಿದೆ.

ಈ ಯೋಜನೆಯಡಿ  ಫಲಾನುಭವಿಗಳಿಗೆ ಸೇವೆಗಳಿಗೆ ನಗದು ರಹಿತ ಮತ್ತು ಕಾಗದ ರಹಿತ ಸೇವೆಯನ್ನು ಒದಗಿಸಬೇಕಿದೆ. ಇತ್ತೀಚೆಗೆ ಸಂಸತ್ತಿನಲ್ಲಿ ಮಂಡಿಸಲಾದ AB-PMJAY ಕುರಿತ CAGಯ ಆಡಿಟ್ ವರದಿಯು,   “SHA (ರಾಜ್ಯ ಆರೋಗ್ಯ ಸಂಸ್ಥೆ) ಮತ್ತು ಖಾಸಗಿ EHCPS (ಎಂಪಾನೆಲ್ಡ್ ಹೆಲ್ತ್ ಕೇರ್ ಪ್ರೊವೈಡರ್ಸ್) ಸಹಿ ಮಾಡಿದ ಒಪ್ಪಂದದ ಪ್ರಕಾರ PMJAY ಫಲಾನುಭವಿಗಳಿಗೆ ಸಂಪೂರ್ಣ ನಗದು ರಹಿತ ರೀತಿಯಲ್ಲಿ ಆರೋಗ್ಯ ಸೌಲಭ್ಯ ನೀಡಬೇಕಿದೆ.

ಹಿಮಾಚಲ ಪ್ರದೇಶದಲ್ಲಿ, ಐದು EHCP ಗಳ 50 ಫಲಾನುಭವಿಗಳು ತಮ್ಮ ವೈದ್ಯಕೀಯ ಪರೀಕ್ಷೆಗಳನ್ನು ಇತರ ಆಸ್ಪತ್ರೆ ಅಥವಾ ವೈದ್ಯಕೀಯ ಪರೀಕ್ಷಾ ಕೇಂದ್ರದಲ್ಲಿ ಮಾಡಿಸಿದ್ದರು. ಈ  ಪರೀಕ್ಷೆಗಳ ವೆಚ್ಚವನ್ನು ಫಲಾನುಭವಿಗಳೇ ಭರಿಸಿದ್ದರು.

ಜಮ್ಮು ಮತ್ತು ಕಾಶ್ಮೀರದಲ್ಲಿ, 459 ರೋಗಿಗಳು ತಮ್ಮ ಸ್ವಂತ ಜೇಬಿನಿಂದ ಆರಂಭದಲ್ಲಿ 43.27 ಲಕ್ಷ ರೂ.ಗಳನ್ನು ಪಾವತಿಸಿದರು, ಬಿಲ್‌ಗಳನ್ನು ಪರಿಶೀಲಿಸಿದ ನಂತರ ರೋಗಿಗಳಿಗೆ ಮರುಪಾವತಿ ಮಾಡಲಾಯಿತು.75 ರೋಗಿಗಳಿಗೆ ಇನ್ನೂ 6.70 ಲಕ್ಷ ರೂಪಾಯಿ ಮರುಪಾವತಿ ಮಾಡಬೇಕಾಗಿದೆ ಎಂದು ಆಡಿಟ್ ಸಮಯದಲ್ಲಿ ಸಿಎಜಿ ಕಂಡುಹಿಡಿದಿದೆ.

ಜಾರ್ಖಂಡ್‌ನಲ್ಲಿ ಲೈಫ್ ಕೇರ್ ಆಸ್ಪತ್ರೆಯ 36 ರೋಗಿಗಳು  ಔಷಧಿಗಳು, ಚುಚ್ಚುಮದ್ದು, ರಕ್ತ ಇತ್ಯಾದಿಗಳನ್ನು ಖರೀದಿಸಲು ವಿವಿಧ ಮೊತ್ತವನ್ನು ಪಾವತಿಸಿರುವುದನ್ನು ವಿಮಾ ಕಂಪನಿ ಗಮನಿಸಿದೆ. ಈ ವೆಚ್ಚದ ವಿವರಗಳು SHA ಬಳಿ ಲಭ್ಯವಿರಲಿಲ್ಲ. ವಿಮಾ ಕಂಪನಿಯ ಅವಲೋಕನದ ಆಧಾರದ ಮೇಲೆ, SHA (ಆಗಸ್ಟ್ 28, 2020 ರಂದು) ಐದು ದಿನಗಳಲ್ಲಿ ತನ್ನ ವಿವರಣೆಯನ್ನು ಸಲ್ಲಿಸುವಂತೆ ಆಸ್ಪತ್ರೆಯನ್ನು ಕೇಳಿದೆ.

ಮೇಘಾಲಯದಲ್ಲಿ, ಫೆಬ್ರವರಿ 2019 ರಿಂದ ಮಾರ್ಚ್ 2021 ರವರೆಗೆ ಐದು ಖಾಸಗಿ EHCP ಗಳಲ್ಲಿ ಚಿಕಿತ್ಸೆ ಪಡೆದ 19,459 ಫಲಾನುಭವಿಗಳಲ್ಲಿ, 13,418 (ಶೇ. 69) ಜನರು ಡಿಸ್ಚಾರ್ಜ್ ಸಮಯದಲ್ಲಿ 12.34 ಕೋಟಿ ರೂ.ಗಳನ್ನು ಹೆಚ್ಚುವರಿಯಾಗಿ ಪಾವತಿಸಬೇಕಾಗಿತ್ತು.

ಈ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ, ಮೋದಿ ಸರ್ಕಾರವು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರವನ್ನು (NHA) ಸ್ಥಾಪಿಸಿದೆ. PMJAY ಅನ್ನು ಜಾರಿಗೆ ತರಲು 33 ರಾಜ್ಯಗಳು/ ಕೇಂದ್ರಾಡಳಿತ ಪ್ರದೇಶಗಳೊಂದಿಗೆ ಒಪ್ಪಂದಗಳಿಗೆ ಸಹಿ ಹಾಕಲಾಗಿತ್ತು.ಇದೀಗ ಯೋಜನೆಯಡಿ ಹಗರಣ ನಡೆದಿರುವುದು ಸಿಎಜಿ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

ಇದನ್ನು ಓದಿ: ಜಾತಿ ನಿಂದನೆ ಪ್ರಕರಣ: ನಟ ಉಪೇಂದ್ರ ವಿರುದ್ಧದ 2ನೇ FIRಗೆ ಹೈಕೋರ್ಟ್ ಮಧ್ಯಂತರ ತಡೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...