Homeಮುಖಪುಟಬಿಹಾರ ಚುನಾವಣೆಯಲ್ಲಿ ಆಜಾದ್ ಸಮಾಜ ಪಕ್ಷ ಸ್ಪರ್ಧೆ: ಚಂದ್ರಶೇಖರ್ ಆಜಾದ್

ಬಿಹಾರ ಚುನಾವಣೆಯಲ್ಲಿ ಆಜಾದ್ ಸಮಾಜ ಪಕ್ಷ ಸ್ಪರ್ಧೆ: ಚಂದ್ರಶೇಖರ್ ಆಜಾದ್

ಆಜಾದ್ ಸಮಾಜ ಪಕ್ಷವು ಮತ್ತೊಂದು ರಾಜಕೀಯ ಪಕ್ಷವಲ್ಲ, ಬದಲಾಗಿ ಪ್ರತಿಯೊಬ್ಬ ವ್ಯಕ್ತಿಯ ಸಾಂವಿಧಾನಿಕ ಹಕ್ಕುಗಳನ್ನು ಪುನಃ ಪಡೆದುಕೊಳ್ಳುವ ಚಳುವಳಿಯಾಗಿದೆ ಎಂದು ಅವರು ಘೋಷಿಸಿದ್ದಾರೆ.

- Advertisement -
- Advertisement -

ಆಜಾದ್ ಸಮಾಜ ಪಕ್ಷವು ಈ ವರ್ಷ ಬಿಹಾರದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದೆ ಮತ್ತು ಪಕ್ಷವು ಇದಕ್ಕಾಗಿ ತಯಾರಿ ಆರಂಭಿಸಿದೆ ಎಂದು ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ’ರಾವಣ್’ ಘೋಷಿಸಿದ್ದಾರೆ.

ಬಿಹಾರದ ಅರ್ಧದಷ್ಟು ಪ್ರದೇಶಗಳು ಇನ್ನೂ ಪ್ರವಾಹಕ್ಕೆ ಸಿಲುಕಿದ್ದು, ಬಿಹಾರದಲ್ಲಿ ಭಾರಿ ನಿರುದ್ಯೋಗ ಸಮಸ್ಯೆಯಿದೆ, ಹೆಚ್ಚಿನ ಸಂಖ್ಯೆಯ ಜನರು ಕೆಲಸಕ್ಕಾಗಿ ಇತರ ರಾಜ್ಯಗಳಿಗೆ ವಲಸೆ ಹೋಗುತ್ತಿದ್ದಾರೆ ಎಂದು ಆಜಾದ್ ಪ್ರಸ್ತುತ ಜೆಡಿಯು – ಬಿಜೆಪಿ ಸರ್ಕಾರವನ್ನು ಟೀಕಿಸಿದ್ದಾರೆ.

