Homeಮುಖಪುಟಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಬೃಹತ್ ಹಗರಣ: ಸಿಎಜಿ ವರದಿಯಲ್ಲಿ ಬಹಿರಂಗ

ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಬೃಹತ್ ಹಗರಣ: ಸಿಎಜಿ ವರದಿಯಲ್ಲಿ ಬಹಿರಂಗ

- Advertisement -
- Advertisement -

ಮೋದಿ ಸರ್ಕಾರವು ಪ್ರಾರಂಭಿಸಿದ ಅತ್ಯಂತ ಮಹತ್ವಾಕಾಂಕ್ಷೆಯ ಸಾಮಾಜಿಕ ಕಲ್ಯಾಣ ಯೋಜನೆಗಳಲ್ಲಿ ಒಂದಾದ, “ಆಯುಷ್ಮಾನ್ ಭಾರತ್-ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ” (AB-PMJAY)ಯಡಿ ಅವ್ಯವಹಾರ ನಡೆದಿದೆ ಎಂದು ಸಿಎಜಿ ವರದಿ ತಿಳಿಸಿದೆ.

ಭಾರತದ ಕಂಟ್ರೋಲರ್ –  ಆಡಿಟರ್ ಜನರಲ್ (ಸಿಎಜಿ)   ಆಯುಷ್ಮಾನ್ ಭಾರತ್  – ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯ ಬಹುದೊಡ್ಡ ಅವ್ಯವಹರಾದ ಬಗ್ಗೆ ಉಲ್ಲೇಖಿಸಿದ್ದು, 7.5 ಲಕ್ಷ ಫಲಾನುಭವಿಗಳು ಎಂದು ಹೇಳಲಾದ ವ್ಯಕ್ತಿಗಳು “ಒಂದೇ ಮೊಬೈಲ್” ಸಂಖ್ಯೆಯೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಬಹಿರಂಗಪಡಿಸಿದ್ದಾರೆ.

ಇದಲ್ಲದೆ ದಾಖಲೆ ಪ್ರಕಾರ ಈ ಮೊದಲೇ  ಮೃತಪಟ್ಟಿದ್ದಾರೆಂದು ಘೋಷಿಸಿಲಾಗಿದ್ದ 3,446 ರೋಗಿಗಳ ಚಿಕಿತ್ಸೆಗಾಗಿ 6.97 ಕೋಟಿ ರೂಪಾಯಿ ಪಾವತಿಸಲಾಗಿದೆ ಎಂದು ಭಾರತದ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ತಿಳಿಸಿದೆ.

ಈ ಯೋಜನೆಯಡಿ ಜನರಿಗೆ  ನಗದು ರಹಿತ ಸೇವೆ ನೀಡಬೇಕಾಗಿತ್ತು. ಆದರೆ  ಫಲಾನುಭವಿಗಳು ಚಿಕಿತ್ಸೆಗಾಗಿ ಹಣವನ್ನು ಪಾವತಿಸಿದ್ದಾರೆ ಎಂದು ಭಾರತದ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (CAG) ಅವರ ವರದಿ ಹೇಳಿದೆ.

ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಮಂಡಿಸಲಾದ PMJAY ಕುರಿತಾದ ಲೆಕ್ಕಪರಿಶೋಧನಾ ವರದಿಯಲ್ಲಿ, CAG, ರೋಗಿಯನ್ನು ಆಸ್ಪತ್ರೆಗೆ ದಾಖಲಿಸಿದ ನಂತರ, ಎಲ್ಲಾ ಪರೀಕ್ಷೆಗಳು, ಔಷಧಿಗಳ  ವೆಚ್ಚವನ್ನು ಆಸ್ಪತ್ರೆಯು ಭರಿಸಬೇಕಾಗುತ್ತದೆ. ಅದಕ್ಕೆ ತಗಲುವ ವೆಚ್ಚವನ್ನು ಪ್ಯಾಕೇಜ್ ಮೊತ್ತದಲ್ಲಿ ಸೇರಿಸಲಾಗಿದೆ.

2018 ರಲ್ಲಿ ಹೊರತಂದ, AB-PMJAY ಯೋಜನೆಯಡಿ ಕುಟುಂಬಕ್ಕೆ ವಾರ್ಷಿಕ   5 ಲಕ್ಷ ರೂಪಾಯಿಗಳವರೆಗೆ ಆರೋಗ್ಯ ರಕ್ಷಣೆಯನ್ನು ಒದಗಿಸುತ್ತದೆ. ಸರ್ಕಾರದ ಮಾಹಿತಿ ಪ್ರಕಾರ ಆರೋಗ್ಯ ರಕ್ಷಣೆ ಯೋಜನೆಯು 50 ಕೋಟಿ ಜನರನ್ನು ಒಳಗೊಂಡಿದೆ.

ಈ ಯೋಜನೆಯಡಿ  ಫಲಾನುಭವಿಗಳಿಗೆ ಸೇವೆಗಳಿಗೆ ನಗದು ರಹಿತ ಮತ್ತು ಕಾಗದ ರಹಿತ ಸೇವೆಯನ್ನು ಒದಗಿಸಬೇಕಿದೆ. ಇತ್ತೀಚೆಗೆ ಸಂಸತ್ತಿನಲ್ಲಿ ಮಂಡಿಸಲಾದ AB-PMJAY ಕುರಿತ CAGಯ ಆಡಿಟ್ ವರದಿಯು,   “SHA (ರಾಜ್ಯ ಆರೋಗ್ಯ ಸಂಸ್ಥೆ) ಮತ್ತು ಖಾಸಗಿ EHCPS (ಎಂಪಾನೆಲ್ಡ್ ಹೆಲ್ತ್ ಕೇರ್ ಪ್ರೊವೈಡರ್ಸ್) ಸಹಿ ಮಾಡಿದ ಒಪ್ಪಂದದ ಪ್ರಕಾರ PMJAY ಫಲಾನುಭವಿಗಳಿಗೆ ಸಂಪೂರ್ಣ ನಗದು ರಹಿತ ರೀತಿಯಲ್ಲಿ ಆರೋಗ್ಯ ಸೌಲಭ್ಯ ನೀಡಬೇಕಿದೆ.

