Homeಮುಖಪುಟಆಜಂ ಖಾನ್‌ ಜಾಮೀನು ಅರ್ಜಿ ವಿಲೇವಾರಿ ವಿಳಂಬ; ಅಲಹಾಬಾದ್‌ ಹೈಕೋರ್ಟ್‌ಗೆ ಸುಪ್ರೀಂ ತರಾಟೆ

ಆಜಂ ಖಾನ್‌ ಜಾಮೀನು ಅರ್ಜಿ ವಿಲೇವಾರಿ ವಿಳಂಬ; ಅಲಹಾಬಾದ್‌ ಹೈಕೋರ್ಟ್‌ಗೆ ಸುಪ್ರೀಂ ತರಾಟೆ

- Advertisement -
- Advertisement -

ಭೂಕಬಳಿಕೆ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಆಜಂ ಖಾನ್ ಅವರು ವಿರುದ್ಧ ದಾಖಲಾಗಿರುವ ಜಾಮೀನು ಅರ್ಜಿಯನ್ನು ವಿಲೇವಾರಿ ಮಾಡುವಲ್ಲಿ ಅಲಹಾಬಾದ್ ಹೈಕೋರ್ಟ್ ವಿಳಂಬ ಮಾಡುತ್ತಿರುವುದನ್ನು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ಹೈಕೋರ್ಟ್ ನಡೆಗೆ ಅಸಮಧಾನ ವ್ಯಕ್ತಪಡಿಸಿರುವ ಸುಪ್ರೀಂ, “ಇದು ನ್ಯಾಯದ ಅಪಹಾಸ್ಯ” ಎಂದು ಕಟುವಾಗಿ ಟೀಕಿಸಿದೆ.

“ಜಾಮೀನು ಅರ್ಜಿಯ ತೀರ್ಪನ್ನು ಹೈಕೋರ್ಟ್ ಕಾಯ್ದಿರಿಸಿದೆ” ಎಂದು ಆಜಂ ಖಾನ್ ಪರ ವಾದ ಮಂಡಿಸಿದ ವಕೀಲರು ಸುಪ್ರೀಂ ಕೋರ್ಟ್‌ಗೆ ತಿಳಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರ ರಾವ್ ಮತ್ತು ಬಿ.ಆರ್.ಗವಾಯಿ ಇದ್ದ ಪೀಠರವು ವಿಷಯವನ್ನು ಗಂಭೀರವಾಗಿ ಪರಿಗಣಿಸಿ, 87 ಪ್ರಕರಣಗಳ ಪೈಕಿ 86 ಪ್ರಕರಣಗಳಲ್ಲಿ ಖಾನ್‌ ಅವರಿಗೆ ಜಾಮೀನು ಸಿಕ್ಕಿರುವುದನ್ನು ಗಮನಿಸಿದ್ದಾರೆ. ಮೇ 11ರಂದು ಈ ವಿಷಯದ ಕುರಿತು ವಿಚಾರಣೆ ನಡೆಸುವುದಾಗಿ ನ್ಯಾಯಮೂರ್ತಿಗಳು ಹೇಳಿದ್ದು, “ಆ ವೇಳೆಗೆ ಹೈಕೋರ್ಟ್ ಆದೇಶವನ್ನು ನೀಡುತ್ತದೆ” ಎಂದು ಭರವಸೆ ನೀಡಿದ್ದಾರೆ.

ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ ಪ್ರಾಜೆಕ್ಟ್‌ಗಾಗಿ ಆಸ್ತಿ ಕಬಳಿಕೆ ಮಾಡಿದ್ದಾರೆಂಬ ಆರೋಪಕ್ಕೆ ಗುರಿಯಾಗಿರುವ ಖಾನ್ ಅವರ ಜಾಮೀನು ಅರ್ಜಿಯ ತೀರ್ಪನ್ನು ಅಲಹಾಬಾದ್ ಹೈಕೋರ್ಟ್ ಗುರುವಾರ ಕಾಯ್ದಿರಿಸಿತ್ತು.

“ನಾವು ನಿಮಗೆ ಹೇಳುತ್ತೇವೆ ಎಂದು ಈಗ ತೀರ್ಪನ್ನು ಕಾಯ್ದಿರಿಸಲು ಸಾಧ್ಯವಿಲ್ಲ. 137 ದಿನಗಳಾಗಿವೆ. ಯಾವುದೇ ಆದೇಶ ಜಾರಿಯಾಗಿಲ್ಲ. ಆಜಂ ಖಾನ್‌ 86 ಪ್ರಕರಣಗಳಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಇನ್ನೊಂದು ಪ್ರಕರಣ ಬಾಖಿ ಇದೆ. ಇದು ನ್ಯಾಯದ ಅಪಹಾಸ್ಯ. ನಾವು ಈಗ ಇಷ್ಟು ಮಾತ್ರ ಹೇಳಬಹುದು. ಅಗತ್ಯವಿದ್ದರೆ ನಾವು ಹೆಚ್ಚು ಹೇಳುತ್ತೇವೆ. ಬುಧವಾರ ಬರಲಿ. ನಾವು ಅವರಿಗೆ ಎರಡು ದಿನಗಳ ಕಾಲ ಅವಕಾಶ ನೀಡೋಣ” ಎಂದು ಪೀಠವು ಹೇಳಿರುವುದಾಗಿ ‘ಲೈವ್ ಲಾ’ ವರದಿ ಮಾಡಿದೆ.

