Homeಮುಖಪುಟಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಬೃಹತ್ ಹಗರಣ: ಸಿಎಜಿ ವರದಿಯಲ್ಲಿ ಬಹಿರಂಗ

ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಬೃಹತ್ ಹಗರಣ: ಸಿಎಜಿ ವರದಿಯಲ್ಲಿ ಬಹಿರಂಗ

- Advertisement -
- Advertisement -

ಮೋದಿ ಸರ್ಕಾರವು ಪ್ರಾರಂಭಿಸಿದ ಅತ್ಯಂತ ಮಹತ್ವಾಕಾಂಕ್ಷೆಯ ಸಾಮಾಜಿಕ ಕಲ್ಯಾಣ ಯೋಜನೆಗಳಲ್ಲಿ ಒಂದಾದ, “ಆಯುಷ್ಮಾನ್ ಭಾರತ್-ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ” (AB-PMJAY)ಯಡಿ ಅವ್ಯವಹಾರ ನಡೆದಿದೆ ಎಂದು ಸಿಎಜಿ ವರದಿ ತಿಳಿಸಿದೆ.

ಭಾರತದ ಕಂಟ್ರೋಲರ್ –  ಆಡಿಟರ್ ಜನರಲ್ (ಸಿಎಜಿ)   ಆಯುಷ್ಮಾನ್ ಭಾರತ್  – ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯ ಬಹುದೊಡ್ಡ ಅವ್ಯವಹರಾದ ಬಗ್ಗೆ ಉಲ್ಲೇಖಿಸಿದ್ದು, 7.5 ಲಕ್ಷ ಫಲಾನುಭವಿಗಳು ಎಂದು ಹೇಳಲಾದ ವ್ಯಕ್ತಿಗಳು “ಒಂದೇ ಮೊಬೈಲ್” ಸಂಖ್ಯೆಯೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಬಹಿರಂಗಪಡಿಸಿದ್ದಾರೆ.

ಇದಲ್ಲದೆ ದಾಖಲೆ ಪ್ರಕಾರ ಈ ಮೊದಲೇ  ಮೃತಪಟ್ಟಿದ್ದಾರೆಂದು ಘೋಷಿಸಿಲಾಗಿದ್ದ 3,446 ರೋಗಿಗಳ ಚಿಕಿತ್ಸೆಗಾಗಿ 6.97 ಕೋಟಿ ರೂಪಾಯಿ ಪಾವತಿಸಲಾಗಿದೆ ಎಂದು ಭಾರತದ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ತಿಳಿಸಿದೆ.

ಈ ಯೋಜನೆಯಡಿ ಜನರಿಗೆ  ನಗದು ರಹಿತ ಸೇವೆ ನೀಡಬೇಕಾಗಿತ್ತು. ಆದರೆ  ಫಲಾನುಭವಿಗಳು ಚಿಕಿತ್ಸೆಗಾಗಿ ಹಣವನ್ನು ಪಾವತಿಸಿದ್ದಾರೆ ಎಂದು ಭಾರತದ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (CAG) ಅವರ ವರದಿ ಹೇಳಿದೆ.

ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಮಂಡಿಸಲಾದ PMJAY ಕುರಿತಾದ ಲೆಕ್ಕಪರಿಶೋಧನಾ ವರದಿಯಲ್ಲಿ, CAG, ರೋಗಿಯನ್ನು ಆಸ್ಪತ್ರೆಗೆ ದಾಖಲಿಸಿದ ನಂತರ, ಎಲ್ಲಾ ಪರೀಕ್ಷೆಗಳು, ಔಷಧಿಗಳ  ವೆಚ್ಚವನ್ನು ಆಸ್ಪತ್ರೆಯು ಭರಿಸಬೇಕಾಗುತ್ತದೆ. ಅದಕ್ಕೆ ತಗಲುವ ವೆಚ್ಚವನ್ನು ಪ್ಯಾಕೇಜ್ ಮೊತ್ತದಲ್ಲಿ ಸೇರಿಸಲಾಗಿದೆ.

2018 ರಲ್ಲಿ ಹೊರತಂದ, AB-PMJAY ಯೋಜನೆಯಡಿ ಕುಟುಂಬಕ್ಕೆ ವಾರ್ಷಿಕ   5 ಲಕ್ಷ ರೂಪಾಯಿಗಳವರೆಗೆ ಆರೋಗ್ಯ ರಕ್ಷಣೆಯನ್ನು ಒದಗಿಸುತ್ತದೆ. ಸರ್ಕಾರದ ಮಾಹಿತಿ ಪ್ರಕಾರ ಆರೋಗ್ಯ ರಕ್ಷಣೆ ಯೋಜನೆಯು 50 ಕೋಟಿ ಜನರನ್ನು ಒಳಗೊಂಡಿದೆ.

ಈ ಯೋಜನೆಯಡಿ  ಫಲಾನುಭವಿಗಳಿಗೆ ಸೇವೆಗಳಿಗೆ ನಗದು ರಹಿತ ಮತ್ತು ಕಾಗದ ರಹಿತ ಸೇವೆಯನ್ನು ಒದಗಿಸಬೇಕಿದೆ. ಇತ್ತೀಚೆಗೆ ಸಂಸತ್ತಿನಲ್ಲಿ ಮಂಡಿಸಲಾದ AB-PMJAY ಕುರಿತ CAGಯ ಆಡಿಟ್ ವರದಿಯು,   “SHA (ರಾಜ್ಯ ಆರೋಗ್ಯ ಸಂಸ್ಥೆ) ಮತ್ತು ಖಾಸಗಿ EHCPS (ಎಂಪಾನೆಲ್ಡ್ ಹೆಲ್ತ್ ಕೇರ್ ಪ್ರೊವೈಡರ್ಸ್) ಸಹಿ ಮಾಡಿದ ಒಪ್ಪಂದದ ಪ್ರಕಾರ PMJAY ಫಲಾನುಭವಿಗಳಿಗೆ ಸಂಪೂರ್ಣ ನಗದು ರಹಿತ ರೀತಿಯಲ್ಲಿ ಆರೋಗ್ಯ ಸೌಲಭ್ಯ ನೀಡಬೇಕಿದೆ.