ಹಿಮಾಚಲ ಪ್ರದೇಶದಲ್ಲಿ, ಐದು EHCP ಗಳ 50 ಫಲಾನುಭವಿಗಳು ತಮ್ಮ ವೈದ್ಯಕೀಯ ಪರೀಕ್ಷೆಗಳನ್ನು ಇತರ ಆಸ್ಪತ್ರೆ ಅಥವಾ ವೈದ್ಯಕೀಯ ಪರೀಕ್ಷಾ ಕೇಂದ್ರದಲ್ಲಿ ಮಾಡಿಸಿದ್ದರು. ಈ  ಪರೀಕ್ಷೆಗಳ ವೆಚ್ಚವನ್ನು ಫಲಾನುಭವಿಗಳೇ ಭರಿಸಿದ್ದರು.

ಜಮ್ಮು ಮತ್ತು ಕಾಶ್ಮೀರದಲ್ಲಿ, 459 ರೋಗಿಗಳು ತಮ್ಮ ಸ್ವಂತ ಜೇಬಿನಿಂದ ಆರಂಭದಲ್ಲಿ 43.27 ಲಕ್ಷ ರೂ.ಗಳನ್ನು ಪಾವತಿಸಿದರು, ಬಿಲ್‌ಗಳನ್ನು ಪರಿಶೀಲಿಸಿದ ನಂತರ ರೋಗಿಗಳಿಗೆ ಮರುಪಾವತಿ ಮಾಡಲಾಯಿತು.75 ರೋಗಿಗಳಿಗೆ ಇನ್ನೂ 6.70 ಲಕ್ಷ ರೂಪಾಯಿ ಮರುಪಾವತಿ ಮಾಡಬೇಕಾಗಿದೆ ಎಂದು ಆಡಿಟ್ ಸಮಯದಲ್ಲಿ ಸಿಎಜಿ ಕಂಡುಹಿಡಿದಿದೆ.

ಜಾರ್ಖಂಡ್‌ನಲ್ಲಿ ಲೈಫ್ ಕೇರ್ ಆಸ್ಪತ್ರೆಯ 36 ರೋಗಿಗಳು  ಔಷಧಿಗಳು, ಚುಚ್ಚುಮದ್ದು, ರಕ್ತ ಇತ್ಯಾದಿಗಳನ್ನು ಖರೀದಿಸಲು ವಿವಿಧ ಮೊತ್ತವನ್ನು ಪಾವತಿಸಿರುವುದನ್ನು ವಿಮಾ ಕಂಪನಿ ಗಮನಿಸಿದೆ. ಈ ವೆಚ್ಚದ ವಿವರಗಳು SHA ಬಳಿ ಲಭ್ಯವಿರಲಿಲ್ಲ. ವಿಮಾ ಕಂಪನಿಯ ಅವಲೋಕನದ ಆಧಾರದ ಮೇಲೆ, SHA (ಆಗಸ್ಟ್ 28, 2020 ರಂದು) ಐದು ದಿನಗಳಲ್ಲಿ ತನ್ನ ವಿವರಣೆಯನ್ನು ಸಲ್ಲಿಸುವಂತೆ ಆಸ್ಪತ್ರೆಯನ್ನು ಕೇಳಿದೆ.

ಮೇಘಾಲಯದಲ್ಲಿ, ಫೆಬ್ರವರಿ 2019 ರಿಂದ ಮಾರ್ಚ್ 2021 ರವರೆಗೆ ಐದು ಖಾಸಗಿ EHCP ಗಳಲ್ಲಿ ಚಿಕಿತ್ಸೆ ಪಡೆದ 19,459 ಫಲಾನುಭವಿಗಳಲ್ಲಿ, 13,418 (ಶೇ. 69) ಜನರು ಡಿಸ್ಚಾರ್ಜ್ ಸಮಯದಲ್ಲಿ 12.34 ಕೋಟಿ ರೂ.ಗಳನ್ನು ಹೆಚ್ಚುವರಿಯಾಗಿ ಪಾವತಿಸಬೇಕಾಗಿತ್ತು.

ಈ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ, ಮೋದಿ ಸರ್ಕಾರವು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರವನ್ನು (NHA) ಸ್ಥಾಪಿಸಿದೆ. PMJAY ಅನ್ನು ಜಾರಿಗೆ ತರಲು 33 ರಾಜ್ಯಗಳು/ ಕೇಂದ್ರಾಡಳಿತ ಪ್ರದೇಶಗಳೊಂದಿಗೆ ಒಪ್ಪಂದಗಳಿಗೆ ಸಹಿ ಹಾಕಲಾಗಿತ್ತು.ಇದೀಗ ಯೋಜನೆಯಡಿ ಹಗರಣ ನಡೆದಿರುವುದು ಸಿಎಜಿ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

ಇದನ್ನು ಓದಿ: ಜಾತಿ ನಿಂದನೆ ಪ್ರಕರಣ: ನಟ ಉಪೇಂದ್ರ ವಿರುದ್ಧದ 2ನೇ FIRಗೆ ಹೈಕೋರ್ಟ್ ಮಧ್ಯಂತರ ತಡೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...