ಖಾನ್ ವಿರುದ್ಧ ಬಾಕಿ ಉಳಿದಿರುವ 87 ಕ್ರಿಮಿನಲ್ ಪ್ರಕರಣಗಳಲ್ಲಿ 84 ಎಫ್‌ಐಆರ್‌ಗಳು 2017ರಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಎರಡು ವರ್ಷಗಳಲ್ಲಿ ದಾಖಲಾಗಿವೆ ಎಂದು ‘ದಿ ವೈರ್‌’ ವರದಿ ಮಾಡಿದೆ.

ಈ 84 ಪ್ರಕರಣಗಳಲ್ಲಿ 81 ಪ್ರಕರಣಗಳು 2019ರ ಲೋಕಸಭೆ ಚುನಾವಣೆಯ ಮೊದಲು ಮತ್ತು ನಂತರದ ಅವಧಿಯಲ್ಲಿ ದಾಖಲಾಗಿವೆ.

ಖಾನ್‌ ಅವರನ್ನು ಅನಿರ್ದಿಷ್ಟಾವಧಿ ಜೈಲಿನಲ್ಲಿ ಇಡಲು ಬಿಜೆಪಿಯವರು ದಾಖಲಿಸಿದ ಎಫ್‌ಐಆರ್‌ಗಳು ಇವೆಂದು ಖಾನ್ ಬೆಂಬಲಿಗರು ಹೇಳುತ್ತಾರೆ.

ಫೆಬ್ರವರಿಯಲ್ಲಿ ಉತ್ತರ ಪ್ರದೇಶ ಚುನಾವಣೆಯ ಪ್ರಚಾರಕ್ಕಾಗಿ ಖಾನ್‌ ಮಧ್ಯಂತರ ಜಾಮೀನು ಕೋರಿದ್ದರು. ಆದರೆ ಸುಪ್ರೀಂ ಕೋರ್ಟ್ ನಿರಾಕರಿಸಿತ್ತು. ಅರ್ಜಿಯ ವಿಲೇವಾರಿಗಾಗಿ ಸಂಬಂಧಪಟ್ಟ ನ್ಯಾಯಾಲಯವನ್ನು ಸಂಪರ್ಕಿಸುವಂತೆ ಹೇಳಿತ್ತು.

ಆಜಂ ಖಾನ್‌ ಸದ್ಯ ಸೀತಾಪುರ ಜೈಲಿನಲ್ಲಿದ್ದಾರೆ.

ಇದನ್ನೂ ಓದಿರಿ: ಪಶ್ಚಿಮ ಬಂಗಾಳ: ಅನುಮಾನಾಸ್ಪದವಾಗಿ ಬಿಜೆಪಿ ಮುಖಂಡನ ಶವ ಪತ್ತೆ; ‘ರಾಜಕೀಯ ಕೊಲೆ’ ಎಂದ ಅಮಿತ್ ಶಾ

ಡಿಸೆಂಬರ್ 4, 2021 ರಂದು ಹೈಕೋರ್ಟ್ ಪ್ರಸ್ತುತ ಭೂಹಗರಣ ಪ್ರಕರಣದಲ್ಲಿ ಜಾಮೀನಿನ ನಿರ್ಧಾರವನ್ನು ಕಾಯ್ದಿರಿಸಿತ್ತು. ಆದರೆ, ರಾಜ್ಯ ಸರ್ಕಾರವು ನಂತರ ಅರ್ಜಿಯನ್ನು ಸಲ್ಲಿಸಿತು. ಗುರುವಾರ ಸಲ್ಲಿಸಿದ ಹೊಸ ಅಫಿಡವಿಟ್‌ಗಳ ಮೂಲಕ ಕೆಲವು ಹೊಸ ಸಂಗತಿಗಳನ್ನು ಪ್ರಸ್ತುತಪಡಿಸಲು ಅನುಮತಿ ಕೋರಿತು.

ನೂರಾರು ಕೋಟಿ ರೂಪಾಯಿಗಳಿಗೂ ಹೆಚ್ಚು ಸಾರ್ವಜನಿಕ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಐಪಿಸಿಯ ವಿವಿಧ ಸೆಕ್ಷನ್‌ಗಳು ಮತ್ತು ಸಾರ್ವಜನಿಕ ಆಸ್ತಿ ಹಾನಿ ತಡೆ ಕಾಯ್ದೆಯ ಅಡಿಯಲ್ಲಿ ಖಾನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...