ಹಿಮಾಚಲ ಪ್ರದೇಶದಲ್ಲಿ, ಐದು EHCP ಗಳ 50 ಫಲಾನುಭವಿಗಳು ತಮ್ಮ ವೈದ್ಯಕೀಯ ಪರೀಕ್ಷೆಗಳನ್ನು ಇತರ ಆಸ್ಪತ್ರೆ ಅಥವಾ ವೈದ್ಯಕೀಯ ಪರೀಕ್ಷಾ ಕೇಂದ್ರದಲ್ಲಿ ಮಾಡಿಸಿದ್ದರು. ಈ  ಪರೀಕ್ಷೆಗಳ ವೆಚ್ಚವನ್ನು ಫಲಾನುಭವಿಗಳೇ ಭರಿಸಿದ್ದರು.

ಜಮ್ಮು ಮತ್ತು ಕಾಶ್ಮೀರದಲ್ಲಿ, 459 ರೋಗಿಗಳು ತಮ್ಮ ಸ್ವಂತ ಜೇಬಿನಿಂದ ಆರಂಭದಲ್ಲಿ 43.27 ಲಕ್ಷ ರೂ.ಗಳನ್ನು ಪಾವತಿಸಿದರು, ಬಿಲ್‌ಗಳನ್ನು ಪರಿಶೀಲಿಸಿದ ನಂತರ ರೋಗಿಗಳಿಗೆ ಮರುಪಾವತಿ ಮಾಡಲಾಯಿತು.75 ರೋಗಿಗಳಿಗೆ ಇನ್ನೂ 6.70 ಲಕ್ಷ ರೂಪಾಯಿ ಮರುಪಾವತಿ ಮಾಡಬೇಕಾಗಿದೆ ಎಂದು ಆಡಿಟ್ ಸಮಯದಲ್ಲಿ ಸಿಎಜಿ ಕಂಡುಹಿಡಿದಿದೆ.

ಜಾರ್ಖಂಡ್‌ನಲ್ಲಿ ಲೈಫ್ ಕೇರ್ ಆಸ್ಪತ್ರೆಯ 36 ರೋಗಿಗಳು  ಔಷಧಿಗಳು, ಚುಚ್ಚುಮದ್ದು, ರಕ್ತ ಇತ್ಯಾದಿಗಳನ್ನು ಖರೀದಿಸಲು ವಿವಿಧ ಮೊತ್ತವನ್ನು ಪಾವತಿಸಿರುವುದನ್ನು ವಿಮಾ ಕಂಪನಿ ಗಮನಿಸಿದೆ. ಈ ವೆಚ್ಚದ ವಿವರಗಳು SHA ಬಳಿ ಲಭ್ಯವಿರಲಿಲ್ಲ. ವಿಮಾ ಕಂಪನಿಯ ಅವಲೋಕನದ ಆಧಾರದ ಮೇಲೆ, SHA (ಆಗಸ್ಟ್ 28, 2020 ರಂದು) ಐದು ದಿನಗಳಲ್ಲಿ ತನ್ನ ವಿವರಣೆಯನ್ನು ಸಲ್ಲಿಸುವಂತೆ ಆಸ್ಪತ್ರೆಯನ್ನು ಕೇಳಿದೆ.

ಮೇಘಾಲಯದಲ್ಲಿ, ಫೆಬ್ರವರಿ 2019 ರಿಂದ ಮಾರ್ಚ್ 2021 ರವರೆಗೆ ಐದು ಖಾಸಗಿ EHCP ಗಳಲ್ಲಿ ಚಿಕಿತ್ಸೆ ಪಡೆದ 19,459 ಫಲಾನುಭವಿಗಳಲ್ಲಿ, 13,418 (ಶೇ. 69) ಜನರು ಡಿಸ್ಚಾರ್ಜ್ ಸಮಯದಲ್ಲಿ 12.34 ಕೋಟಿ ರೂ.ಗಳನ್ನು ಹೆಚ್ಚುವರಿಯಾಗಿ ಪಾವತಿಸಬೇಕಾಗಿತ್ತು.

ಈ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ, ಮೋದಿ ಸರ್ಕಾರವು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರವನ್ನು (NHA) ಸ್ಥಾಪಿಸಿದೆ. PMJAY ಅನ್ನು ಜಾರಿಗೆ ತರಲು 33 ರಾಜ್ಯಗಳು/ ಕೇಂದ್ರಾಡಳಿತ ಪ್ರದೇಶಗಳೊಂದಿಗೆ ಒಪ್ಪಂದಗಳಿಗೆ ಸಹಿ ಹಾಕಲಾಗಿತ್ತು.ಇದೀಗ ಯೋಜನೆಯಡಿ ಹಗರಣ ನಡೆದಿರುವುದು ಸಿಎಜಿ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

ಇದನ್ನು ಓದಿ: ಜಾತಿ ನಿಂದನೆ ಪ್ರಕರಣ: ನಟ ಉಪೇಂದ್ರ ವಿರುದ್ಧದ 2ನೇ FIRಗೆ ಹೈಕೋರ್ಟ್ ಮಧ್ಯಂತರ ತಡೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...