ಉದ್ಯೋಗದ ಕೊರತೆ ಮತ್ತು ಆರ್ಥಿಕತೆಯ ಕುಸಿತದಿಂದಾಗಿ ಬಿಹಾರವು ದೇಶದಲ್ಲೇ ಅತೀ ಹೆಚ್ಚಿನ ವಲಸೆ ಹೋಗುತ್ತಿರುವ ರಾಜ್ಯವಾಗಿದೆ. ಇವರಲ್ಲಿ ಹೆಚ್ಚಿನವರು ಕಾರ್ಮಿಕ ವಲಸಿಗರು, ಅದರಲ್ಲೂ ಐತಿಹಾಸಿಕವಾಗಿ ತುಳಿತಕ್ಕೊಳಗಾದ ಮತ್ತು ತಳಸಮುದಾಯಗಳಾದ ದಲಿತ- ಹಿಂದುಳಿದ ಹಿಂದೂಗಳು, ಮುಸ್ಲಿಮರು ಹೆಚ್ಚಿನವರಾಗಿದ್ದಾರೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಮಾರ್ಚ್ 15, 2020 ರಂದು ಅಧಿಕೃತವಾಗಿ ಪ್ರಾರಂಭವಾದ ಆಜಾದ್ ಸಮಾಜ ಪಕ್ಷವು ಕೇವಲ ರಾಜಕೀಯ ಪಕ್ಷವಲ್ಲ, ಪ್ರತಿಯೊಬ್ಬ ವ್ಯಕ್ತಿಯ ವಿಶೇಷವಾಗಿ ದಲಿತರು, ಬುಡಕಟ್ಟು ಜನರು, ತಳ ಸಮುದಾಯಗಳು ಮತ್ತು ಮಹಿಳೆಯರ ಸಾಂವಿಧಾನಿಕ ಹಕ್ಕುಗಳನ್ನು ಪುನಃ ಪಡೆದುಕೊಳ್ಳುವ ಚಳುವಳಿಯಾಗಿದೆ. ಇದು ಡಾ.ಬಿ.ಆರ್. ಅಂಬೇಡ್ಕರ್ ಆದರ್ಶಗಳಲ್ಲಿ ಮತ್ತು ಕಾನ್ಶಿರಾಮ್ ಅವರ ರಾಜಕೀಯ ದೃಷ್ಟಿಕೋನಲ್ಲಿ ದೃಡವಾಗಿ ನೆಲೆಗೊಂಡಿದೆ ಎಂದು ಚಂದ್ರಶೇಖರ್ ಆಜಾದ್ ಪ್ರತಿಪಾದಿಸಿದ್ದಾರೆ.

ಆಜಾದ್ ಸಮಾಜ ಪಕ್ಷವು ಮತ್ತೊಂದು ರಾಜಕೀಯ ಪಕ್ಷವಲ್ಲ, ಬದಲಾಗಿ ಪ್ರತಿಯೊಬ್ಬ ವ್ಯಕ್ತಿಯ ಸಾಂವಿಧಾನಿಕ ಹಕ್ಕುಗಳನ್ನು ಪುನಃ ಪಡೆದುಕೊಳ್ಳುವ ಚಳುವಳಿಯಾಗಿದೆ ಎಂದು ಅವರು ಘೋಷಿಸಿದ್ದಾರೆ.

ಸಾಮಾಜಿಕ ನ್ಯಾಯದ ಸಂದೇಶದೊಂದಿಗೆ ಮತ್ತು ರಾಜ್ಯದ ಬಹುಜನರಿಗೆ ಆದ್ಯತೆ ನೀಡುವ ಭರವಸೆಯೊಂದಿಗೆ, ಆಜಾದ್ ಸಮಾಜ ಪಕ್ಷವು ಈ ಚುನಾವಣೆಯಲ್ಲಿ ಭಾಗವಹಿಸುವುದು ಅತ್ಯಂತ ಭರವಸೆ ಮೂಡಿಸಿದೆ ಎನ್ನಲಾಗಿದೆ. ಅವರು ಸಾಕಷ್ಟು ಸ್ಥಾನಗಳನ್ನು ಗೆದ್ದರೆ, ಜಾತಿ ಆಧಾರಿತ ದಬ್ಬಾಳಿಕೆಯನ್ನು ಹಿಮ್ಮೆಟ್ಟಿಸುವ ಹೊಸ ಯುಗಕ್ಕೆ ರಾಜ್ಯವು ಪ್ರವೇಶಿಸಲಿದೆ ಎಂದು ಸಾಮಾಜಿಕ ಕಾರ್ಯಕರ್ತರು ಅಭಿಪ್ರಾಯಪಟ್ಟಿದ್ದಾರೆ.


ಓದಿ: ಪ್ರಭುತ್ವಕ್ಕೆ “ಚಂದ್ರಶೇಖರ್‌ ಆಝಾದ್ ರಾವಣ್” ಎಂದರೆ ಆತಂಕ ಯಾಕೆ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...